Author name: Tejas

ದಲಿತ ಅಪ್ರಾಪ್ತೆ ಯುವತಿಯನ್ನು ಗರ್ಭವತಿಯಾಗಿಸಿದ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ದಲಿತ ಅಪ್ರಾಪ್ತೆ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭವತಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅನ್ಯಕೋಮಿನ ಯುವಕನೋರ್ವನ ವಿರುದ್ದ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮುರ ನಿವಾಸಿ ಸಫ್ಘಾನ್ ಯಾನೆ ಅಫ್ಘಾನ್ ಆರೋಪಿಯಾಗಿದ್ದು, ಆರೋಪಿಯು ಅಪ್ರಾಪ್ತಯನ್ನು ಪುಸಲಾಯಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಮಾಡಿದ್ದಾನೆಂದು ಆರೋಪಿಸಲಾಗಿದೆ.ಘಟನೆಯಲ್ಲಿ ಆರೋಪಿ ವಿರುದ್ಧ ಫೋಕೋ ಪ್ರಕರಣ ಮತ್ತು ದಲಿತ ದೌರ್ಜನ್ಯ ಪ್ರಕರಣವೂ ದಾಖಲಾಗಿದೆ ಎಂದು ತಿಳಿದು ಬಂದಿದೆ.

ದಲಿತ ಅಪ್ರಾಪ್ತೆ ಯುವತಿಯನ್ನು ಗರ್ಭವತಿಯಾಗಿಸಿದ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ವೈವಾಹಿಕ ಜೀವನಕ್ಕೆ ಕಾಲಿರಿಸಿದ ಖ್ಯಾತ ನಿರೂಪಕಿ ಅನುಶ್ರೀ

ಅಪಾರ ಅಭಿಮಾನಿಗಳನ್ನು ಹೊಂದಿದ ಆಂಕರ್ ಅನುಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗು ಮೂಲದ ಉದ್ಯಮಿ ರೋಷನ್ ಅವರನ್ನು ಅನುಶ್ರೀ ವರಿಸಿದ್ದಾರೆ.ಇಂದು ಬೆಳಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.ಈ ಇಬ್ಬರ ಮದುವೆಯೂ ಬೆಂಗಳೂರಿನ ಹೊರವಲಯದ ಸಂಭ್ರಮ ಬೈ ಸ್ವಾನ್‌ಲೈನ್ಸ್ ಸ್ಟುಡಿಯೋಸ್ ತಿಟ್ಟಹಳ್ಳಿ, ಕಗ್ಗಲಿಪುರದಲ್ಲಿ ನಡೆಯುತ್ತಿದೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ಅನುಶ್ರೀ ವಿವಾಹ ಆಗಿದ್ದಾರೆ.

ವೈವಾಹಿಕ ಜೀವನಕ್ಕೆ ಕಾಲಿರಿಸಿದ ಖ್ಯಾತ ನಿರೂಪಕಿ ಅನುಶ್ರೀ Read More »

ಗುತ್ತಿಗಾರು: ಗಣೇಶೋತ್ಸವ ಅಂಗವಾಗಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಅರ್ಧಕ್ಕೆ ನಿಲ್ಲಿಸಿದ ಪೊಲೀಸರು

ವಳಲಂಬೆಯಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪೊಲೀಸರು ಅರ್ಧಕ್ಕೆ ನಿಲ್ಲಿಸಿದ ಘಟನೆ ಇಂದು(ಆ.27) ರಾತ್ರಿ ನಡೆದಿದೆ.ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರಾತ್ರಿ 10ಗಂಟೆ ನಂತರ ನಡೆಸಬಾರದು ಎಂದು ಸರ್ಕಾರದ ಆದೇಶವಿರುವ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಪೊಲೀಸರು ಆಗಮಿಸಿ ಕಾರ್ಯಕ್ರಮ ನಿಲ್ಲಿಸುವಂತೆ ತಿಳಿಸಿದರು. ಅದಾಗಲೇ 10 ಗಂಟೆ ಕಳೆದಿದ್ದು 30 ನಿಮಿಷಗಳ ಕಾರ್ಯಕ್ರಮ ಬಾಕಿ ಇರುವಾಗಲೇ ಕಾರ್ಯಕ್ರಮಗಳು ದಿಢೀರ್ ಸ್ಥಗಿತಗೊಂಡಿತು.ಕಾರ್ಯಕ್ರಮ ರದ್ದಾದ ಬೆನ್ನಲ್ಲೇ ಸೇರಿರುವ ಭಕ್ತಾದಿಗಳು ಹಾಗೂ ಕಲಾವಿದರಿಗೆ ನಿರಾಶೆಯಾಗಿದ್ದು, ಸರ್ಕಾರದ ಆದೇಶಕ್ಕೆ ಅಸಮಾಧಾನಗೊಂಡರು.

