ರಾಜ್ಯ ರಾಜಕಾರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆದರೆ ಸದ್ಯಕ್ಕೆ ಅವರು ರಾಜೀನಾಮೆ ನೀಡುವುದಿಲ್ಲ ಎನ್ನುವ ಮಾಹಿತಿ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ರಾಜ್ಯಪಾಲರ ನಾಲ್ಕು ದಿನಗಳ ಗೈರುಹಾಜರಿ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಇದು ಸಿದ್ದರಾಮಯ್ಯ ತಂತ್ರವೇ ಎಂಬ ಚರ್ಚೆ ಜೋರಾಗಿದೆ. ಮತ್ತೊಂದೆಡೆ ಸತೀಶ್ ಜಾರಕಿಹೊಳಿ ನೇತೃತ್ವದ ಸಿದ್ದು ಬಣ 32 ಶಾಸಕರ ಸಹಿ ಸಂಗ್ರಹಿಸಿದೆ ಎನ್ನಲಾಗಿದ್ದು, ಡಿಕೆ ಶಿವಕುಮಾರ್ ನಾಯಕತ್ವಕ್ಕೆ ಒಳಗೊಳಗೆ ವಿರೋಧ ವ್ಯಕ್ತವಾಗುತ್ತಿದೆ. ಎಂ.ಬಿ. ಪಾಟೀಲ್ ಕೂಡ “ಸಿಎಂ ರಾಜೀನಾಮೆ ಪ್ರಶ್ನೆಯೇ ಇಲ್ಲ” ಎಂದು ಖಡಕ್ ಉತ್ತರ ನೀಡಿದ್ದಾರೆ
ಇಂದು ಸಿಎಂ ರಾಜೀನಾಮೆ ಅನುಮಾನ!
























































