Author name: Tejas

ಅಡ್ತಲೆ ಪರಿಸರದಲ್ಲಿ ಕಾಡಾನೆಗಳಿಂದ ಮತ್ತೆ ಅಪಾರ ಕೃಷಿ ನಾಶ

ಕಳೆದ ಹಲವು ತಿಂಗಳುಗಳಿಂದ ಅಡ್ತಲೆ ಪರಿಸರದಲ್ಲಿ ರೈತರ ತೋಟಗಳಿಗೆ ನಿರಂತರ ಕಾಡಾನೆಗಳು ದಾಳಿ ಮಾಡುತ್ತಿದ್ದು ಸೆ.27ರ ರಾತ್ರಿ ಮತ್ತೆ ಕಾಡಾನೆಗಳು ತೋಟಗಳಿಗೆ ಮಾಡಿ ಬೆಳೆ ನಾಶ ಮಾಡಿದ ಘಟನೆ ವರದಿಯಾಗಿದೆ. ಪ್ರದೀಪ್ ಅಡ್ತಲೆ, ಪ್ರಭಾಕರ ಅಡ್ತ ಲೆ ಅವರ ತೋಟಗಳಿಗೆ ದಾಳಿ ಮಾಡಿದ ಕಾಡಾನೆಗಳು ಅಪಾರ ಪ್ರಮಾಣದ ತೆಂಗಿನಮರ,, ಬಾಳೆ, ಅಡಿಕೆ ಮರಗಳನ್ನು ಎಳೆದು ಹಾಕಿ ನಾಶ ಮಾಡಿವೆ. ಅಡ್ತಲೆ ಉಳ್ಳಾಕುಲು ಚಾವಡಿ ಹತ್ತಿರ ಕಾಡಾನೆಗಳು ಬಂದಿದ್ದು ಇನ್ನು ಒಂದು ಹೆಜ್ಜೆ ಇಟ್ಟರೆ ಜನವಸತಿ ಇರುವ ಅನೇಕ […]

ಅಡ್ತಲೆ ಪರಿಸರದಲ್ಲಿ ಕಾಡಾನೆಗಳಿಂದ ಮತ್ತೆ ಅಪಾರ ಕೃಷಿ ನಾಶ Read More »

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಹಾಗೂ ಪೊಲೀಸ್ ಇಲಾಖೆ, ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮವು ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಬೂಮರೆಡ್ಡಿ ಮಾತನಾಡಿ ‘ನಮ್ಮ ದೇಶ ಅತ್ಯಂತ ಹೆಚ್ಚು ಯುವಜನತೆಯನ್ನು ಹೊಂದಿದ್ದು, ಯುವಶಕ್ತಿಯನ್ನು ಸಮರ್ಥವಾಗಿ ಬಳಸಿಕೊಂಡರೆ ದೇಶದ ಅಭಿವೃದ್ಧಿ ಸಾಧ್ಯ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ Read More »

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವ ಕಾರ್ಯಕ್ರಮ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ಪ್ರಯುಕ್ತ “ನಿರಂಜನ ಬದುಕು – ಬರಹ: ನೆನಪು” ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹಾಗೂ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಕೆನರಾ ಬ್ಯಾಂಕಿನ ನಿವೃತ್ತ ಜನರಲ್ ಮ್ಯಾನೇಜರ್ ವೆಂಕಟೇಶ್ ಕೆ ಪ್ರಭು ಅವರು ಉದ್ಘಾಟಿಸಿ ಸಾಹಿತ್ಯ ಕ್ಷೇತ್ರದ ಮೂಲಕ ಸುಳ್ಯವನ್ನು ಜಗತ್ತಿಗೆ ಪರಿಚಯಿಸಿದನ್ನು, ಅವರ ಮನೆಯವರಿಗೂ ನಿರಂಜನರಿಗೂ ಇದ್ದ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಖ್ಯಾತ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವ ಕಾರ್ಯಕ್ರಮ Read More »

