ಮಂಗಳೂರು ನಗರ ಪೊಲೀಸರು 2006ರ ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕಬೀರ್ಗೆ ಆಶ್ರಯ ನೀಡಿ, ತಲೆಮರೆಸಿಕೊಳ್ಳಲು ಸಹಕರಿಸಿದ್ದ ಆರೋಪಿ ಅಬ್ದುಲ್ ಸಲಾಂ ಅಡ್ಡರು ಎಂಬಾತನನ್ನು 19 ವರ್ಷಗಳ ಬಳಿಕ ಬಂಧಿಸಿದ್ದಾರೆ. ಕೃತ್ಯ ನಡೆದ ಬಳಿಕ ವಿದೇಶಕ್ಕೆ ಪರಾರಿಯಾಗಿದ್ದ ಅಬ್ದುಲ್ ಸಲಾಂ, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಪ್ರಕರಣದ ದೋಷಾರೋಪಣಾ ಪತ್ರ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ ಆರೋಪಿ, 19 ವರ್ಷಗಳ ಬಳಿಕ ಬಂಧನ

























































