Author name: Tejas

ಆಟೋ ರಿಕ್ಷಾವನ್ನು ನುಜ್ಜುಗುಜ್ಜು ಮಾಡಿದ ಕಾಡಾನೆ

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋ ರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಜೂ.6 ರಂದು ಮುಂಜಾನೆ ನಡೆದಿದೆ.ಧರ್ಮಸ್ಥಳ ಗ್ರಾಮದ ಬೊಳಿಯಾರು ನಿವಾಸಿ ದಿನೇಶ್ ಎಂಬುವರು ತನ್ನ ಆಟೋರಿಕ್ಷಾದಲ್ಲಿ ಜೂ.6 ರಂದು ಮುಂಜಾನೆ 5:30 ಸಮಯಕ್ಕೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ ಮನೆಯ ಸಮೀಪವೇ ಕಾಡಾನೆಗಳ ಹಿಂಡು ರಸ್ತೆಯ ಮಧ್ಯೆ ಎದುರಾಗಿದ್ದು ದಿನೇಶ್ ಇದನ್ನು ಗಮನಿಸಿ ಆತಂಕಗೊಂಡು ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಈ ವೇಳೆ ಗುಂಪಿನಲ್ಲಿದ್ದ ದೊಡ್ಡ […]

ಆಟೋ ರಿಕ್ಷಾವನ್ನು ನುಜ್ಜುಗುಜ್ಜು ಮಾಡಿದ ಕಾಡಾನೆ Read More »

ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಶ್ರೀ ಸುರೇಶ್ ವಾಗ್ಲೆ ವಿಶ್ವ ಪರಿಸರ ದಿನಾಚರಣೆ ಮಹತ್ವದ ಕುರಿತು ಮಾಹಿತಿ ನೀಡಿ, ಗಿಡ ನೆಟ್ಟು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ರಾಷ್ಟೀಯ ಸೇವಾ ಯೋಜನೆಯ ಕಾರ್ಯಕ್ರಮ ಆಧಿಕಾರಿ ಲಿಂಗಪ್ಪ ಎಂ. ಉಪನ್ಯಾಸಕರಾದ ಮೋಹನಚಂದ್ರ, ಪದ್ಮಕುಮಾರ್, ಚಂದ್ರಶೇಖರ್ , ಅಶ್ವಿನಿ.ಎಂ ಮತ್ತು ಶಾರೀಖ ತಸ್ಲಿಮಾ ಹಾಗೂ ಕಛೇರಿ ಸಹಾಯಕ ಚಿದಾನಂದ.ಕೆ ಹಾಗೂ

ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಭತ್ತ ಸಾಗುವಳಿಗೆ ಡಾ.ದೇವಿಪ್ರಸಾದ್ ಕಾನತ್ತೂರು ಅವರಿಂದ ಚಾಲನೆ

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಾಲ್ಕನೇ ವರ್ಷದ ಭತ್ತದ ಸಾಗುವಳಿ ಜೂ.5 ರಂದು ನಡೆಸಲಾಯಿತು.ಜೇಸಿಐ ಪಂಜ ಪಂಚಶ್ರೀಯ ಬೆಳ್ಳಿ ಹಬ್ಬದ ಸ್ಮರಣೆಗೋಸ್ಕರ ದಾನಿಗಳ ಸಹಾಯದಿಂದ ನಿರ್ಮಿತಗೊಂಡ ದೇವಳದ ಗದ್ದೆಯಲ್ಲಿ ನಾಲ್ಕನೇ ವರ್ಷದ ಭತ್ತದ ಸಾಗುವಳಿ ಮಾಡಲಾಯಿತು.ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ಕಾರ್ಯಕ್ರಮವನ್ನು ಭತ್ತ ಸಾಗುವಳಿ ಮಾಡುವುದರ ಮೂಲಕ ಉದ್ಘಾಟಿಸಿದರು. ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಗೌಡ ಕುದ್ವ,

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಭತ್ತ ಸಾಗುವಳಿಗೆ ಡಾ.ದೇವಿಪ್ರಸಾದ್ ಕಾನತ್ತೂರು ಅವರಿಂದ ಚಾಲನೆ Read More »

