Author name: Tejas

ಅರಂತೋಡು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಸಂತೋಷ್ ಇನ್ನಿಲ್ಲ

ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಜು.22ರಂದು ರಾತ್ರಿ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ವರದಿಯಾಗಿದೆ.ಗಂಭೀರ ಗಾಯಗೊಂಡು ಮ್ರತಪಟ್ಟ ಬೈಕ್ ಸವಾರ ವಿದ್ಯಾರ್ಥಿಯನ್ನು ಅರಂತೋಡು ಗ್ರಾಮದ ಬಿಳಿಯಾರು ಬನ ಸುಬ್ರಾಯ ಅವರ ಮಗ ಸಂತೋಷ್ (17 ವರ್ಷ) ಎಂದು ಗುರುತಿಸಲಾಗಿದೆ.ಗಾಯಾಳುವನ್ನು‌ ಶರತ್ ಅಡ್ಯಡ್ಕ ಅವರು ಸ್ಥಳೀಯರ ಸಹಕಾರದಿಂದ ಸುಳ್ಯದ ಖಾಸಗಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿದ್ದರು.ಸಂತೋಷ್ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ […]

ಅರಂತೋಡು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಸಂತೋಷ್ ಇನ್ನಿಲ್ಲ Read More »

ಶಾಲಾ ಬಸ್‌ ಮೇಲೆ ಮರ ಬಿದ್ದು ಯುಕೆಜಿ ವಿದ್ಯಾರ್ಥಿನಿ ಚಿರಾನ್ವಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿಯ ಬರಿಮಾರು ಸಮೀಪ ಕಲ್ಲಡ್ಕ ಶ್ರೀರಾಮ ಶಾಲೆಯ ಬಸ್‌ ಮೇಲೆ ಬೃಹತ್ ಮರ ಬಿದ್ದು ಐದು ವರ್ಷದ ಯುಕೆಜಿ ವಿದ್ಯಾರ್ಥಿನಿ ಚಿರಾನ್ವಿ ದಾರುಣವಾಗಿ ಮೃತಪಟ್ಟಿದ್ದಾಳೆ. ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ಆಕಸ್ಮಿಕ ದುರಂತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾಳೆ. ಘಟನೆಯಲ್ಲಿ ಮತ್ತಿಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬಿಳಿಯೂರಿನ ತೋಟ ನಿವಾಸಿ ನಿವಾಸಿ ಚಂದ್ರಹಾಸ್ ಎಂಬವರ ಪುತ್ರಿ ಎಲ್

ಶಾಲಾ ಬಸ್‌ ಮೇಲೆ ಮರ ಬಿದ್ದು ಯುಕೆಜಿ ವಿದ್ಯಾರ್ಥಿನಿ ಚಿರಾನ್ವಿ ಸಾವು Read More »

ಭಾರೀ ಮಳೆ ಸಾಧ್ಯತೆ; ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ,ಪಿಯುಗೆ ರಜೆ

ಭಾರತೀಯ ಹವಾಮಾನ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಗೆ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಜು.23 ರಂದು ಅಂಗನವಾಡಿ ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಘೋಷಣೆ ಮಾಡಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಸಾಧ್ಯತೆ; ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ,ಪಿಯುಗೆ ರಜೆ Read More »

ಅರಂತೋಡು : ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ

ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಇದೀಗ ನಡೆದಿದೆ.ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಅರಂತೋಡು ಗ್ರಾಮದ ಬಿಳಿಯಾರು ಬನ ಸುಬ್ರಾಯ ಅವರ ಮಗ ಸಂತೋಷ್ ಎಂದು ಗುರುತಿಸಲಾಗಿದೆ.ಗಾಯಾಳುವನ್ನು‌ ಶರತ್ ಅಡ್ಯಡ್ಕ ಅವರು ಸ್ಥಳೀಯರ ಸಹಕಾರದಿಂದ ಸುಳ್ಯದ ಖಾಸಗಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ದಿದ್ದಾರೆ.

