Author name: Tejas

ಪೆರುವಾಜೆ: ಡಿಜಿ ಪೇ ಸೇವೆ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ಸುಳ್ಯಬೆಳ್ಳಾರೆ ವಲಯದ ಪೆರುವಾಜೆ ಕಾರ್ಯಕ್ಷೇತ್ರದಲ್ಲಿ ಈ ದಿನ ಪ್ರಥಮವಾಗಿ ಪೆರುವಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಡಿಜಿ ಪೇ ಕಾರ್ಯಕ್ರಮವನ್ನು ಜಲದುರ್ಗದೇವಿ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸುನಿಲ್ ರೈ ರವರು ಉದ್ಘಾಟನೆಯನ್ನು ಮಾಡಿದರು.ಇವರು ಯೋಜನೆಯ ಕಾರ್ಯಕ್ರಮದ ಬಗ್ಗೆ, ಡಿಜಿ ಪೇ ಸೌಲಭ್ಯ ಪಡೆದುಕೊಳ್ಳುವಂತೆ ಮತ್ತು ಸ್ವ-ಉದ್ಯೋಗ ಮಾಡಿ ಸ್ವಂತ ಕೆಲಸ ಮಾಡುವಂತೆ ತಿಳಿಸಿದರು,ಈ ಸಂದರ್ಭದಲ್ಲಿ ಸಿ.ಎಸ್. ಸಿ ನೋಡೆಲ್ ಅಧಿಕಾರಿಯಾದ ಹೇಮಂತ್ ಸರ್ ರವರು ಡಿಜಿ […]

ಪೆರುವಾಜೆ: ಡಿಜಿ ಪೇ ಸೇವೆ ಉದ್ಘಾಟನೆ Read More »

ಬೆಳ್ಳಾರೆ : ಡಿ.ಜಿ ಪೇ ಉದ್ಘಾಟನೆ

ಸುಳ್ಯ ತಾಲೂಕಿನ ಬೆಳ್ಳಾರೆ CSC ಕೇಂದ್ರದಲ್ಲಿ Digi Pay ಕಾರ್ಯ ಕ್ರಮವನ್ನು ಡಾ. ಜೀವನ್ ಪ್ರಕಾಶ್ ಕೆ ಅವರು ಜು.2ರಂದು ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿದರುಇವರು ಡಿ ಜಿ ಪೇ ಸೇವೆಯು ನಮ್ಮ ಗ್ರಾಮೀಣ ಪ್ರದೇಶದ ಜನರಿಗೆ ಬಹಳ ಉಪಯುಕ್ತವಾದ ಕಾರ್ಯಕ್ರಮವಾಗಿದೆ ,ಇದರಿಂದ ಬ್ಯಾಂಕಿಗೆ ಹೋಗುವ ಸಮಯ ಮತ್ತು ಬ್ಯಾಂಕ್ ನಲ್ಲಿ ಕಾಯುವ ವೇಳೆಯಲ್ಲಿ, ಅತೀ ಸುಲಭವಾಗಿ ಫಲಾನುಭವಿಯ ಖಾತೆಯಿಂದ ಹಣವನ್ನು ತೆಗೆಯಬಹುದು ಈ ಸೇವೆಯ ಉಪಯೋಗವನ್ನು ನಾವೆಲ್ಲರೂ ಪಡೆದುಕೊಳ್ಳಬೇಕು ಎಂಬ ಆಸೆಯ ನುಡಿಗಳನ್ನು ಆಡಿದರು.

