ಅರಂತೋಡು, ಜೂ.27. ತೊಡಿಕಾನ ಗ್ರಾಮದಲ್ಲಿ ಶುಕ್ರವಾರ ಸುರಿದ ಭಾರೀ ಗಾಳಿ ಮಳೆಗೆ ವಿದ್ಯುತ್ ಕಂಬದ ಮೇಲೆ ಮರಬಿದ್ದು ಹಾನಿ ಯಾಗಿ ಎರಡು ವಿದ್ಯುತ್ ಕಂಬಗಳು ತುಂಡಾದ ಘಟನೆ ವರದಿಯಾಗಿದೆ.
ಬಳಿಕ ಅದನ್ನು ತೆರವುಗೊಳಿಸಲಾಯಿತು.
ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತ ಮೊಟ್ಟೆ ,ತೊಡಿಕಾನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲು ಮೂಲೆ ,ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ಪೂಜಾರಿ, ರಾಮಕೃಷ್ಣ ಕುಂಟು ಕಾಡು,ಅರಂತೋಡು ಮೆಸ್ಕಾಂ ಸಲಹಾ ಸಮಿತಿ ಸದಸ್ಯ ತಾಜುದ್ದೀನ್ ಅರಂತೋಡು ಅರಣ್ಯ ಸಿಬ್ಬಂದಿ ,ಮೆಸ್ಕಾಂ ಸಿಬ್ವದಿ ಸ್ಥಳದಲ್ಲಿ ಇದ್ದು ದುರಸ್ತಿ ಕಾರ್ಯ ಮತ್ತು ಮರ ತೆರವುಗೊಳಿಸಲು ಸಹಕರಿಸಿದರು.
ತೊಡಿಕಾನ : ವಿದ್ಯುತ್ ಕಂಬಕ್ಕೆ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ತುಂಡು



































