Author name: Tejas

ಸಂಪಾಜೆ : ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ

ಪಶು ವೈದ್ಯಕೀಯ ಆಸ್ಪತ್ರೆ ಸುಳ್ಯ, ಗ್ರಾಮ ಪಂಚಾಯಿತಿ ಸಂಪಾಜೆ ಇವುಗಳ ವತಿಯಿಂದ ಎಂಟನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕ ಕಾರ್ಯಕ್ರಮ ಸಂಪಾಜೆ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆಯಿತು.ಸಂಪಾಜೆ ಗ್ರಾಮದ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಇವರು ಲಸಿಕ ಕಿಟ್ಟನ್ನು ನೀಡುವುದರ ಮೂಲಕ ಚಾಲನೆ ನೀಡಿದರು ಈ ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಎಸ್ ಕೆ ಹನೀಫ್  ಪಂಚಾಯಿತಿಯ ಕಾರ್ಯದರ್ಶಿಗಳು ಹಾಗೂ ಪಂಚಾಯತಿಯ ಸಿಬ್ಬಂದಿಗಳು ಹಾಜರಿದ್ದರು.

ಸಂಪಾಜೆ : ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ Read More »

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ವಾರ್ಷಿಕ ಮಹಾಸಭೆ

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ನ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಅಧ್ಯಕ್ಷರಾದ ಹಾಜಿ ಅಬ್ದುಲ್‌ ಖಾದರ್ ಬಾಯಾಂಬಾಡಿಯವರ ಅಧ್ಯಕ್ಷತೆಯಲ್ಲಿ ನ.01ರಂದು ಸುಳ್ಯದ ಸುಪ್ರೀಮ್ ಹಾಲ್ ನಲ್ಲಿ ನಡೆಯಿತು. ಗೌರಧ್ಯಕ್ಷರಾದ ಬಹು| ಸಯ್ಯದ್ ಎನ್ ಪಿ ಎಂ , ಝೈನುಲ್ ಅಬಿದೀನ್ ತಂಙಳ್ ದುವಾಃ ನೇರವೇರಿಸಿದರು. ಉಪಾಧ್ಯಕ್ಷರಾದ ಹಾಜಿ ಹೆಚ್ ಎ ಅಬ್ಬಾಸ್ ಸಂಟ್ಯಾರ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಆಶ್ರಫ್ ಗುಂಡಿವರದಿ ವಾಚಿಸಿ, ಲೆಕ್ಕಪತ್ರವನ್ನು ಮಂಡಿಸಿದರು. ಸಭೆಯಲ್ಲಿ ಸಂಸ್ಥೆಗೆ ಸುಳ್ಯದಲ್ಲಿ ಸ್ಥಳ ಖರೀದಿ, ಅಲ್

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ವಾರ್ಷಿಕ ಮಹಾಸಭೆ Read More »

ಚೊಚ್ಚಲ ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತದ ವನಿತಾ ಕ್ರಿಕೆಟ್ ತಂಡ

ನ.2ರಂದು ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಏಕದಿನ ಮಹಿಳಾ ವಿಶ್ವಕಪ್ ಅಂತಿಮ‌ ಕ್ರಿಕೆಟ್ ಪಂದ್ಯದಲ್ಲಿ ಭಾರತ, ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಚಾಂಪಿಯನ್ ಆಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ, 7 ವಿಕೆಟ್‌ಗೆ 298 ರನ್ ಗಳಿಸಿದ್ದು, ದಕ್ಷಿಣ ಆಫ್ರಿಕಾಗೆ 299 ರನ್‌ಗಳ ಸವಾಲಿನ ಗುರಿ ನೀಡಿತ್ತು. ಆ ಗುರಿ ಬೆನ್ನಟ್ಟಿದ ಆಫ್ರಿಕಾ ತನ್ನೆಲ್ಲ ವಿಕೆಟ್ ಕಳೆದುಕೊಂಡು 246(45.3) ಸೋಲೊಪ್ಪಿಕೊಂಡಿದೆ. ಈ ಮೂಲಕ ಮಹಿಳಾ ತಂಡ 52 ರನ್ ಗಳಿಂದ ವಿಜಯ ಸಾಧಿಸಿದೆ.

