Author name: Tejas

ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಕಡಬ: ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.ಮೃತರನ್ನು ಕಡಬ ಹಳೇಸ್ಟೇಷನ್ ನಿವಾಸಿ ಹಸೈನಾ‌ರ್ ಎಂದು ಗುರುತಿಸಲಾಗಿದೆ. ಮೃತರು ತನ್ನ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.ಅಪಘಾತದ ದಶ್ಯ ಇಂಡಸ್ಟ್ರೀಸ್ ಒಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವು Read More »

ತಿರುಪತಿ ದೇವಸ್ಥಾನದ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಆರೋಪ : ವಿಶೇಷ ತನಿಖಾ ತಂಡ ನೇಮಿಸಿ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ : ತಿರುಪತಿ ದೇವಸ್ಥಾನದ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ಆರೋಪದಕೇಳಿ ಬಂದ ಹಿನ್ನಲೆಯಲ್ಲಿ ಬಗ್ಗೆ ಸಮಗ್ರ ತನಿಖೆಗೆ ಸಿಬಿಐ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ನೇಮಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಈ ವಿಷಯದ ಬಗ್ಗೆ ರಾಜಕೀಯ ನಾಟಕವನ್ನು ಬಯಸುವುದಿಲ್ಲ, ಏಕೆಂದರೆ ಇದು ಅತ್ಯಂತ ಸೂಕ್ಷ್ಮ ವಿಷಯವಾಗಿದ್ದು ಪ್ರಪಂಚದಾದ್ಯಂತ ಇರುವ ಲಕ್ಷಾಂತರ ಭಕ್ತರ ನಂಬಿಕೆಯ ವಿಷಯವಾಗಿದೆ ಎಂದು ನ್ಯಾಯಪೀಠ ಹೇಳಿದೆ.ಎಸ್‌ಐಟಿ ತಂಡವು ಇಬ್ಬರು ಸಿಬಿಐ ಅಧಿಕಾರಿಗಳು, ಇಬ್ಬರು ರಾಜ್ಯ ಪೊಲೀಸ್‌ ಅಧಿಕಾರಿಗಳು ಮತ್ತು

ತಿರುಪತಿ ದೇವಸ್ಥಾನದ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಆರೋಪ : ವಿಶೇಷ ತನಿಖಾ ತಂಡ ನೇಮಿಸಿ ಸುಪ್ರೀಂ ಕೋರ್ಟ್ ಆದೇಶ Read More »

ಸೆ.11ಕ್ಕೆ ರಥಬೀದಿಯಲ್ಲಿ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಶುಭಾರಂಭ

ಸುಳ್ಯದ ರಥಬೀದಿಯಲ್ಲಿ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಸೆ.11ರಂದು ಶುಭಾರಂಭಗೊಳ್ಳಲಿದೆ.ಶುಭಾರಂಭದ ಪ್ರಯುಕ್ತ ರೂ.1500 ಮೇಲ್ಪಟ್ಟ, ರೂ.5000 ಮೇಲ್ಪಟ್ಟ ಹಾಗೂ ರೂ. 10000 ಮೇಲ್ಪಟ್ಟ ಮೌಲ್ಯದ ಬಟ್ಟೆ ಖರೀದಿಗೆ ಬೆಳ್ಳಿಯ ಉಚಿತ ಉಡುಗೊರೆಗಳನ್ನು ಗ್ರಾಹಕರಿಗೆ ನೀಡಲಾಗುತ್ತದೆ.ಶುಭಾರಂಭದ ಪ್ರಯುಕ್ತ ವಿಶೇಷ ರಿಯಾಯಿತಿ ನೀಡಲಾಗುತ್ತಿದ್ದು, ನಿರೀಕ್ಷೆಗೂ ಮೀರಿದ ಮಹಾ ಕೊಡುಗೆಗಳನ್ನು ನೀಡಲಾಗುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.