ಗುತ್ತಿಗಾರು: ಗಣೇಶೋತ್ಸವ ಅಂಗವಾಗಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮ ಅರ್ಧಕ್ಕೆ ನಿಲ್ಲಿಸಿದ ಪೊಲೀಸರು Read More »

ಭಾರೀ ಮಳೆ ಹಿನ್ನಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸುಳ್ಯ ತಾಲೂಕಿನ ಶಾಲಾ ಕಾಲೇಜು ಗಳಿಗೆ ಧಾರಾಕಾರ ಸುರಿಯುತ್ತಿರುವ ಮಳೆ ಹಿನ್ನಲೆಯಲ್ಲಿ ಆ.28 ರಂದು ತಹಶೀಲ್ದಾರ್ ರಜೆಯನ್ನು ಘೋಷಿಸಿದ್ದಾರೆ.

ಭಾರೀ ಮಳೆ ಹಿನ್ನಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಅಜ್ಜಾವರ : ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 229ನೇ ಪುಸ್ತಕ ಬಿಡುಗಡೆ

ಅಜ್ಜಾವರ ದೇವರಕಳಿಯ ಚೈತನ್ಯ ಸೇವಾಶ್ರಮದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಗಣಪತಿ ಪೂಜೆ ಮತ್ತು ಇಲ್ಲಿಯ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 229ನೇ ಕ್ರತಿ ಶರಣಾಗು ಶಿವಗೆ ಬಿಡುಗಡೆಗೊಳಿಸಲಾಯಿತು.ಕು.ವೈಷ್ಣವಿ ಪುಸ್ತಕ ಬಿಡುಗಡೆಗೊಳಿಸಿದರು.ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿಯವರು ಮೊದಲು ಪೂಜಿಸುವ ದೇವರು ಗಣಪತಿ.ಶಿವನ ಮೊದಲ ಪುತ್ರ ಗಣಪತಿ ಆದಿ ಮಾಯೆಯ ಶ್ರೇಷ್ಠ ಪುತ್ರರಲ್ಲಿ ಗಣಪತಿ ಮತ್ತು ಶಣ್ಮುಖ.ವಿಘ್ನ ನಿವಾರಕ ಗಣಪತಿ.ದೇಶದ ಎಲ್ಲೆಡೆ ಗಣತಿ ಆರಾಧನೆ ಮಾಡಲಾಗುತ್ತಿದೆ.ಗಣೇಶ ಚತುರ್ಥಿ ಎಲ್ಲರಿಗೂ ಶುಭವನ್ನು‌ ತರಲಿ ಎಂದು ಹೇಳಿದರು.ನಿವೃತ್ತ ಎಸ್.ಐ ಕುಶಾಲಪ್ಪ ಗೌಡ,ಅನಂತರಾಮ ಅಡ್ಪಂಗಾಯ ಮುಖ್ಯ

ಅಜ್ಜಾವರ : ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 229ನೇ ಪುಸ್ತಕ ಬಿಡುಗಡೆ Read More »

