Author name: Tejas

ಗುತ್ತಿಗಾರು : ತನ್ನ ಮನೆಗೆ ಬೆಂಕಿ ಹಚ್ಚಿದ ಯುವಕನ ಶವ ಶೌಚಾಲಯದೊಳಗೆ ಪತ್ತೆ!

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಅಡ್ಡನಪಾರೆ ಎಂಬಲ್ಲಿ ತನ್ನ ಮನೆಗೆ ಬೆಂಕಿ ಹಚ್ಚಿದ ಯುವಕನೋರ್ವನ ಮೃತದೇಹ ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಫೆ.12ರಂದು ಸಂಜೆ ವರದಿಯಾಗಿದೆ.ಅಡ್ಡನಪಾರೆ ನಿವಾಸಿ ಗೋಪಾಲ ನಾಯ್ಕ ಎಂಬವರ ಪುತ್ರ ಮಹಾಬಲ (27 ವರ್ಷ) ಎಂಬವರೇ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.ಮಹಾಬಲ ಫೆ.4ರಂದು ರಾತ್ರಿಮದ್ಯ ಸೇವಿಸಿ ಬಂದು ಮನೆಗೆ ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿದ್ದರೆನ್ನಲಾಗಿದೆ‌.ನಾಪತ್ತೆಯಾಗಿದ್ದ ಮಹಾಬಲ ಅವರ ಮೃತದೇಹ ಅವರ ಮನೆಯ ಬಳಿಯ ವಾಸವಿಲ್ಲದ ಮನೆಯೊಂದರ ಶೌಚಾಲಯದ ಒಳಗೆ ಪತ್ತೆಯಾಗಿತ್ತು.ಸ್ಥಳೀಯ ಮನೆಯವರು ವಾಸನೆ […]

ಗುತ್ತಿಗಾರು : ತನ್ನ ಮನೆಗೆ ಬೆಂಕಿ ಹಚ್ಚಿದ ಯುವಕನ ಶವ ಶೌಚಾಲಯದೊಳಗೆ ಪತ್ತೆ! Read More »

ಮನೆಮದ್ದು

ತೆಂಗಿನ ತುರಿಯನ್ನು ಎಳನೀ-ರಿನೊಂದಿಗೆ ರುಬ್ಬಿ ಅದಕ್ಕೆ ಕಲ್ಲುಸಕ್ಕರೆ, ಏಲಕ್ಕಿ ಸೇರಿಸಿ ದಿನಕ್ಕೆ ಒಂದು ಬಾರಿ ಸೇವಿಸಿದರೆ ಎದೆನೋವು, ಹೊಟ್ಟೆ ಹುಣ್ಣು ಗುಣವಾಗುವುದು ಅಗಸೆ ಸೊಪ್ಪಿನ ಪಲ್ಯ ಮಾಡಿಕೊಂಡು ತಿಂದರೆ ಮೂಳೆಗಳ ಬೆಳವಣಿಗೆ ಹೆಚ್ಚು ಪ್ರಮಾಣದಲ್ಲಿ ಆಗುತ್ತದೆ. ಕಣ್ಣುಗಳ ಆರೋಗ್ಯದಲ್ಲಿ ರಕ್ಷಣೆ ನೀಡುತ್ತದೆ. ಸಂಧಿವಾತದಿಂದ ಊದಿಕೊಂಡಿರುವ ಭಾಗಕ್ಕೆ ಉಪ್ಪಿನ ಕಾವು ಕೊಟ್ಟರೆ ನೋವು ಕಡಿಮೆಯಾಗಿ, ಊತ ಇಳಿಯುತ್ತದೆ. ಅಲೋವೆರಾ ರಸಕ್ಕೆ ಅರಿಶಿನ ಹುಡಿ ಬೆರೆಸಿ ನಿಯಮಿತವಾಗಿ ಸೇವಿಸಿದರೆ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ.

ಮನೆಮದ್ದು Read More »

ಸುಳ್ಯ : ಸಂಭ್ರಮ ಸಡಗರದಿಂದ ನಡೆದ ಅಂಜಲಿ ಮಾಂಟೆಸ್ಸರಿ ಶಾಲೆಯ 4ನೇ ವರ್ಷದ ವಾರ್ಷಿಕೋತ್ಸವ “ಉತ್ಕರ್ಷ್ 2026

