Author name: Tejas

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಸಾಕ್ಷ್ಯ ಚಿತ್ರ ಬಿಡುಗಡೆ

ದೃಷ್ಟಿ ಮೀಡಿಯಾ ಸಂಸ್ಥೆಯ ನಿರ್ಮಾಣದಲ್ಲಿ ತಯಾರಿಸಿರುವ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಕುರಿತಾದ ಶತಮಾನಗಳ ನಂಬಿಕೆ ಎಂಬ ಸಾಕ್ಷ್ಯಚಿತ್ರದ ಬಿಡುಗಡೆ ಸುಳ್ಯದಲ್ಲಿ ನಡೆಯಿತು.ಪದ್ಮಶ್ರೀ ಪುರಸ್ಕೃತ ಡಾ। ಗಿರೀಶ್ ಭಾರದ್ವಾಜ್ ಅವರು ಸಾಕ್ಷ್ಯಚಿತ್ರ ಬಿಡುಗಡೆ ಮಾಡಿ ಮಾತನಾಡಿ, ತೊಡಿಕಾನ ದೇವಸ್ಥಾನದ ಕುರಿತಾದ ಸಾಕ್ಷ್ಯಚಿತ್ರ ಇಲ್ಲಿನ ಸುಂದರ ಪ್ರಕೃತಿ ಸೌಂದರ್ಯವನ್ನು ತೋರಿಸುವ ಜತೆಗೆ ಕ್ಷೇತ್ರದ ಪರಿಚಯ, ವಿಶೇಷತೆಯನ್ನು ನಮಗೆ ತಿಳಿಸಿದೆ. ಇಂತಹ ಸಾಕ್ಷಚಿತ್ರಗಳು ಸುಳ್ಯದ ಪ್ರವಾಸೋದ್ಯಮದ ಬೆಳವಣಿಗೆಗೆ ಕೊಡುಗೆ ನೀಡುವಂತಾಗಲಿ ಎಂದರು.ಚಿತ್ರ ನಿರ್ದೇಶಕ ಸಂತೋಷ್ ಕೊಡೆಂಕಿರಿ ಮಾತನಾಡಿ, […]

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಸಾಕ್ಷ್ಯ ಚಿತ್ರ ಬಿಡುಗಡೆ Read More »

ಸುಳ್ಯ : ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ) ವತಿಯಿಂದ ಮಹಿಳಾ ದಿನಾಚರಣೆ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ) ಸುಳ್ಯ ತಾಲೂಕು ಇದರ ವತಿಯಿಂದ ಸಿ .ಎ. ಬ್ಯಾಂಕ್ ಸಭಾಭವನದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್( ರಿ) ಅಧ್ಯಕ್ಷರಾದ ಶ್ರೀಮತಿ ಪುಷ್ಪ ಮೇದಪ್ಪ ಅಧ್ಯಕ್ಷತೆಯನ್ನು ವಹಿಸಿದ್ದರು ಕಾರ್ಯಕ್ರಮವನ್ನು ದಂಪತಿಗಳಾದ ಕಳಪಾರೆ ಪೈಲಾರು ಶ್ರೀಮತಿ ಚೈತ್ರ ಲೋಕೇಶ್‌ ಪೂಜಾರಿ ಉದ್ಘಾಟಿಸಿ ದರು. ಈ ಸಂದರ್ಭದಲ್ಲಿ ಮುಖ್ಯ ಅಭ್ಯಾಗತರಾಗಿ ಸಾಂದೀಪ ವಿಶೇಷ ಚೇತನ ಶಾಲೆ ಸುಳ್ಯ ಇದರ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹರಿಣಿ ಸದಾಶಿವ

ಸುಳ್ಯ : ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ) ವತಿಯಿಂದ ಮಹಿಳಾ ದಿನಾಚರಣೆ Read More »