ಚೊಚ್ಚಲ ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತದ ವನಿತಾ ಕ್ರಿಕೆಟ್ ತಂಡ Read More »

ಗೋಮಾತೆ ಹಿಂದುಗಳ ಭಾಗ್ಯ ಲಕ್ಷ್ಮಿ : ಡಾ.ರವೀಶ್ ಪಡುಮಲೆ

ಗೋಮಾತೆಗೆ ನಮ್ಮ ಹಿಂದು ಧರ್ಮದಲ್ಲಿ ಪೂಜನೀಯ ಭಾವನೆಯಿದ್ದು ಗೋಮಾತೆ ಹಿಂದುಗಳ ಭಾಗ್ಯಲಕ್ಷ್ಮಿ ಎಂದು ದೈವ ನರ್ತಕರು ಹಾಗೂ ಉಪನ್ಯಾಸಕ ಡಾ.ರವೀಶ್ ಪಡುಮಲೆ ಹೇಳಿದರು.ವಿಶ್ವ ಹಿಂದು ಪರಿಷತ್, ಭಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ವತಿಯಿಂದ ಸುಳ್ಯ ಚೆನ್ನಕೇಶವ ದೇವಳದ ವಠಾರದಲ್ಲಿ ನ.1ರಂದು ನಡೆದ ಸಾರ್ವಜನಿಕ ಗೋಪೂಜೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ದಿಕ್ಸೂಜಿ ಭಾಷಣ ಮಾಡಿದರು.ಹಿಂದು ಧರ್ಮಕ್ಕೆ ಆದಿ ಮತ್ತು ಅಂತ್ಯಗಳಿಲ್ಲ.ಧರ್ಮದ ರಕ್ಷಣೆಗಾಗಿ ರಾಷ್ಡ್ರೀಯ ಸ್ವಯಂ ಸೇವಕ ಸಂಘ ವಿಶ್ವಹಿಂದು ಪರಿಷತ್ ಭಜರಂಗದಳ,ಮಾತ್ರ ಶಕ್ತಿ ದುರ್ಗಾ ವಾಹಿನಿಗಳು ಕೆಲಸ

ಗೋಮಾತೆ ಹಿಂದುಗಳ ಭಾಗ್ಯ ಲಕ್ಷ್ಮಿ : ಡಾ.ರವೀಶ್ ಪಡುಮಲೆ Read More »

ಸುಳ್ಯ ವಿಷ್ಣು ಸರ್ಕಲ್ ನಿವಾಸಿ ದೀಪಕ್ ನಿಧನ

ಸುಳ್ಯದ ವಿಷ್ಣು ಸರ್ಕಲ್ ನಿವಾಸಿ ಶ್ರೀನಿವಾಸ್ ರವರ ಪುತ್ರ ದೀಪಕ್ ರವರು ನ.2ರಂದು ಸಂಜೆ ಮಡಿಕೇರಿಯಲ್ಲಿ ಹೃದಯಾಘಾತದಿಂದ ನಿಧನರಾದರು.ಮೃತರು ಅವಿವಾಹಿತ ರಾಗಿದ್ದು ತಂದೆ ಶ್ರೀನಿವಾಸ್, ತಾಯಿ ಚಂದ್ರಿಕಾ, ಸಹೋದರ ಅನಿಲ್, ವಿನೋದ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.ಇಂದು ಸಂಜೆ ತನ್ನ ಕಾರಿನಲ್ಲಿ ಗೆಳೆಯನೊಂದಿಗೆ ಮಡಿಕೇರಿಗೆ ಹೋಗಿದ್ದರು. ಅಲ್ಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.ಮೃತರು ಸುಳ್ಯ ಶಾರದಾಂಬಾ ಸೇವಾ ಸಮಿತಿಯ ಸದಸ್ಯರಾಗಿ, ವಿಷ್ಣು ಸರ್ಕಲ್ ವೀರಕೇಸರಿ ಬಳಗದ ಪದಾಧಿಕಾರಿಯಾಗಿ ಉತ್ತಮ