ನ.೫ಕ್ಕೆ ನಿಡ್ವಾಳ ಮಹಾವಿಷ್ಣು ದೇವಳದಲ್ಲಿ ಶ್ರೀ ಮಹಾವಿಷ್ಣು ಮಹಾಯಾಗ

ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದ ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನ.೫ರಂದು ಶ್ರೀ ಮಹಾವಿಷ್ಣು ಮಹಾಯಾಗ ನಡೆಯಲಿದೆ ಎಂದು ಶ್ರೀ ಮಹಾವಿಷ್ಣು ಮಹಾಯಾಗದ ಸಮಿತಿ ಸಂಚಾಲಕ ವಿ.ಜೆ ವಿಖ್ಯಾತ್ ಸುಳ್ಯ ತಿಳಿಸಿದರು.ಅವರು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರೃಷಿ ಪರಂಪರೆಯ, ಸನಾತನ ಹಿಂದೂ ಧರ್ಮದ ಉಳಿವಿಗಾಗಿ ಮತ್ತು ಲೋಕಕಲ್ಯಾಣಾರ್ಥವಾಗಿ ಹಾಗೂ ೨೦೨೬ನೇ ಎಪ್ರಿಲ್ ತಿಂಗಳಲ್ಲಿ ಶ್ರೀ ಮಹಾವಿಷ್ಣು ದೇವಸ್ಥಾನ ನಿಡ್ವಾಳ ಕರಿಕಳ ಇದರ ನೂತನ ದೇವಾಲಯದ ಲೋಕಾರ್ಪಣೆಯ ಪೂರ್ವಭಾವಿಯಾಗಿ ಕಾತಿಕ ಮಾಸ ಹುಣ್ಣಿಮೆಯ ನ.೫ರಂದು ಬೆಳಗ್ಗೆಯಿಂದ

ನ.೫ಕ್ಕೆ ನಿಡ್ವಾಳ ಮಹಾವಿಷ್ಣು ದೇವಳದಲ್ಲಿ ಶ್ರೀ ಮಹಾವಿಷ್ಣು ಮಹಾಯಾಗ Read More »

ಕೊಲ್ಲಮೊಗ್ರ ಗ್ರಾ.ಪಂ.ನ ಸೊತ್ತುಗಳ ಕಳವು: ಉಪಾಧ್ಯಕ್ಷ ಮಾಧವ ಚಾಂತಳ ವಿರುದ್ಧ ಪ್ರಕರಣ ದಾಖಲು

ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಸೊತ್ತುಗಳು ಕಳವಾಗಿದ್ದು ಈ ಬಗ್ಗೆ ಪಂಚಾಯತ್ ನ ಉಪಾಧ್ಯಕ್ಷರ ಮೇಲೆ ಶಂಕೆ ವ್ಯಕ್ತಪಡಿಸಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಲಾಗಿದ್ದು ಪ್ರಕರಣ ದಾಖಲಾಗಿದೆ.ಗ್ರಾಮ ಪಂಚಾಯತ್ ಪಿಡಿಒ ದೂರು ನೀಡಿದ್ದು, ಸೆ.25ರಂದು ಗ್ರಾಮ ಪಂಚಾಯತ್ ಚರಾಸ್ಥಿಗಳನ್ನು ಪರಿಶೀಲನೆ ಮಾಡುವಾಗ ಪಂಚಾಯತ್ ನ ಚರಾಸ್ಥಿಗಳಾದ ಹೆಡ್ಫೋನ್, ಧ್ವನಿವರ್ಧಕ ಸ್ಟ್ಯಾಂಡ್, ಮೈಕ್ ಸೆಟ್, ಸಿಸಿ ಕೆಮರಾಗಳು ಕಳವು ಆಗಿರುವುದು ಗಮನಕ್ಕೆ ಬಂದಿದ್ದು, ಕಳವಾದ ಸೊತ್ತುಗಳ ಮೌಲ್ಯ ಹತ್ತು ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ. ಕಳವಾದ

ಕೊಲ್ಲಮೊಗ್ರ ಗ್ರಾ.ಪಂ.ನ ಸೊತ್ತುಗಳ ಕಳವು: ಉಪಾಧ್ಯಕ್ಷ ಮಾಧವ ಚಾಂತಳ ವಿರುದ್ಧ ಪ್ರಕರಣ ದಾಖಲು Read More »

ರಾಜ್ಯದ ರಸ್ತೆಗಳ ಗುಂಡಿ ಮುಚ್ಚಲು ರಾಜ್ಯ ಸರಕಾರ ಅನುದಾನ ನೀಡುತ್ತಿಲ್ಲ : ಬಿಜೆಪಿ ಸುಳ್ಯ ಮಂಡಲ ವತಿಯಿಂದ ಪ್ರತಿಭಟನೆ

ಮಳೆಯಿಂದಾಗಿ ಕೆಟ್ಟು ಹೋಗಿರುವ ರಾಜ್ಯದ ರಸ್ತೆಗಳ ಗುಂಡಿ ಮುಚ್ಚಲು ಕೂಡ ಅನುದಾನ ನೀಡದ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಇಂದು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ವತಿಯಿಂದ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಕಾಣಿಯೂರಿನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುಳ್ಯ ಶಾಸಕಿ ಕುಮಾರಿ ಭಾಗಿರತಿ ಮುರುಳ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡಂಜಿ, ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಕಂದಡ್ಕ, ರಾಜ್ಯ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಕೇವಲ ಹಗರಣಗಳಲ್ಲಿ ಮುಳುಗಿರುವ

