Author name: Tejas

ಸುಳ್ಯ : ಪ್ರಥಮ ಬಾರಿಗೆ ಸುಳ್ಯದ ಕೃಷಿ ಸಖಿಯರಿಗೆ ಗೋಡಂಬಿ ಉತ್ಪಾದನೆ ಮತ್ತು ಸಂಸ್ಕರಣೆಯಲ್ಲಿ ಸಾಮರ್ಥ್ಯವೃದ್ಧಿ ಸಬಲೀಕರಣಕ್ಕಾಗಿ ತರಬೇತಿ

ಗ್ರಾಮೀಣ ಭಾರತವನ್ನು ಸಬಲೀಕರಿಸುವ ಉದ್ದೇಶದಿಂದ ಭಾರತ ಸರ್ಕಾರವು 2024ರಲ್ಲಿ ಕೃಷಿ ಸಖಿ ಒಗ್ಗೂಡುವಿಕೆ ಕಾರ್ಯಕ್ರಮವನ್ನು (KSCP) ಪ್ರಾರಂಭಿಸಿದೆ. ಇದರ ಮುಖ್ಯ ಗುರಿ ಗ್ರಾಮೀಣ ಮಹಿಳೆಯರನ್ನು ಗುರುತಿಸಿ ಕೃಷಿ ಸಖಿಯರನ್ನಾಗಿ ರೂಪಿಸುವುದು ಮತ್ತು ಅವರಿಗೆ ಅರೆ-ವಿಸ್ತರಣಾ ಕಾರ್ಯಕರ್ತರಾಗಿ ತರಬೇತಿ ಹಾಗೂ ಪ್ರಮಾಣಪತ್ರ ನೀಡುವುದು. ಇವರು ಸಮುದಾಯ ಸಂಪನ್ಮೂಲ ವ್ಯಕ್ತಿಗಳಾಗಿ ಮತ್ತು ಸರ್ಕಾರದ ಇಲಾಖಾ ಅಧಿಕಾರಿಗಳು ಹಾಗೂ ರೈತರ ನಡುವೆ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಾರೆ. ಅವರ ಮಹತ್ವದ ಪಾತ್ರವನ್ನು ಪರಿಗಣಿಸಿ, ಪುತ್ತೂರಿನ ಭಾ. ಕೃ. ಅನು. ಪ. – ಗೇರು […]

ಸುಳ್ಯ : ಪ್ರಥಮ ಬಾರಿಗೆ ಸುಳ್ಯದ ಕೃಷಿ ಸಖಿಯರಿಗೆ ಗೋಡಂಬಿ ಉತ್ಪಾದನೆ ಮತ್ತು ಸಂಸ್ಕರಣೆಯಲ್ಲಿ ಸಾಮರ್ಥ್ಯವೃದ್ಧಿ ಸಬಲೀಕರಣಕ್ಕಾಗಿ ತರಬೇತಿ Read More »

ದಿನೇಶ ಊರುಬೈಲು ನಿಧನ

ಮಡಿಕೇರಿ ತಾಲೂಕು ಚೆಂಬು ಗ್ರಾಮದ ಊರುಬೈಲ ಶೇಷಪ್ಪ ನಾಯ್ಕ ರ ಪುತ್ರ ದಿನೇಶ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ನಿಧಾನರಾದರು. ಮೃತರು ತಾಯಿ ಶಾರದ, ಸಹೋದರರಾದ ವಸಂತ, ವೆಂಕಟೇಶ, ಸಹೋದರಿ ಗೀತಾ ವಳಲಂಬೆಯವರನ್ನು ಅಗಲಿದ್ದಾರೆ.

ದಿನೇಶ ಊರುಬೈಲು ನಿಧನ Read More »

