ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಯು.ಕೆ. ಧ್ವಜಾರೋಹಣ ನೆರವೇರಿಸಿದರು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಲಕ್ಷ್ಮೀಷ ಗಬ್ಲಡ್ಕ,ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಪಿ.ಬಿ.ದಿವಾಕರ ರೈ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು,ನಿಕಟ ಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರು, ಅರ್ಚಕ ಹಾಗೂ ಸಿಬ್ಬಂದಿ ವರ್ಗದವರು, ಶಾಲಾ ಮಕ್ಕಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ತೊಡಿಕಾನ : ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 80ನೇ ಸ್ವಾತಂತ್ರ್ಯ ದಿನ ಆಚರಣೆ














