ಕಾಣಿಕೆ ಡಬ್ಬಿ ಒಡೆದು ಕಳ್ಳತನ

ಬೆಳ್ತಂಗಡಿ ತಾಲೂಕಿನ ಚಿಬಿದ್ರೆ- ಮುಂಡಾಜೆ ಗಡಿ ಭಾಗದ ರಸ್ತೆ ಬದಿ ಇರುವ ಶ್ರೀ ಉಳ್ಳಾಯ-ಉಳ್ಳಾಲ್ತಿ ಕಟ್ಟೆಯ ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳ್ಳತನ ಮಾಡಿದ ಘಟನೆ ಮಂಗಳವಾರ ಹಾಡ ಹಗಲೇ ನಡೆದಿದೆ.
ಮಧ್ಯಾಹ್ನ 11ರಿಂದ ಒಂದು ಗಂಟೆ ಅವಧಿಯೊಳಗೆ ಯಾರೋ ಕಳ್ಳರು ಡಬ್ಬಿಯನ್ನು ಒಡೆದು ಹಣವನ್ನು ದೋಚಿದ್ದಾರೆ. ವಾರಕ್ಕೆ ಒಮ್ಮೆ ಕಾಣಿಕೆ ಡಬ್ಬಿಯಿಂದ ಸಮಿತಿಯವರು ಹಣ ಸಂಗ್ರಹಿಸುತ್ತಿದ್ದರು. ಸುಮಾರು 3 ಸಾವಿರ ರೂ.ಗಿಂತ ಅಧಿಕ ಕಾಣಿಕೆ ಜಮೆಯಾಗುತ್ತಿತ್ತು. ಕಳೆದ ನಾಲ್ಕು ದಿನಗಳ ಹಿಂದೆ ಹಣ ಸಂಗ್ರಹಿಸಿದ್ದು, 2 ಸಾವಿರ ರೂ.ಗಿಂತ ಅಧಿಕ ಹಣ ಕಳ್ಳತನವಾಗಿರಬಹುದು ಎಂದು ಇಲ್ಲಿನ ಮುಖ್ಯಸ್ಥ ಗಣೇಶ ಬಂಗೇರ ಮಾದ್ಯಮದವರಿಗೆ ತಿಳಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top