Author name: Tejas

ಕಾರು ಅಪಘಾತದಲ್ಲಿ ಎನ್.ಎಸ್‌.ಯು‌.ಐ ಮುಖಂಡ ಸೇರಿ ಇಬ್ಬರು ಸಾವು!

ಮಂಗಳೂರು ಜಪ್ಪಿನಮೊಗರು ನಡುಮುಗೇರ ಬಳಿ ಮಂಗಳವಾರ ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ರ್ಘಟನೆ ವರದಿಯಾಗಿದೆ.ಮೃತ ದುರ್ದೈವಿಗಳು ಕದ್ರಿ ನಿವಾಸಿ ಅಮನ್ ರಾವ್ ಹಾಗೂ ಓಂ ಶ್ರೀ ಪೂಜಾರಿ ಎಂದು ತಿಳಿದು ಬಂದಿದೆ.ಕಾರು ಡಿವೈಡರ್ ಗೆ ಢಿಕ್ಕಿಯಾಗಿ ಮೋರಿಗೆ ಬಡಿದು ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಓಂ ಶ್ರೀ ಅವರು NSUI ಮುಖಂಡ ಎಂದು ತಿಳಿದು ಬಂದಿದೆ.

ಕಾರು ಅಪಘಾತದಲ್ಲಿ ಎನ್.ಎಸ್‌.ಯು‌.ಐ ಮುಖಂಡ ಸೇರಿ ಇಬ್ಬರು ಸಾವು! Read More »

ದ.ಕ ಜಿಲ್ಲಾಧಿಕಾರಿ ವರ್ಗಾವಣೆ

ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧಿಕಾರಿ,ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ತಕ್ಷಣ ಆದೇಶದಂತೆ ನೋಂದಣಿ ಮತ್ತು ಮುದ್ರಂಕ ಇಲಾಖೆಯ ಕಮೀಶನರಾಗಿ ನೇಮಕಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹೊಸ ಜಿಲ್ಲಾಧಿಕಾರಿಯಾಗಿ 2016ರ ಐಎಎಸ್ ಅಧಿಕಾರಿ ದರ್ಶನ್ ಎಚ್ ವಿ ಅವರನ್ನು ವರ್ಗಾವಣೆಗೊಳಿಸಲಾಗಿದೆ.ಇವರು ಈ ಹಿಂದೆ ತೆರಿಗೆ ಇಲಾಖೆಯಲ್ಲಿ ಹೆಚ್ಚುವರಿ ಆಯುಕ್ತರಾಗಿದ್ದರು.

ದ.ಕ ಜಿಲ್ಲಾಧಿಕಾರಿ ವರ್ಗಾವಣೆ Read More »

ವೈದ್ಯ ವಿದ್ಯಾರ್ಥಿನಿಯೊಂದಿಗೆ ತೆರಳುತ್ತಿದ್ದ ಯುವ ವೈದ್ಯನ ಕಾರು ಅಪಘಾತವಾಗಿ ಯುವ ವೈದ್ಯ ಸಾವು!

ವೈದಕೀಯ ವಿದ್ಯಾರ್ಥಿಯೊಂದಿಗೆ ತೆರಳುತ್ತಿದ್ದ ಯುವ ವೈದ್ಯನ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ, ಖಾಸಗಿ ಆಸ್ಪತ್ರೆಯ ಯುವ ವೈದ್ಯ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.ಮೃತ ವೈದ್ಯನನ್ನು ಕೇರಳದ ಆಲಪ್ಪುಝ ಮೂಲದ ಡಾ. ಮೊಹಮ್ಮದ್ ಅಮಲ್ (29) ಎಂದು ಗುರುತಿಸಲಾಗಿದೆ. ಇವರು ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಫಿಸಿಯೋಥೆರಪಿ ವಿಭಾಗದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು.ಭಾನುವಾರ ರಾತ್ರಿ ಸುಮಾರು 11:45ರ ವೇಳೆಗೆ ಡಾ. ಅಮಲ್ ಅವರು ತಮ್ಮ ಸಿಯಾಝ್ ಕಾರಿನಲ್ಲಿ ಕೇರಳ ಮೂಲದ ವೈದ್ಯಕೀಯ

ವೈದ್ಯ ವಿದ್ಯಾರ್ಥಿನಿಯೊಂದಿಗೆ ತೆರಳುತ್ತಿದ್ದ ಯುವ ವೈದ್ಯನ ಕಾರು ಅಪಘಾತವಾಗಿ ಯುವ ವೈದ್ಯ ಸಾವು! Read More »

ಭಾರೀ ಮಳೆ ಹಿನ್ನಲೆ ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಸುಳ್ಯ ತಾಲೂಕಿನಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ಸುಳ್ಯ ತಹಶಿಲ್ದಾರರು ತಾಲೂಕಿನ ಶಾಲೆಗಳಿಗೆ,ಅಂಗನವಾಡಿಗಳಿಗೆ ಜೂ.17ರಂದು ರಜೆ ಘೋಷಣೆ ಮಾಡಿದ್ದಾರೆ.