ಸೆ.11ಕ್ಕೆ ರಥಬೀದಿಯಲ್ಲಿ ರೊಮ್ಯಾಂಟಿಕ್ ವಸ್ತ್ರ ಮಳಿಗೆ ಶುಭಾರಂಭ Read More »

ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ -ಕೆ.ಆರ್.ಗಂಗಾಧರ್

ಅರಂಬೂರು: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿಪೂರ್ವ)ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 16 ನೇ ವರ್ಷದ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ- ಅರಂಬೂರಿನಲ್ಲಿ ನಡೆಯಿತು.ರಾಜ್ಯ ಉತ್ತಮ ಶಿಕ್ಷಕ ಪುರಸ್ಕೃತ ಮುಖ್ಯೋಪಾಧ್ಯಾಯರಾದ ಶ್ರೀ ದಿವಾಕರ್ ನಾಯಕ್ ಸರಳಿಕುಂಜ ದೀಪ ಬೆಳಗಿಸಿ ಚಾಲನೆ ನೀಡಿ ಶಿಬಿರಕ್ಕೆ ಶುಭ ಹಾರೈಸಿದರು.ಕಾಲೇಜಿನ ಸಂಚಾಲಕರಾದ ಶ್ರೀ ಕೆ ಆರ್ ಗಂಗಾಧರ್ ಅಧ್ಯಕ್ಷತೆ ವಹಿಸಿ,

ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ -ಕೆ.ಆರ್.ಗಂಗಾಧರ್ Read More »

(ಲೇಖನ)ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಯಲ್ಲಿ ಹೆತ್ತವರ ಮತ್ತು ಶಿಕ್ಷಕರ ಪಾತ್ರ

ಗುರುಭ್ಯೋನಮಃ ಇಂದಿನ ಪ್ರಸ್ತುತ ಡಿಜಿಟಲ್ ಯುಗದಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯು ಹೆತ್ತವರ ಪಾಲಿಗೆ ಒಂದು ಮಹತ್ತರವಾದ ಸವಾಲೇ ಸರಿ. ಇಂದಿನ ಮಕ್ಕಳು ಮುಂದಿನ ಪ್ರಜೆಗಳು ಎನ್ನುವ ಹಾಗೆ ಇಂದಿನ ಮಕ್ಕಳನ್ನು ಸರಿಯಾದ ದಾರಿಯಲ್ಲಿ ಬೆಳೆಸುವ ಜವಾಬ್ದಾರಿಯು  ಪೋಷಕರ ಪಾಲಿಗೆ ಇದೆ. ದಿನದ 24 ಗಂಟೆಗಳಲ್ಲಿ ಏಳರಿಂದ ಎಂಟು ಗಂಟೆ ಒಂದು ವಿದ್ಯಾರ್ಥಿಯು ಶಾಲೆಯಲ್ಲಿ ಕಳೆದರೆ ಇನ್ನುಳಿದ 16 ಗಂಟೆ ಆ ಮಗುವಿನ ಜವಾಬ್ದಾರಿಯು ಪೋಷಕರ ಪಾಲಿಗಿರುತ್ತದೆ. ಆದರೆ ವೃತ್ತಿಪರ ಪೋಷಕರು ಮಕ್ಕಳ ಸರ್ವಾಂಗೀಣ ಬೆಳವಣಿಗೆಯು ಶಾಲೆಯಲ್ಲಿ ಆಗುತ್ತದೆ

(ಲೇಖನ)ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಯಲ್ಲಿ ಹೆತ್ತವರ ಮತ್ತು ಶಿಕ್ಷಕರ ಪಾತ್ರ Read More »