ಸುಳ್ಯದಲ್ಲಿರುವ ಅಂಜಲಿ ಮಾಂಟೆಸ್ಸರಿ ಶಾಲೆಯ 4ನೇ ವಾರ್ಷಿಕೋತ್ಸವ “ಉತ್ಕರ್ಷ್ 2026” ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಕೆ.ಆರ್. ಗಂಗಾಧರ್ ಅವರು ಭಾಗವಹಿಸಿ ಶಾಲಾ ಪೋಷಕರಿಗೆ ಉತ್ತಮವಾದ ಸಂದೇಶವನ್ನು ನೀಡಿದರು. ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಮಾಡಿ ಎಂದರು ಗೌರವಾನ್ವಿತ ಅತಿಥಿಗಳಾಗಿ ಅರೆಭಾಷೆ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಸದಾನಂದ ಮಾವಜಿ, ವೆಂಕಟರಮಣ ಸಹಕಾರಿ ಸಂಘ ಸುಳ್ಯದ ಸಿಇಒ ಶ್ರೀ ಕೆ.ಟಿ. ವಿಶ್ವನಾಥ್ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಅಧ್ಯಕ್ಷರಾದ ಶ್ರೀ ಶುಭಕರ

ಸುಳ್ಯ : ಸಂಭ್ರಮ ಸಡಗರದಿಂದ ನಡೆದ ಅಂಜಲಿ ಮಾಂಟೆಸ್ಸರಿ ಶಾಲೆಯ 4ನೇ ವರ್ಷದ ವಾರ್ಷಿಕೋತ್ಸವ “ಉತ್ಕರ್ಷ್ 2026 Read More »

ಕಾರ್ಮಿಕ ಸಂಹಿತೆ, ಭಾರತ-ಯುಎಸ್ ವ್ಯಾಪಾರ ಒಪ್ಪಂದ ಖಂಡಿಸಿ ಕಾರ್ಮಿಕ, ರೈತ ಸಂಘಟನೆಗಳಿಂದ ನಾಳೆ ಭಾರತ್‌ ಬಂದ್‌ಗೆ ಕರೆ

ಕೇಂದ್ರ ಕಾರ್ಮಿಕ ಸಂಘಗಳು ಮತ್ತು ರೈತ ಸಂಘಟನೆಗಳು ಭಾರತದಾದ್ಯಂತ ಫೆ.12ರಂದು ಮುಷ್ಕರಕ್ಕೆ ಕರೆ ನೀಡಿದೆ. ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಭಾರತ-ಯುಎಸ್ ವ್ಯಾಪಾರ ಒಪ್ಪಂದದ ವಿರುದ್ಧ ಪ್ರತಿಭಟಿಸಿ ಈ ಬಂದ್‌ ನಡೆಯುತ್ತಿದೆ. ಹೊಸ ಸಂಹಿತೆಗಳು ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತವೆ ಎಂದು ಪ್ರತಿಭಟನಾ ಒಕ್ಕೂಟಗಳು ಹೇಳಿದೆ. ಪ್ರಮುಖ ಬ್ಯಾಂಕಿಂಗ್ ಒಕ್ಕೂಟಗಳು ಬಂದ್‌ಗೆ ಬೆಂಬಲ ನೀಡಿದ್ದು, ಸಾರ್ವಜನಿಕ ವಲಯದ ಬ್ಯಾಂಕ್ ಸೇವೆಗಳ ಮೇಲೆ ಬಂದ್‌ ಪರಿಣಾಮ ಬೀರುವ ಸಾಧ್ಯತೆಯಿದೆ.

ಕಾರ್ಮಿಕ ಸಂಹಿತೆ, ಭಾರತ-ಯುಎಸ್ ವ್ಯಾಪಾರ ಒಪ್ಪಂದ ಖಂಡಿಸಿ ಕಾರ್ಮಿಕ, ರೈತ ಸಂಘಟನೆಗಳಿಂದ ನಾಳೆ ಭಾರತ್‌ ಬಂದ್‌ಗೆ ಕರೆ Read More »

ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿದ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ

ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಸುಳ್ಯ ಇದರ ವತಿಯಿಂದ ಸುಳ್ಯ ಭಾಗದ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿಯ ವ್ಯವಸ್ಥೆಗಳ ಮತ್ತು ಬೇಡಿಕೆಗಳ ಬಗ್ಗೆ ಗಮನಿಸಲಾಯಿತು.ಹಾಗೂ ಹೊಸ ಕಟ್ಟಡದ ಬೇಡಿಕೆಯನ್ನು ಮುಂದಿಟ್ಟಿರುವ ಕಾರಣ ಮಾನ್ಯ ಶಾಸಕರ ಜೊತೆ ಮತ್ತು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರುವೆವು ಎಂಬ ಭರವಸೆ ನೀಡಲಾಯಿತು.ಈ ಸಂಧರ್ಭ ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ ಕೆ, ಪ್ರಧಾನ ಕಾರ್ಯದರ್ಶಿ ಶಶಿಕಲಾ

ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿದ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ Read More »

ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಮುಖ್ಯಮಂತ್ರಿ ವಿಶೇಷ ಅನುದಾನದ ರಸ್ತೆಗಳ ಉದ್ಘಾಟನೆ, ಸವಲತ್ತುಗಳ ವಿತರಣೆ

ಗ್ರಾಮಗಳ ಅಭಿವೃದ್ಧಿ ಯಿಂದ ನಿಜವಾದ ರಾಮ ಸ್ವರಾಜ್ಯ ಮೂಲಕ ಗಾಂಧೀಜಿ ಯ ಕನಸನ್ನು ನನಸು ಮಾಡಿ ಸಂಪಾಜೆ ಗ್ರಾಮ ಪಂಚಾಯತ್ ದೇಶಕ್ಕೆ ಮಾದರಿಯಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ. ಎ. ಗಫೂರ್ ಹೇಳಿದರುಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್ ತೆಕ್ಕಿಲ್ ರವರ ವಿಶೇಷ ಮುತುವರ್ಜಿ ಯಿಂದ ಮುಖ್ಯ ಮಂತ್ರಿಯವರ ವಿಶೇಷ ಅನುದಾನ ದಲ್ಲಿ ನಿರ್ಮಿಸಿದ ಸರ್ವ ಋ ತು ಕಾಂಕ್ರೀಟ್ ರಸ್ತೆ

ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಮುಖ್ಯಮಂತ್ರಿ ವಿಶೇಷ ಅನುದಾನದ ರಸ್ತೆಗಳ ಉದ್ಘಾಟನೆ, ಸವಲತ್ತುಗಳ ವಿತರಣೆ Read More »

ಕರ್ನಾಟಕದಲ್ಲಿ ಮೂರು ಸಾವಿರದ ಆರುನೂರ ಹದಿನೇಳು ಸರಕಾರಿ ಶಾಲೆಗಳಿಗೆ ಬೀಗ

ಕರ್ನಾಟದಲ್ಲಿ 2021 ರಿಂದ 2026 ರ ವರೆಗೆ ನಾಲ್ಕು ವರ್ಷಗಳಲ್ಲಿ ಒಟ್ಟು 3,617 ಸರ್ಕಾರಿ ಶಾಲೆಗಳು ಮುಚ್ಚಿವೆ.ಕೇಂದ್ರ ಶಿಕ್ಷಣ ಸಚಿವಾಲಯ ರಾಜ್ಯಸಭೆಯಲ್ಲಿ ಮಂಡಿಸಿದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ 20-21 ರಿಂದ 24-25 ರ ಅವಧಿಯಲ್ಲಿ 947 ಮುಚ್ಚಿದ್ದವು. ಶಾಲಾ ಶಿಕ್ಷಣ ಇಲಾಖೆಯು ಅಕ್ಟೋಬರ್ 15-2025 ರ ಆದೇಶದ ಪ್ರಕಾರ 2025-26 ನೇ ಸಾಲಿನಲ್ಲಿ 2,670 ಶಾಲೆಗಳು ಮುಚ್ಚಿವೆ. ಎಲ್ಲವೂ ಸೇರಿ ಒಟ್ಟು 3.617 ಶಾಲೆಗಳಿಗೆ ಬೀಗ ಹಾಕಲಾಗಿದೆ. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ದಾಖಲೆಯು 47.1 ಲಕ್ಷ

ಕರ್ನಾಟಕದಲ್ಲಿ ಮೂರು ಸಾವಿರದ ಆರುನೂರ ಹದಿನೇಳು ಸರಕಾರಿ ಶಾಲೆಗಳಿಗೆ ಬೀಗ Read More »

ಪುತ್ತೂರು ಪೇಟೆಯಲ್ಲಿ ಮುಳ್ಳುಹಂದಿ ಪ್ರತ್ಯಕ್ಷ !

ಪುತ್ತೂರು ಪೇಟೆಯಲ್ಲಿ ಮುಳ್ಳುಹಂದಿ ಪ್ರತ್ಯಕ್ಷವಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಿಸಿದ ಘಟನೆ ನಡೆದಿದೆ. ಪುತ್ತೂರು ಬ್ಲಡ್ ಬ್ಯಾಂಕ್ ಬಳಿ ಮುಳ್ಳುಹಂದಿ ಕಾಣಿಸಿಕೊಂಡಿದ್ದು, ಯಾವುದೋ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿತ್ತು ಎನ್ನಲಾಗಿದೆ. ಸ್ಥಳಕ್ಕೆ ಸ್ನೇಕ್ ತೇಜಸ್‌ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಆಗಮಿಸಿ ಮುಳ್ಳುಹಂದಿಯ ರಕ್ಷಣೆ ಮಾಡಿದ್ದಾರೆ. ಉಪ ವಲಯ ಅರಣ್ಯಾಧಿಕಾರಿ ಉಲ್ಲಾಸ್ ಅವರು ರಕ್ಷಣಾ ಕಾರ್ಯದ ನೇತೃತ್ವ ವಹಿಸಿದ್ದರು.

