Author name: Tejas

ಸಂಪಾಜೆ : ಮಹಿಳಾ ಗ್ರಾಮ ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ “ಮಹಿಳಾ ಗ್ರಾಮಸಭೆ” ಯು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಇವರ ಅಧ್ಯಕ್ಷತೆಯಲ್ಲಿ ಜರಗಿತು.ಸಭೆಯಲ್ಲಿ “ಮಹಿಳೆ ಮತ್ತು ಕಾನೂನು” ಬಗ್ಗೆ ನ್ಯಾಯವಾದಿ ಲತಾಕುಮಾರಿ ಅವರು ಮಾತನಾಡಿ ಇಂದಿನ ದಿನಗಳಲ್ಲಿ ಮಹಿಳೆಯರಿಗೆ ಆಗುವ ಶೋಷಣೆಯನ್ನು ತಪ್ಪಿಸಲು ಮತ್ತು ಭಯವನ್ನು ಹೋಗಲಾಡಿಸಲು ಕಾನೂನಿನ ಅರಿವು ಹೊಂದಿರಬೇಕು. ಹಲವು ದೌರ್ಜನ್ಯವನ್ನು ತಪ್ಪಿಸಲು ಇಂದಿನ ದಿನಗಳಲ್ಲಿ ಹೊಸ ಹೊಸ ಕಾನೂನನ್ನು ಜಾರಿಗೆ ತರಲಾಗಿರುವ ಬಗ್ಗೆ ಮಾಹಿತಿ ನೀಡಿದರು. ಸಂವಿಧಾನದ 14ನೇ ವಿಧಿಯಲ್ಲಿ ಬರುವ ಸಮಾನತೆಯ ಬಗ್ಗೆ […]

ಸಂಪಾಜೆ : ಮಹಿಳಾ ಗ್ರಾಮ ಸಭೆ Read More »

ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ರಾಯಚೂರು ಮೂಲದ ಕಾರ್ಮಿಕ ಮಹಿಳೆ ಸಾವು

ಪುತ್ತೂರು:ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ರಾಯಚೂರು ಮೂಲದ ಕಾರ್ಮಿಕ ಮಹಿಳೆಯೋರ್ವರು ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪ ನಡೆದಿದೆ.ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೊಮ್ನಾಳ ಗ್ರಾಮದ ಬಸವರಾಜರವರ ಪತ್ನಿ ಗೌರಮ್ಮ(28ವ.)ಮೃತಪಟ್ಟವರು. ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರೆಂಜದಿಂದ ಬಿಲ್ವಗಿರಿ ಮೂಲಕ ಸಂಪರ್ಕ ಕಲ್ಪಿಸುವ ರಸ್ತೆಗೆ ಶಾಸಕರ ರೂ.1 ಕೋಟಿ ಅನುದಾನದಲ್ಲಿ ಕಾಂಕ್ರಿಟೀಕರಣ ಕಾಮಗಾರಿಯು ಕೆಲ ದಿನಗಳಿಂದ ನಡೆಯುತ್ತಿದ್ದು ರಾಯಚೂರು ಮೂಲದ ಒಂದೇ ಕುಟುಂಬದ ಹಲವು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ‌

ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ರಾಯಚೂರು ಮೂಲದ ಕಾರ್ಮಿಕ ಮಹಿಳೆ ಸಾವು Read More »

ಭಾರೀ ಮಳೆ ಸಾಧ್ಯತೆ,ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ!

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳಾದ ದ.ಕ,ಉಡುಪಿ,ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಇಂದಿನಿಂದ (ಮೇ 24) ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಮುಂದಿನ ಎರಡು ದಿನಕ್ಕೆ ಹಾಗೂ ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ‘ರೆಡ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬೀದರ್, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್

ಭಾರೀ ಮಳೆ ಸಾಧ್ಯತೆ,ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ! Read More »

ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು,ಸುಳ್ಯ ನೂತನ ಕಟ್ಟಡ, ಸಂಸ್ಕರಣಾ ಘಟಕ ಹಾಗೂ ಜೇನು ಚಾಕಲೇಟ್ ಲೋಕಾರ್ಪಣೆ