ಅರಂತೋಡು : ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ Read More »

ಸುಳ್ಯದಲ್ಲಿ ಕೆಜೆಯು ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿಕೂಟ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿಕೂಟ ಕಾರ್ಯಕ್ರಮ ಸುಳ್ಯದ ರಂಗಮಯೂರಿ ಕಲಾಶಾಲೆಯಲ್ಲಿ ಜು. 22 ರಂದು ನಡೆಯಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ” ಆಟಿ ಆಚರಣೆಯಿಂದ ಹಿಂದಿನ ಜೀವನದ ಅನುಭವವನ್ನು ಮತ್ತೆ ನೆನಪಿಸಿದಂತಾಗುದೆ.ನಮ್ಮ ಹಿರಿಯರು ಮಾಡುವ ಕಾರ್ಯ ಮೂಢನಂಬಿಕೆಯಲ್ಲ. ಮೂಲ ನಂಬಿಕೆಯಾಗಿದ್ದು, ನಮ್ಮ ಸಂಪ್ರದಾಯವನ್ನು ಉಳಿಸಿಕೊಳ್ಳುವುದು ಅಗತ್ಯ” ಎಂದರು. ಸಾಮಾಜಿಕ ಪಿಡುಗಾದ ಲಂಚ ಭ್ರಷ್ಟಾಚಾರವನ್ನು ನಾವೆಲ್ಲರೂ ಸೇರಿ ನಿರ್ಮೂಲನೆ ಮಾಡೋಣ. ನನ್ನಲ್ಲಿಗೆ

ಸುಳ್ಯದಲ್ಲಿ ಕೆಜೆಯು ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿಕೂಟ Read More »

ಅರಂತೋಡು ಎರಡನೇ ವಾರ್ಡ್ ನಲ್ಲಿ ವೇಗ ಪಡೆದುಕೊಂಡ ಎಸ್.ಐ.ಆರ್ ಪ್ರಕಿಯೆ

ಅರಂತೋಡು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಎಸ್.ಐ.ಆರ್ ಪ್ರಕಿಯೆ ಬಿರುಸುನಿಂದ ಸಾಗುತ್ತಿದ್ದು ಅರಂತೋಡು ಎರಡನೇ ವಾರ್ಡಿನಲ್ಲಿ ಎಸ್.ಐ.ಆರ್ ಪ್ರಕಿಯೆ ಶೇ.97ರಷ್ಟು ಪೂರ್ಣಗೊಂಡಿದೆ ಎಂದು ತಿಳಿದು ಬಂದಿದೆ.ಬಿ.ಎಲ್.ಒ ಹೊನ್ನಮ್ಮ,ಬಿ.ಎಲ್.ಎ ಬಾಲಕೃಷ್ಣ ರೈಎರಡನೇ ವಾರ್ಡಿನಲ್ಲಿ ಸಹಕರಿಸುತ್ತಿದ್ದಾರೆ.

ಅರಂತೋಡು ಎರಡನೇ ವಾರ್ಡ್ ನಲ್ಲಿ ವೇಗ ಪಡೆದುಕೊಂಡ ಎಸ್.ಐ.ಆರ್ ಪ್ರಕಿಯೆ Read More »

ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ:ಸಂಸದ ಕ್ಯಾ.ಚೌಟ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ರ ಸಾಣೂರು-ಬಿಕರ್ನಕಟ್ಟೆಯವರೆಗಿನ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಇದೀಗ ಬನ್ನಡ್ಕ ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಸೇರಿದಂತೆ 5.83 ಕೋಟಿ ರೂ. ವೆಚ್ಚದ ಇತರ ಕಾಮಗಾರಿಗಳಿಗೆ ಹೆದ್ದಾರಿ ಪ್ರಾಧಿಕಾರವು ತಾತ್ವಿಕ ಅನುಮೋದನೆ ನೀಡಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಸ್ಥಳೀಯ ನಿವಾಸಿಗಳು ಹಾಗೂ ಸಂಘ-ಸಂಸ್ಥೆಗಳ ಮನವಿಗೆ ಸ್ಪಂದಿಸಿ, ಬನ್ನಡ್ಕ ಪ್ರದೇಶದಲ್ಲಿ ಕೈಬಿಡಲಾಗಿದ್ದ ಸರ್ವೀಸ್ ರಸ್ತೆ ಹಾಗೂ ವಾಮಂಜೂರು ಜಂಕ್ಷನ್ ಬಳಿ ನೂತನ ಪಾದಚಾರಿ ಮೇಲ್ಸೇತುವೆ (Foot Over Bridge) ನಿರ್ಮಾಣಕ್ಕೆ ಈಗಾಗಲೇ

ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ:ಸಂಸದ ಕ್ಯಾ.ಚೌಟ Read More »