ಅಕ್ರಮ ಗೋಸಾಗಾಟ ಮಾಡುತ್ತಿದ್ದ ಮೂವರ ಬಂಧನ

ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ,ಪಿಕಪ್ ವಾಹನ ಸಮೇತ ಜಾನುವಾರುಗಳನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಆಲೆಟ್ಟಿ ಮಾರ್ಗವಾಗಿ ಕೇರಳದ ಕಡೆಗೆ ಪಿಕಪ್ ವಾಹನದಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಪಡೆದ ಸುಳ್ಯ ಪೊಲೀಸರು ಪಿಕಪ್ ವಾಹನವನ್ನು ಹಿಂಬಾಲಿಸಿ ಈ ವೇಳೆ ನಾರ್ಕೊಡು ಮಿತ್ತಡ್ಕ ಎಂಬಲ್ಲಿ ವಾಹನವನ್ನು ತಡೆದು ಪೊಲೀಸರು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಮೂರು ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಸಾಗಿಸುತ್ತಿದ್ದದ್ದು ಕಂಡು ಬಂದಿದೆ. ಈ ಸಂದರ್ಭದಲ್ಲಿ

ಅಕ್ರಮ ಗೋಸಾಗಾಟ ಮಾಡುತ್ತಿದ್ದ ಮೂವರ ಬಂಧನ Read More »

ನಾಳೆ(ಮಾ.27)ಸಂಪಾಜೆ, ಅರಂತೋಡು, ಸುಳ್ಯದಲ್ಲಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ

ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕಾಲಾವದಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತಾದ ಸಭೆ ನಾಳೆ ದಿನಾಂಕ 27-03-2026 ನೇ ಶುಕ್ರವಾರ ದ ಕ ಸಂಪಾಜೆ, ಕೊಡಗು ಸಂಪಾಜೆ ಅರಂತೋಡು ಸುಳ್ಯದಲ್ಲಿ ನಡೆಯಲಿದ್ದು ಗ್ರಾಮ /ಬೈಲಿಗೆ ಸಂಬಂಧಪಟ್ಟ ಮನೆಯವರು ಕೆಳಗೆ ತಿಳಿಸಿದ ಸ್ಥಳದಲ್ಲಿ ಸೇರಬೇಕಾಗಿ ವಿನಂತಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ ಹಾಗೂ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ತಿಳಿಸಿದ್ದಾರೆ. ದ. ಕ ಸಂಪಾಜೆಸ್ಥಳ :ಪ್ರಾಥಮಿಕ

ನಾಳೆ(ಮಾ.27)ಸಂಪಾಜೆ, ಅರಂತೋಡು, ಸುಳ್ಯದಲ್ಲಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ Read More »

ಪಯಸ್ವಿನಿ ಪ್ರೌಢಶಾಲಾ ವಿದ್ಯಾರ್ಥಿಗಳು ಇನ್‌ಸ್ಪೈರ್ ಅವಾರ್ಡ್ ಗೆ ಮೂವರು ವಿದ್ಯಾರ್ಥಿಗಳು ಆಯ್ಕೆ

ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ಮೂವರು ವಿದ್ಯಾರ್ಥಿಗಳು ಭಾರತ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಆಯೋಜಿಸಿರುವ ಇನ್‌ಸ್ಟೈರ್ ಅವಾರ್ಡ್ ಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಗಿರೀಶ್.ಕೆ,( 9ನೇ). ಈತ ಮಂಡೆಕೋಲು ಗ್ರಾಮದ ಕಾಯರ್ತೋಡಿ ಭಾಸ್ಕರ ಮತ್ತು ಸೌಮ್ಯ ದಂಪತಿಗಳ ಪುತ್ರ. ವಂಶಿತಾ, (8ನೇ) ಈಕೆ ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ವಸಂತ ಮತ್ತು ಭವಾನಿ ದಂಪತಿಗಳ ಪುತ್ರಿ. ಜಸ್ಮಿತಾ ಕೆ.(1೦ನೇ) ಈಕೆ ಜಾಲ್ಸೂರು ಗ್ರಾಮದ ಕದಿಕಡ್ಕ ಬೇಬಿ.ಕೆ ಮತ್ತು ಭವಾನಿ ದಂಪತಿಗಳ ಪುತ್ರಿ.

