Author name: Tejas

ಬಂಟ್ವಾಳ : ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ, 15 ಮಂದಿ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ : ದುಷ್ಕರ್ಮಿಗಳ ತಂಡವೊಂದು ಮಂಗಳವಾರ ತಲವಾರು ದಾಳಿ ನಡೆಸಿ ತಲವಾರು ದಾಳಿಗೊಳಗಾದ ವ್ಯಕ್ತಿಗಳಲ್ಲಿ ಒಬ್ಬ ಮೃತಪಟ್ಟು ಮತ್ತೊಬ್ಬ ಗಾಯಗೊಂಡಿರುವ ಘಟನೆ ಅಡ್ಡರು ಕೊಲ್ಕಮಜಲು ಎಂಬಲ್ಲಿ ನಡೆದಿದ್ದು ಈ ಘಟನೆಗೆ ಸಂಬಂಧಿಸಿ 15 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕೊಲ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದರ್ ಅವರ ಪುತ್ರ ಅಬ್ದುಲ್ ರಹಿಮಾನ್ ಮೃತಪಟ್ಟ ಯುವಕನಾಗಿದ್ದು, ಕಲಂದರ್ ಶಾಫಿ ಎಂಬ ಯುವಕ ಗಾಯಗೊಂಡಿದ್ದಾನೆ. ಅಬ್ದುಲ್ ರಹಿಮಾನ್ ಅವರು ಇಮ್ಮಿಯಾಝ್ ಅವರೊಂದಿಗೆ ತನ್ನ ಪಿಕ್ ಅಪ್ ವಾಹನದಲ್ಲಿ ಅದ್ದೂರಿನಿಂದ ಕಲ್ಪನೆ […]

ಬಂಟ್ವಾಳ : ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ, 15 ಮಂದಿ ವಿರುದ್ಧ ಪ್ರಕರಣ ದಾಖಲು Read More »

ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರನ್ನು‌ ಬಂಧಿಸಿದ ಪೊಲೀಸರು

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರು ಬಂದ್ ಗೆ ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್‌ವೆಲ್‌ ಅವರನ್ನು ಕದ್ರಿ ಠಾಣೆ ಪೊಲೀಸರು ಮೇ 27 ಬಂಧಿಸಿದ್ದಾರೆ.ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆಯ ಮುಂದೆ ಜಮಾಯಿಸಿದ್ದಾರೆ.ಪೊಲೀಸರ ಕ್ರಮಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಖಂಡನೆ ವ್ಯಕ್ತಪಡಿಸಿದ್ದಾರೆ.

ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅವರನ್ನು‌ ಬಂಧಿಸಿದ ಪೊಲೀಸರು Read More »

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಶಾಸಕರನ್ನು‌ ಉಚ್ಚಾಟಿಸಿದ ಬಿಜೆಪಿ

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್‌.ಟಿ.ಸೋಮಶೇಖರ್‌ ಹಾಗೂ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್‌ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ.ಈ ಇಬ್ಬರು ಶಾಸಕರನ್ನೂ ಬಿಜೆಪಿಯು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿದ್ದು, ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆ ಈ ಇಬ್ಬರಿಗೂ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆದರೆ ಈ ನೋಟಿಸ್ ಗೆ ಸರಿಯಾದ ಉತ್ತರ ನೀಡದ ಹಿನ್ನೆಲೆ ಉಚ್ಛಾಟನೆ ಮಾಡಲಾಗಿದೆ.

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಶಾಸಕರನ್ನು‌ ಉಚ್ಚಾಟಿಸಿದ ಬಿಜೆಪಿ Read More »

ಕಾರಿಗೆ ಬಸ್ಸು ಡಿಕ್ಕಿ ಹೊಡೆದು ಮೂವರು ಗಂಭೀರ

ಪುತ್ತೂರು; ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ. ಅಂಡೆಪುಣಿ ಈಶ್ವರ ಭಟ್ ಮತ್ತು ಅವರ ಮಗಳು ಅಪೂರ್ವ ಹಾಗು ಮೊಮ್ಮಗಳು ಗಂಭೀರವಾಗಿ ಗಾಯಗೊಂಡವರು. ಈಶ್ವರ್ ಭಟ್ ಅಂಡೆಪುನಿ ಅವರ ಮನೆಯಲ್ಲಿ ಕಾರ್ಯಕ್ರಮವಿತ್ತು. ಇದರಲ್ಲಿ ಭಾಗವಹಿಸಲು ಅವರ ಮಗಳು ಅಪೂರ್ವ ಹಾಗೂ ಮೊಮ್ಮಗಳು ಬೆಂಗಳೂರಿನಿಂದ ಪುತ್ತೂರಿಗೆ ಬಸ್ಸಿನಲ್ಲಿ ಬಂದಿದ್ದರು. ಈಶ್ವರ್ ಭಟ್ ಅವರು ಪುತ್ತೂರು ಪೇಟೆಯಿಂದ ಇವರನ್ನು ತಮ್ಮ ವ್ಯಾಗನರ್‌ ಕಾರಿನಲ್ಲಿ ಮನೆಗೆ