ಸುಳ್ಯ, ಮೇ ೨೩: ರಾಜ್ಯ ಸರಕಾರದಿಂದ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇದರ ಸುಳ್ಯದ ನೂತನ ಕಟ್ಟಡ ಮತ್ತು ಆಧುನಿಕ ಸಂಸ್ಕರಣಾ ಘಟಕ ಹಾಗೂ ಚಾಕಲೇಟ್‌ನ ಲೋಕಾರ್ಪಣೆ ಸಮಾರಂಭ ನಡೆಯಿತು.ಭಾರತ ಸರಕಾರದ ಸೂಕ್ಷö್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಇವತ್ತು ನಾವೆಲ್ಲರೂ ಕೃಷಿಯನ್ನು ಅಲಂಭಿತರಾಗಿರುವವರು. ಇವತ್ತಿಗೂ ಕೂಡ ದೇಶದಲ್ಲಿ ಅತೀ ಹೆಚ್ಚು ಉದ್ಯೋಗ

ದ.ಕ. ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು,ಸುಳ್ಯ ನೂತನ ಕಟ್ಟಡ, ಸಂಸ್ಕರಣಾ ಘಟಕ ಹಾಗೂ ಜೇನು ಚಾಕಲೇಟ್ ಲೋಕಾರ್ಪಣೆ Read More »

ಸಹೋದರನ ಮಗನ ಅಂತ್ಯ ಸಂಸ್ಕಾರ ಕಾರ್ಯಕ್ರಮಕ್ಕೆ ಹೋಗಿ ಹಿಂದಿರುತ್ತಿದ್ದಾಗ ಹ್ರದಯಘಾತದಿಂದ ವ್ಯಕ್ತಿ ಸಾವು

ಕೊಡಗಿನ ಮಾದಾಪುರ ಗ್ರಾಮದಲ್ಲಿ ತನ್ನ ತಮ್ಮನ ಮಗ ಸಾವಿಗೀಡಾದ ಹಿನ್ನಲೆಯಲ್ಲಿ ಅಲ್ಲಿಗೆ ಹೋಗಿ ಊರಿಗೆ ಮರಳುತ್ತಿದ್ದ ವೃದ್ದ ವ್ಯಕ್ತಿ ಕಲ್ಲು ಗುಂಡಿಯಲ್ಲಿ ಹೃದಯಾಘಾತವಾಗಿ ಕಲ್ಲುಗುಂಡಿ ಲ್ಯಾಬಿಗೆ ಕರೆದೊಯ್ಯುತ್ತಿದ್ದ ವೇಳೆ ಅವರು ನಿಧನರಾದ ಘಟನೆ ಶುಕ್ರವಾರ ಸಂಜೆ ನಡೆದಿದೆ.ಮೃತರು ಇಬ್ರಾಹಿಂ (90 ) ಎಂದು ಗುರುತಿಸಲಾಗಿದೆ.ಮೂಲತ: ಕೊಡಗಿನ ಮಾದಾಪುರ ನಿವಾಸಿ. ಆದರೆ ಕಳೆದ ಅನೇಕ ವರ್ಷಗಳಿಂದ ವಿಟ್ಲದಲ್ಲಿ ವಾಸಿಸು ತಿದ್ದರು.ಅವರ ತಮ್ಮನ ಮಗ ಅನಾರೋಗ್ಯದಿಂದ ನಿಧನರಾಗಿದ್ದು ಮಾದಾಪುರದಲ್ಲಿ ಅಂತಿಮ ಸಂಸ್ಕಾರ ಮುಗಿಸಿ ಅವರ ಓರ್ವ ಪುತ್ರ ಅರಂತೋಡಿನಲ್ಲಿರುವ ಹಸೈನಾರ್

ಸಹೋದರನ ಮಗನ ಅಂತ್ಯ ಸಂಸ್ಕಾರ ಕಾರ್ಯಕ್ರಮಕ್ಕೆ ಹೋಗಿ ಹಿಂದಿರುತ್ತಿದ್ದಾಗ ಹ್ರದಯಘಾತದಿಂದ ವ್ಯಕ್ತಿ ಸಾವು Read More »

