ಇತಿಹಾಸ ಪ್ರಸಿದ್ಧ ಕಲ್ಲುಗುಂಡಿ ಶ್ರೀ ಮಹಾವಿಷ್ಣು ಮೂರ್ತಿ ದೈವದ ಒತ್ತೆಕೋಲ ಹಾಗೂ ಪಂಜುರ್ಲಿ, ಕಲ್ಲುರ್ಟಿ ಹಾಗೂ ಗುಳಿಗ ದೈವಗಳಿಗೆ ಸಮ್ಮಾನ ಕಾರ್ಯಕ್ರಮವು ಮಾರ್ಚ್ 28,29,ರಂದು ಶ್ರದ್ಧಾ ಭಕ್ತಿಯಿಂದ ನಡೆಯಿತು.
ಮಾ 21 ರಂದು ಮಹೂರ್ತದ ಗೊನೆ ಕಡಿಯಲಾಯಿತು
27 ರಂದು ಬೆಳಿಗ್ಗೆ 5:30 ಕ್ಕೆ ದೈವಸ್ಥಾನದಲ್ಲಿ ಗಣಹೋಮ ನಡೆಯಿತು.
ಮಾ 28 ರಂದು ರಾತ್ರಿ 7 ಗಂಟೆಗೆ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಿಂದ ಭಂಡಾರ ಹೊರಟಿತು.ರಾತ್ರಿ 8:30 ಕ್ಕೆ ಮೇಲೇರಿಗೆ ಅಗ್ನಿ ಸ್ಪರ್ಶ, ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನಡೆಯಿತು.ಬಳಿಕ ರಾತ್ರಿ 12 ಕ್ಕೆ ಶ್ರೀ ದೈವದ ಕುಲ್ಬಾಟ ನಡೆಯಿತು.
ಮಾರ್ಚ್ 29 ರಂದು ಬೆಳಿಗ್ಗೆ ಮಹಾವಿಷ್ಣು ಮೂರ್ತಿ ದೈವದ ಅಗ್ನಿ ಪ್ರವೇಶ ನಡೆಯಿತು. ಬಳಿಕ ಪ್ರಸಾದ ವಿತರಣೆ, ಪೂರ್ವಾಹ್ನ 8 ಕ್ಕೆ ಮಾರಿಕಳ ಪ್ರವೇಶ ನಡೆಯಿತು.
ಬಳಿಕ ಹರಕೆಯ ಸುರಿಗೆಗಳನ್ನು ಒಪ್ಪಿಸಲಾಯಿತು.
ನಂತರ ಪ್ರಸಾದ ವಿತರಣೆ ನಡೆಯಿತು.
ಕಲ್ಲುಗುಂಡಿ : ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ














































