Author name: Tejas

ಅರಂತೋಡು : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ದ.ಕ.ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಯವರ ಕಚೇರಿ ಸುಳ್ಯ ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಸಮೂಹ ಸಂಪನ್ಮೂಲ ಕೇಂದ್ರ ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಸಹಯೋಗದೊಂದಿಗೆ ಅರಂತೋಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನ.15ರಂದು ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಪ್ರತಿಭಾ ಕಾರಂಜಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ವಹಿಸಿದರು.ಕಾರ್ಯಕ್ರಮದಉದ್ಘಾಟನೆ ಯನ್ನು ಕರ್ನಾಟಕ ಸರಕಾರ ಕಾರ್ಮಿಕ […]

ಅರಂತೋಡು : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ Read More »

ಸಾಲುಮರದ ತಿಮ್ಮಕ್ಕರಿಗೆ ಅಂತಿಮ ನಮನ ಸಲ್ಲಿಸಿದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ

ಬೆಂಗಳೂರು:ಅಗಲಿದ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಅವರು ಬೆಂಗಳೂರಿನಲ್ಲಿ .ನ 15ರಂದು ಅಂತಿಮ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಕಾಡೆಮಿ ಸದಸ್ಯರಾದ ಪೊಣ್ಣಂಚನ್ ಮೋಹನ್ ಉಪಸ್ಥಿತರಿದ್ದರು.

ಸಾಲುಮರದ ತಿಮ್ಮಕ್ಕರಿಗೆ ಅಂತಿಮ ನಮನ ಸಲ್ಲಿಸಿದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ Read More »

ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಕಡಮಕಲ್ ಭೇಟಿ

ದಶಕಗಳ ಬೇಡಿಕೆಯಾದ, ಮಡಿಕೇರಿ – ಗಾಳಿಬೀಡು – ಕಡಮಕಲ್ – ಕುಕ್ಕೇಸುಬ್ರಹ್ಮಣ್ಯ ರಸ್ತೆಯ ಬಗ್ಗೆ ಮತ್ತು ಕಡಮಕಲ್ ನಿವಾಸಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಹಿನ್ನೆಲೆಯಲ್ಲಿಸಮಾಲೋಚನಾ ಸಭೆಯನ್ನು ಮಡಿಕೇರಿ ಶಾಸಕ ಮಂತರ್ ಗೌಡನ. 14ರಂದು ಸಂಜೆ ಕಡಮಕಲ್ ನಲ್ಲಿ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಸೇರಿದ ಸ್ಥಳೀಯರು ಮತ್ತುಗುತ್ತಿಗಾರು, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು ಗ್ರಾಮದ ನಾಯಕರು, ಗ್ರಾಮಸ್ಥರು ಮಡಿಕೇರಿ,ಗಾಳಿಬೀಡು, ಕಡಮಕಲ್ ಕುಕ್ಕೇ ಸುಬ್ರಹ್ಮಣ್ಯ ರಸ್ತೆಯ ಅಗತ್ಯತೆ ಮತ್ತು ಕಾನೂನು ತೋಡಕುಗಳನ್ನು ನಿವಾರಿಸಿ ದಶಕಗಳ ಬೇಡಿಕೆಯನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು. ಈ

ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಕಡಮಕಲ್ ಭೇಟಿ Read More »

ರೇಬಿಸ್ ಕಾಯಿಲೆಗೊಳಗಾದ ಮಹಿಳೆ ಸಾವು

ಸಂಪಾಜೆ ಗ್ರಾಮದ ನೆಲ್ಲಿಕುಮೇರಿ ನಿವಾಸಿಯ ಮಹಿಳೆಯೊಬ್ಬರು ರೇಬಿಸ್ ಕಾಯಿಲೆಗೆ ತುತ್ತಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ನ.14 ರಂದು ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.ಕಲ್ಲುಗುಂಡಿಯ ನೆಲ್ಲಿಕುಮೇರಿಯ ಕುಂಬೆ (57 ವರ್ಷ ) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.ಕುಂಬೆಯವರು ಕೆಲಸಕ್ಕೆ ಹೋಗುವ ವೇಳೆ ಇತ್ತೀಚೆಗೆ ನಾಯಿಯೊಂದು ಕಚ್ಚಿತ್ತು. ನಾಯಿ ಕಚ್ಚಿದ್ದನ್ನು ಮನೆಯಲ್ಲಿ ಯಾರಿಗೂ ತಿಳಿಸದೆ ಮಹಿಳೆ ಟಿಟಿ ಇಂಜೆಕ್ಷನ್ ಚುಚ್ಚಿಸಿಕೊಂಡು ಸುಮ್ಮನಾಗಿದ್ದರು. ಆದರೆ 40 ದಿನದ ಬಳಿಕ ಅವರಲ್ಲಿ ರೇಬಿಸ್ ಲಕ್ಷಣ ಕಾಣಿಸಿಕೊಂಡಿತು.

