Author name: Tejas

ಜೈಪುರದಲ್ಲಿ ಭೂಕಂಪ

ರಾಜಸ್ಥಾನದ ಜೈಪುರದ ಮೂರು ಭಾಗಗಳಲ್ಲಿ ಶುಕ್ರವಾರ ಭೂಕಂಪಗಳು ಸಂಭವಿಸಿವೆ ಎಂದು ವರದಿಯಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಮೂರು ಕಂಪನಗಳು ಕೇವಲ 30 ನಿಮಿಷಗಳ ಅವಧಿಯಲ್ಲಿ ಸಂಭವಿಸಿದೆ ಎಂದು ತಿಳಿದು ಬಂದಿದೆ.ಶುಕ್ರವಾರ ನಸುಕಿನ ಜಾವಾ 4 ಗಂಟೆಯಿಂದ 4;30 ನಿಮಿಷಗಳ ಅವಧಿಯಲ್ಲಿ ಮೂರು ಕಂಪನಗಳು ಸಂಭವಿಸಿದೆ ಎಂದು ಹೇಳಲಾಗಿದೆ ಅದರಲ್ಲಿ 4.09ರ ಸುಮಾರಿಗೆ 4.4ರ ತೀವ್ರತೆ ಹೊಂದಿದ್ದರೆ, 4.22ರ ಸುಮಾರಿಗೆ 3.1 ರ ತೀವ್ರತೆ ಹಾಗೂ 4.25 ರ ಸುಮಾರಿಗೆ 3.4ರ ತೀವ್ರತೆಯ ಭೂಕಂಪನ ಸಂಭವಿಸಿದೆ.

ಜೈಪುರದಲ್ಲಿ ಭೂಕಂಪ Read More »

ಪತ್ನಿಯನ್ನು‌ ಬರ್ಬರ ಹತ್ಯೆಗೈದ ಪತಿ

ಪತ್ನಿಯ ಶೀಲ ಶಂಕಿಸಿ ಪತಿಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನದ ಹೊಳೆನರಸೀಪುರ ತಾಲೂಕಿನ ಎಸ್.ಅಂಕನಹಳ್ಳಿ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಅಂಬಿಕಾ (28) ಕೊಲೆಯಾದ ಮೃತ ದುರ್ದೈವಿ. ಪತಿ ಚಂದ್ರಮೌಳಿ ಕೊಲೆ ಮಾಡಿದ ಆರೋಪಿ ಎಂದು ತಿಳಿದುಬಂದಿದೆ.ಪತಿ ಚಂದ್ರಮೌಳಿಯು ಕೆಲಸಕ್ಕೆ ಹೋಗಿದ್ದ ಪತ್ನಿಯನ್ನು ಫೋನ್ ಮಾಡಿ ಕರೆಸಿಕೊಂಡಿದ್ದ. ಬಳಿಕ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ

ಪತ್ನಿಯನ್ನು‌ ಬರ್ಬರ ಹತ್ಯೆಗೈದ ಪತಿ Read More »

ಜುಲೈ 23: ತೆಕ್ಕಿಲ್ ಪ್ರತಿಷ್ಟಾನದ ವತಿಯಿಂದ ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50 ನೇ ವರ್ಷದ ಪುಣ್ಯಸ್ಮರಣೆ ಹಾಗೂ ತೆಕ್ಕಿಲ್‌ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ  

ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನದ ವತಿಯಿಂದ ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ವರ್ಷದ ಪುಣ್ಯಸ್ಮರಣೆ ಹಾಗೂ ಸ್ಪೀಕರ್ ಯು.ಟಿ. ಖಾದರ್ ಅವರಗೆ ತೆಕ್ಕಿಲ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ ಸಮಾರಂಭ ಜು.23ರಂದು ಬೆಳಿಗ್ಗೆ 10 ಗಂಟೆಗೆ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್‌ ತೆಕ್ಕಿಲ್ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇರಳ ಸರಕಾರದ ಬಂದರು ಮತ್ತು ವಸ್ತು ಸಂಗ್ರಹಾಲಯ ಸಚಿವರಾದ ಅಹಮ್ಮದ್ ದೇವರಕೋವಿಲ್ ಕಾರ್ಯಕ್ರಮವನ್ನು ಉದ್ಘಾಟಿಸಿ

ಜುಲೈ 23: ತೆಕ್ಕಿಲ್ ಪ್ರತಿಷ್ಟಾನದ ವತಿಯಿಂದ ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50 ನೇ ವರ್ಷದ ಪುಣ್ಯಸ್ಮರಣೆ ಹಾಗೂ ತೆಕ್ಕಿಲ್‌ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ   Read More »