ಸೂಟ್ ಕೇಸ್ ನಲ್ಲಿ ಯುವತಿಯ ಶವ ಪತ್ತೆ

ಬೆಂಗಳೂರು ಆನೇಕಲ್ ತಾಲೂಕಿನ ಹಳೆ ಚಂದಾಪುರದ ಬಳಿ ನೀಲಿ ಬಣ್ಣದ ಸೂಟ್ ಕೇಸ್‌ನಲ್ಲಿ ಯುವತಿಯ ಶವ ಪತ್ತೆಯಾಗಿದೆ.ಹೊಸೂರು- ಬೆಂಗಳೂರು ಹೈವೇಗೆ ಹೊಂದಿಕೊಂಡಿರುವ ರೈಲ್ವೇ ಬ್ರಿಡ್ಜ್ ಬಳಿ ಸುಮಾರು 18 ವರ್ಷ ವಯಸ್ಸಿನ ಯುವತಿಯ ಶವ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ.ಯುವತಿ ಗುಲಾಬಿ ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ ಧರಿಸಿದ್ದು, ಕೈ ಕಾಲುಗಳನ್ನು ಮಡಚಿ ಇಡೀ ದೇಹವನ್ನು ತುಂಬಲಾಗಿದೆ.

ಸೂಟ್ ಕೇಸ್ ನಲ್ಲಿ ಯುವತಿಯ ಶವ ಪತ್ತೆ Read More »

ಸುಳ್ಯ: ಕೇಶವಕೃಪಾ ವೇದ-ಯೋಗ-ಕಲಾ ಶಿಬಿರ ಸಮರೋಪ,ಸಂಸ್ಕಾರದಿಂದ ನೆಮ್ಮದಿ: ಸುಬ್ರಹ್ಮಣ್ಯ ಶ್ರೀ

ಸುಳ್ಯ : ದೊಡ್ಡ ಮನೆ, ಹೈ-ಫೈ ಜೀವನ ಇರಬಹುದು ಆದರೆ ಅಂತಹ ಜೀವನ ಸಂಸ್ಕೃತಿಯಲ್ಲಿ ನೆಮ್ಮದಿ, ಪ್ರೀತಿ ಇರುವುದಿಲ್ಲ. ನೆಮ್ಮದಿ, ಸಂಸ್ಕೃತಿಯ ಜೀವನ ಇರುವುದು ಧರ್ಮ, ಸಂಸ್ಕಾರ ಕಾಪಾಡಿಕೊಂಡಿರುವ ಕುಟುಂಬದಲ್ಲಿ ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು.ಅವರು ಸುಳ್ಯ ಶಿವಕೃಪಾ ಕಲಾಮಂದಿರದಲ್ಲಿ ಸುಳ್ಯ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ವತಿಯಿಂದ ನಡೆಯುತ್ತಿರುವ ಶ್ರೀ ಕೇಶವಕೃಪಾ ವೇದ-ಯೋಗ-ಕಲಾ ಶಿಬಿರದ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.ನಿವೃತ್ತ ಅಧ್ಯಾಪಕ ರಾಮಕೃಷ್ಣ

ಸುಳ್ಯ: ಕೇಶವಕೃಪಾ ವೇದ-ಯೋಗ-ಕಲಾ ಶಿಬಿರ ಸಮರೋಪ,ಸಂಸ್ಕಾರದಿಂದ ನೆಮ್ಮದಿ: ಸುಬ್ರಹ್ಮಣ್ಯ ಶ್ರೀ Read More »

ಕುಕ್ಕೆ ದೇವಳದ ನೂತನ ವ್ಯವಸ್ಥಾಪನಾ ಅಧ್ಯಕ್ಷರಿಗೆ ಸನ್ಮಾನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ನೂತನ ಅಧ್ಯಕ್ಷರಾದ ಹರೀಶ್ ಇಂಜಾಡಿ ಮತ್ತು ಸದಸ್ಯರನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಯ ಅಧ್ಯಕ್ಷರಾದ ಸದಾನಂದ ಮಾವಜಿ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ. ಎಸ್. ಗಂಗಾಧರ, ನಿರ್ದೇಶಕರಾದ ಸುರೇಶ ಎಂ. ಹೆಚ್. ಮತ್ತು ಬೆಳ್ಯಪ್ಪ ಗೌಡ ಬಳ್ಳಡ್ಕ ಮೇ 21ರಂದು ಸುಬ್ರಹ್ಮಣ್ಯ ದೇವಸ್ಥಾನದ ಕಚೇರಿಯಲ್ಲಿ ಹೂ ಗುಚ್ಚ ನೀಡಿ ಗೌರವಿಸಲಾಯಿತು.

