ಕನ್ನಡದೊಂದಿಗೆ ಮಕ್ಕಳಿಗೆ ಇಂಗ್ಲೀಷ್ ಶಿಕ್ಷಣ ದೊರೆಯಬೇಕು : ಬೋಜೇಗೌಡ

ಕನ್ನಡ ಶಾಲೆಯನ್ಬು ಉಳಿಸಿ ಬೆಳೆಸುವ ಕಾರ್ಯ ನಡೆಯಬೇಕು,ಕನ್ನಡದೊಂದಿಗೆ ನಮ್ಮ ಮಕ್ಕಳಿಗೆ ಇಂಗ್ಲೀಷ್ ಶಿಕ್ಷಣ ದೊರೆಯಬೇಕೆಂದು ವಿಧಾನ ಪರಿಷತ್ ‌ಸದಸ್ಯ ಬೋಜೇಗೌಡ ಹೇಳಿದರು.
ಅವರು ದೇವಚಳ್ಳ ಗ್ರಾಮದ ಎಲಿಮಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ‌ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕರ ಕೊರತೆ ಶೇ. 50ರಷ್ಟು ಸರಕಾರಿ ಶಾಲೆಯಲ್ಲಿ ಇದೆ. ಸರಕಾರಿ ಶಿಕ್ಷಕರಿಗೂ ಒತ್ತಡಗಳಿವೆ. ಇವುಗಳ ಮಧ್ಯೆ ಹಿರಿಯರು ಶಿಕ್ಷಣಕ್ಕೆ ಒತ್ತು ಕೊಟ್ಟು ಶಿಕ್ಷಣ ಸಂಸ್ಥೆಯನ್ನು ಕಟ್ಟಿ, ಇಂದು ಶತಮಾನೋತ್ಸವ ಆಚರಿಕೊಳ್ಳುತಿರುವುದನ್ನು ನೋಡಿದರೆ ಹಿರಿಯರು ಮಾಡಿದ ಕಾರ್ಯ ಬೆಲೆ ಕಟ್ಟಲಾಗದ. ಶಿಕ್ಷಣದ ಜೊತೆಗೆ ಸಂಸ್ಕಾರದ ಪಾಠ ಈಗಿನ ವಿದ್ಯಾರ್ಥಿಗಳಿಗೆ ದೊರೆಯಬೇಕಿದೆ ಎಂದು ಅವರು ಹೇಳಿದರು.
ನೂತನ ಶಾಲಾ ಕೊಠಡಿ ಉದ್ಘಾಟಿಸಿ ಮಾತನಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ ಮಕ್ಕಳ ಕೊರತೆಯನ್ನು ಎದುರಿಸುತ್ತಿರುವ ಸರಕಾರಿ ಶಾಲೆಗಳ ಪೈಕಿ ಇಂತಹ ಗ್ರಾಮೀಣ ಭಾಗದಲ್ಲಿ ನೂರು ವರ್ಷಗಳ ಹಿಂದೆ ಸರಕಾರಿ ಶಾಲೆಯನ್ನು ಸ್ಥಾಪಿಸಿ ಈಗ ಶಮಾನೋತ್ಸವ ಆಚರಿಸಿಕೊಳ್ಳುತ್ತಿರುವುದು ಶ್ಲಾಘನೀಯ.ಕೇಂದ್ರ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು‌ ಪರಿಣಾಮಕಾರಿಯಾಗಿ ಜಾರಿಗೆ ತರಲು ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.
ನೂತನ ಕೊಠಡಿಗಳನ್ನು ಉದ್ಘಾಟನೆ ಮಾಡಿ ಮಾತನಾಡಿದ ಮಾಜಿ ಸಚಿವ ಎಸ್. ಅಂಗಾರ ಉದ್ಘಾಟಿಸಿದರು. ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ದೇವಚಳ್ಳ ಗ್ರಾಮ ಪಂಚಾಯತ್‌ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ನೆಲ್ಲೂರ್ ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಧನಂಜಯ ಕೋಟೆಮಲೆ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್‌ಎನ್‌ ಮನ್ಮಥ, ದೈಹಿಕ ಶಿಕ್ಷಣ ಪರಿವೀಕ್ಷಕಿ ಆಶಾ ನಾಯಕ್, ಅಕ್ಷರ ದಾಸೋಹ ಯೋಜನೆ ಸುಳ್ಯ ಇದರ ಸಹಾಯಕ ನಿರ್ದೇಶಕಿ ವೀಣಾ ಎಂ ಟಿ, ಸೇವಾ ಸಂಗಮ ಟ್ರಸ್ಟ್ ಗೌರವಾಧ್ಯಕ್ಷ ಬಾಲಕೃಷ್ಣ ಬೊಳ್ಳೂರು, ಶಿವಾಜಿ ಫ್ರೆನಡ್ಸ್‌ ಅಧ್ಯಕ್ಷ ವಿನಯ ಕುಮಾರ್ ಕಲ್ಲುಪನೆ, ನಿವೃತ ಎ.ಎಸ್.ಐ
ಕೃಷ್ಣಯ್ಯ ಕಾಣಿಕೆ, ಗೋಪಿನಾಥ್ ಮೆತ್ತಡ್ಕ, ಎಸ್. ಡಿ. ಎಂ. ಸಿ. ಅಧ್ಯಕ್ಷ ಜಯಾನಂದ ಪಟ್ಟೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಪ್ರಸಾದ್ ಬಿ. ವಿ., ಸೀತಾನಂದ ಹಲ್ದಾಡ್ಕ, ರಾಜೇಶ್ ಪಟ್ಟೆ, ಶಾಲಾ ಮುಖ್ಯ ಶಿಕ್ಷಕ ಶ್ರೀಧರ ಗೌಡ ಉಪಸ್ಥಿತರಿದ್ದರು.
ಶತಮಾನೋತ್ಸವ ಸಮಿತಿ ಅಧ್ಯಕ್ಷ ಎ. ವಿ. ತೀರ್ಥರಾಮ ಸ್ವಾಗತಿಸಿ ಪ್ರಸ್ತಾವನೆಗೈದರು.
ವಿದ್ಯಾರ್ಥಿಗಳು ಪ್ರಾರ್ಥಿಸಿದರು.ಲತಾಶ್ರೀ ಸುಪ್ರಿತ್ ಮೋಂಟಡ್ಕ,ಕಿರಣ್ ಗುಡ್ಡೆಮನೆ ಕಾರ್ಯಕ್ರಮ ನಿರೂಪಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top