ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾ ಕಚೇರಿಯಲ್ಲಿ ನವರಾತ್ರಿ ಪ್ರಯಕ್ತ ಆಯುಧ ಪೂಜಾ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾ ಕಚೇರಿಯಲ್ಲಿ ನವರಾತ್ರಿ ಪ್ರಯಕ್ತ ಗಣಪತಿ ಹವನ,ಲಕ್ಷ್ಮಿಪೂಜೆ,ಆಯುಧ ಪೂಜೆ ಸೆ.28ರಂದ ನಡೆಯಿತು.ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಲೋಕನಾಥ ಅಮೆಚೂರು ದೀಪ ಬೆಳಗಿಸಿ ಆಯುಧ ಪೂಜೆಯ ಔಚಿತ್ಯದ ಬಗ್ಗೆ ಮಾತನಾಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ, ಕೇಂದ್ರ ಕಚೇರಿಯ ಯೋಜನಾ ನಿರ್ದೇಶಕ ಪದ್ಮಯ್ಯ ಸಿ.ಎಚ್. ಪದ್ಮಶ್ರೀ ಪುರಸ್ಕೃತರಾದ ಡಾ.ಗಿರೀಶ್ ಭಾರದ್ವಾಜ್, ಸುಳ್ಯ ಯೋಜನಾ ಕಚೇರಿಯ ಯೋಜನಾಧಿಕಾರಿ ಮಾದವ […]










