ಪೆರಾಜೆ ಬಿಳಿಯಾರಿನಲ್ಲಿ ಸರಣಿ ಅಪಘಾತ

ಸ್ಕೂಟಿ ಸ್ಕಿಡಾಗಿ ಯುವಕನೋರ್ವ ಬಿದ್ದು ಗಾಯಗೊಂಡಿದ್ದು , ಯುವಕ ರಸ್ತೆಯಲ್ಲಿ ಬಿದ್ದಿರುವುದನ್ನು ನೋಡಲೆಂದು ಕಾರು ಚಾಲಕ ಬ್ರೇಕ್ ಹಾಕಿದ ವೇಳೆ ಹಿಂಬದಿಯಿಂದ ಕಾರಿಗೆ ಬೈಕ್ ಢಿಕ್ಕಿ ಹೊಡೆದ ಘಟನೆ ಶನಿವಾರ ಪೆರಾಜೆ ಬಿಳಿಯಾರಿನಿಂದ ವರದಿಯಾಗಿದೆ.





















































































ಅರಂತೋಡಿನ ಯುವಕನೋರ್ವ ಸುಳ್ಯದಿಂದ ಅರಂತೋಡಿಗೆ ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಬಿಳಿಯಾರು ಪೆಟ್ರೋಲ್ ಪಂಪ್ ಬಳಿ ಸ್ಕೂಟಿ ಸ್ಕಿಡ್ ಆಗಿ ಪಲ್ಟಿಯಾಯಿತೆನ್ನಲಾಗಿದೆ. ಪರಿಣಾಮವಾಗಿ ಯುವಕ ರಸ್ತೆಗೆ ಎಸೆಯಲ್ಪಟ್ಟು ಕೈಗೆ ಗಾಯವಾಗಿತ್ತು.
ಈ ಅಪಘಾತ ನಡೆದ ಸಂದರ್ಭದಲ್ಲಿ ಅರಂತೋಡಿನಿಂದ ಸುಳ್ಯಕ್ಕೆ ಬರುತ್ತಿದ್ದ ಅರಂತೋಡಿನ ಸತ್ಯ ಎಂಬವರು ತನ್ನ ಕಾರನ್ನು ಬ್ರೇಕ್ ಹಾಕಿ ನಿಲ್ಲಿಸಿದಾಗ ಹಿಂಬದಿಯಿಂದ ವೇಗವಾಗಿ ಬಂದ ಬೈಕ್ ಕಾರಿನ ಹಿಂಬದಿಗೆ ಢಿಕ್ಕಿ
, ಬೈಕ್ ಹಾಗೂ ಕಾರು ಜಖಂಗೊಂಡಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *

error: Content is protected !!
Scroll to Top