ಲಂಚ ಸ್ವೀಕರಿಸುತ್ತಿದ್ದಾಗ ಸುಳ್ಯ ಉಬರಡ್ಕ ಮೂಲದ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹಮ್ಮದ್ ಶರೀಫ್ ಲೋಕಾಯುಕ್ತ ಬಲೆಗೆ !

ಸಂಚಾರಿ ಪೊಲೀಸರು ವಶಪಡಿಸಿಕೊಂಡಿದ್ದ ಸ್ಕೂಟರ್ ಅನ್ನು ಬಿಡುಗಡೆ ಮಾಡಲು 3ಸಾವಿರ ರೂ. ಸ್ವೀಕರಿಸುತ್ತಿದ್ದಾಗ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಹಾಗೂ ಸಿಬ್ಬಂದಿ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡಾಗಿ ಸಿಕ್ಲಿ ಬಿದ್ದಿರುವ ಘಟನೆ ನಡೆದಿದೆ.
ಮಂಗಳೂರು ಉತ್ತರ ಸಂಚಾರಿ ಠಾಣೆಯ ಇನ್‌ಸ್ಪೆಕ್ಟರ್ ಮಹಮ್ಮದ್ ಶರೀಫ್ ಮತ್ತು ಪೊಲೀಸ್ ಸಿಬ್ಬಂದಿ ಪ್ರವೀಣ್‌ ಲೋಕಾಯುಕ್ತ ಬಲೆಗೆ ಬಿದ್ದವರು.
ವ್ಯಕ್ತಿಯೊಬ್ಬರು ಸ್ಕೂಟರ್ ಅನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆಗೊಳಿಸಲು ನ್ಯಾಯಾಲಯದಿಂದ ಆದೇಶವಾಗಿತ್ತು. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹಮ್ಮದ್ ಶರೀಫ್‌ರನ್ನು ಭೇಟಿ ಮಾಡಿದಾಗ 5000ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ನಿಟ್ಟಿನಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್‌ ಠಾಣೆಗೆ ಅವರು ದೂರು ನೀಡಿದ್ದರು. ಆದ್ದರಿಂದ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪೊಲೀಸ್‌ ನಿರೀಕ್ಷಕ ಮಹಮ್ಮದ್ ಶರೀಫ್ ಮತ್ತು ಠಾಣಾ ಬರಹಗಾರೆ ನಾಗರತ್ನ ವಿರುದ್ಧ ಪ್ರಕರಣ ದಾಖಲಾಗಿತ್ತು.
ಸೋಮವಾರ ಮಂಗಳೂರು ಉತ್ತರ ಸಂಚಾರ ಪೊಲೀಸ್‌ ಠಾಣೆಯ ಪೊಲೀಸ್‌ ನಿರೀಕ್ಷಕ ಮಹಮ್ಮದ್ ಶರೀಫ್ ಕೆ. ಮತ್ತು ಸಿಬ್ಬಂದಿ ಪ್ರವೀಣ್‌ ನಾಯ್ಕ 3000ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್‌ ಬಲೆಗೆ ಬಿದ್ದಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿದೆ.

Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top