ಕಾರಿಗೆ ಬಸ್ಸು ಡಿಕ್ಕಿ ಹೊಡೆದು ಮೂವರು ಗಂಭೀರ Read More »

ದ.ಕ‌ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ಬಂಟ್ವಾಳ ತಾಲೂಕಿನಲ್ಲಿ ರಹೀಂ ಎಂಬವರ ಬರ್ಬರ ಹತ್ಯೆಯಾಗಿದ್ದು ಈ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಗಳಿರುವುದರಿಂದ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಐದು ಪ್ರಮುಖ ತಾಲೂಕುಗಳಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಾಜ್ಞೆ ವಿಧಿಸಲಾಗಿದೆ.

ದ.ಕ‌ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ Read More »

ಪಿಕಪ್ ವಾಹನದಲ್ಲಿ ಸಂಚಾರಿಸುತ್ತಿದ್ದವರ ಮೇಲೆ ತಂಡ ಮಾರಕಾಸ್ತ್ರಗಳಿಂದ ಹಲ್ಲೆ , ಓರ್ವ ಸಾವು,ಮತ್ತೋರ್ವ ಗಂಭೀರ

ತಂಡವೊಂದು ಪಿಕಪ್ ವಾಹನದಲ್ಲಿಸಂಚರಿಸುತ್ತಿದ್ದವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮೇ.27ರಂದು ನಡೆದಿದ್ದು, ಘಟನೆಯಿಂದಾಗಿ ಪಿಕಪ್ ವಾಹನವನ್ನು ಚಲಾಯಿಸುತ್ತಿದ್ದಾತ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.ಬಂಟ್ವಾಳ ತಾಲೂಕಿನ ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕ ರಹೀಂ ಕೊಲೆಯಾದ ವ್ಯಕ್ತಿ. ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡಿ ಹಿಂದಿರುಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಪರಾರಿಯಾಗಿದ್ದಾರೆ. ಘಟನೆಯಿಂದಾಗಿ ರಹೀಂ ಮೃತಪಟ್ಟಿದ್ದಾರೆ. ಅವರ

ಪಿಕಪ್ ವಾಹನದಲ್ಲಿ ಸಂಚಾರಿಸುತ್ತಿದ್ದವರ ಮೇಲೆ ತಂಡ ಮಾರಕಾಸ್ತ್ರಗಳಿಂದ ಹಲ್ಲೆ , ಓರ್ವ ಸಾವು,ಮತ್ತೋರ್ವ ಗಂಭೀರ Read More »

ಮದುವೆಗಳು ಮ(ಕ)ನಸುಗಳನ್ನು ಮುರಿಯದಿರಲಿ..

ಕೆಲವೊಂದು ಘಟನೆಗಳು ಅದೆಷ್ಟೇ ದೂರದೂರಿನಲ್ಲಿ ನಡೆದಿದ್ದರೂ ಮನಸ್ಸಿಗೆ ಘಾಸಿಯುಂಟು ಮಾಡುತ್ತದೆ. ಎಳೆ ವಯಸ್ಸಿನಲ್ಲಿ ಹೃದಯಾಘಾತ, ಎಳೆ ವಯಸ್ಸಿಗೇ ಬರುವ ಸಾವುಗಳು..ಇವುಗಳೊಂದಿಗೆ ಬದುಕಿದ್ದಕ್ಕೂ ಕೊಲ್ಲುತ್ತಲೇ ಬದುಕಿಸುವ ಕೆಲವೊಂದು ಕಹಿ ಘಟನೆಗಳು.ನಾಲ್ಕೈದು ದಿನಗಳ ಹಿಂದೆ ಹಾಸನದಲ್ಲಿ ಮದುವೆ ಮಂಟಪದಲ್ಲಿ ವರ ತಾಳಿ ಕಟ್ಟುವ ವೇಳೆಗೆ ಮದುವೆ ಬೇಡವೆಂದ ವಧುವಿನ ಬಗೆಗಿನ ವೀಡಿಯೋ ಎಲ್ಲೆಡೆ ವೈರಲ್‌ ಆಗಿತ್ತು. ವಧುವಿಗೆ ಬೇರೆ ಹುಡುಗನೊಂದಿಗೆ ಇದ್ದ ಪ್ರೀತಿ ಇದಕ್ಕೆ ಕಾರಣವಾಗಿತ್ತು. ಆದರೆ, ಇದನ್ನು ಯಾರೊಂದಿಗೂ ಹೇಳಿಕೊಳ್ಳದೆ ಬಚ್ಚಿಟ್ಟುಕೊಂಡು ಮದುವೆಯವರೆಗೆ ತಂದು ನಿಲ್ಲಿಸಿದ್ದ ವಧು ಸರಿಯಾಗಿ

ಮದುವೆಗಳು ಮ(ಕ)ನಸುಗಳನ್ನು ಮುರಿಯದಿರಲಿ.. Read More »

ಮಹಿಳೆಯ ಹತ್ಯೆ ಮಾಡಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಗಳು!