ಅಕ್ರಮ ಜಾನುವಾರು ಸಾಗಾಟ ತಡೆಯುವಂತೆ ಮನವಿ

ಜಾನುವಾರುಗಳ ಅಕ್ರಮ ಸಾಗಾಟ,ಹಿಂಸತಾತ್ಮ ಸಾಗಾಟ, ಶೇಖರಣೆ ಮತ್ತು ಹತ್ಯೆಯನ್ನು ತಡೆಯುವಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ಕಾರ್ಯಕರ್ತರು ಸುಳ್ಯ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.ಈ ಸಂದರ್ಭದಲ್ಲಿ ಸೋಮಶೇಖ‌ರ್ ಪೈಕ, ನವೀನ್ ಎಲಿಮಲೆ, ಹರಿಪ್ರಸಾದ್ ಎಲಿಮಲೆ, ಭಾನುಪ್ರಕಾಶ್ ಪೆರುಮುಂಡ, ಉಪೇಂದ್ರ ನಾಯಕ್, ವರ್ಷಿತ್ ಚೊಕ್ಕಾಡಿ, ಅಭಿಜಿತ್ ಸುಳ್ಯ, ಕಿರಣ್ ಸುಳ್ಯ, ನಿರ್ದೇಶ್ ಸುಳ್ಳಿ, ನಿಕೇಶ್, ಪ್ರಿತೇಶ್‌ ನಾರ್ಣಕಜೆ ಇತರರು ಉಪಸ್ಥಿತರಿದ್ದರು.

ಅಕ್ರಮ ಜಾನುವಾರು ಸಾಗಾಟ ತಡೆಯುವಂತೆ ಮನವಿ Read More »

ಸಂಪಾಜೆ : ಹೆರಿಗೆಯ ಬಳಿಕ ರಕ್ತ ಸ್ರಾವದಿಂದ ಮಹಿಳೆ ಸಾವು

ಹೆರಿಗೆಯ ಬಳಿಕ ರಕ್ತಸ್ರಾವದಿಂದ ಮಹಿಳೆ ಸಾವನ್ನಪ್ಪಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಪಾಜೆ ಗ್ರಾಮದ ಬಾಬು ಎಂಬವರ ಪುತ್ರಿ, ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯರ ಪತ್ನಿ ಮಧುರಾ (29ವ) ಹೆರಿಗೆ ಬಳಿಕ ಅತೀಯಾದ ರಕ್ತ ಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಮಹಿಳೆ.ಸಂಪಾಜೆ ಗ್ರಾಮದ ಕೊಯನಾಡು ಬಾಬು ಮಲೆಕುಡಿಯ ಮತ್ತು ಚಿನ್ನಮ್ಮ ದಂಪತಿ ಪುತ್ರಿಯಾದ ಮಧುರಾ ಆರು ವರ್ಷಗಳ ಹಿಂದೆ ಬೆಳ್ತಂಗಡಿಯ ನಾರಾವಿ ಗ್ರಾಮದ ನೂಜೋಡಿ ಮನೆ ನಿವಾಸಿ ಶೇಖರ ಮಲೆಕುಡಿಯ ಅವರೊಂದಿಗೆ ವಿವಾಹವಾಗಿದ್ದರು.ಮಧುರಾರಿಗೆ

ಸಂಪಾಜೆ : ಹೆರಿಗೆಯ ಬಳಿಕ ರಕ್ತ ಸ್ರಾವದಿಂದ ಮಹಿಳೆ ಸಾವು Read More »

ನಗರ ಪಂಚಾಯತ್ ಸದಸ್ಯ ನೆತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

ಪುತ್ತೂರು ನಗರಸಭೆ ಸದಸ್ಯ ರಮೇಶ್ ರೈ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.ರಮೇಶ್ ರೈ ಅವರು ಇತ್ತೀಚಿಗೆ ನಗರಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು.ಜೂ.5ರಂದು ಬೆಳಿಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಕಂಡು ಬಂದಿದ್ದು, ಇದನ್ನು ಕಂಡ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳದಲ್ಲಿ ಸಿಕ್ಕಿದ ಮೊಬೈಲ್ ನಿಂದ ನಂಬರ್ ಪಡೆದು ಪೋನ್ ಮಾಡಿದಾಗ ಇದು ಪುತ್ತೂರು ರಮೇಶ್ ರೈ ಅವರದ್ದು ಎಂದು ತಿಳಿದಿದ್ದು,