ಪಯಸ್ವಿನಿ ಪ್ರೌಢಶಾಲಾ ವಿದ್ಯಾರ್ಥಿಗಳು ಇನ್‌ಸ್ಪೈರ್ ಅವಾರ್ಡ್ ಗೆ ಮೂವರು ವಿದ್ಯಾರ್ಥಿಗಳು ಆಯ್ಕೆ Read More »

ಮೊಗರ್ಪಣೆ : ಬೈಕ್ ಅಪಘಾತವಾಗಿ ಸವಾರ ಗಂಭೀರ

ಸುಳ್ಯ: ಮೊಗರ್ಪಣೆ ಸಮೀಪ ಮಾ.25ರಂದು ರಾತ್ರಿ ಕಂಟೈನರ್ ಲಾರಿ ಪಲ್ಟಿಯಾಗಿ ಬಿದ್ದ ಸ್ಥಳದಲ್ಲಿ ರಸ್ತೆಗೆ ಡೀಸೆಲ್ ಚೆಲ್ಲಿರುವ ಪರಿಣಾಮ ದ್ವಿಚಕ್ರ ವಾಹನ ಸ್ಕಿಡ್ ಆಗಿ ಬಿದ್ದ ಪರಿಣಾಮ ದ್ವಿಚಕ್ರ ಸವಾರ ಗಂಭೀರ ಗಾಯಗೊಂಡ ಘಟನೆ ಘಟನೆ ವರದಿಯಾಗಿದೆ.ಕಳೆದ ರಾತ್ರಿ ಸುಮಾರು 12.45ರ ವೇಳೆಗೆ ಈ ಘಟನೆ ನಡೆದಿದೆ. ಲಾರಿ ಪಲ್ಟಿಯಾದ ಬಳಿಕ ರಸ್ತೆಯ ಮೇಲೆ ಹರಡಿದ್ದ ಡೀಸೆಲ್ ಗಮನಿಸದೇ ಬಂದ ದ್ವಿಚಕ್ರ ವಾಹನ ಸವಾರನು ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಬಿದ್ದಿದ್ದಾನೆ.ಅಪಘಾತದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿದ್ದು,

ಮೊಗರ್ಪಣೆ : ಬೈಕ್ ಅಪಘಾತವಾಗಿ ಸವಾರ ಗಂಭೀರ Read More »

ಗರ್ಭಕಂಠದ ಕ್ಯಾನ್ಸರ್ ತಡೆಗೆ ಕೇಂದ್ರ ಸರ್ಕಾರದಿಂದ HPV ಲಸಿಕೆ ಅಭಿಯಾನ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹೆಣ್ಣುಮಕ್ಕಳ ಆರೋಗ್ಯದ ಶ್ರೀರಕ್ಷೆಗೆ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಉಚಿತ ಹೆಚ್.ಪಿ.ವಿ. ಲಸಿಕಾ ಅಭಿಯಾನದ ಪೂರ್ಣ ಸದುಪಯೋಗವನ್ನು ಪಡೆದುಕೊಳ್ಳುವಂತೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ವಿಶೇಷ ಕರೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಸದರು, ನಮ್ಮ ಜಿಲ್ಲೆಯ 14ರಿಂದ 15 ವರ್ಷದೊಳಗಿನ ಎಲ್ಲಾ ಕಿಶೋರಿಯರು ಸ್ವಯಂಪ್ರೇರಿತರಾಗಿ ಈ ಲಸಿಕೆಯನ್ನು ಪಡೆದುಕೊಳ್ಳುವ ಮೂಲಕ ‘ಆರೋಗ್ಯವಂತ ಭಾರತ – ಆರೋಗ್ಯವಂತ ದಕ್ಷಿಣ ಕನ್ನಡ’ ನಿರ್ಮಾಣಕ್ಕೆ ಸಹಕರಿಸಬೇಕು.

