ಪಂಜ ಸೀಮೆ ದೇವಾಲಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.2 ರಂದು ಮುಂಜಾನೆ ಪೂರ್ವ ಸಂಪ್ರದಾಯದಂತೆ ನಾಗತೀರ್ಥದ ಮೂಲಸ್ಥಾನ ಬಂಟಮಲೆಯಲ್ಲಿ ವಿವಿಧ ವೈಧಿಕ ಕಾರ್ಯಕ್ರಮಗಳು ನಡೆದು ಶ್ರೀ ದೇವಾಲಯಕ್ಕೆ ತೀರ್ಥ ತರಲಾಯಿತು, ಮಹಾಪೂಜೆ, ನಿತ್ಯ ಬಲಿ ನಡೆಯಿತು. ದೇವಳದದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿ ಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರು,ಗೌರವ ಸಲಹೆಗಾರರು, ಸೀಮೆಮ ಭಕ್ತಾದಿಗಳು ಪಾಲ್ಗೊಂಡಿದ್ದರು.
ಪಂಜ : ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಜಾತ್ರೆ ಪ್ರಯುಕ್ತ ನಾಗತೀರ್ಥ ಮೂಲಸ್ಥಾನದಿಂದ ತೀರ್ಥ ತರುವ ಕಾರ್ಯಕ್ರಮ





















































