Author name: Tejas

ಸುಳ್ಯ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಸುಳ್ಯ ತಾಲೂಕು ಮಟ್ಟದ ಯೋಜನಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಇಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲಿಸಿ ನವೆಂಬರ್ ತಿಂಗಳ ಸಭೆಯ ವಿಷಯಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಪಾಲನಾ ವರದಿಯನ್ನು ಸಭೆಯಲ್ಲಿ ಚರ್ಚಿಸಲಾಯಿತು.ಸದಸ್ಯ ಭವಾನಿಶಂಕರ್ ಕಲ್ಮಡ್ಕ ಮಾತನಾಡಿ ಬಾಳುಗೋಡು ಗ್ರಾಮದ ಕೊತ್ನಡ್ಕ ನಿವಾಸಿ ಸುಂದರಿ ಅಜಿಲ ಎಂಬವರಿಗೆ ಸೂಕ್ತ ದಾಖಲಾತಿ ಇಲ್ಲದೆ ಆಧಾರ್ […]

ಸುಳ್ಯ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ Read More »

ಅರಂತೋಡು : ಕಡಿಮೆ ಬೆಳೆ ವಿಮಾ ಮೊತ್ತ ಪಾವತಿ,ಕಾನೂನಿನ ಮೊರೆ ಹೋಗಲು ನಿರ್ಧಾರ

2024-25ನೇ ಸಾಲಿನಲ್ಲಿ ಬೆಳೆವಿಮೆ ಪಾವತಿಸಿರುವ ರೈತರಿಗೆ ಈ ಬಾರಿಯ ಮಳೆಯ ಪ್ರಮಾಣ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿದ್ದರೂ ಬೆಳೆವಿಮಾ ಮೊತ್ತವು ಕಡಿಮೆ ಬಿಡುಗಡೆಯಾಗಿರುವ ಬಗ್ಗೆ ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಮತ್ತು ಸರ್ವ ಸದಸ್ಯರು ಅಸಮಧಾನಗೊಂಡು ಈ ಕುರಿತಾಗಿ ಸಭೆಯನ್ನು ನಡೆಸಿ ನ್ಯಾಯಯುತ ಬೆಳೆವಿಮೆ ಪರಿಹಾರವನ್ನು ಕೊಡಿಸುವಂತೆ ಕಾನೂನಿನ ಮೊರೆ ಹೋಗಲು ನಿರ್ಧರಿಸಿದ್ದಾರೆ.ರೈತರು, ರಾಜ್ಯ ಮತ್ತು ಕೇಂದ್ರ ಸರಕಾರದ ಬೆಳೆವಿಮೆ ಯೋಜನೆಯನ್ವಯ ಮಳೆ, ಬಿಸಿಲು ಸೇರಿದಂತೆ ಹವಾಮಾನದಲ್ಲಿ ಉಂಟಾಗುವ ವೈಪರೀತ್ಯಗಳಿಂದ ಕೃಷಿಯ ಮೇಲೆ

ಅರಂತೋಡು : ಕಡಿಮೆ ಬೆಳೆ ವಿಮಾ ಮೊತ್ತ ಪಾವತಿ,ಕಾನೂನಿನ ಮೊರೆ ಹೋಗಲು ನಿರ್ಧಾರ Read More »

ಚೊಕ್ಕಾಡಿ : ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025

ಯುವಜನ ಸಂಯುಕ್ತ ಮಂಡಳಿ (ರಿ.), ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.), ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025 ಕಾರ್ಯಕ್ರಮದ ಅಂಗವಾಗಿ, ದಿನಾಂಕ 14-12-2025 ರಂದು ಚೊಕ್ಕಾಡಿ ಪರಿಸರದ ಅಂಗಡಿಗಳ ಮುಂದಿದ್ದ ಕಳೆಗಳನ್ನು ಕಡಿದು ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು. ಜನಸಂಚಾರ ಹೆಚ್ಚಿರುವ ಸ್ಥಳಗಳಲ್ಲಿ ಕಾಡು ಬೆಳದು ಸಾರ್ವಜನಿಕರಿಗೆ ನಡೆದಾಡಲು ಅಸೌಕರ್ಯ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕಳೆಗಳನ್ನು ಕಡಿದು ಪರಿಸರವನ್ನು ಸ್ವಚ್ಛಗೊಳಿಸಿ ಊರನ್ನು ಸುಂದರಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ಅಂಗಡಿ

ಚೊಕ್ಕಾಡಿ : ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025 Read More »

ಸುಳ್ಯ ತಾಲೂಕಿನ ಕೃಷಿ ಸಖಿಯರು, ಕೃಷಿಕರು ಹಾಗೂ ಸಂಜೀವಿನಿ ಸದಸ್ಯೆಯರಿಗೆ ಕೃಷಿ ಅಧ್ಯಯನ ಪ್ರವಾಸ ಮತ್ತು ಮಾಹಿತಿ ತರಬೇತಿ

ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ಭಾ. ಕೃ. ಅ. ಸಂಸ್ಥೆ) ಕೇಂದ್ರ, ವಿಟ್ಲ; 3F ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್; ರೇಷ್ಮೆ ಕೃಷಿ ಅಭಿವೃದ್ಧಿ ನಿಗಮ, ಮಂಗಳೂರು; ಹಾಗೂ ಸಂಜೀವಿನಿ ಎನ್‌ಆರ್‌ಎಲ್‌ಎಂ ತಾಲೂಕು ಪಂಚಾಯತ್ ಸುಳ್ಯ ಇವರ ಸಹಯೋಗದಲ್ಲಿ ರೇಷ್ಮೆ ಕೃಷಿ ಮಾಹಿತಿ ಹಾಗೂ ತಾಳೆ ಕೃಷಿ ಕ್ಷೇತ್ರ ಭೇಟಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಭಾ. ಕೃ. ಅ. ಸಂಸ್ಥೆ ಕೇಂದ್ರ, ವಿಟ್ಲದ ವ್ಯವಸ್ಥಾಪನಾ ನಿರ್ದೇಶಕರಾದ ಎಂ. ಪ್ರಸಾದ್ ಶೆಟ್ಟಿ, ನಿವೃತ್ತ ರೇಷ್ಮೆ ನಿರೀಕ್ಷಕರಾದ ಬಿ.ಕೆ. ನಾಯಕ್, ರೇಷ್ಮೆ

ಸುಳ್ಯ ತಾಲೂಕಿನ ಕೃಷಿ ಸಖಿಯರು, ಕೃಷಿಕರು ಹಾಗೂ ಸಂಜೀವಿನಿ ಸದಸ್ಯೆಯರಿಗೆ ಕೃಷಿ ಅಧ್ಯಯನ ಪ್ರವಾಸ ಮತ್ತು ಮಾಹಿತಿ ತರಬೇತಿ Read More »

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಮಾಜಿ ಅರಣ್ಯ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್‌ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್‌ ಕುಮಾರ್ ರೈ ಧರ್ಮಣ್ಣನಾಯ್ಕ ಗರಡಿ, ಧರ್ಮಪಾಲ ಗೌಡ ಮರಕ್ಕಡ, ಪವಿತ್ರಾ ಮಲ್ಲೆಟ್ಟಿ, ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಪಿ.ಎಸ್.ಗಂಗಾಧರ, ಅಬ್ದುಲ್ ಗಫೂ‌ರ್

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ Read More »

ಡಿ.30ಕ್ಕೆ ಕುಕ್ಕುಜಡ್ಕ ಚೊಕ್ಕಾಡಿ ವಿದ್ಯಾಸಂಸ್ಥೆಯಲ್ಲಿ ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ, 28ನೇ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಕುಕ್ಕುಜಡ್ಕ, ಇದರ ಆಶ್ರಯದಲ್ಲಿ ಸುಳ್ಯ ತಾಲೂಕು 28 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಚೊಕ್ಕಾಡಿ ವಿದ್ಯಾಸಂಸ್ಥೆ ಕುಕ್ಕುಜಡ್ಕದಲ್ಲಿ ಡಿ.30ರಂದು ನಡೆಯಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಚಂದ್ರಶೇಖರ ಪೇರಾಲು ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ತಿಳಿಸಿದ್ದಾರೆ.ಅವರು ಡಿ.17ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸಾಹಿತ್ಯ ಸಮ್ಮೇಳನದ ಬಗ್ಗೆ ಮಾಹಿತಿ‌

ಡಿ.30ಕ್ಕೆ ಕುಕ್ಕುಜಡ್ಕ ಚೊಕ್ಕಾಡಿ ವಿದ್ಯಾಸಂಸ್ಥೆಯಲ್ಲಿ ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನ Read More »

ಅಕ್ಷತಾ ಪೂಜಾರಿಗೆ ಕೂಡಲೇ ನ್ಯಾಯ ಒದಗಿಸಲಿ,ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಒತ್ತಾಯ

ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂಬೆಳಗ್ಗೆ ನುಗ್ಗಿ ಯುವತಿಗೆ ಹಲ್ಲೆ ನಡೆಸಿರುವುದನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಖಂಡಿಸುತ್ತದೆ. ತಪ್ಪಿಪೊಲೀಸ್ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಬಿಲ್ಲವರ ಮಹಾಮಂಡಲ (ರಿ) ಮೂಲ್ಕಿ ಅಧ್ಯಕ್ಷ ಸೂರ್ಯಕಾಂತ್ ಜಯ ಸುವರ್ಣ ಒತ್ತಾಯಿಸಿದ್ದಾರೆ.ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿರುವ ಆರೋಪಿಯ ಚಿಕ್ಕಮ್ಮನ ಮನೆಗೆ ಮಹಿಳಾ ಪೋಲಿಸರು ಇಲ್ಲದೇ, ಕೇವಲ ಪುರುಷ ಪೊಲೀಸರು ನುಗ್ಗಿ, ಯುವತಿ ಮೇಲೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಯುವತಿ

ಅಕ್ಷತಾ ಪೂಜಾರಿಗೆ ಕೂಡಲೇ ನ್ಯಾಯ ಒದಗಿಸಲಿ,ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಒತ್ತಾಯ Read More »

ಬಾವಿಯಿಂದ ನೀರು ಎಳೆಯುತ್ತಿದ್ದಾಗ ತಾಯಿಯ ಕೈಯಲ್ಲಿದ್ದ ಮಗು ಬಾವಿಗೆ ಬಿದ್ದು ಸಾವು

ಬಾವಿಯಿಂದ ನೀರು ಎಳೆಯುತ್ತಿದ್ದಾಗ ತಾಯಿಯ ಕೈಯಿಂದ ಮಗು ಆಯತಪ್ಪಿ ಜಾರಿ ಬಾವಿಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಉಡುಪಿಯ ಕಿನ್ನಿಮೂಲ್ಕಿಯಲ್ಲಿ ನಡೆದಿದೆ.ಮೃತ ಮಗುವನ್ನು ಕೀರ್ತನಾ ಎಂದು ಗುರುತಿಸಲಾಗಿದೆ. ಮಗುವಿನ ತಾಯಿ ನಯನಾ ಕರ್ಕಡ ಅವರು ಮನೆ ಸಮೀಪದ ಬಾವಿಯಿಂದ ನೀರು ಎಳೆಯುತ್ತಿದ್ದಾಗ ಈ ರ್ಘಟನೆ ನಡೆದಿದೆ.ಕೂಡಲೇ ತಾಯಿ ನಯನಾ ಅವರು ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಮಗುವನ್ನು ಹೊರತೆಗೆದರಾದರೂ, ಅದಾಗಲೇ ಮಗು ಮೃತಪಟ್ಟಿತ್ತು.ಘಟನಾ ಸ್ಥಳಕ್ಕೆ ಉಡುಪಿ ನಗರ ಠಾಣಾ ಪಿಎಸ್‌ ಐ ಭರತೇಶ್ ಕಂಕಣವಾಡಿ ಭೇಟಿ ನೀಡಿ

ಬಾವಿಯಿಂದ ನೀರು ಎಳೆಯುತ್ತಿದ್ದಾಗ ತಾಯಿಯ ಕೈಯಲ್ಲಿದ್ದ ಮಗು ಬಾವಿಗೆ ಬಿದ್ದು ಸಾವು Read More »

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಪ್ರತಿಭೋತ್ಸವ

ವಿದ್ಯಾರ್ಥಿಗಳ ಪ್ರತಿಭೆಗಳನ್ನು ಹೊರಸೂಸಲು ಸೂಕ್ತ ವೇದಿಕೆಯೇ ಪ್ರತಿಭೋತ್ಸವ: ರಾಜ್ಯ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಪಠ್ಯ ಚಟುವಟಿಕೆಗಳೊಂದಿಗೆ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಹೊರಸೂಸುವುದಕ್ಕೆ ಪ್ರತಿಭೋತ್ಸವ ಸೂಕ್ತ ವೇದಿಕೆಯಾಗಿದೆ ಎಂದು ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಶಾಲಾ ಸಂಚಾಲಕ ಸದಾನಂದ ಮಾವಜಿ ಹೇಳಿದರು. ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆದ ಪ್ರತಿಭೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಶಾಲಾ ಮುಖ್ಯಶಿಕ್ಷಕಿ ಜಯಲತಾ ಕೆ.ಆರ್ , ಎಸ್. ಡಿ.ಎಂ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಪ್ರತಿಭೋತ್ಸವ Read More »

ಪಂಜ : ಡಿ.21ಕ್ಕೆ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಜಾತ್ರೋತ್ಸವ ಪೂರ್ವಭಾವಿ ಸಭೆ

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ-2026ರ ಪೂರ್ವಭಾವಿ ಸಭೆಯು ಡಿ.21 ರಂದು ಸಂಜೆ ಗಂಟೆ 4.30ಕ್ಕೆ ದೇಗುಲದಲ್ಲಿ ನಡೆಯಲಿದೆ ಎಂದು ದೇವಳದ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್ ತಿಳಿಸಿದ್ದಾರೆ.ಈ ಸಭೆಗೆ ಸೀಮೆಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕು ಎಂದು ಡಾ.ದೇವಿಪ್ರಸಾದ್ ಕಾನತ್ತೂರ್ ವಿನಂತಿಸಿದ್ದಾರೆ.

ಪಂಜ : ಡಿ.21ಕ್ಕೆ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಜಾತ್ರೋತ್ಸವ ಪೂರ್ವಭಾವಿ ಸಭೆ Read More »

error: Content is protected !!
Scroll to Top