(ಕವಿಸಮಯ) ಸ್ಪರ್ಶದೊಳಗಿನ ಗೆಲುವು…

ಅಮ್ಮ ತನ್ಹೊಟ್ಟೆಯ ಮೇಲೆ ಕೈಯಾಡಿಸಿದ ಆ ಮೊದಲ ಸ್ಪರ್ಶ ಅಪ್ಪ ಹೊರಜಗತ್ತಿಂದ ನನ್ನೊಡನಾಡಿದ ಆ ಮೊದಲ ಮಾತು ಜನಜಂಗುಳಿಯಲು ನಾ ಮಲಗಿದ್ದ ಆ ಮೊದಲ ಬೆಚ್ಚಗಿನ ಗೂಡು ಮರೆಯಲಾರದ ಅನುಭವಗಳಿವು ಈ ಮನಗಳಲಿ ನೋಡು… ಕಣ್ತೆರೆದ ತಕ್ಷಣ ನಾವ್ ಕಂಡ ಆ ಮೊದಲ ಮುಗುಳ್ನಗುನೇಸರನು ಮೈ ಸೋಕಿಸಿದ ಆ ಮೊದಲ ತಂಗಾಳಿಉದಯಾಸ್ತದೊಳು ಭಾಸ್ಕರ ದಾಟಿದ ಆ ಮೊದಲ ಸೇತುವೆಕತ್ತಲಲ್ಲಿ ಬೆಳಕ ಚೆಲ್ಲಿ ಸ್ಪೂರ್ತಿ ಕೊಟ್ಟ ಆ ಚಂದ್ರಮ ಏಳು ಬಣ್ಣಗಳು ಕೊಟ್ಟ ಸಮಾನತೆಯ ಮೊದಲ ನೀತಿಚಿಲಿಪಿಲಿ ಸ್ವರಗಳು

(ಕವಿಸಮಯ) ಸ್ಪರ್ಶದೊಳಗಿನ ಗೆಲುವು… Read More »

ವಿದ್ಯಾರ್ಥಿನಿಗೆ ಬಸ್ಸಲ್ಲಿ ಲೈಂಗಿಕ ದೌಜನ್ಯ ಎಸಗಿದ ಅನ್ಯ ಕೋಮಿನ ಯುವಕನಿಗೆ ಹಲ್ಲೆ ನಡೆಸಿದ ಆರೋಪಿಗಳಿಗೆ ಜಾಮೀನು ಮಂಜೂರು

ಸುಳ್ಯ : ವಿದ್ಯಾರ್ಥಿನಿ ಜೊತೆಗೆ ಬಸ್ಸಿನಲ್ಲಿ ಲೈಂಗಿಕ ದೌಜನ್ಯ ಎಸಗಿದ್ದಾನೆ ಎನ್ನಲಾದ ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮೂರು ಜನರನ್ನು ಸುಳ್ಯ ಪೋಲಿಸ್ ಬಂಧಿಸಿದ್ದರು. ಇದೀಗ ಈ ಬಂಧಿತರಾದ ಭಜರಂಗದಳ ನಗರ ಸಂಚಾಲಕ ವರ್ಷಿತ್ ಚೊಕ್ಕಾಡಿ, ಮಿಥುನ್ ರವರಿಗೆ ಪುತ್ತೂರು ನ್ಯಾಯಾಲಯವು ಜಾಮೀನು ಮಂಜೂರು ಗೊಳಿಸಿರುವುದಾಗಿ ತಿಳಿದು ಬಂದಿದೆ. ಇವರ ಪರವಾಗಿ ಹರೀಶ್ ಬೂಡುಪನ್ನೆ ಹಾಗೂ ಮಹೇಶ್ ಕಜೆ ವಾದಿಸಿದ್ದಾರೆ.

ವಿದ್ಯಾರ್ಥಿನಿಗೆ ಬಸ್ಸಲ್ಲಿ ಲೈಂಗಿಕ ದೌಜನ್ಯ ಎಸಗಿದ ಅನ್ಯ ಕೋಮಿನ ಯುವಕನಿಗೆ ಹಲ್ಲೆ ನಡೆಸಿದ ಆರೋಪಿಗಳಿಗೆ ಜಾಮೀನು ಮಂಜೂರು Read More »

ಸಹೋದರನಿಂದಲೇ ಗರ್ಭಿಣಿಯಾದ ತಂಗಿ

ಸಹೋದರನೇ ತಂಗಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿರುವ ಘಟನೆ ನೆನ್ನೆ ಗುಜರಾತ್‌ನ ಸೂರತ್‌ ಜಿಲ್ಲೆಯಲ್ಲಿ ನಡೆದಿದೆ. ಹೌದು, ತಂಗಿಗೆ ಶ್ರೀರಕ್ಷೆಯಾಗಿರಬೇಕಿದ್ದ ಅಣ್ಣ ಈ ಕೃತ್ಯ ಎಸಗಿದ್ದಾನೆ. ಬಾಲಕಿ ಹೊಟ್ಟೆ ನೋವು ಎಂದು ಹೇಳಿದ ಬಳಿಕ ಆಕೆಯ ತಾಯಿ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ. ವೈದ್ಯರು ಆಕೆಗೆ ಮೂರು ತಿಂಗಳಾಗಿರುವುದನ್ನು ದೃಢಪಡಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಬಾಲಕಿ ತನ್ನ ತಾಯಿಗೆ ತನ್ನ ಅಣ್ಣ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಕೇಳಿದ್ದಾಗಿ ತಿಳಿಸಿದ್ದಾಳೆ.