ಸುಳ್ಯ : ಚನ್ನಕೇಶವ ದೇವಳದಲ್ಲಿ ಶ್ರದ್ಧಾ ಭಕ್ತಿಯಿಂದ ಗಣೇಶೋತ್ಸವ ಆರಂಭ

ಸುಳ್ಯ ಸಾರ್ವಜನಿಕ ದೇವತಾರಧಾನ ಸಮಿತಿ, ಶ್ರೀ ಸಿದ್ದಿವಿನಾಯಕ ಸೇವಾ ಸಮಿತಿಯ ಆಶ್ರಯದಲ್ಲಿ ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಆ. 27 ರಿಂದ 31ರ ತನಕ ಸಮಾಜ ಸಂಘಟನೆ ಮತ್ತು ಧರ್ಮ ಜಾಗೃತಿಗಾಗಿ ನಡೆಯಲಿರುವ 57 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನಾ ಸಮಾರಂಭವು ಆ. 27 ರಂದು ನಡೆಯಿತು.ಸುಳ್ಯ ಅಕಾಡೆಮಿ ಆಪ್ ಲಿಬರಲ್ ಎಜ್ಯೂಕೇಷನ್ ಅಧ್ಯಕ್ಷ ಡಾ. ಕೆ. ವಿ. ಚಿದಾನಂದ ರವರು ದೀಪ ಪ್ರಜ್ವಲಿಸಿ ಶುಭ ಹಾರೈಸಿದರು. ಶ್ರೀ ಸಿದ್ದಿವಿನಾಯಕ ಸೇವಾ ಸಮಿತಿ ಅಧ್ಯಕ್ಷ ಪಿ.

ಸುಳ್ಯ : ಚನ್ನಕೇಶವ ದೇವಳದಲ್ಲಿ ಶ್ರದ್ಧಾ ಭಕ್ತಿಯಿಂದ ಗಣೇಶೋತ್ಸವ ಆರಂಭ Read More »

ಸಂಪಾಜೆ : ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಅಧ್ಯಕ್ಷತೆಯಲ್ಲಿ ನಡೆಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ. ಸ್ವಾಗತಿಸಿ ವರದಿ ವಾಚಿಸಿದರು ಕಾರ್ಯದರ್ಶಿ ಸುಂದರ ಸಾರ್ವಜನಿಕರ ಅರ್ಜಿ ಓದಿದರುಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.ಪಂಚಾಯತ್ ರಾಜ್ ಇಲಾಖೆಯಲ್ಲಿ ಇಂಜಿನಿಯರ್ ಕೊರತೆ ಇದ್ದುಪಂಚಾಯತ್ ಕೆಲಸಗಳು ವಿಳಂಬ ಆಗುತ್ತಿದೆ. ಶೀಘ್ರ ಸರ್ಕಾರ ಇಂಜಿನಿಯರ್ ನೇಮಕ ಮಾಡಬೇಕು ಈ ಬಗ್ಗೆ ಸಂಬಂಧ ಪಟ್ಟವರಿಗೆ ಮನವಿ ಕೊಡಲು ನಿರ್ಣಯಿಸಲಾಯಿತುಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಾಕಿ ಇರುವ

ಸಂಪಾಜೆ : ಗ್ರಾಮ ಪಂಚಾಯತ್ ಸಾಮಾನ್ಯ ಸಭೆ Read More »

ವೇಗ ಪಡೆದುಕೊಂಡ ಸುಳ್ಯ ನಗರದ ಕಸ ಸಾಗಾಟ

ಸುಳ್ಯ ನಗರ ಪಂಚಾಯತ್ ನಗರವನ್ನು ಸ್ವಚ್ಛ ಸುಳ್ಯ ನಗರವನ್ನಾಗಿಸಲು ದಿಟ್ಟ ಹೆಜ್ಜೆ ಇರಿಸಿದೆ.ನಗರ ಪಂಚಾಯತ್ ಆವರಣದ ಒಳಗಡೆಯ ಶೆಡ್ ನಲ್ಲಿ ರಾಶಿ ಹಾಕಲಾದ ಕಸವನ್ನೆಲ್ಲ ಲಾರಿಯಲ್ಲಿ ತುಂಬಿ ಇದೀಗ ಕಸದ ಲೋಡ್ ಗಳನ್ನು ಮೈಸೂರು ಮತ್ತು ಬೆಳಗಾವಿಗೆ ಸಾಗಿಸಲಾಗುತ್ತಿದೆ.ಸಂಸದ ಬ್ರಿಜೇಶ್ ಚೌಟ, ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಬಿಜೆಪಿ ಸುಳ್ಯ ನಗರ ಮಹಾ ಶಕ್ತಿಕಂದ್ರದ ಅಧ್ಯಕ್ಷ ಕುಸುಮಾಧರ ಎ.ಟಿ ಮುತುವರ್ಜಿಯಲ್ಲಿ ಕಸವನ್ನು ಸಾಗಿಸಲಾಗುತ್ತಿದೆ. ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಅವರು ಕಸ