ರಾಜ್ಯದ ರಸ್ತೆಗಳ ಗುಂಡಿ ಮುಚ್ಚಲು ರಾಜ್ಯ ಸರಕಾರ ಅನುದಾನ ನೀಡುತ್ತಿಲ್ಲ : ಬಿಜೆಪಿ ಸುಳ್ಯ ಮಂಡಲ ವತಿಯಿಂದ ಪ್ರತಿಭಟನೆ Read More »

ಸಂಪಾಜೆ ಪಯಸ್ವಿನಿ ಪ್ರಾ.ಕೃ.ಪ.ಸಹಕಾರ ಸಂಘಕ್ಕೆ ಸ್ಕ್ಯಾಡ್ಸ್ ನ ಸಮಗ್ರ ಪ್ರಶಸ್ತಿ

ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ದ.ಕ ಕೃಷಿ ಅಭಿವೃದ್ಧಿ ಸಹಕಾರ ಸಂಘ ಕೊಡಮಾಡುವ ,ಕೃಷಿ ಯಂತ್ರೋಪಕರಣಗಳ ಮಾರಾಟ ಮತ್ತು ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಸಮಗ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಇಂದು ಮಂಗಳೂರಿನಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಸ್ಕ್ಯಾಡ್ಸ್ ಅದ್ಯಕ್ಷರಾದ ಶ್ರೀ ರವೀಂದ್ರ ಕಂಬಳಿ ಮತ್ತು ನಿರ್ದೇಶಕರಾದ ಶ್ರೀ. ರವಿ ಬಸಪ್ಪ ರವರು ಪಯಸ್ವಿನಿ ಪ್ರಾ.ಕೃ.ಪ.ಸ.ಸಂಘದ ಅದ್ಯಕ್ಷರು ಶ್ರೀ. ಯನ್.ಸಿ.ಅನಂತ್ ಊರುಬೈಲು ಮತ್ತು ಸಿ ಇ ಒ ಶ್ರೀ. ಬಿ.ಕೆ.ಆನಂದ ರವರಿಗೆ ಪ್ರಶಸ್ತಿ

ಸಂಪಾಜೆ ಪಯಸ್ವಿನಿ ಪ್ರಾ.ಕೃ.ಪ.ಸಹಕಾರ ಸಂಘಕ್ಕೆ ಸ್ಕ್ಯಾಡ್ಸ್ ನ ಸಮಗ್ರ ಪ್ರಶಸ್ತಿ Read More »

ಮಂಡೆಕೋಲು ಸಹಕಾರಿ‌ ಸಂಘಕ್ಕೆ ಸ್ಕ್ಯಾಡ್ಸ್ ಜಿಲ್ಲಾ ಸಮಗ್ರ ಪ್ರಶಸ್ತಿ

ದಕ್ಷಿಣ ಕನ್ನಡ ಕೃಷಿ ಅಭಿವೃದ್ದಿ ಸಹಕಾರಿ ಸಂಘದ ವತಿಯಿಂದ ಕೊಡಮಾಡುವ ಸ್ಕ್ಯಾಡ್ಸ್ ಜಿಲ್ಲಾ ಸಮಗ್ರ ಪ್ರಶಸ್ತಿಗೆ ಮಂಡೆಕೋಲು ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘ ಭಾಜನವಾಗಿದ್ದು, ಸೆ.25ರಂದು ನಡೆದ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು.ಕಳೆದ ಏಳು ವರ್ಷದಿಂದ ಸ್ಕ್ಯಾಡ್ಸ್ ಜೊತೆಗಿನ ವ್ಯವಹಾರಕ್ಕಾಗಿ ಮಂಡೆಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ.ಈ ವರ್ಷ ವಿಶೇಷವಾಗಿ ಸಂಸ್ಥೆಯು ಜಿಲ್ಲೆಯ ಸಮಗ್ರ ಪ್ರಶಸ್ತಿಯನ್ನು ಪಡಕೊಂಡಿದೆ.

ಮಂಡೆಕೋಲು ಸಹಕಾರಿ‌ ಸಂಘಕ್ಕೆ ಸ್ಕ್ಯಾಡ್ಸ್ ಜಿಲ್ಲಾ ಸಮಗ್ರ ಪ್ರಶಸ್ತಿ Read More »

ಪೆರಾಜೆ,ಸಂಪಾಜೆ ಭಾಗಗಳಲ್ಲಿ ಕಾಡಾನೆಗಳಿಂದ ಹೆಚ್ಚಿದ ಸಮಸ್ಯೆ, ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕಿ ಭಾಗೀರಥಿ ಮುರುಳ್ಯ