ಇಂದು ಅರಂತೋಡಿನಲ್ಲಿ ಉಚಿತ ಆಧಾರ್ ನೋಂದವಣೆ ಮತ್ತು ತಿದ್ದುಪಡಿ ಶಿಬಿರ

ಅರಂತೋಡು ಆರ್ಟ್ಸ್ ಎಂಡ್ ಸ್ಪೋರ್ಟ್ಸ್ ಮತ್ತು ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಕಾರದೊಂದಿಗೆ ಅರಂತೋಡಿನಲ್ಲಿ ಅ.23 ರಂದು ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ಅರಂತೋಡು ಪಟೇಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.ಆಧಾರ್ ಶಿಬಿರದಲ್ಲಿ ಹೊಸ ನೋಂದಾವಣಿ,5/15 ವರ್ಷ ತುಂಬಿದ ಮಕ್ಕಳ ಬಯೋ ಮೆಟ್ರಿಕ್ ಅಪ್ಟೆಟ್,ಹೆಸರು ,ವಿಳಾಸ,ಜನ್ಮ ದಿನಾಂಕ,ಮೊಬೈಲ್ ಸಂಖ್ಯೆ,ಇಮೇಲ್ ಐಡಿ ತಿದ್ದುಪಡಿ,ಇತ್ಯಾದಿಗಳಿಗೆ ಒಂದೇ ಅರ್ಜಿಯಲ್ಲಿ ಕೋರಿಕೆ ಸಲ್ಲಿಸಬಹುದು.ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇಂದು ಅರಂತೋಡಿನಲ್ಲಿ ಉಚಿತ ಆಧಾರ್ ನೋಂದವಣೆ ಮತ್ತು ತಿದ್ದುಪಡಿ ಶಿಬಿರ Read More »

ಆರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಆರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಯವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.ಸಭೆಯಲ್ಲಿ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಲ್ಲಿಂದಾದ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡುವ ಆಶಯದಂತೆ ಆರಂತೋಡು ಗ್ರಾಮ ಪಂಚಾಯತ್. ವ್ಯಾಪ್ತಿಯ ಅವಳಿ ಗ್ರಾಮಗಳಲ್ಲಿ ಒಂದಾದ ತೊಡಿಕಾನ ಗ್ರಾಮದ ನೀರಿನ ಸಂಪರ್ಕವಿರುವ ಮನೆಗಳಿಗೆ 24/7 ನೀರಿನ ಸರಬರಾಜು ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು. ಅದಕಾಗಿ ಸಂಪರ್ಕವಿರುವ ಮನೆಗಳ ನೀರಿನ ಕೆಟ್ಟುಹೋಗಿರುವ ಮೀಟರ್ಗಳನ್ನು ಮನೆಯವರ ಶೇ 50ರ ಸಹಕಾರ ದಿಂದ ಬದಲಾವಣೆ

ಆರಂತೋಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆ Read More »

ನದಿಗೆ ಮೀನು ಹಿಡಿಯಲು ಹೋದ ವ್ಯಕ್ತಿ ಸಾವು

ನದಿಗೆ ಮೀನು ಹಿಡಿಯಲು ತೆರಳಿದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದಲ್ಲಿ ಆ.21ರಂದು ನಡೆದಿದೆ. ಮೃತ ವ್ಯಕ್ತಿ ಮುಂಡಾಜೆ ಗ್ರಾಮದ ಚೆನ್ನಿಗುಡ್ಡೆ ನಿವಾಸಿ ಪೂವಪ್ಪ ನಾಯ್ಕ ಎಂದು ಗುರುತಿಸಲಾಗಿದೆ.ಪೂವಪ್ಪ ನಾಯ್ಕ ಅವರು ಆ.22 ರಂದು ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮನೆ ಸಮೀಪದ ಮುಂಡ್ರುಪ್ಪಾಡಿ ಸೇತುವೆಯ ಮೃತ್ಯುಂಜಯ ನದಿಗೆ ಮೀನು ಹಿಡಿಯಲೆಂದು ಬಲೆ ಹಿಡಿದುಕೊಂಡು ಹೋಗಿ ನದಿಯಬಸೇತುವೆ ಅಡಿಯಲ್ಲಿ ಬಲೆ ಹಾಕಿ ತನ್ನ ಮಗ ದಿನೇಶ್ ನನ್ನು ಅಲ್ಲೆ ನಿಲ್ಲಿಸಿ ಮತ್ತೊಂದು ಕಡೆ

ನದಿಗೆ ಮೀನು ಹಿಡಿಯಲು ಹೋದ ವ್ಯಕ್ತಿ ಸಾವು Read More »

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ದಿವಂಗತ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 13ನೇ ವರ್ಷದ ಪುಣ್ಯತಿಥಿ ಆಚರಣೆ

