ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಪೂರ್ವಭಾವಿಯಾಗಿ ಏ.5ರಂದು ಸೀಮೆಯ 18 ಗ್ರಾಮಗಳ ಭಕ್ತಾಧಿಗಳ ಮತ್ತು ಸಂಘ ಸಂಸ್ಥೆಗಳ ಸಹಬಾಗಿತ್ವದಲ್ಲಿ ದೇವಸ್ಥಾನದ ಪವಿತ್ರ ತೀರ್ಥ ಮೂಲಗಳಾದ ವಾರಾಣಸಿ ತೀರ್ಥ ಮತ್ತು ಮತ್ಸತೀರ್ಥ ಹಾಗೂ ದೇವಸ್ಥಾನದ ಪರಿಸರದ ಸ್ವಚ್ಛತೆ ಸಲುವಾಗಿ ಬ್ರಹತ್ ಕರಸೇವೆ ನಡೆಯಿತು.ಈ ಕರಸೇವೆಯಲ್ಲಿ ಸ್ಪಂದನ ಗೆಳೆಯರ ಬಳಗ ಅಡ್ತಲೆ ತಂಡದವರು ಭಾಗವಹಿಸಿದರು. 18 ಗ್ರಾಮಗಳ ಸುಮಾರು 500ಕ್ಕೂ ಮಿಕ್ಕಿ ಕರಸೇವಕರು ಭಾಗವಹಿಸಿದರು.
ತೊಡಿಕಾನ : ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಅಡ್ತಲೆ ಸ್ಪಂದನ ಗೆಳಯರ ಬಳಗದಿಂದ ಶ್ರಮ ಸೇವೆ














