ಕುಕ್ಕೆ ದೇವಳದ ನೂತನ ವ್ಯವಸ್ಥಾಪನಾ ಅಧ್ಯಕ್ಷರಿಗೆ ಸನ್ಮಾನ Read More »

ಆರಂತೋಡು : ಗ್ರಾಮ ಪಂಚಾಯತ್ ನ ಎನ್. ಆರ್. ಎಲ್. ಎಂ ನೂತನ ಕಟ್ಟಡಕ್ಕೆ ಸುಳ್ಯ ಶಾಸಕರಿಂದ ಗುದ್ದಲಿ ಪೂಜೆ

ಅರಂತೋಡು, ಮೇ .21 : ಆರಂತೋಡು ಗ್ರಾಮ ಪಂಚಾಯತ್ ನ ಎನ್.ಆರ್. ಎಲ್. ಎಂ. ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಕುl ಭಾಗಿರಥಿ ಮುರುಳ್ಯ ರವರು ನೆರವೇಸಿದರು.ಅವರು ಮಾತನಾಡಿ ಆರಂತೋಡು ಗ್ರಾಮ ಪಂಚಾಯತ್ ನ ಸಭಾಂಗಣಕ್ಕೆ ಅವಶ್ಯಕತೆ ಇರುವ ಪಾಕ ಶಾಲೆ ನಿರ್ಮಾಣಕ್ಕೆ ರೂ 5ಲಕ್ಷ ಅನುದಾನದ ಭರವಸೆ ಯೊಂದಿಗೆ ಆರಂತೋಡು ಗ್ರಾಮಕ್ಕೆ ಬಿಡುಗಡೆಯಾದ ಅನುದಾನಗಳ ಮಾಹಿತಿ ನೀಡಿದರು. ಅರಮನೆಗಯಾದ ಬಳಿ ಬಲ್ನಾಡ್ ಹೊಳೆಗೆ ಸೇತುವೆ ನಿರ್ಮಾಣಕ್ಕೆ 1.75ಕೋಟಿ

ಆರಂತೋಡು : ಗ್ರಾಮ ಪಂಚಾಯತ್ ನ ಎನ್. ಆರ್. ಎಲ್. ಎಂ ನೂತನ ಕಟ್ಟಡಕ್ಕೆ ಸುಳ್ಯ ಶಾಸಕರಿಂದ ಗುದ್ದಲಿ ಪೂಜೆ Read More »

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸೇರಿದ ತುಮಕೂರಿನ ಸಿದ್ದಾರ್ಥ ಕಾಲೇಜಿನ ಮೇಲೆ ಇಡಿ ಅಧಿಕಾರಿಗಳು ದಾಳಿ

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸೇರಿದ ತುಮಕೂರಿನ ಸಿದ್ದಾರ್ಥ ಕಾಲೇಜಿನ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಮುಂಜಾನೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 5 ಕಾರುಗಳಲ್ಲಿ ಆಗಮಿಸಿದ್ದು, ಕಾಲೇಜಿನ​​ ಕಚೇರಿಗೆ ತೆರಳಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.ತುಮಕೂರಿನಲ್ಲಿರುವ ಎಸ್ ಎಸ್ ಐಟಿ ಕಾಲೇಜು ಹಾಗೂ ತುಮಕೂರಿನ ಹೆಗ್ಗೆರೆ ಬಳಿಯಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸೇರಿದ ತುಮಕೂರಿನ ಸಿದ್ದಾರ್ಥ ಕಾಲೇಜಿನ ಮೇಲೆ ಇಡಿ ಅಧಿಕಾರಿಗಳು ದಾಳಿ Read More »

error: Content is protected !!
Scroll to Top