ಭಾರೀ ಮಳೆ ಹಿನ್ನಲೆ ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ Read More »

ವಿಟ್ಲದಲ್ಲಿ ಭೂಮಿ ಕಂಪಿಸಿದ ಅನುಭವ

ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಮಂಡೂರಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಒಂದೆರಡು ಸೆಕೆಂಡ್ ಗಳಸೆಕೆಂಡುಗಳ ಕಾಲ ಭೂಮಿಭೂಮಿ ಕಂಪಿಸಿದೆ. ಹೀಗಾಗಿ ಜನರು ಭಯಭೀತಗೊಂಡಿದ್ದಾರೆ. . ವಿಷಯ ತಿಳಿದು ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕೇರಳ-ಕರ್ನಾಟಕ ಗಡಿ ಪ್ರದೇಶವಾದ ಕನ್ಯಾನದಲ್ಲಿ ಈ ಅನುಭವ ಆಗಿದೆ. ಆತಂಕಗೊಂಡ ಇಲ್ಲಿನ ಗ್ರಾಮಸ್ಥರಿಗೆ ಅಧಿಕಾರಿಗಳು ಧೈರ್ಯ ಹೇಳಿದ್ದಾರೆ. ← ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಮಂಡೂರಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಒಂದೆರಡು ಸೆಕೆಂಡ್ ಗಳಸೆಕೆಂಡುಗಳ ಕಾಲ

ವಿಟ್ಲದಲ್ಲಿ ಭೂಮಿ ಕಂಪಿಸಿದ ಅನುಭವ Read More »

ವಿದ್ಯುತ್ ಶಾಕ್ ಹೊಡೆದು ಮಹಿಳೆ ಸಾವು

ಪಂಪ್ ಸ್ವಿಚ್ ಹಾಕಲು ತೆರಳಿದ್ದ ಮಹಿಳೆಯೊಬ್ಬರಿಗೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಜೂ. ಕಡಬ ತಾಲೂಕಿನ ಎಡಮಂಗಲ ಸಮೀಪದ ಚಾರ್ವಾಕ ಎಂಬಲ್ಲಿ ನಡೆದಿದೆ.ಮೃತ ಮಹಿಳೆಯನ್ನು ದೋಳಾಡಿ ನಿವಾಸಿ ಪುರಂದರ ಎಂಬವರ ಪತ್ನಿ ರೇಖಾ(35) ಮೃತ ಮಹಿಳೆ. ನೀರಿನ ಪಂಪ್‌ ಸ್ವಿಚ್‌ ಹಾಕುವ ವೇಳೆ ವಿದ್ಯುತ್ ಶಾಕ್ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ತಕ್ಷಣ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಆಸ್ಪತ್ರೆಗೆ ತಲುಪುವಷ್ಟರಲ್ಲಿಯೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಕಡಬ ಠಾಣಾ ಪೊಲೀಸರು ಭೇಟಿ

ವಿದ್ಯುತ್ ಶಾಕ್ ಹೊಡೆದು ಮಹಿಳೆ ಸಾವು Read More »

ಸ್ಕೂಟಿಗೆ ವಾಹನ ಡಿಕ್ಕಿ ಹೊಡೆದು ಪರಾರಿ

ಸ್ಕೂಟಿಗೆ ವಾಹನ ವೊಂದು ಢಿಕ್ಕಿಯಾಗಿ, ಆಕೆ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ವರದಿಯಾಗಿದೆಪೆರಾಜೆಯ ಶಾಹಿದಾ ಎಂಬವರು ಸುಳ್ಯದಿಂದ ಪೆರಾಜೆಯ ತಮ್ಮ ಮನೆಗೆ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಅರಂಬೂರು ಮರದ ಡಿಪ್ಪೋ ಸಮೀಪ ಸ್ಕೂಟಿಗೆ ವಾಹನವೊಂದು ಢಿಕ್ಕಿಯಾಯಿತು. ಪರಿಣಾಮ ಶಾಹಿದಾ ರಸ್ತೆಗೆ ಬಿದ್ದರು. ಗುದ್ದಿದ ವಾಹನದವರು ನಿಲ್ಲಿಸದೇ ಮುಂದಕ್ಕೆ ಹೋದರು.ಅದೇ ವೇಳೆಗೆ ಆ ರಸ್ತೆಯಾಗಿ ಕಾರಿನಲ್ಲಿ ಬಂದ ಪೈಚಾರಿನ ಆರೀಫ್ ರವರು ಆ ಯುವತಿಯನ್ನು ತನ್ನ ಕಾರಿನಲ್ಲಿ ಹಾಕಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ದಾಖಲಿಸಿದರೆಂದು