ಸುಳ್ಯ ವಿಷ್ಣು ಸರ್ಕಲ್ ನಿವಾಸಿ ದೀಪಕ್ ನಿಧನ Read More »

ಮಂಡೆಕೋಲು ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಜಲಸಂರಕ್ಷಣೆ ವಿಷಯದಲ್ಲಿ ಚಿತ್ರಕಲೆ ಸ್ಫರ್ಧೆ

ನ.2ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಮತ್ತು ಚಿತ್ರಕಲೆ ಸ್ಪರ್ಧೆ ನಡೆಸಲಾಯಿತು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾಪ್ರತಿನಿಧಿ ವೇದಾವತಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು, ಕನ್ನಡ ಭಾಷೆಯ ಮಹತ್ವದ ಬಗ್ಗೆ ಶ್ರೀಮತಿ ಲಾವಣ್ಯಬೊಳುಗಲ್ಲು ತಿಳಿಸಿದರು, ಸರಕಾರಿ ಉನ್ನತ್ತೀಕರಿಸಿದ ಶಾಲೆ ಮಂಡೆಕೋಲು ಇಲ್ಲಿಯ ಶಾಲಾ ಮುಖ್ಯಮಂತ್ರಿ ಯಕ್ಷಿತಾ ಧ್ವಜದ ಗೌರವ ಮತ್ತು ಎಲ್ಲೆಂದರಲ್ಲಿ ಧ್ವಜವನ್ನು ಬಿಸಾಕಬಾರದೆಂಬ ಸಂದೇಶವನ್ನು ನೀಡಿದರು, ತದನಂತರ ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್,ಸುಳ್ಯ ತಾಲೂಕು ಪಂಚಾಯತ್,ಗ್ರಾಮ ಪಂಚಾಯತ್ ಮಂಡೆಕೋಲು ಸಹಯೋಗದಿಂದ ನಡೆಸಲ್ಪಡುವ ಗ್ರಾಮದ ಸರಕಾರಿ ಶಾಲೆಯ ಮಕ್ಕಳೀಗೆ ಚಿತ್ರಕಲೆ

ಮಂಡೆಕೋಲು ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಜಲಸಂರಕ್ಷಣೆ ವಿಷಯದಲ್ಲಿ ಚಿತ್ರಕಲೆ ಸ್ಫರ್ಧೆ Read More »

ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರನ್ನು ಭೇಟಿ ಮಾಡಿದ ಮಾಜಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮತ್ತು ಸದಸ್ಯರು

ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಸಿ.ಟಿ.ರವಿಯವರನ್ನು 2019 – 2022 ಅವಧಿಯಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಮತ್ತು ಆ ಸಂದರ್ಭದಲ್ಲಿ ಕಾರ್ಯನಿರ್ವಾಹಿಸಿದ ಜಾನಕಿ ಬೆಳಿಯಪ್ಪ ಗೌಡ, ಪ್ರೇಮಾ ರಾಘವಯ್ಯ ಚೊಕ್ಕಾಡಿ, ಧನಂಜಯ ಅಗೋಳಿಕಜೆ, ಸ್ಮಿತಾ ಅಮೃತರಾಜ್, ದಂಬೆಕೋಡಿ ಅನಂದ ಗೌಡ, ಡಾ.ದಯಾನಂದ ಕೂಡಕಂಡಿ, ಕುಸುಮಾಧರ ಎ.ಟಿ., ಪುರುಷೋತ್ತಮ ಕಿರ್ಲಾಯ, ಜಯಪ್ರಕಾಶ ಮೊಂಟಡ್ಕ, ಡಾ. ವಿಶ್ವನಾಥ ಬದಿಕಾನ, ಡಾ.ಪುರುಷೋತ್ತಮ ಕರಂಗಲ್ಲು, ಕಿರಣ ಕುಂಬಳಚೇರಿ, ಭರತೇಶ ಅಲಸಂಡೆಮಜಲು ಇವರುಗಳು

