ಹೆಚ್ಚೇನು ದಾಳಿಗೆ ಬಾಲಕಿ ಸಾವನ್ನಪ್ಪಿ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅ.10ರಂದು ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ನಡೆದಿದೆ.
ಪಡೂರು ಗ್ರಾಮದ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 2ನೇ ತರಗತಿಯ ವಿದ್ಯಾರ್ಥಿನಿ ಇಶಾ(7) ಮೃತ ಬಾಲಕಿ.
ಅ.10 ರಂದು ಸಂಜೆ ವಿದ್ಯಾರ್ಥಿಗಳಾದ ಪಡೂರು ಗ್ರಾಮದ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಇಶಾ (7) ಮತ್ತು ಕಿಶೋರ್ ಎಂಬವರ ಪುತ್ರ ವಿವೇಕಾನಂದ ಕನ್ನಡ ಮಾದ್ಯಮ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಪ್ರಕ್ಯೂಶ್ (10) ಮತ್ತು ಸ್ಥಳೀಯ ನಾರಾಯಣ್ (40ವ) ಹೆಚ್ಚೇನು ದಾಳಿಗೊಳಗಾಗಿದ್ದರು.
ವಿದ್ಯಾರ್ಥಿಗಳು ಕಿರುಚಾಡುವುದನ್ನು ಕೇಳಿ ಸ್ಥಳೀಯರಾದ ನಾರಾಯಣ್ ಎಂಬವರು ವಿದ್ಯಾರ್ಥಿಗಳ ರಕ್ಷಣೆಗೆ ಬಂದಿದ್ದರು. ಈ ವೇಳೆ ಹೆಚ್ಚೇನು ಅವರಿಗೂ ಕಚ್ಚಿದೆ. ಗಾಯಗೊಂಡ ನಾರಾಯಣ್ ಮಹಾವೀರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ವಿದ್ಯಾರ್ಥಿಗಳಿಬ್ಬರನ್ನು ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಳುಗಳ ಪೈಕಿ ತೀವ್ರ ಅಸ್ವಸ್ಥಗೊಂಡ ಇಶಾ ಎಂಬವರನ್ನು ಮಂಗಳೂರು ಅಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಪ್ರಕ್ಯೂಶ್ ಆರೋಗ್ಯದಲ್ಲೂ ಏರುಪೇರಾಗಿದ್ದು, ಅವರನ್ನು ಕೂಡಾ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಹೆಜ್ಜೇನು ದಾಳಿಗೆ ಬಾಲಕಿ ಸಾವು

