ಗರ್ಭಕಂಠದ ಕ್ಯಾನ್ಸರ್ ತಡೆಗೆ ಕೇಂದ್ರ ಸರ್ಕಾರದಿಂದ HPV ಲಸಿಕೆ ಅಭಿಯಾನ Read More »

ಸಾಹಿತಿ ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಎಸ್. ಹರಗಿ ಯವರ ಕಾದಂಬರಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸಾಹಿತಿ ವೈ.ಎಸ್ . ಹರಗಿ ಯವರ “ಇಮಾಮ್ ಸಾಹೇಬರ ಕುದುರೆ” ಕಾದಂಬರಿಗೆ 2025 ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.ಇವರ 2024 ನೇ ಸಾಲಿನ ಅತ್ಯುತ್ತಮ ಕೃತಿ ಎಂದು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿಯಲ್ಲಿ 25 ಸಾವಿರ ನಗದು ಬಹುಮಾನ, ಫಲಕ , ಪ್ರಶಸ್ತಿ ಪ್ರಮಾಣ ಪತ್ರ ಒಳಗೊಂಡಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್. ಎನ್. ಮುಕುಂದರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವೈ.ಎಸ್ ಹರಗಿ ಅವರು

ಸಾಹಿತಿ ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಎಸ್. ಹರಗಿ ಯವರ ಕಾದಂಬರಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ Read More »

ನಾಳೆ(ಮಾ.26) ಉಬರಡ್ಕ,ಕಾಡುಪಂಜ,ಊರುಪಂಜದಲ್ಲಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಪೂರ್ವಭಾವಿ ಸಭೆ

ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕಾಲಾವದಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತಾದ ಸಭೆ ನಾಳೆ (ಮಾ 26)ರಂದು ಉಬರಡ್ಕ ಮತ್ತು ತೊಡಿಕಾನ ಗ್ರಾಮಗಳಲ್ಲಿ ನಡೆಯಲಿದ್ದು ಗ್ರಾಮ /ಬೈಲಿಗೆ ಸಂಬಂಧಪಟ್ಟ ಮನೆಯವರು ಕೆಳಗೆ ತಿಳಿಸಿದ ಸ್ಥಳದಲ್ಲಿ ಸೇರಬೇಕಾಗಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ ಮತ್ತು ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.ಉಬರಡ್ಕಸ್ಥಳ :ಶ್ರೀ ಶಾಸ್ತಾವು ನರಸಿಂಹ ದೇವಸ್ಥಾನ -ಸಂಜೆ 5:30ಕ್ಕೆತೊಡಿಕಾನ1)ಊರುಪಂಜಸ್ಥಳ: ಊರುಪಂಜ ರತ್ನಾಕರ ರವರ ಮನೆಸಮಯ

ನಾಳೆ(ಮಾ.26) ಉಬರಡ್ಕ,ಕಾಡುಪಂಜ,ಊರುಪಂಜದಲ್ಲಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಪೂರ್ವಭಾವಿ ಸಭೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು!

ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಯೊಬ್ಬನಿಗೆ ಜಾಮೀನು ಮಂಜೂರಾಗಿದೆ ಎಂದು ತಿಳಿದು ಬಂದಿದೆ.ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ 26ನೇ ಆರೋಪಿ ಕೊಡಗು ಜಿಲ್ಲೆಯ ಶನಿವಾರಸಂತೆ ನಿವಾಸಿ ರಿಯಾಜ್ ಎಚ್. ವೈ ಎಂಬಾತನಿಗೆ ಜಾಮೀನು ಮಂಜೂರಾಗಿದ್ದು ಉಚ್ಚ ನ್ಯಾಯಾಲಯ ಜಾಮೀನು ಅರ್ಜಿ ಪುರಸ್ಕರಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು! Read More »

error: Content is protected !!
Scroll to Top