ಶಿಕ್ಷಕರೆಂದರೆ ಪ್ರತಿಯೊಬ್ಬರ ಅಮೂಲ್ಯ ರತ್ನ : ಡಿವಿಎಸ್

ಸುಳ್ಯ:ಶಿಕ್ಷಕರು ಸಮಾಜದಲ್ಲಿ ವಿದ್ಯಾರ್ಥಿಗಳನ್ನು ಉತ್ತಮ ವ್ಯಕ್ತಿಗಳನ್ಕಾಗಿ ರೂಪಿಸುತ್ತಾರೆ.ಶಿಕ್ಷಕರೆಂದರೆ ಪ್ರತಿಯೊಬ್ಬರ ಪಾಲಿನ ಅಮೂಲ್ಯ ರತ್ನಗಳು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ಏರ್ಪಡಿಸಿದ ಗುರುವಂಧನಾ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು ಮತ್ತು
ಪ್ರಾಧ್ಯಾಪಕರುಗಳನ್ನು ಗೌರವಿಸಿ ಅವರು ಮಾತನಾಡಿದರು.ಕಳೆದ 75 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ಧಾರೆಯೆರೆದು ಸುಶಿಕ್ಷಿತರನ್ನು ಸೃಷ್ಟಿಸಿದ ಕೀರ್ತಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಇದೆ ಎಂದ ಅವರು ತನ್ನನ್ನು ಮಂಡೆಕೋಲಿನಿಂದ ದೆಹಲಿಯ ಸಂಸತ್ತಿಗೆ ಏರಿಸಿದ ಕೀರ್ತಿ ಶಿಕ್ಷಕರಿಗೆ ಸಲ್ಲುತ್ತದೆ ಎಂದು ಹೇಳಿದರು. ಸೋಲು, ಅವಮಾನ ಸಂಭವಿಸಿದರೆ ಮಾತ್ರ ಅಂಥಹಾ ಸವಾಲನ್ನು ಸ್ವೀಕರಿಸುವ ಶಕ್ತಿ ದೊರೆತು ಮುಂದಿನ ದಾರಿ ತೆರೆದುಕೊಳ್ಳಲು ಸಾಧ್ಯ ಎಂದು ಅವರು ಹೇಳಿದರು
ಲಿಂಗಪ್ಪ ಗೌಡ ಕೇರ್ಪಳ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಮಂಜುಳಾ ಬಡಿಗೇರ್, ಕಾಲೇಜಿನ ಪ್ರಾಂಶುಪಾಲ ಮೋಹನ ಗೌಡ ಬೊಮ್ಮೆಟ್ಟಿ, ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಗೂ ಅಮೃತ ಮಹೋತ್ಸವ ಸಮಿತಿಯ ಉಪಾಧ್ಯಕ್ಷ ಪಿ.ಬಿ.ಸುಧಾಕರ ರೈ ಕಾರ್ಯದರ್ಶಿ ಶಿವಪ್ರಸಾದ್‌ ಕೇರ್ಪಳ ಉಪಸ್ಥಿತಿತರಿದ್ದರು.
ಪಿ.ಬಿ.ಸುಧಾಕರ ರೈ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಪ್ರಸಾದ್‌ ಕಾರ್ಯಕ್ರಮ ನಿರೂಪಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top