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಮನೆಗೆ ಎನ್‌ಐಎ ಭೇಟಿ

ಸುಳ್ಯ ತಾಲೂಕಿನ‌ ಬೆಳ್ಳಾರೆ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪೈಕಿ ಓರ್ವನಾಗಿರುವ ಉಪ್ಪಿನಂಗಡಿ 34ನೇ ನೆಕ್ಕಿಲಾಡಿಯ ಅಗ್ನಾಡಿ ಮನೆ ನಿವಾಸಿ ಕೆ.ಎ. ಮಸೂದ್‌ನ ಮನೆಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ರವಿವಾರ ಭೇಟಿ ನೀಡಿ, ಅಗಸ್ಟ್‌ 18ರ ಒಳಗಾಗಿ ಒಳಗಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕೆಂಬ ನ್ಯಾಯಾಲಯದ ಎರಡನೇ ಬಾರಿಯ ಆದೇಶ ಪ್ರತಿಯನ್ನು ಮನೆಯ ಮುಂಬಾಗಿಲಿಗೆ ಅಂಟಿಸಿದರು.ಈ ಸಂಬಂಧ ಧ್ವನಿ ವರ್ಧಕದ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಅಗಸ್ಟ್‌ ನಿಗದಿತ ಗಡುವಿನೊಳಗೆ ನ್ಯಾಯಾಲಯಕ್ಕೆ ಶರಣಾಗತ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಮನೆಗೆ ಎನ್‌ಐಎ ಭೇಟಿ Read More »

ಬೈಕ್ ಮೇಲೆ ಯುವಕ-ಯುವತಿಯ ರೊಮ್ಯಾನ್ಸ್

ಯುವಕನೊಬ್ಬ ಬೈಕ್ ಚಲಾಯಿಸುತ್ತಿದ್ದ ವೇಳೆ ತನ್ನ ಪ್ರೇಯಸಿಯನ್ನು‌ ಪೆಟ್ರೋಲ್ ಟ್ಯಾಂಕ್ ಮೇಲೆ ಹಿಮ್ಮುಖವಾಗಿ ಕುಳಿತು ಆತನಿಗೆ ಮುತ್ತಿಟ್ಟಿದ್ದಾಳೆ.ದೆಹಲಿಯ ಮಂಗೋಲ್‌ಪುರಿ ಹೊರ ವರ್ತುಲ ರಸ್ತೆಯ ಮೇಲ್ವೇತುವೆಯಲ್ಲಿ ಈ ರೊಮ್ಯಾನ್ಸ್ ನಡೆದಿದೆ.ಈ ರೋಮ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ಬೈಕ್ ಮೇಲೆ ಯುವಕ-ಯುವತಿಯ ರೊಮ್ಯಾನ್ಸ್ Read More »

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಇಂದು (ಜುಲೈ 18) ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಮೃತರು. ಇವರು ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುತ್ತಿದ್ದಾಗ ಕಂಪ್ಲಾಪುರ ಬಳಿ ಮುಂಜಾನೆ 4:30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು Read More »

ಮನೆ ಬಾಗಿಲು ಮುರಿದು ಅಪಾರ ಚಿನ್ನಾಭರಣ ಕಳವು

ಸುಳ್ಯ ತಾಲೂಕಿನ‌ ಕನಕಮಜಲು‌ ಗ್ರಾಮದ ಸುಣ್ಣಮೂಲೆ ಎಂಬಲ್ಲಿ ಕಳೆದ ರಾತ್ರಿ ಮನೆಯಲ್ಲಿ ಮನೆಯವರು ಇಲ್ಲದ ಸಂದರ್ಭದಲ್ಲಿ ಬಾಗಿಲು ಮುರಿದು ಚಿನ್ನಾಭರಣ ಕಳವುಗೈದಿರುವ ಘಟನೆ ಸುಣ್ಣಮೂಲೆಯ ಬುಡ್ಲೆಗುತ್ತುವಿನಲ್ಲಿ ನಡೆದಿದೆ.ಯುರೇಶ್ ಬುಡ್ಲೆಗುತ್ತು ಅವರ ಸಂಬಂಧಿಯೊಬ್ಬರು ಜು.16ರಂದು ಅಪರಾಹ್ನ ನಿಧನರಾಗಿದ್ದು, ಯುರೇಶರ ಕುಟುಂಬ ಮನೆಯ ಬಾಗಿಲು ಹಾಕಿ ಅಲ್ಲೇ ಸ್ವಲ್ಪ ದೂರದಲ್ಲಿರುವ ಮನೆಗೆ ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ತೆರಳಿದ್ದರು.ಆ ಸಂದರ್ಭದಲ್ಲಿ ಮನೆಯ ಹಿಂಬದಿ ಬಾಗಿಲು ಮುರಿದ ಕಳ್ಳರು ಮನೆಯೊಳಗೆ ಜಾಲಾಡಿ, ಅಂದಾಜು ಮೂವತ್ತು ಪವನ್ ಗೂ ಅಧಿಕ ಚಿನ್ನಾಭರಣಗಳನ್ನು ಕಳವುಗೈದಿದ್ದಾರೆ ಎಂದು ತಿಳಿದುಬಂದಿದೆ.ಸುಳ್ಯ