ಬೆಳ್ಳಾರೆ : ಡಿ.ಜಿ ಪೇ ಉದ್ಘಾಟನೆ Read More »

ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ವ್ಯಕ್ತಿ ಸಾವು

ಸಂಪಾಜೆಯ ಆಲಡ್ಕ ಸಮೀಪ ಮನೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜೂ.2ರಂದು ವರದಿಯಾಗಿದೆ.ಮೃತ ವ್ಯಕ್ತಿಯನ್ನು ಕಾಸರಗೋಡು ಮೂಲದ ಜೋಸ್ ಮ್ಯಾಥ್ಯ ಎಂದು ತಿಳಿದು ಬಂದಿದೆ. ಸಂಪಾಜೆ ಭಾಗದಲ್ಲಿ ತೋಟ ಲೀಸ್ ಗೆ ಪಡೆದು ಬಾಡಿಗೆ ಮನೆಯಲ್ಲಿ ವಾಸಮಾಡಿಕೊಂಡು ಕೆಲಸ ಮಾಡುತ್ತಿದ್ದಾರೆನ್ನಲಾಗಿದೆ . ಘಟನಾ ಸ್ಥಳಕ್ಕೆ ಕಲ್ಲುಗುಂಡಿ ಹೊರಠಾಣಾ ಸಿಬ್ಬಂದಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ವ್ಯಕ್ತಿ ಸಾವು Read More »

ಅಮರ ಮುಡ್ನೂರು : ಡಿಜಿ ಪೇ ಕಾರ್ಯಕ್ರಮಕ್ಕೆ ಚಾಲನೆ

ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಜಾಲ್ಸೂರು ವಲಯದ ಅಮರ ಮುಡ್ನೂರು Csc ಕೇಂದ್ರದಲ್ಲಿ ಡಿಜಿ ಪೇ ಕಾರ್ಯಕ್ರಮಕ್ಕೆ ಮಹಾ ವಿಷ್ಣು ಭಜನೆ ಮಂಡಳಿ ಗೌರವ ಸಲಹೆಗಾರರಾದ & csc ಕೇಂದ್ರ ದ ಕಟ್ಟಡ ಮಾಲಿಕರಾದ ಕೃಷ್ಣಕುಮಾರ್ ಭಟ್ ಪೈಲೂರು ಅವರು ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು*.*ತಾಲ್ಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಪಾಧ್ಯಕ್ಷರಾದ ನಾರಾಯಣ ಕೊಡ್ತುಗುಳಿ, ಕುಕ್ಕುಜಡ್ಕ ಒಕ್ಕೂಟದ ಅಧ್ಯಕ್ಷರು ಹರಿಶ್ಚಂದ್ರ ಕಟ್ಟಾ,ಪೈಲಾರು ನೂತನ ಒಕ್ಕೂಟದ ಅಧ್ಯಕ್ಷರಾದ ಯಾದವೇಂದ್ರ ಕಡಪಳ, ಕುಕು ಜಡ್ಕನೂತನ ಒಕ್ಕೂಟ

ಅಮರ ಮುಡ್ನೂರು : ಡಿಜಿ ಪೇ ಕಾರ್ಯಕ್ರಮಕ್ಕೆ ಚಾಲನೆ Read More »

ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ

ರಾಜ್ಯದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ.ಜುಲೈ 2 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪಶ್ಚಿಮ ಘಟ್ಟದ ಸಾಲಿನಲ್ಲಿರುವ ಮಲೆನಾಡು ಮತ್ತು ಅದಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಜುಲೈ 5 ವರೆಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ Read More »

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಧಾರಾವಾಹಿ, ಸಿನಿಮಾ ಚಿತ್ರೀಕರಣ ನಿಷೇಧ