ಪುತ್ತೂರು ಪೇಟೆಯಲ್ಲಿ ಮುಳ್ಳುಹಂದಿ ಪ್ರತ್ಯಕ್ಷ ! Read More »

ರಾಜ್ಯದಲ್ಲಿ ಅವಧಿಗೆ ಮುನ್ನವೇ ಬೇಸಿಗೆ ಆರಂಭ; ಹವಾಮಾನ ಇಲಾಖೆ ಮಾಹಿತಿ

ರಾಜ್ಯದಲ್ಲಿ ಚಳಿಯ ಪ್ರಮಾಣ ನಿಧಾನವಾಗಿ ಕಡಿಮೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಬೇಸಿಗೆಯ ಅನುಭವ ಜನರಿಗೆ ಎದುರಾಗುತ್ತಿದೆ. ಮಧ್ಯಾಹ್ನದ ವೇಳೆ ಬಿಸಿಲು ಹೆಚ್ಚಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮುಂದಿನ ಎರಡು ದಿನಗಳಲ್ಲಿ ಮಧ್ಯಾಹ್ನದ ಹೊತ್ತಿಗೆ ಬಿಸಿಲು ಇನ್ನಷ್ಟು ಹೆಚ್ಚಾಗಲಿದೆ. ಮುಂಜಾನೆ ಮತ್ತು ಸಂಜೆಯ ವೇಳೆ ಮಾತ್ರ ಚಳಿ ಇರಲಿದೆ. ಕರಾವಳಿ ಸೇರಿದಂತೆ ಕೆಲ ಭಾಗಗಳಲ್ಲಿ ಗರಿಷ್ಠ ತಾಪಮಾನ 2ರಿಂದ 3 ಡಿಗ್ರಿಯಷ್ಟು ಹೆಚ್ಚಳವಾಗುವ ಸಂಭವ ಇದೆ. ಶಾಖದ ಅಲೆಯ ಪ್ರಭಾವ ಹೆಚ್ಚಾಗುವ ಸಾಧ್ಯತೆಗಳಿವೆ.

ರಾಜ್ಯದಲ್ಲಿ ಅವಧಿಗೆ ಮುನ್ನವೇ ಬೇಸಿಗೆ ಆರಂಭ; ಹವಾಮಾನ ಇಲಾಖೆ ಮಾಹಿತಿ Read More »

ಅಡ್ಕಾರು ಅಂಜನಾದ್ರಿಯಲ್ಲಿ ಅಖಂಡ ಭಜನಾ ಮಹಾ ಮಂಗಲೋತ್ಸವ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾಯಿಲಕೋಟೆ ಶಿಖರದ ಪುಣ್ಯ ನೆಲದಲ್ಲಿ ರಾಮದಾಸ ಭಕ್ತಾಗ್ರೇಸರ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಮತ್ತು ಗುಳಿಗರಾಜನ ಪುಣ್ಯ ಕ್ಷೇತ್ರವಿದೆ. ಹಸಿರ ಹೊದಿಕೆಯ ಪ್ರಕೃತಿ ರಮಣೀಯ ಸಿರಿಯ ಸೊಬಗಿನಿಂದ ಕಂಗೊಳಿಸುವ ಈ ಬೆಟ್ಟವೂ ಇಂದು ಎಲ್ಲೆಡೆ ಅಂಜನಾದ್ರಿಯೆಂದೇ ಕರೆಯಲ್ಪಡುತ್ತಿದೆ. ಈ ಕ್ಷೇತ್ರದಲ್ಲಿ ವರುಷದ ಪ್ರತೀ ಫೆಬ್ರವರಿ ತಿಂಗಳ ಕೊನೆಯ ವಾರದಲ್ಲಿ ಸಂಭ್ರಮದ ಜಾತ್ರಾ ಮಹೋತ್ಸವ ನಡೆಯುತ್ತಿದ್ದು ಅಪರೂಪವೆನಿಸುವಂತೆ ಪ್ರತೀ ಜಾತ್ರೆಗೆ ಶ್ರೀ ಹನುಮ ನೇಮ ಸೇವೆಯು ನಡೆಯುತ್ತಿರುವುದು

ಅಡ್ಕಾರು ಅಂಜನಾದ್ರಿಯಲ್ಲಿ ಅಖಂಡ ಭಜನಾ ಮಹಾ ಮಂಗಲೋತ್ಸವ Read More »

error: Content is protected !!
Scroll to Top