ಬಸ್ ನಿರ್ವಾಹಕ‌ನಿಂದ ಮಹಿಳೆ ಮೇಲೆ ಹಲ್ಲೆ

ಮೂಡುಬಿದಿರೆಯ ನೀರುಡೆಯಲ್ಲಿ ಬಸ್‌ ನಿರ್ವಾಹಕನೊಬ್ಬ ಬಸ್ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರಿಗೆ ಕಪಾಳ ಮೋಕ್ಷ ಮಾಡಿರು ಘಟನೆ ನಡೆದಿದ್ದು, ನಿರ್ವಾಹಕನನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಶಾಲೋಮ್ ಬಸ್ ನ ನಿರ್ವಾಹಕ ಪ್ರಶಾಂತ್ ಪೂಜಾರಿ ಎಂದು ತಿಳಿದು ಬಂದಿದೆ.
ಪುತ್ತಿಗೆಯಲ್ಲಿರುವ ಆಳ್ವಾಸ್ ಹಾಸ್ಟೆಲ್ ಗೆ ಮುಚೂರಿನಿಂದ ಸುಮಾರು 15 ಮಂದಿ ಮಹಿಳೆಯರು ಶಾಲೊಮ್ ಬಸ್ ನಲ್ಲಿ ನಿತ್ಯ ಕೆಲಸಕ್ಕೆಂದು ಪ್ರಯಾಣಿಸುತ್ತಿದ್ದರು. ತಮ್ಮ ಕೆಲಸ ಬೇಗ ಮುಗಿದರೆ ಮನೆಗೆ ಬೇರೊಂದು ಬಸ್ಸಿನಲ್ಲಿ ತೆರೆಳುತ್ತಿದ್ದರು. ಈ ಕುರಿತಂತೆ ನಿರ್ವಾಹಕನು ಪ್ರತೀ ದಿನ ಇದೇ ಬಸ್ಸಿನಲ್ಲಿ ಬರದಿದ್ದರೆ ರಿಯಾಯಿತಿ ದರದಲ್ಲಿ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಖ್ಯಾತೆ ತೆಗೆದಿದ್ದು, ಇದಕ್ಕೆ ಮಹಿಳಾ ಪ್ರಯಾಣಿರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರು.
ಮಹಿಳೆಯ ಆಕ್ಷೇಪವನ್ನು ವಿರೋಧಿಸಿ ಮಹಿಳೆ ಜತೆ ವಾಗ್ವಾದ ನಡೆಸಿದ್ದ ನಿರ್ವಾಹಕ ಆಕೆಗೆ ಕಪಾಳ ಮೋಕ್ಷ ಮಾಡಿದ್ದ ಎಂದು ಆರೋಪಿಸಿ ದೂರು ನೀಡಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top