ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ರಂಗತ್ತಮಲೆ ನಿವಾಸಿ ರಾಜೀವ ನಾಯ್ಕ ರ ಮಗ ಶ್ರೀರಾಮ (25)ರವರು ಅಲ್ಪ ಕಾಲದ ಅಸೌಖ್ಯದಿಂದ ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಡಿ.31ರಂದು ನಿಧನರಾದರು
ಶ್ರೀರಾಮ ಕೆಲ ಸಮಯಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಚಿಕಿತ್ಸೆಯಿಂದ ಚೇತರಿಕೆಯಾಗದಿರುವುದರಿಂದ ಒಂದು ವಾರದ ಹಿಂದೆಯಷ್ಟೇ ಮತ್ತೆ ಮನೆಗೆ ಕರೆ ತಂದು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿಚಿಕಿತ್ಸೆಗೆ ಫಲಕಾರಿಯಾಗದೆ ಕೊನೆಯುಸಿರೆಳೆದಿರುವುದಾಗಿ ತಿಳಿದು ಬಂದಿದೆ.
ಮೃತರು ಅವಿವಾಹಿತರಾಗಿದ್ದು ತಾಯಿ ಜಾನಕಿ, ಸಹೋದರ ಭವಿತ್, ಸಹೋದರಿ ಕುಸುಮ ಜಯರಾಮ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತ ಯುವಕ ಆಲೆಟ್ಟಿಯ ಗುಂಡ್ಯ ಜನನಿ ಫ್ರೆಂಡ್ಸ್ ಕ್ಲಬ್ಬಿನಲ್ಲಿ ಸದಸ್ಯರಾಗಿದ್ದರು.
ಯುವಕ ನಿಧನ

