ರೇಬಿಸ್ ಕಾಯಿಲೆಗೊಳಗಾದ ಮಹಿಳೆ ಸಾವು Read More »

ಭಯೋತ್ಪಾದಕರಿಂದ ವಶಪಡಿಸಿಕೊಂಡ ಸ್ಪೋಟಕ ಪೊಲೀಸ್ ಠಾಣೆಯಲ್ಲಿ ಸಿಡಿದು ಆರು ಪೊಲೀಸರು ಸಾವು, 27 ಮಂದಿ ಗಂಭೀರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದಂತೆ ಫರೀದಾಬಾದ್‌ ನಲ್ಲಿ ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿದ್ದ ಸ್ಫೋಟಕಗಳ ಸಂಗ್ರಹದಿಂದ ಮಾದರಿಯನ್ನು ಹೊರತೆಗೆಯುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, 6 ಪೊಲೀಸರು ಮೃತಪಟ್ಟಿದ್ದಾರೆ. 27 ಮಂದಿ ಗಂಭೀರ ಗಾಯಗೊಂಡಿದ್ದಾರೆ.ಶುಕ್ರವಾರ ರಾತ್ರಿ ಶಂಕಿತ ಉಗ್ರ ಡಾ.ಮುಜಮ್ಮಿಲ್ ಗನಿಯ ಬಾಡಿಗೆ ಮನೆಯಿಂದ ವಶಪಡಿಸಿಕೊಳ್ಳಲಾಗಿದ್ದ 360 ಕಿ.ಲೋ. ಸ್ಫೋಟಕಗಳ ಪರಿಶೀಲನೆ ನಡೆಸುವ ವೇಳೆ ಘಟನೆ ಸಂಭವಿಸಿದೆ.ಘಟನಾ ಸ್ಥಳದಿಂದ 6 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಅವು ಗುರುತಿಸಲಾಗದ ಸ್ಥಿತಿಯಲ್ಲಿದೆ. ಮೃತದೇಹಗಳನ್ನು ಶ್ರೀನಗರದಲ್ಲಿರುವ ಪೊಲೀಸ್‌ ಕಂಟ್ರಲ್ ರೂಮ್‌

ಭಯೋತ್ಪಾದಕರಿಂದ ವಶಪಡಿಸಿಕೊಂಡ ಸ್ಪೋಟಕ ಪೊಲೀಸ್ ಠಾಣೆಯಲ್ಲಿ ಸಿಡಿದು ಆರು ಪೊಲೀಸರು ಸಾವು, 27 ಮಂದಿ ಗಂಭೀರ Read More »

ಬಿಸಿರೋಡು : ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸಾವು

ಬಂಟ್ವಾಳದಲ್ಲಿ ಸರ್ಕಲ್‌ಗೆ ಕಾರು ಢಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇನ್ನೋವಾ ಕಾರೊಂದು ಬೆಂಗಳೂರಿನಿಂದ ಮಂಗಳೂರು ಕಡೆ ಬರುತ್ತಿತ್ತು. ಈ ವೇಳೆ ಬಿಸಿ ರೋಡಿನ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿದ್ದಾರೆ. ಶನಿವಾರ ಮುಂಜಾನೆ 5ರ ವೇಳೆಗೆ ಘಟನೆ ಸಂಭವಿಸಿದೆ.ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರು ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಢಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಮೃತರ ವಿವರ

ಬಿಸಿರೋಡು : ಭೀಕರ ಕಾರು ಅಪಘಾತದಲ್ಲಿ ಇಬ್ಬರು ಸಾವು Read More »

ಅರಂತೋಡು : ವಾಹನ ಚಾಲಕ ಮಾಲಕ ಸಂಘದ ನೂತನ‌ ಪದಾಧಿಕಾರಿಗಳ ಆಯ್ಕೆ

ಅರಂತೋಡು ವಾಹನ ಮಾಲಕ ಚಾಲಕ ಸಂಘದ ಮಹಾಸಭೆಯು ಆರಂತೋಡು ಗ್ರಾಮ ಪಂಚಾಯತ್‌ನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಜನಾರ್ಧನ ಇರ್ಣೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಂದಿನ ೩ವರ್ಷದ ಅವಧಿಗೆ ಅಧ್ಯಕ್ಷರಾಗಿ ಪ್ರಸನ್ನ ಕಲ್ಲಗದ್ದೆ, ಕಾರ್ಯದರ್ಶಿಯಾಗಿ ಗೋವರ್ಧನ ಇರ್ಣೆ, ಖಜಾಂಜಿಯಾಗಿ ಗೋವರ್ಧನ ಬೊಳ್ಳೂರು ಇವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಅರಂತೋಡು : ವಾಹನ ಚಾಲಕ ಮಾಲಕ ಸಂಘದ ನೂತನ‌ ಪದಾಧಿಕಾರಿಗಳ ಆಯ್ಕೆ Read More »

