ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಕಳೆದ ಡಿ.16ರಿಂದ ಆರಂಭಗೊಂಡ ಧನು ಧನುಪೂಜೆ ಇಂದು ಮಕರ ಸಂಕ್ರಣದಂದು (ಜ.14)ರಂದು ಸಂಪನ್ನಗೊಂಡಿತು. ಸಾವಿರಾರು ಭಕ್ತರು ಧನುಪೂಜೆಯಲ್ಲಿ ಭಾಗವಹಿಸಿದರು.
ಪ್ರತಿವರ್ಷ ಧನುಪೂಜೆಯ ಕೊನೆಯ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುತ್ತಾರೆ.ಅಂತೆಯೇ ಈ ವರ್ಷವು ಧನುಪೂಜೆಯ ಕೊನೆಯ ದಿನದಲ್ಲಿ ಭಕ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದರು.ಧನುಪೂಜೆಯ ಅಂಗವಾಗಿ ದೇವಳದಲ್ಲಿ ದಿನ ನಿತ್ಯ ಮುಂಜಾನೆ ಭಜನಾ ಸತ್ಸಂಗ ನಡೆಯಿತು. ಮಕರ ಸಂಕ್ರಮಣ ಪ್ರಯುಕ್ತ ಆಯಿರಕೊಡ ಅಭಿಷೇಕ ಮತ್ತು ಸಿಯಾಳಾಭಿಷೇಕ ಹಾಗೂ ಶತರುದ್ರಾಭಿಷೇಕ ರಾತ್ರಿ ರಂಗಪೂಜೆ ಜರುಗಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಅಧ್ಯಕ್ಷರು ಸದಸ್ಯರು,ಜೀರ್ಣೋದ್ಧಾರ ಸಮಿತಿಯವರು,ಸಿಬ್ಬಂದಿಗಳು,ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ತೊಡಿಕಾನ : ಮಲ್ಲಿಕಾರ್ಜುನ ದೇವಳದಲ್ಲಿ ಒಂದು ತಿಂಗಳ ಕಾಲ ಶ್ರದ್ದಾ ಭಕ್ತಿಯಿಂದ ನಡೆದ ಧನುಪೂಜೆ ಸಂಪನ್ನ



































