ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ನಾಗನಮೂಲೆ ನಾಗನಕಟ್ಟೆಯಲ್ಲಿ ಮತ್ತು ದೇವಳ ಸಮೀಪದ ನಾಗನಕಟ್ಟೆಯ ನಾಗನಕಲ್ಲಿಗೆ ನಾಗರ ಪಂಚಮಿ ಪ್ರಯುಕ್ತ ಹಾಲೆರೆದು,ಸಿಯಾಳಭಿಷೇಕ ಮಾಡಿ ನಾಗತಂಬಿಲ ನಡೆಸಿ ಪೂಜೆ ಸಲ್ಲಿಸಲಾಯಿತು. ದೇವಳ ಪ್ರಧಾನ ಅರ್ಚಕ ಕೇಶವಮೂರ್ತಿ,ಶ್ರೀನಿಧಿ ಪೂಜಾ ಕಾರ್ಯಕ್ರಮ ನಡೆಸಿದರು. ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ , ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಾಲಕಕ್ರಷ್ಣ ಕುಂಟುಕಾಡು(ಕರಿಮಜಲು)ಮಾಲತಿ ಬೋಜಪ್ಪ,ಚಂಚಲಾಕ್ಷಿ,ತಿಮ್ಮಯ್ಯ ಮೆತ್ತಡ್ಕ, ಅರಂತೋಡು ಗ್ರಾಮ ಪಂಚಾಯತ್ ಸದಸ್ಯ ವೆಂಕಟ್ರಮಣ ಪೆತ್ತಾಜೆ,ದೇವಳದ ವ್ಯವಸ್ಥಾಪಕ ಆನಂದ ಕಲ್ಲಗದ್ದೆ,ತೊಡಿಕಾನ ಮಲ್ಲಿಕಾರ್ಜುನ ಭಜನಾ ಸಂಘದ ಅಧ್ಯಕ್ಷ ಚಂದ್ರಶೇಖರ ಆಚಾರ್ಯ, ಖಜಾಂಜಿ ಭವಿತ್ ಬಾಳೆಕಜೆ,ಮಾಜಿ ಅಧ್ಯಕ್ಷ ಜನಾರ್ದನ ಬಾಳೆಕಜೆ,ತೊಡಿಕಾನ ಗೌಡ ಗ್ರಾಮ ಸಮಿತಿ ಅಧ್ಯಕ್ಷ ರಮಾನಂದ ಬಾಳೆಕಜೆ,ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಪಾರೆಮಜಲು, ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಪ್ರಶಾಂತ್ ಕಾಫಿಲ,ದೇವಳದ ಸಿಬ್ಬಂದಿಗಳು,ಊರಿನ ಹಾಗೂ ಪರ ಊರಿನ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆದ ನಾಗರಪಂಚಮಿ ಆಚರಣೆ

