ವಿದ್ಯಾರ್ಥಿಗಳ ಸುರಕ್ಷತೆ, ಗೌಪ್ಯತೆ, ಶೈಕ್ಷಣಿಕ ಅಡಚಣೆ ಮತ್ತು ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ, ಸರ್ಕಾರಿ ಶಾಲೆಗಳ ಆವರಣದಲ್ಲಿ ಸಿನಿಮಾ, ಕಿರುಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ರೀತಿಯ ಚಿತ್ರೀಕರಣವನ್ನು ಶಿಕ್ಷಣ ಇಲಾಖೆ ಸಂಪೂರ್ಣವಾಗಿ ನಿಷೇಧಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಪೋಷಕರ ಆಕ್ಷೇಪವನ್ನೂ ಪರಿಗಣಿಸಲಾಗಿದೆ. ಈ ನಿಯಮವನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಕಡ್ಡಾಯವಾಗಿ ಪಾಲಿಸುವಂತೆ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಧಾರಾವಾಹಿ, ಸಿನಿಮಾ ಚಿತ್ರೀಕರಣ ನಿಷೇಧ Read More »

ಗುತ್ತಿಗಾರು ಪ್ರೌಢಶಾಲೆಯಲ್ಲಿ ಕ್ರಾಫ್ಟ್ ವರ್ಕ್ ತರಬೇತಿ ಕಾರ್ಯಕ್ರಮ

ಗುತ್ತಿಗಾರು ಪ್ರೌಢಶಾಲೆಯಲ್ಲಿ ಕ್ರಾಫ್ಟ್ ವರ್ಕ್ ತರಬೇತಿ ಕಾರ್ಯಕ್ರಮವನ್ನು ಪ್ರದೀಪ್ ಕ್ರಾಫ್ಟ್ ವರ್ಕ್ ಸಂಸ್ಥೆಯ ಮುಖ್ಯಸ್ಥರಾದ ಪ್ರದೀಪ್ ಕರಿಕೆ ಜು.1ರಂದು ನಡೆಸಿಕೊಟ್ಟರು. ತೆಂಗಿನ ಗೆರಟೆಯಲ್ಲಿ ವಿವಿಧ ಗೃಹ ಉಪಯೋಗಿ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ವಿಧಾನವನ್ನು ಪ್ರಾತ್ಯಕ್ಷಿತೆ ಮೂಲಕ ತೊರಿಸಲಾಯಿತು. ಸ್ವದೇಶಿ ನಿರ್ಮಿತ ವಸ್ತುವಿನ ಬಳಕೆಯಿಂದ ಪರಿಸರ ಸಂರಕ್ಷಣೆಯ ಜೊತೆಗೆ ದೇಹದ ಆರೋಗ್ಯಕ್ಕೆ ಮತ್ತು ದೇಶದ ಆರ್ಥಿಕತೆಗೆ ಅದ್ಭುತ ಶಕ್ತಿಯನ್ನು ನೀಡಬಹುದು ಎಂಬುದಾಗಿ ಅವರು ಅಭಿಪ್ರಾಯಪಟ್ಟರು. ಈ ಕಾರ್ಯಕ್ರಮದಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು ಪ್ರದೀಪ್ ಕರಿಕೆ ಅವರನ್ನು

ಗುತ್ತಿಗಾರು ಪ್ರೌಢಶಾಲೆಯಲ್ಲಿ ಕ್ರಾಫ್ಟ್ ವರ್ಕ್ ತರಬೇತಿ ಕಾರ್ಯಕ್ರಮ Read More »

ಸುಳ್ಯ ಪಿ.ಎಲ್.ಡಿ ಬ್ಯಾಂಕ್ ನಿಂದ ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ “ಸಹಕಾರ ವಾರ” ಆಚರಣೆ- ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ

ಸುಳ್ಯ ಪಿ ಎಲ್ ಡಿ ಬ್ಯಾಂಕ್ ವತಿಯಿಂದ ಕೇಂದ್ರ ಸರ್ಕಾರದ ” ಸಹಕಾರ ವಾರ” ಕಾರ್ಯಕ್ರಮದ ಅಂಗವಾಗಿ ಶಾಲಾ ಅವರಣದಲ್ಲಿ ನಾನಾ ಹಣ್ಣಿನ ಗಿಡಗಳನ್ನು ನೆಡಲಾಯಿತು.ಸುಳ್ಯ ಪಿ.ಎಲ್. ಡಿ ಬ್ಯಾಂಕಿನ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಗಿಡ ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕ ದಿಲೀಪ್ ಹೆಚ್. ಹೆಚ್, ಸುಳ್ಯ ವ್ಯವಸ್ಥಾಪಕಿ ಉಷಾ ಸುವರ್ಣ, ಸಿಬ್ಬಂದಿಗಳಾದ ದಾಮೋದರ, ಅಶ್ವಿತ್, ಶಾಲಾ ಮುಖ್ಯಶಿಕ್ಷಕಿ ಜಯ ಲತಾ ಕೆ.ಆರ್., ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳಿಗೆ ಬ್ಯಾಂಕಿನ

ಸುಳ್ಯ ಪಿ.ಎಲ್.ಡಿ ಬ್ಯಾಂಕ್ ನಿಂದ ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ “ಸಹಕಾರ ವಾರ” ಆಚರಣೆ- ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ Read More »

ನಾಗುರಿ ದುರಂತದ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕ್ಯಾ.ಚೌಟ

ಮಂಗಳೂರು: ನಾಗುರಿಯಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದಲ್ಲಿ ಗಾಯಗೊಂಡು ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಸಂಸದರು, ದುರಂತದಿಂದ ಬದುಕುಳಿದು ಸದ್ಯ ಚಿಕಿತ್ಸೆ ಪಡೆಯುತ್ತಿರುವ ಬಾಲಕೃಷ್ಣ ಮತ್ತು ಮಕ್ಕಳಾದ ಅಲ್ಕಾ ಹಾಗೂ ಅನುಷಾ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದು, ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದರು. ನಾಗುರಿ ಬಳಿ

ನಾಗುರಿ ದುರಂತದ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕ್ಯಾ.ಚೌಟ Read More »

ಅರೆಭಾಷೆ ಅಕಾಡೆಮಿ ವತಿಯಿಂದ ಐನ್‌ಮನೆಗಳ ಅಧ್ಯಯನ ಪ್ರವಾಸ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಅಧ್ಯಕ್ಷರಾದ ಸದಾನಂದ ಮಾವಜಿ ಇವರ ನೇತೃತ್ವದಲ್ಲಿ ಐನ್‌ಮನೆಗಳ ತುಲನಾತ್ಮಕ ಅಧ್ಯಯನ ಕಾರ್ಯಕ್ಕಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹಾಗೂ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಎರಡು ದಿನಗಳ ಅಧ್ಯಯನ ಪ್ರವಾಸ ಹಮ್ಮಿಕೊಂಡಿತ್ತು.ಈ ಸಂದರ್ಭದಲ್ಲಿ ತೀರ್ಥಹಳ್ಳಿ ಸಮೀಪದಲ್ಲಿರುವ ಕೊಳಗಿ ಮನೆ, ದೇವಂಗಿ ಮನೆ, ಕೊಳಾವರ ಮನೆ ಹಾಗೂ ಉಡುಪಿ ತಾಲೂಕಿನ ಬ್ರಹ್ಮಾವರ ಸಮೀಪದಲ್ಲಿರುವ ಕೊರ್ಗಿ ಮನೆಗಳಿಗೆ ಭೇಟಿ ನೀಡಲಾಯಿತು.ಮನೆಗಳ ಬಗೆಗಿನ ವಿನ್ಯಾಸ, ಇತಿಹಾಸ, ಸಂಸ್ಕೃತಿ, ಆಚಾರ ವಿಚಾರಗಳು, ಮೂಲ, ಅಂದಿಗೂ ಇಂದಿಗೂ ಇರುವ

ಅರೆಭಾಷೆ ಅಕಾಡೆಮಿ ವತಿಯಿಂದ ಐನ್‌ಮನೆಗಳ ಅಧ್ಯಯನ ಪ್ರವಾಸ Read More »

error: Content is protected !!
Scroll to Top