ಸಹೋದರನಿಂದಲೇ ಗರ್ಭಿಣಿಯಾದ ತಂಗಿ Read More »

ಮುಂಜಾನೆ ಎಲ್ ಪಿ ಜಿ ಸಿಲಿಂಡರ್ ಸ್ಫೋಟ; 6 ಜನರ ಸ್ಥಿತಿ ಗಂಭೀರ

ಇಂದು ಮುಂಜಾನೆ ದಾವಣಗೆರೆಯಲ್ಲಿ ಸಿಲಿಂಡರ್‌ ಸ್ಪೋಟಗೊಂಡು, 6 ಜನರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಸಿಲಿಂಡ‌ರ್ ಸ್ಫೋಟದ ತೀವ್ರತೆಗೆ ಮನೆ ಮೇಲ್ಟಾವಣಿ ಸಂಪೂರ್ಣವಾಗಿ ಕುಸಿತಗೊಂಡಿದೆ. ಬೆಳಿಗ್ಗೆ ಸಿಲಿಂಡ‌ರ್ ಆನ್ ಮಾಡಲು ಹೋದಾಗ ಏಕಾಏಕಿ ಸ್ಪೋಟವಾಗಿದೆ ಎನ್ನಲಾಗಿದೆ. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮುಂಜಾನೆ ಎಲ್ ಪಿ ಜಿ ಸಿಲಿಂಡರ್ ಸ್ಫೋಟ; 6 ಜನರ ಸ್ಥಿತಿ ಗಂಭೀರ Read More »

ಆಕಾಶವಾಣಿ ಕಾರ್ಯಕ್ರಮ ನಿರೂಪಕ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು ಆಕಾಶವಾಣಿಯಲ್ಲಿ, ಕನ್ನಡ, ತುಳು ಹಾಗೂ ಕೊಂಕಣಿ ಭಾಷೆಗಳಲ್ಲಿ, ನಿಯೋಜನೆ ಮೇರೆಗೆ ಉದ್ಯೋಷಕರು/ ಕಾರ್ಯಕ್ರಮ ನಿರೂಪಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದು ಯಾವುದೇ ರೀತಿಯ ಉದ್ಯೋಗವಾಗಿರದೇ ಆಕಾಶವಾಣಿಯ ಅಗತ್ಯಕ್ಕೆ ತಕ್ಕಂತೆ ಅವರ ಸೇವೆಯನ್ನು ಬಳಸಿಕೊಳ್ಳಲಾಗುವುದು.ಅಭ್ಯರ್ಥಿಗಳು ಪದವಿ ಉತ್ತೀರ್ಣರಾಗಿರಬೇಕು ಹಾಗೂ 50 ವರ್ಷ ವಯಸ್ಸಿನೊಳಗಿನವರಾಗಿರಬೇಕು. ಈ ಕುರಿತು ದಾಖಲೆಗಳ ನಕಲು ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಿರಬೇಕು. ತಾವು ಅರ್ಜಿ ಸಲ್ಲಿಸಲು ಇಚ್ಛಿಸುವ ಭಾಷೆಯನ್ನು ಚೆನ್ನಾಗಿ ತಿಳಿದಿರಬೇಕು. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವವರಿಗೆ ಆದ್ಯತೆ ನೀಡಲಾಗುವುದು.ಅಭ್ಯರ್ಥಿಗಳು 354 ರೂಪಾಯಿಗಳ

ಆಕಾಶವಾಣಿ ಕಾರ್ಯಕ್ರಮ ನಿರೂಪಕ ಹುದ್ದೆಗೆ ಅರ್ಜಿ ಆಹ್ವಾನ Read More »

error: Content is protected !!
Scroll to Top