ನಗರ ಪಂಚಾಯತ್ ಸದಸ್ಯ ನೆತ್ರಾವತಿ ನದಿಗೆ ಹಾರಿ ಆತ್ಮಹತ್ಯೆ Read More »

ಪೇರಡ್ಕ : ಸೇತುವೆಯಲ್ಲಿ ಸಿಲುಕಿಕೊಂಡಿದ್ದ ಮರ ತೆರವುಗೊಳಿಸಿದ ಊರವರು

ಸಂಪಾಜೆ ಗ್ರಾಮದ ಪೇರಡ್ಕ ಸೇತುವೆಯಲ್ಲಿ ಭಾರಿ ಮಳೆಗೆ ದೊಡ್ಡ ಗಾತ್ರದ ಮರ ಬುಡ ಸಮೇತ ಸೇತುವೆಯಲ್ಲಿ ಸಿಲುಕಿಕೊಂಡಿದ್ದು ಅದನ್ನು‌ ತೆರವುಗೊಳಿಸಲಾಯಿತು‌.ಮರ ತೆರವು ಕಾರ್ಯಚರಣೆಯಲ್ಲಿ ಸಿದ್ದಿಕ್ ಗೂನಡ್ಕ ಅಝೀಝ್ ಕೊಯ್ನ್ಯಾಡ್, ಉನೈಸ್ ಗೂನಡ್ಕ. ರಝಾಕ್ ಅಲೆಕ್ಕಾಡಿ ಉಸ್ಮಾನ್ ಪಾಂಡಿ,ಸಾಹಿಲ್ ದರ್ಕಸ್, ವಿಶ್ವನಾಥ್ ಪಂಚಮಿ, ಚಿದಾನಂದ ಮಾಸ್ತರ್, ಮೋಹನ್ ಆಚಾರಿ, ದನಪಾಲ ಪೇರಡ್ಕ, ಯೋಗೀಶ್ ದರ್ಕಸ್. ಭಾರದ್ವಾಜ್, ಸಾದುಮೊನ್ ಪೇರಡ್ಕ, ಅಶ್ರಫ್ ಪೇರಡ್ಕ ತೊಡಗಿಸಿಕೊಂಡರು.ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ವೆಂಕಟೇಶ್ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಎಸ್ ಕೆ ಹನೀಫ್,

ಪೇರಡ್ಕ : ಸೇತುವೆಯಲ್ಲಿ ಸಿಲುಕಿಕೊಂಡಿದ್ದ ಮರ ತೆರವುಗೊಳಿಸಿದ ಊರವರು Read More »

ಆರ್.ಸಿ.ಬಿ‌ ಸಂಭ್ರಮಾಚರಣೆಯ ಕಾಲ್ತುಳಿತದಲ್ಲಿ ಉಪ್ಪಿನಂಗಡಿಯ ಯುವತಿ ಸಾವು

ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದು ಇವರಲ್ಲಿ ಉಪ್ಪಿನಂಗಡಿ ಇಳಂತಿಲ ಮೂಲದ ಓರ್ವ ಯುವತಿಯೂ ಸೇರಿದ್ದಾರೆ. 33 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.ಬೆಂಗಳೂರುನಲ್ಲಿ ಉದ್ಯಮಿಯಾಗಿರುವ ಉಪ್ಪಿನಂಗಡಿ ಇಳಂತಿಲ ಅಂಡೆತ್ತಡ್ಕ ಮೂಲದ ಕರುಣಾಕರ ಶೆಟ್ಟಿ ಮತ್ತು ಕಾರ್ಕಳ ಹೆಬ್ರಿಯ ಪೂಜಾ ಶೆಟ್ಟಿಯವರ ಪುತ್ರಿ ಚಿನ್ಮಯಿ ಶೆಟ್ಟಿ(20ವ.) ಕಾಲ್ತುಳಿತದಿಂದ ಸಾವಿಗೀಡಾಗಿದವರು ಎಂದು ತಿಳಿದು ಬಂದಿದೆ.18 ವರ್ಷದ ಕಾಯುವಿಕೆಯ ನಂತರ ಐಪಿಎಲ್ ಟ್ರೋಫಿ ಗೆದ್ದ

ಆರ್.ಸಿ.ಬಿ‌ ಸಂಭ್ರಮಾಚರಣೆಯ ಕಾಲ್ತುಳಿತದಲ್ಲಿ ಉಪ್ಪಿನಂಗಡಿಯ ಯುವತಿ ಸಾವು Read More »