ಮನೆ ಬಾಗಿಲು ಮುರಿದು ಅಪಾರ ಚಿನ್ನಾಭರಣ ಕಳವು Read More »

ಯುವಕನಿಂದ ಮಹಿಳೆಗೆ ಪೋನ್ ಮಾಡಿ ಕಿರುಕುಳ : ಅಟ್ಟಾಡಿಸಿಕೊಂಡು ಹೊಡೆದ ಊರವರು

ಚಿಕ್ಕಮಗಳೂರಿನ ಕಟ್ಟೆಮನೆ ಗ್ರಾಮದಲ್ಲಿ ಡಿಶ್ ರಿಪೇರಿ ಮಾಡುವವನು ಮಹಿಳೆಯರಿಗೆ ತನ್ನ ಮೊಬೈಲ್ ನಂಬರ್ ಕೊಡುವ ವೇಳೆ ಏನಾದರೂ ಸಮಸ್ಯೆ ಇದ್ದರೆ ಕರೆ ಮಾಡಿ ಎಂದು ಹೇಳುತ್ತಿದ್ದ. ಆಮೇಲೆ ಮಹಿಳೆಯರಿಗೆ ಕಾಲ್ ಮಾಡಿ ಪೀಡಿಸುತ್ತಿದ್ದ. ಪದೇ ಪದೇ ತನಗೆ ಕರೆ ಮಾಡುವಂತೆ ಹೇಳಿ ಮಹಿಳೆಯರಿಗೆ ಪೀಡಿಸುತ್ತಿದ್ದವನಿಗೆ ಇಂದು ಊರಿನವರು ಅಟ್ಟಾಡಿಸಿಕೊಂಡು ಹೊಡೆದ ಘಟನೆ ನಡೆದಿದೆ.

ಯುವಕನಿಂದ ಮಹಿಳೆಗೆ ಪೋನ್ ಮಾಡಿ ಕಿರುಕುಳ : ಅಟ್ಟಾಡಿಸಿಕೊಂಡು ಹೊಡೆದ ಊರವರು Read More »

ಭೂ ವಿವಾದ: ಭೀಕರವಾಗಿ ಚೂರಿಯಿಂದ ಇರಿದು ಕೊಂದ ಸಹೋದರ

ಮಡಿಕೇರಿ ತಾಲೂಕು ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ತಮ್ಮನಿಂದ ಅಣ್ಣ ಕೊಲೆಯಾದ ಶುಕ್ರವಾರ ವರದಿಯಾಗಿದೆ.ಸತ್ತಾರ್, ರಫೀಕ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದಿದ್ದು, ಸಹೋದರರು ಸೇರಿ ಉಸ್ಮಾನ್ ಎಂಬವರನ್ನು ಇಂದು ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ.ಸಂಪಾಜೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಭೂ ವಿವಾದ: ಭೀಕರವಾಗಿ ಚೂರಿಯಿಂದ ಇರಿದು ಕೊಂದ ಸಹೋದರ Read More »

ಜು.17ರಿಂದ ಅಗ್ನಿಪಥ್ ಸೇನಾ ನೇಮಕಾತಿ

ಉಡುಪಿ ಜಿಲ್ಲೆಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಭಾರತೀಯ ಸೇನೆಯ ಅಗ್ನಿಪಥ್‌ ಸೇನಾ ನೇಮ ಕಾತಿ ರ್ಯಾಲಿಯು ಜು. 17ರಿಂದ 25ರ ವರೆಗೆ ನಡೆಯಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡು, ಅಭ್ಯರ್ಥಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್‌. ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ರ್ಯಾಲಿ ಕುರಿತ ಪೂರ್ವ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರ್ಯಾಲಿಯಲ್ಲಿ ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ

ಜು.17ರಿಂದ ಅಗ್ನಿಪಥ್ ಸೇನಾ ನೇಮಕಾತಿ Read More »

error: Content is protected !!
ಮಾರ್ದನಿ ವಾಟ್ಸಪ್‌ ಗ್ರೂಪ್‌ಗೆ ಸೇರಿ