ಪಂಚಮಸಾಲಿ ಮೀಸಲಾತಿ ಬೇಡಿಕೆ ಬೆನ್ನಲ್ಲೇ ಒಕ್ಕಲಿಗ ಸಮುದಾಯದಿಂದಲೂ ಮೀಸಲಾತಿ ಬೇಡಿಕೆ ತೀವ್ರಗೊಳ್ಳುತ್ತಿದೆ. ಮೀಸಲಾತಿ ಹೆಚ್ಚಳ ಆಗ್ರಹಿಸಿ ಬಿಜೆಪಿಯ ಒಕ್ಕಲಿಗ ಶಾಸಕರು ಹಾಗೂ ಸಚಿವರು ಶುಕ್ರವಾರ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದಾರೆ.
ಶುಕ್ರವಾರ ಬೆಳಿಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ಭೇಟಿ ಮಾಡಿ ತಮ್ಮ ಬೇಡಿಕೆಯನ್ನು ಮುಂದಿಡಲಿದ್ದಾರೆ. ಒಕ್ಕಲಿಗರ ಮೀಸಲಾತಿ ಹೆಚ್ಚಳ, ಕುಂಚಿಟಗರು ಹಾಗೂ ಬಂಟ ಸಮುದಾಯದವರಿಗೆ ಮೀಸಲಾತಿ ಹೆಚ್ಚಳ ಮಾಡಬೇಕು ಎಂಬುದು ಬೇಡಿಕೆಯಾಗಿದೆ.



































