ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಕಾಳಗಕ್ಕೆ ಹೊಸ ತಿರುವು ಸಿಕ್ಕಿದ್ದು, ದಲಿತ ಸಿಎಂ ಕೂಗು ಜೋರಾಗಿದೆ. ಡಿಕೆ ಶಿವಕುಮಾರ್ ಬಣದ ಹೈಕಮಾಂಡ್ ಮೇಲಿನ ಒತ್ತಡಕ್ಕೆ ಪ್ರತಿಯಾಗಿ, ಸಿದ್ದರಾಮಯ್ಯ ಬಣ ಈಗ ‘ದಲಿತ ಸಿಎಂ’ ಅಸ್ತ್ರ ಪ್ರಯೋಗಿಸಿದೆ. ಹಿರಿಯ ನಾಯಕರಾದ ಜಿ. ಪರಮೇಶ್ವರ್ ಹಾಗೂ ಕೆ.ಹೆಚ್. ಮುನಿಯಪ್ಪ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ರಾಜ್ಯದ ಚುಕ್ಕಾಣಿ ಹಿಡಿಯುವಂತೆ ಅಥವಾ ಅರ್ಹ ದಲಿತ ನಾಯಕರಿಗೆ ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಇತಿಹಾಸದ ಉದಾಹರಣೆಗಳನ್ನು ನೀಡಿ ಖರ್ಗೆ ಅವರಿಗೆ ಇತಿಹಾಸ ಸೃಷ್ಟಿಸಲು ಇದು ಸಕಾಲ ಎಂದು ನಾಯಕರು ಮನವರಿಕೆ ಮಾಡಿಕೊಟ್ಟಿದ್ದು, ಇದು ಡಿಕೆಶಿ ಬಣಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಕರ್ನಾಟಕದ ಮುಂದಿನ ಸಿಎಂ ಖರ್ಗೆ ?



































