ಮಡಿಕೇರಿ ಸಮೀಪದ ಕಾಟಿಕೇರಿ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಲಾರಿ ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಡೆದಿದೆ.
ಬೈಕ್ ಸವಾರ ಕಕ್ಕಬೆ ನಿವಾಸಿ ಶರತ್ (28)ಮೃತರ್ದುದೈವಿ.
ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ ಅಡಿಗೆ ಬೈಕ್ ಸಮೇತ ಯುವಕ ಬಿದ್ದು ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಮಡಿಕೇರಿ ಗ್ರಾಮಾಂತರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ ಹಾಗೂ ಎನ್ ಡಿ ಆರ್ ಎಫ್ ಕೊಡಗು ಸಂಪಾಜೆ ಭಾಗದ ಸದಸ್ಯ ನಾಗೇಶ್ ಈ ಸಂದರ್ಭದಲ್ಲಿ ರಸ್ತೆ ಸಂಚಾರ ಸಗಮಗೊಳಿಸಲು ಹಾಗೂ ಶವ ಸಾಗಿಸಲು ಸಹಕರಿಸಿದರು.
ಕಾಟಿಕೇರಿ : ಭೀಕರ ರಸ್ತೆ ಅಪಘಾತ-ಬೈಕ್ ಸವಾರ ಸ್ಥಳದಲ್ಲೇ ಸಾವು