ವೇಗ ಪಡೆದುಕೊಂಡ ಸುಳ್ಯ ನಗರದ ಕಸ ಸಾಗಾಟ Read More »

ಸುಳ್ಯದಲ್ಲಿ ಆಧಾರ್ ಸೇವಾ ಕೇಂದ್ರ ಮತ್ತೆ ಆರಂಭ

ಸುಳ್ಯದಲ್ಲಿ ಕೆಲವು ಸಮಯದಿಂದ ಎದುರಾಗಿದ್ದ ಆಧಾರ್‌ ಸಮಸ್ಯೆ ಪರಿಹಾರ ಕಂಡಿದೆ. ಸುಳ್ಯ ಅಂಚೆ ಇಲಾಖೆಯಲ್ಲಿ ಮಧ್ಯಾಹ್ನ ಬಳಿಕ ಆಧಾರ್ ಸೇವೆ ಆರಂಭವಾಗಿದೆ.ಸುಳ್ಯದಲ್ಲಿ ಆಧಾ‌ರ್ ಸೇವೆ ಸ್ಥಗಿತವಾಗಿದ್ದರಿಂದ ಜನರು ಬೆಳ್ಳಾರೆ, ಪುತ್ತೂರು ತಾಲೂಕಿಗೆ ಹೋಗಿ ಆಧಾರ್ ತಿದ್ದುಪಡಿ ಸಹಿತ ಇನ್ನಿತರ ಕೆಲಸಮಾಡಿಕೊಂಡು ಬರಬೇಕಾಗಿದ್ದು. ತಾಲೂಕು ಪಂಚಾಯತ್, ನಗರ ಪಂಚಾಯತ್ ಸಭೆಯಲ್ಲಿ ಚರ್ಚೆಗಳಾಗಿದ್ದವು.ಸುಳ್ಯಕ್ಕೆ ಉಸ್ತುವಾರಿ ಸಚಿವರು ಬಂದಾಗ ಗಮನ ಸೆಳೆಯಲಾಗಿತ್ತು. ಶಾಸಕರು ಕೂಡಾ ಆಧಾರ್ ಕೇಂದ್ರ ಪುನರಾರಂಭಕ್ಕೆ ಸರಕಾರದ ಮಟ್ಟದಲ್ಲಿ ಪ್ರಯತ್ನ ಪಟ್ಟಿದ್ದರು.

ಸುಳ್ಯದಲ್ಲಿ ಆಧಾರ್ ಸೇವಾ ಕೇಂದ್ರ ಮತ್ತೆ ಆರಂಭ Read More »

ಗಾಳ ಹಾಕಲು ತೆರಳಿದ ವ್ಯಕ್ತಿ ಕೆರೆಗೆ ಬಿದ್ದು ಸಾವು

ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಪಲ್ಲಾದೆ ಎಂಬಲ್ಲಿ ಕೆರೆಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ರಾತ್ರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ.ಮೃತ ವ್ಯಕ್ತಿಯನ್ನು ಶ್ರೀಧರ ಎಂದು ಗುರುತಿಸಲಾಗಿದೆ.ಈತ ಪಲ್ಲಾದೆ ಯಲ್ಲಿರುವ ಖಾಸಗಿ ತೋಟದಲ್ಲಿರುವ ದೊಡ್ಡ ಕೆರೆಗೆ ಮೀನು ಹಿಡಿಯಲೆಂದು ಬಂದಿದ್ದ ಮೀನುಹಿಡಿಯುವ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರಬಹುದು ಎಂದು ಅನುಮಾನಿಸಲಾಗಿದೆ.ಕೆರೆಯಲ್ಲಿ ಈತನ ಮೃತದೇಹ ಆ.26 ರಂದು ಪತ್ತೆಯಾಗಿದ್ದು ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಸ್ಥಳೀಯರ ಸಹಕಾರದೊಂದಿಗೆ ಮೃತದೇಹವನ್ನು ಮೇಲಕ್ಕೆತ್ತಲಾಗಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಗಾಳ ಹಾಕಲು ತೆರಳಿದ ವ್ಯಕ್ತಿ ಕೆರೆಗೆ ಬಿದ್ದು ಸಾವು Read More »

error: Content is protected !!
Scroll to Top