ಸುಳ್ಯ ತಾಲೂಕಿನ ಆಲೆಟ್ಟಿ ಮುಖ್ಯ ರಸ್ತೆಯ ನಾಗಪಟ್ಟಣ ಪಯಸ್ವಿನಿ ಸೇತುವೆ ಬಳಿ ಶಾಲಾ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಘಟನೆ ಶುಕ್ರವಾರ ವರದಿಯಾಗಿದೆ.
ಆಲೆಟ್ಟಿ ಕಡೆಯಿಂದ ಬರುತ್ತಿದ್ದ ಕೆ.ವಿ.ಜಿ.ಸ್ಕೂಲ್ ಬಸ್ಸಿಗೆ ಸುಳ್ಯದಿಂದ ಮಿತ್ತಡ್ಕ ರೋಟರಿ ಶಾಲೆಗೆ ಹೋಗುತ್ತಿದ್ದ ಬಸ್ಸು ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿ ಶಾಲಾ ವಿದ್ಯಾರ್ಥಿಗಳು ಇದ್ದು ಅದೃಷ್ಟವಶಾತ್ ಯಾವುದೇ ರೀತಿಯ ಅಪಾಯ ಸಂಭವಿಸದೆ ಪಾರಾಗಿದ್ದಾರೆ. ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಸಿನ ಮುಂಭಾಗ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.
ಶಾಲಾ ಬಸ್ ಗಳ ನಡುವೆ ಅಪಘಾತ,ವಿದ್ಯಾರ್ಥಿಗಳು ಅಪಾಯದಿಂದ ಪಾರು