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದಎನ್.ಡಿ.ಎ ಒಕ್ಕೂಟ ಬಹುಮತ ಪಡೆದಿರುವುದು ಖುಷಿಯ ವಿಚಾರ : ಭಾಗೀರಥಿ ಮುರುಳ್ಯ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎನ್.ಡಿ.ಎ ಒಕ್ಕೂಟದ ಅಲೆಗೆ ಕೊಚ್ಚಿಹೊಗಿದ್ದು , ಬಿಜೆಪಿ ನೇತೃತ್ವದ ಎನ್.ಡಿ.ಎ ಪ್ರಚಂಡ ಬಹುಮತವನ್ನು ಪಡೆದು ಅಧಿಕಾರಕ್ಕೇರುತ್ತಿರುವುದು ಖುಷಿಯ ವಿಚಾರ ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ.ಮಾದ್ಯಮ ಹೇಳಿಕೆಯಲ್ಲಿ ತಿಳಿಸಿದ ಅವರು ಭ್ರಷ್ಟಾಚಾರ ರಹಿತ ,ದೇಶದ ಭದ್ರತೆ, ಸಮಗ್ರ ಅಭಿವೃದ್ಧಿಗಳಿಂದ ಜನಮನ್ನಣೆ ಗಳಿಸಿರುವ ಬಿಜೆಪಿ ದೇಶದ ಮೂಲೆ ಮೂಲೆಯಲ್ಲಿ ಭದ್ರವಾಗಿ ನೆಲೆಯೂರುತ್ತಿದೆ.ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ಸುಳ್ಳು ಭರವಸೆಗಳನ್ನು ಬಿಹಾರದ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದಎನ್.ಡಿ.ಎ ಒಕ್ಕೂಟ ಬಹುಮತ ಪಡೆದಿರುವುದು ಖುಷಿಯ ವಿಚಾರ : ಭಾಗೀರಥಿ ಮುರುಳ್ಯ Read More »

ವಿಷ ಸೇವಿಸಿದ ಹತ್ತನೇ ತರಗತಿಯ ವಿದ್ಯಾರ್ಥಿ ಸಾವು

ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.ಮೃತಳನ್ನು ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಅವರ ಪುತ್ರಿ ಹರ್ಷಿತಾ (15) ಎಂದು ಗುರುತಿಸಲಾಗಿದೆ.ಉಪ್ಪಿನಂಗಡಿಯ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದ ಈಕೆ ನವೆಂಬರ್ 4ರಂದು ತಲೆನೋವು ಕಾರಣದಿಂದ ಶಾಲೆಗೆ ತೆರಳದೇ ಮನೆಯಲ್ಲಿ ಉಳಿದಿದ್ದಳು. ಈ ವೇಳೆ ಮನೆಯಲ್ಲಿ ತಂದಿಟ್ಟಿದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಳಾಗಿದ್ದಾಳೆ.ಘಟನೆಯಾಗುವ ವೇಳೆ ಕೂಲಿ ಕೆಲಸಕ್ಕೆ ತೆರಳಿದ್ದ ತಾಯಿ ಮನೆಗೆ ಬಂದು ಅಸ್ವಸ್ಥಳಾದ ಮಗಳನ್ನು

ವಿಷ ಸೇವಿಸಿದ ಹತ್ತನೇ ತರಗತಿಯ ವಿದ್ಯಾರ್ಥಿ ಸಾವು Read More »

ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ, ಭಾವನ್ಮಾಕವಾಗಿ, ಧಾರ್ಮಿಕವಾಗಿ ಸದೃಢ ಯುವಜನತೆ ಸದೃಢವಾದಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ. ಎಂದು ಸುಳ್ಯ ಎನ್ನೆಂ ಸಿ ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸುಳ್ಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಜಾಲ್ಸೂರು ವಲಯ ಹಾಗೂಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಾಲ್ಸೂರು ವಲಯ ಹಾಗೂ ಸರಕಾರಿ ಪ್ರೌಢಶಾಲೆ ದುಗ್ಗಲಡ್ಕ ಇದರ ಆಶ್ರಯದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ದಲ್ಲಿ ಸಂಪನ್ಮೂಲ

ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »

error: Content is protected !!
Scroll to Top