ಸಂಪಾಜೆ : ಕಾರು ಪಲ್ಟಿ ಹೊಡೆದು ಚಾಲಕನಿಗೆ ಗಾಯ

ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕಡೆಪಾಲ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ಜು.21 ರಂದು ಸಂಭವಿಸಿದೆ. ಕಲ್ಲುಗುಂಡಿಯಿಂದ ಕಡೆಪಾಲದ ಕಡೆಗೆ ಹೋಗುತ್ತಿದ್ದ ಕಾರು ಕಡೆಪಾಲದ ತಿರುವು ಬಳಿ ತಲುಪಿದಾಗ ಒಮ್ಮಿಂದೊಮ್ಮೆಲೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಚರಂಡಿಗೆ ಪಲ್ಟಿಯಾಗಿದೆ. ಪರಿಣಾಮವಾಗಿ ಕಾರಿನ ಚಾಲಕ ಗುರುವ ಎಂಬವರಿಗೆ ತಲೆಗೆ ಗಾಯವಾಗಿದೆ. ಕೂಡಲೇ ಸ್ಥಳೀಯರ ಸಹಕಾರದಿಂದ ಕಲ್ಲುಗುಂಡಿಯ ತಾಜುದ್ದೀನ್ ಟರ್ಲಿ ಅಂಬುಲೆನ್ಸ್ ಮೂಲಕ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯದ್ದು ಚಿಕಿತ್ಸೆ ಕೊಡಿಸಲಾಗಿದೆ.

ಸಂಪಾಜೆ : ಕಾರು ಪಲ್ಟಿ ಹೊಡೆದು ಚಾಲಕನಿಗೆ ಗಾಯ Read More »

ನಾಳೆ (ಜು.22): ಸುಳ್ಯದಲ್ಲಿ ಕೆಜೆಯು ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿಕೂಟ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿಕೂಟ ಸುಳ್ಯದ ರಂಗಮಯೂರಿ ಕಲಾಶಾಲೆಯಲ್ಲಿ ಜು. 22 ರಂದು ನಡೆಯಲಿರುವುದು. ಶಾಸಕಿ ಕು.ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ನಿವೃತ್ತ ಪ್ರಾಧ್ಯಾಪಕ ಡಾ. ವಿಶ್ವನಾಥ ಬದಿಕಾನ ಆಟಿ ಮತ್ತು ಪತ್ರಿಕಾ ದಿನದ ಕುರಿತು ವಿಶೇಷ ಉಪನ್ಯಾಸ ಮಾಡಲಿರುವರು.ಕೆಜೆಯು ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಯಶ್ವಿತ್ ಕಾಳಂಮನೆ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕ ಅಶೋಕ್ ಪ್ರಭು, ಕೆಜೆಯು ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್, ರಂಗಮಯೂರಿ ಕಲಾ

ನಾಳೆ (ಜು.22): ಸುಳ್ಯದಲ್ಲಿ ಕೆಜೆಯು ವತಿಯಿಂದ ಪತ್ರಿಕಾ ದಿನಾಚರಣೆ ಮತ್ತು ಆಟಿಕೂಟ Read More »

ಅಜ್ಜಾವರ : ಶಾಲಾ ಶತಮಾನೋತ್ಸವ ಆಚರಣೆಯ ಪ್ರಾರಂಭೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಜ್ಜಾವರ ಶತಮಾನೋತ್ಸವ ಆಚರಣೆಯ ಪ್ರಾರಂಭೋತ್ಸವದ ಕರೆಯೋಲೆಯನ್ನು ಜುಲೈ 20 ರಂದು ಬಿಡುಗಡೆಗೊಳಿಸಲಾಯಿತು.ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಎ.ಭಾಸ್ಕರ ರಾವ್ ಬಯಂಬು,ಉಪಾಧ್ಯಕ್ಷರುಗಳಾದ ಶಿವರಾಮ ನಾರ್ಕೋಡು, ಅಬ್ದುಲ್ಲ, ಶತಮಾನೋತ್ಸವ ಸಮಿತಿ ಕಾರ್ಯದರ್ಶಿ ಲೋಕಯ್ಯ ಮಾಸ್ತರ್‌ ಅತ್ಯಾಡಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಎ. ಪಿ ಬಶೀರ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಬೆಳ್ಯಪ್ಪ ಗೌಡ ಮುಡೂರು, ಸ. ಹಿ. ಪ್ರಾ ಶಾಲೆ

ಅಜ್ಜಾವರ : ಶಾಲಾ ಶತಮಾನೋತ್ಸವ ಆಚರಣೆಯ ಪ್ರಾರಂಭೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

error: Content is protected !!
Scroll to Top