ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ನಸುಕಿನ ವೇಳೆ ಖಾಸಗಿ ಬಸ್ ಪಲ್ಟಿಯಾಗಿ ಹಲವಾರು ಪ್ರಯಾಣಿಕರು ಗಾಯಗೊಂಡ ಘಟನೆ ಜೂ.7 ರಂದು ನಡೆದಿದೆ.
ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಖಾಸಗಿ ಬಸ್ ಸುಮಾರು 3:30 ರ ವೇಳೆ ಗುಂಡ್ಯ ಸಮೀಪ ತಲುಪುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಪಲ್ಟಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಇಬ್ಬರನ್ನು ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ
ಈ ಘಟನೆಯಲ್ಲಿ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ಚಾಲಕ ಸೇರಿದಂತೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.
ವೇಗದ ಚಾಲನೆಯೇ ಬಸ್ ಪಲ್ಟಿಯಾಗಲು ಕಾರಣ ಎನ್ನಲಾಗುತ್ತಿದೆ. ಬಸ್ಸಿನಲ್ಲಿದ್ದ ಬಹುತೇಕ ಪ್ರಯಾಣಿಕರು ನಿದ್ರೆ ಮಂಪರಿನಲ್ಲಿದ್ದರು ಎಂದು ತಿಳಿದು ಬಂದಿದೆ.
ಗುಂಡ್ಯದಲ್ಲಿ ಖಾಸಗಿ ಬಸ್ಸು ಪಲ್ಟಿ 10ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯ
