ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ ಎನ್.ಡಿ.ಆರ್.ಎಫ್ ತಂಡ ಆಗಮನ

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡ ಆಗಮಿಸಿದೆ.
ಈಗಾಗಲೆ ಎರಡೂ ತಂಡಗಳು ಜಿಲ್ಲೆಗೆ ಆಗಮಿಸಿವೆ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್‌ ತಿಳಿಸಿದ್ದಾರೆ.
ಜಿಲ್ಲೆಯ ಮಳೆ ಪರಿಸ್ಥಿತಿಯ ಬಗ್ಗೆ ರವಿವಾರ ತನ್ನ ಅಧೀನ ಅಧಿಕಾರಿಗಳೊಂದಿಗೆ ಆನ್‌ಲೈನ್ ಸಭೆ ನಡೆಸಿ ಅವರು ಮಾತನಾಡಿದರು.
ರಾಷ್ಟ್ರೀಯ ವಿಪತ್ತು ದಳದ ಒಂದು ತಂಡವು ಆಗಮಿಸಿದೆ. ಅದನ್ನು ಪುತ್ತೂರಿನಲ್ಲಿಡಲಾಗುವುದು. ರಾಜ್ಯ ವಿಪತ್ತು ದಳದ ಎರಡು ತಂಡವು ಆಗಮಿಸಿದ್ದು, ಮಂಗಳೂರು ಹಾಗೂ ಸುಬ್ರಹ್ಮಣ್ಯದಲ್ಲಿ ಇಡಲಾಗುವುದು. ಈ ದಳಗಳು ಎಲ್ಲ ರೀತಿಯ ಸಲಕರಣೆ, ಅಗತ್ಯ ಯಂತ್ರೋಪಕರಣಗಳೊಂದಿಗೆ ಬರಲಿದೆ. ಪ್ರಾಕೃತಿಕ ವಿಪತ್ತುಗಳ ಸಂದರ್ಭ ಕಾರ್ಯಾಚರಿಸಲಿದೆ ಎಂದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top