ಸಂಪಾಜೆ ಗೂನಡ್ಕ ಪೇರಡ್ಕ ಜುಮ ಮಸೀದಿಗೆ ವಖ್ಫ್ ಇಲಾಖೆಯಿಂದ ಐದು ಲಕ್ಷ್ಮ ಬಿಡುಗಡೆ

ಸುಳ್ಯ ತಾಲ್ಲೂಕು ಸಂಪಾಜೆ ಗ್ರಾಮದ ಅತ್ಯಂತ ಪುರಾತನ ಇತಿಹಾಸ ಪ್ರಸಿದ್ಧ ಗೂನಡ್ಕ ಪೇರಡ್ಕ ಮೋಹಿಯುದ್ದಿನ್ ಜುಮಾ ಮಸೀದಿ ನವೀಕರಣಕ್ಕೆ ಕರ್ನಾಟಕ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅದೀನದಲ್ಲಿ ಬರುವ ವಖ್ಫ್ ಇಲಾಖೆಯಿಂದ ವಸತಿ ಹಾಗು ವಖ್ಫ್ ಸಚಿವರಾದ ಜಮೀರ್ ಅಹಮದ್ ಖಾನ್ ಅವರು ಐದು ಲಕ್ಷ ರುಪಾಯಿಯನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗು ಗೂನಡ್ಕ ಪೇರಡ್ಕ ಮೋಹಿಯುದ್ದಿನ್ ಜುಮ ಮಸ್ಜಿದ್ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಅವರ ಶಿಫಾರಸ್ಸಿನ ಮೇರೆಗೆ ಬಿಡುಗಡೆ ಗೊಳಿಸಿದ್ದಾರೆ ಎಂದು ಸಂಪಾಜೆ

ಸಂಪಾಜೆ ಗೂನಡ್ಕ ಪೇರಡ್ಕ ಜುಮ ಮಸೀದಿಗೆ ವಖ್ಫ್ ಇಲಾಖೆಯಿಂದ ಐದು ಲಕ್ಷ್ಮ ಬಿಡುಗಡೆ Read More »

ಮಂಡೆಕೋಲು : ಶಾಲಾ ಪ್ರಾರಂಭೋತ್ಸವ, ವಿಧ್ಯಾರ್ಥಿಗಳಿಗೆ ಆರತಿಗೈದು ಪುಷ್ಪಾರ್ಚನೆಗೈದು ಸ್ವಾಗತ

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲು ಇದರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು.ಬೆಳಗ್ಗೆ ಎಲ್ಲಾ ವಿಧ್ಯಾರ್ಥಿಗಳನ್ನು ಆರತಿ ಬೆಳಗಿಸಿ ಪುಷ್ಪಾರ್ಚನೆಗೈದು, ತಿಲಕವಿಟ್ಟು ಶಾಲಾಭಿವೃದ್ದಿ ಸಮಿತಿ ಸದಸ್ಯರು ಮತ್ತು ಅಧ್ಯಾಪಕ ವೃಂದದವರು ಶಾಲಾ ಆವರಣಕ್ಕೆ ಬರಮಾಡಿಕೊಂಡರು. ನೂತನವಾಗಿ ಸೇರ್ಪಡೆಗೊಂಡ ವಿಧ್ಯಾರ್ಥಿಗಳಿಗೆ ಬಲೂನ್ ನೀಡಿ ಪ್ರೀತಿಯಿಂದ ಸ್ವಾಗತಿಸಲಾಯಿತು.ಆ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಹೊಸದಾಗಿ ಪ್ರವೇಶಾತಿ ಪಡಕೊಂಡ ವಿಧ್ಯಾರ್ಥಿಗಳಿಗೆ ಪುಸ್ತಕ ಪರಿಕರಗಳನ್ನು ನೀಡಿ ಗುರುತಿಸಲಾಯಿತು.ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಶಾಲಾ

ಮಂಡೆಕೋಲು : ಶಾಲಾ ಪ್ರಾರಂಭೋತ್ಸವ, ವಿಧ್ಯಾರ್ಥಿಗಳಿಗೆ ಆರತಿಗೈದು ಪುಷ್ಪಾರ್ಚನೆಗೈದು ಸ್ವಾಗತ Read More »

error: Content is protected !!
Scroll to Top