ಸ್ಕೂಟಿಗೆ ವಾಹನ ಡಿಕ್ಕಿ ಹೊಡೆದು ಪರಾರಿ Read More »

ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ,ಮತ್ತೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ,ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು,ಜೂ.17ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.ಈಗಿರುವ ಹವಾಮಾನದ ವೈಶಿಷ್ಟ್ಯಗಮನಿಸಿದರೆ, ಪೂರ್ವ ಅರಬ್ಬಿ ಸಮುದ್ರದ ಕೊಂಕಣದ ಕರಾವಳಿ ಹತ್ತಿರ ಸರ್ಕ್ಯುಲೇಶನ್ 7.6 ಕಿ.ಮೀ ಎತ್ತರದವರೆಗೆ ಇದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 16 ರಿಂದ 20ರ ವರೆಗೆ ವ್ಯಾಪಕವಾಗಿ ಮಳೆಯಾದರೆ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗಲಿದೆ.ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ,

ರಾಜ್ಯದಲ್ಲಿ ಮುಂದುವರಿದ ಮಳೆಯ ಆರ್ಭಟ,ಮತ್ತೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ Read More »

ಸುಳ್ಯದಲ್ಲಿ ಯುವ ವಿಕಾಸ ಸಮಾವೇಶ

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಕಛೇರಿ ಹಾಗೂ ಸುಂದರ ಭಾರತ ಟ್ರಸ್ಟ್ ಇದರ ಜಂಟಿ ಆಶ್ರಯದಲ್ಲಿ ಯುವಿಕಾಸ್ ಸಮಾವೇಶ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಸೋಮವಾರ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ .ಕು.ಭಾಗೀರಥಿ ಮುರುಳ್ಯ ವಹಿಸಿದ್ದರು. ಸಂಸದ ಕ್ಯಾ. ಬ್ರಿಜೇಶ್ ಚೌಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ದಕ್ಷಿಣ ಕನ್ನಡ ಸಾರ್ಥಕತೆಯ ಸಹಕಾರದ ನಾಡು, ಇಲ್ಲಿನ ಯುವ ಜನತೆಗೆ ಬ್ಯಾಕ್ ಟು ಊರು ಎಂಬ ಅಭಿಯಾನದಲ್ಲಿ ಹೊರದೇಶದಲ್ಲಿ ಇದ್ದ ಉದ್ಯಮಿಗಳ ಕಂಪನಿಗಳನ್ನು ಮಂಗಳೂರಿಗೆ

ಸುಳ್ಯದಲ್ಲಿ ಯುವ ವಿಕಾಸ ಸಮಾವೇಶ Read More »

ಹಳ್ಳಿ ಹುಡುಗನಿಗೆ ಒಲಿಯಿತು 30 ಲಕ್ಷ ಮೌಲ್ಯದ ಎರಡು ಬೆಡ್ ರೂಮಿನ ಪ್ಲಾಟ್ ಮನೆ

ಪುತ್ತೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ‘ಬೈಟ್ ಭಾರತ್’ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಲಕ್ಕಿ ಕೂಪನ್ ಯೋಜನೆಯ ಡ್ರಾದಲ್ಲಿ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಯುವಕನೊಬ್ಬ ಮೂವತ್ತು ಲಕ್ಷ ರೂಪಾಯಿ ಮೌಲ್ಯದ ಎರಡು ಬೆಡ್ ರೂಂನ ಮನೆಯನ್ನು ತನ್ನದಾಗಿಸಿಕೊಂಡಿದ್ದಾನೆ.ಮಂಡೆಕೋಲು ಗ್ರಾಮದ ಮಾವಂಜಿ, ಹೊಸೊತ್ತು ದಾಸಪ್ಪ ಗೌಡ ಹಾಗೂ ಯಶೋಧಾ ದಂಪತಿಗಳ ಪುತ್ರ ಚೇತನ್ ಕುಮಾರ್ ಎಂಬ ಯುವಕನೇ ಈ ಅದೃಷ್ಟಶಾಲಿಯಾಗಿದ್ದಾನೆ. ಪದವಿ ವಿದ್ಯಾಭ್ಯಾಸ ಪೂರೈಸಿದ ಬಳಿಕ ಫ್ಯಾಬ್ರಿಕೇಶನ್ ಕೆಲಸದಲ್ಲಿ ತೊಡಗಿಕೊಂಡಿರುವ ಚೇತನ್ ತನ್ನ ಗಳಿಕೆಯ ಹಣದಲ್ಲಿ ‘ಬೈಟ್ ಭಾರತ್‌’

ಹಳ್ಳಿ ಹುಡುಗನಿಗೆ ಒಲಿಯಿತು 30 ಲಕ್ಷ ಮೌಲ್ಯದ ಎರಡು ಬೆಡ್ ರೂಮಿನ ಪ್ಲಾಟ್ ಮನೆ Read More »

error: Content is protected !!
Scroll to Top