ಪೆರಾಜೆ, ಸಂಪಾಜೆ, ಅರಂಬೂರು ಸೇರಿದಂತೆ ಸುಳ್ಯ ತಾಲೂಕಿನಾದ್ಯಂತ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಕಾಡಾನೆಗಳಿಂದ ಬೆಳೆ ನಾಶವಾಗುತ್ತಿದ್ದು ಈ ಹಿನ್ನಲೆಯಲ್ಲಿ ಆನೆ ಹಾವಳಿ ಸಮಸ್ಯೆ ಕುರಿತು ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್‌ನ ಶಾಸಕರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸೆ.25 ರಂದು ಸಭೆ ನಡೆಸಿ ಚರ್ಚಿಸಲಾಯಿತು.ತಾಲೂಕಿನಾದ್ಯಂತ ಕಾಡಾನೆ ಉಪಟಳ ಹೆಚ್ಚಾಗಿದ್ದು ಕೃಷಿಯನ್ನು ಹಾಳು ಸಂಪೂರ್ಣ ಹಾಳುಮಾಡುತ್ತಿದೆ. ಇದರಿಂದ ಕೃಷಿಯನ್ನು ಅವಲಂಬಿಸಿದ ಕೃಷಿಕರು ಸಮಸ್ಯೆಗೆ ಪಾಲಾಗಿದ್ದಾರೆ. ಹಾಗೂ. ಪೂಮಲೆ ಕಾಡಿನಿಂದ ಬರುವ ಆನೆಗಳ ಹಿಂಡು ರಸ್ತೆಯ ಮುಖಾಂತರ ಕೃಷಿಕರ ತೋಟಗಳಿಗೆ ನುಗ್ಗಿ

ಪೆರಾಜೆ,ಸಂಪಾಜೆ ಭಾಗಗಳಲ್ಲಿ ಕಾಡಾನೆಗಳಿಂದ ಹೆಚ್ಚಿದ ಸಮಸ್ಯೆ, ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕಿ ಭಾಗೀರಥಿ ಮುರುಳ್ಯ Read More »

ಅಜ್ಜಾವರ : ಚೈತನ್ಯ ಸೇವಾಶ್ರಮದಲ್ಲಿ ನವರಾತ್ರಿ ಪ್ರಯುಕ್ತ ದುರ್ಗಾಪೂಜೆ ಸಹಿತ ವಿವಿಧ ಕಾರ್ಯಕ್ರಮ

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ನವರಾತ್ರಿ ಪ್ರಯುಕ್ತ ಗಣಹೋಮ,ದುರ್ಗಾಪೂಜೆ,ಭಜನಾ‌ ಸತ್ಸಂಗ ಕಾರ್ಯಕ್ರಮ ಹಾಗೂ ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 230ನೇ ಕೃತಿಮಾಲೆ ಜೀವನ್ಮುಕ್ತನಾಗು ಬಿಡುಗಡೆ ಸಮಾರಂಭ ನಡೆಯಿತು.ಸುಳ್ಯ ಕೆ.ವಿ.ಜಿ ಕಾನೂನು ಕಾಲೇಜಿನ‌ ಉಪನ್ಯಾಸಕಿ ಸವಿತ ಸ್ವಾಮೀಜಿಯವರ ಕೃತಿಮಾಲೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ಸ್ವಾಮೀಜಿಯರು ಪುಸ್ತಕ ಬರೆದು ಉಚಿತವಾಗಿ ವಿತರಣೆ ಮಾಡುತ್ತಿರುವುದು ಶ್ರೇಷ್ಠ ಕೆಲಸವಾಗಿದೆ.ಇವರ ಸರಳ ಬರಣಿಗೆ ಸುಲಭವಾಗಿ ಅರ್ಥವಾಡಿಕೊಂಡು ಓದಬಹುದಾಗಿದೆ.ಎಲ್ಲರೂ ಪುಸ್ತಕಕೊಂಡು ಓದಿ ಎಂದು ಹೇಳಿದರು.ಸ್ವಾಮೀಜಿಯವರು ನವರಾತ್ರಿಯ ವಿಶೇಷತೆಯ ಬಗ್ಗೆ ತಿಳಿಸಿದರು.ವೇಣುಗೋಪಾಲ ಅಡೂರು,ಚಿತ್ರಕುಮಾರ ಮುಡೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.ಡಾ.ಸಾಯಿಗೀತಾ,ಶಿಕ್ಷಕಿ

ಅಜ್ಜಾವರ : ಚೈತನ್ಯ ಸೇವಾಶ್ರಮದಲ್ಲಿ ನವರಾತ್ರಿ ಪ್ರಯುಕ್ತ ದುರ್ಗಾಪೂಜೆ ಸಹಿತ ವಿವಿಧ ಕಾರ್ಯಕ್ರಮ Read More »

error: Content is protected !!
Scroll to Top