ರಾಜ್ಯ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿಯವರನ್ನು ಭೇಟಿ ಮಾಡಿದ ಮಾಜಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮತ್ತು ಸದಸ್ಯರು Read More »

ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳಕ್ಕೆ  ’ನವ’ ವಿನೂತನ ಕಾರ್ಯಕ್ರಮ

ಮಂಗಳೂರು: ಯುವ ಜನರು ಸೇರಿದಂತೆ ಸಮಾನ ಮನಸ್ಕರ ಒಗ್ಗಟ್ಟು, ಧರ್ಮದ ಚಿಂತನೆ, ಸ್ವಾರ್ಥ ರಹಿತ ಕೆಲಸಕ್ಕೆ ಭಗವಂತನ ಆಶೀರ್ವಾದ ಸದಾ ಇರುತ್ತದೆ ಎನ್ನುವುದಕ್ಕೆ ಮಂಗಳೂರು ಕಂಬಳವೇ ಸಾಕ್ಷಿ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಹೇಳಿದ್ದಾರೆ. ಡಿ.27ರಂದು ನಡೆಯಲಿರುವ ಮಂಗಳೂರು ಕಂಬಳದ ಕುರಿತಂತೆ ನಗರದ ಪತ್ತುಮುಡಿ ಸೌಧದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಾಮಾನ್ಯ ಯುವಕರೆಲ್ಲ ಸೇರಿಕೊಂಡು ಆರಂಭಿಸಿದ್ದ ಮಂಗಳೂರು ಕಂಬಳಕ್ಕೆ ಈ ಬಾರಿ 9ನೇ

ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳಕ್ಕೆ  ’ನವ’ ವಿನೂತನ ಕಾರ್ಯಕ್ರಮ Read More »

ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್.ಕೆ ಹನೀಫ್ ಅಲ್ಪಸಂಖ್ಯಾತ ಸೊಸೈಟಿ ನಿರ್ದೆಶಕರಾಗಿ ಆಯ್ಕೆ

ಸುಳ್ಯ ತಾಲೂಕು ಅಲ್ಪಸಂಖ್ಯಾತ ಸಹಕಾರಿ ಸಂಘಕ್ಕೆ ನ.2ರಂದು ನಡೆದ ಚುನಾವಣೆಯಲ್ಲಿ‌ ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್ ಕೆ ಹನೀಫ್ ಸಂಪಾಜೆ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿ ನಿರ್ಧೆಶಕರಾಗಿ ಆಯ್ಕೆಗೊಂಡಿದ್ದಾರೆ. ಇ

ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್.ಕೆ ಹನೀಫ್ ಅಲ್ಪಸಂಖ್ಯಾತ ಸೊಸೈಟಿ ನಿರ್ದೆಶಕರಾಗಿ ಆಯ್ಕೆ Read More »

ರಾಜ್ಯ ಬಿಜೆಪಿ ಅಧ್ಯಕ್ಷ ಬಿ .ವೈ.ವಿಜಯೇಂದ್ರ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ.ವಿಜಯೇಂದ್ರ ದಂಪತಿಗಳು ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ ಪೂಂಜ, ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಸಚಿವ ಎಸ್ ಅಂಗಾರ,‌ಸುಳ್ಯ ಮಂಡಲಧ್ಯಕ್ಷ ವೆಂಕಟ್ ವಳಲಂಬೆ ಸಹಿತ ಪಕ್ಷದ ನಾಯಕರು,ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ .ವೈ.ವಿಜಯೇಂದ್ರ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ Read More »

error: Content is protected !!
Scroll to Top