ಆಧುನಿಕ ಸುಳ್ಯದ ನಿರ್ಮಾತೃ, ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣಗೌಡರ ಸಹಧರ್ಮಿಣಿ ದಿವಂಗತ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 13ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ನುಡಿ ನಮನ ಕಾರ್ಯಕ್ರಮವು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆ.22ರಂದು ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ.) ಸುಳ್ಯ ಇದರ ಕೌಂನ್ಸಿಲ್ ಮೆಂಬರ್ ಶ್ರೀ. ಜಗದೀಶ್ ಅಡ್ತಲೆಪ್ರಾಸ್ತಾವಿಕವಾಗಿ ಮಾತನ್ನಾಡಿದರು.ಪ್ರೊ. ದಾಮೋದರ ಗೌಡರವರು ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ ತತ್ವ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ದಿವಂಗತ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 13ನೇ ವರ್ಷದ ಪುಣ್ಯತಿಥಿ ಆಚರಣೆ Read More »

ಅಡಿಕೆ ಎಲೆ ಹಳದಿ ಮತ್ತು ಎಲೆಚುಕ್ಕಿ ರೋಗದಿಂದ ಆರ್ಥಿಕ ಸಂಕಷ್ಟಕೊಳಗಾದ ರೈತರಿಗೆ ಪರಿಹಾರ ಪ್ಯಾಕೇಜ್ ನೀಡಲು ಸಂಸದ ಚೌಟ ಒತ್ತಾಯ

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರು ರಾಜ್ಯದ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಆ.21ರಂದು ಕೇಂದ್ರ ಸಚಿವರನ್ನು ಭೇಟಿ ಮಾಡಿ ಪರಿಹಾರ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿದರು. ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಶ್ರೀ ವಿ. ಸೋಮಣ್ಣ, ಶ್ರೀ ಎಚ್ ಡಿ ಕುಮಾರಸ್ವಾಮಿ ಮತ್ತು ಕರ್ನಾಟಕದ ಸಹೋದ್ಯೋಗಿ ಸಂಸದರೊಂದಿಗೆ ನಮ್ಮ ರಾಜ್ಯದ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು. ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ಮಾನ್ಯ ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್

ಅಡಿಕೆ ಎಲೆ ಹಳದಿ ಮತ್ತು ಎಲೆಚುಕ್ಕಿ ರೋಗದಿಂದ ಆರ್ಥಿಕ ಸಂಕಷ್ಟಕೊಳಗಾದ ರೈತರಿಗೆ ಪರಿಹಾರ ಪ್ಯಾಕೇಜ್ ನೀಡಲು ಸಂಸದ ಚೌಟ ಒತ್ತಾಯ Read More »

ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ

. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ವಿರುದ್ಧ ಅವಹೇಳನಕಾರಿ ಮಾತನಾಡಿದ ಆರೋಪದಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ‌.ಬ್ರಹ್ಮಾವರ ತಾಲೂಕು ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.ಮುಂದಿನ ವಿಚಾರಣೆ ಆಗಸ್ಟ್ 23ಕ್ಕೆ ಮುಂದೂಡಿದೆ.ಕಳೆದ ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಡಿಯೋ ಹರಿದಾಡಿದ್ದು, ಇದರ ಬೆನ್ನಿಗೇ ವ್ಯಕ್ತಿಯೋರ್ವರು ಬ್ರಹ್ಮಾವರ ಠಾಣೆಗೆ ದೂರು

ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ Read More »

ಸುಳ್ಯ : ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಸುಳ್ಯದಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡು ಇಂಜಿನಿಯರಿಂಗ್ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿಯೋರ್ವ ಆತ್ಮ ಹತ್ಯೆ ಮಾಡಿಕೊಂಡ ಘಟನೆ ಗುರುವಾರ ವರದಿಯಾಗಿದೆ.ಆತ್ಮ ಹತ್ಯೆ ಮಾಡಿಕೊಂಡ ಯುವಕನನ್ನು ಅಭಿ ಜಾರ್ಜ್ ಎಂದು ಗುರುತಿಸಲಾಗಿದೆ.ಕೇರ್ಪಳದ ಬಾಲಣ್ಣ ಎಂಬವರ ಮನೆಯಲ್ಲಿ ತನ್ನ ಸ್ನೇಹಿತರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅಭಿಜಾರ್ಜ್ ಇಂದುಬೆಳಗ್ಗೆ ತಾನುಮಲಗಿದ್ದ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಳ್ಯ : ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ Read More »

error: Content is protected !!
Scroll to Top