ಒಂಟಿಯಾಗಿದ್ದ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ಬೆಂಗಳೂರಿನ ಕಾಟನ್ ಪೇಟೆಯಲ್ಲಿ ನಡೆದಿದೆ.ಲತಾ(40) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಮಹಿಳೆಯ ಪತಿ ಹೋಲ್ ಸೇಲ್ ಬಟ್ಟೆ ವ್ಯಾಪಾರಿಯಾಗಿದ್ದು. ಲತಾ ಅವರ ಮಗಳು ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.ಲತಾ ಅವರು ಮನೆಯಲ್ಲಿ ಒಬ್ಬಂಟಿಯಾಗಿದ್ದ ಸಂದರ್ಭದಲ್ಲಿ ನುಗ್ಗಿದ ದರೋಡೆಕೋರರು ಲತಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಹಂತಕರು ಪರಾರಿಯಾಗಿದ್ದಾರೆ.

ಮಹಿಳೆಯ ಹತ್ಯೆ ಮಾಡಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಗಳು! Read More »

ಬೈಕ್ ಗೆ ಕೆ.ಆರ್.ಟಿ.ಸಿ‌ ಬಸ್ಸು ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಕಡಬದ ಸಮೀಪದ ಹಳೆಸ್ಟೇಷನ್‌ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ಸು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ದಿ. ಶ್ರೀಧರ ಗೌಡ ಎಂಬವರ ಪುತ್ರ ಬಿಶ್ವಜಿತ್(23) ಎಂದು ತಿಳಿದು ಬಂದಿದೆ‌ಯುವಕ ಮರ್ಧಾಳದ ಪಾಲತ್ತಡ್ಕದಲ್ಲಿ ಫ್ಯಾಬ್ರಿಕೇಷನ್ ವೃತ್ತಿ ಮಾಡುತ್ತಿದ್ದು.ಎಂದಿನಂತೆ ಕೆಲಸ ಮುಗಿಸಿ ಮನೆಗೆ ಹೊರಟು ಕಡಬ ಕಡೆ ಬೈಕಿನಲ್ಲಿ ಬರುತ್ತಿದ್ದಾಗ ಹಳೆಸ್ಟೇಷನ್ ಬಳಿ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಒಮ್ಮಿ ಕಾರೊಂದನ್ನು

ಬೈಕ್ ಗೆ ಕೆ.ಆರ್.ಟಿ.ಸಿ‌ ಬಸ್ಸು ಡಿಕ್ಕಿ ಹೊಡೆದು ಬೈಕ್ ಸವಾರ ಸಾವು Read More »

ಬೈಕ್ ಸವಾರನ ಮೇಲೆ‌ ಕಾಡಾನೆ ದಾಳಿ ಮಾಡಿ ಬೈಕ್ ಸವಾರ ಗಂಭೀರ

ಬೈಕ್ ಸವಾರನೋರ್ವನ‌ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೊಳಗಾಮೆ ಬಳಿ ನಡೆದಿದೆ.ಕಾಫಿ ಎಸ್ಟೇಟ್ ನಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದ ಸುಬ್ರಮಣ್ಯ ಎಂಬವರು ಆನೆ ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಕಾಡಾನೆ ದಾಳಿಯಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಕಾಫಿ ಎಸ್ಟೇಟಿಗೆ ಸುಬ್ರಮಣ್ಯ ತೆರಳುತ್ತಿದ್ದ ವೇಳೆ ಏಕಾಏಕಿ ಎದುರಾದ ಕಾಡಾನೆ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬೈಕ್ ಚಲಾಯಿಸುತ್ತಿದ್ದ ಸುಬ್ರಮಣ್ಯ ನೆಲಕ್ಕೆ ಬಿದ್ದಿದ್ದು, ಈ ವೇಳೆ ಸುಬ್ರಮಣ್ಯನ ಹೊಟ್ಟೆಗೆ ಕಾಡಾನೆ ಬಲವಾಗಿ ತಿವಿದಿದೆ.

ಬೈಕ್ ಸವಾರನ ಮೇಲೆ‌ ಕಾಡಾನೆ ದಾಳಿ ಮಾಡಿ ಬೈಕ್ ಸವಾರ ಗಂಭೀರ Read More »

error: Content is protected !!
Scroll to Top