Author name: Tejas

ಆರ್.ಎಸ್.ಎಸ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು? ಇಲ್ಲಿದೆ ಮಾಹಿತಿ ಓದಿ

ಜನ್ಮ ನೀಡಿದ ರಾಷ್ಟ್ರವೇ ಮೊದಲು’ ಮತ್ತು “ಜನ ಸೇವೆಯೇ ಜನಾರ್ದನ ಸೇವೆ’ ಎಂಬುದನ್ನು ನನಗೆ ಆರ್‌ಎಸ್‌ಎಸ್‌ ಕಲಿಸಿಕೊಟ್ಟಿತು. ಹೀಗಾಗಿ ನನ್ನ ಬದುಕಿನ ಮೂಲ ಉದ್ದೇಶವನ್ನು ಕಲಿಸಿದ್ದು ಆರ್‌ಎಸ್ಎಸ್‌ ಎಂದು ನಾನು ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಅವರು ಅಮೆರಿಕದ ಪಾಡ್‌ಕಾಸ್ಟರ್, ಎ.ಐ. ಸಂಶೋಧಕ ಲೆಕ್ಸ್ ಫ್ರಿಡ್ಮಿನ್ ಜತೆಗಿನ 3 ಗಂಟೆಗಳ ಸುದೀರ್ಘ ಸಂವಾದದಲ್ಲಿ ಮೋದಿ ತಮ್ಮ ಬಾಲ್ಯದಿಂದ ಪ್ರಧಾನಿಯಾಗುವವರೆಗಿನ ಏಳುಬೀಳಿನ ಜೀವನ ಚರಿತ್ರೆಯನ್ನು ಮೋದಿ ಹಂಚಿಕೊಂಡಿದ್ದಾರೆ. ನಮ್ಮ ಹಳ್ಳಿಯಲ್ಲಿ ಆರೆಸ್ಸೆಸ್‌ನ 1 ಶಾಖೆಯಿತ್ತು. […]

ಆರ್.ಎಸ್.ಎಸ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು? ಇಲ್ಲಿದೆ ಮಾಹಿತಿ ಓದಿ Read More »

ದೈವರಾಧನೆ ಸಾಮರಸ್ಯದ ಸಂಕೇತ : ನಳೀನ್ ಕುಮಾರ್ ಕಟೀಲ್

ತುಳುನಾಡಿನಲ್ಲಿ ಹಿರಿಯರು ನಂಬಿಕೊಂಡು ಬಂದಿರುವಂತಹ ದೈವಾರಾಧನೆ ಸಾಮರಸ್ಯದ ಸಂಕೇತ ತವಾಗಿದೆ.ದೈವರಾಧನೆ,ನಾಗಾರಾಧನೆ ಇಲ್ಲಿನ ವಿಶೇಷತೆ. ದೈವಾರಾಧನೆಯಿಂದ ಎಲ್ಲರನ್ನು ಒಗ್ಗೂಡಿಸಲುಸಾಧ್ಯ.ದೈವಾರಾಧನೆಯ ಪಾಡ್ಡನಗಳಿಂದ ತುಳು ಸಂಸ್ಕೃತಿ,ಆಚಾರ,ವಿಚಾರ,ಪರಂಪರೆಗಳು ಉಳಿದಿದೆ” ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.ಮಾ.15 ರಂದು ಸುಳ್ಯ ಬೂಡು ಪರಿಸರದ ಸತ್ಯಪದಿನಾಜಿ,ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯ ಸಮಾರೋಪ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ

ದೈವರಾಧನೆ ಸಾಮರಸ್ಯದ ಸಂಕೇತ : ನಳೀನ್ ಕುಮಾರ್ ಕಟೀಲ್ Read More »

ಅರಂತೋಡು : ಶ್ರೀ ದುರ್ಗಾ ಗೆಳೆಯರ ಬಳಗ ವತಿಯಿಂದ ಹೊನಲು ಬೆಳಕಿನ ಹಗ್ಗ ಜಗ್ಗಾಟ ಸ್ಪರ್ಧೆ

ಅರಂತೋಡು ಶ್ರೀ ದುರ್ಗಾ ಗೆಳೆಯರ ಬಳಗ ವತಿಯಿಂದ ಮಹಿಳೆಯರ ಮತ್ತು ಪುರುಷರ ಹೊನಲು ಬೆಳಕಿನ ಹಗ್ಗ ಜಗ್ಗಾಟ ಅರಂತೋಡು ತೋಟಂಪಾಡಿ ಶ್ರೀ ಉಳ್ಳಾಕುಳು ದೈವಸ್ಥಾನ ವಠಾರ ದಲ್ಲಿ ಮಾ.16 ರಂದು ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ದುರ್ಗಾ ಗೆಳೆಯರ ಬಳಗ ಅಧ್ಯಕ್ಷ ಲಿಖಿನ್ ಕಳುಬೈಲು ವಹಿಸಿದರು.ಪಂದ್ಯಾಟದ ಉದ್ಘಾಟನೆಯನ್ನು ತೋಟಂ ಶ್ರೀ ಉಳ್ಳಾ ಕುಳು ದೈವಸ್ಥಾನ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಎಲ್ಲ ಊರಿನ ಆಟ ಗಾರರು ನಮ್ಮ ಗ್ರಾಮೀಣ ಪ್ರದೇಶದಲ್ಲಿ ಎಲ್ಲರನ್ನೂ

ಅರಂತೋಡು : ಶ್ರೀ ದುರ್ಗಾ ಗೆಳೆಯರ ಬಳಗ ವತಿಯಿಂದ ಹೊನಲು ಬೆಳಕಿನ ಹಗ್ಗ ಜಗ್ಗಾಟ ಸ್ಪರ್ಧೆ Read More »

ಅರಂತೋಡು : ಬೈಕ್ ಬೈಕ್ ಡಿಕ್ಕಿ ಸವಾರರಿಗೆ ಗಾಯ,ಓರ್ವನ ಹೆಬ್ಬೆರುಳು ತುಂಡಾಗಿ ರಸ್ತೆಗೆ ಬಿತ್ತು.

ಅರಂತೋಡು ಮುಖ್ಯ ರಸ್ತೆಯಲ್ಲಿ ತೊಡಿಕಾನ ತಿರುವು ರಸ್ತೆ ಸಮೀಪ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಎರಡು ಮುಖಾಮುಖಿ ಯಾಗಿ ಡಿಕ್ಕಿ ಹೊಡೆದು ಮೂರು ಬೈಕ್ ಸವಾರರು ಗಾಯ ಗೊಂಡು ಸುಳ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ..ಒಬ್ಬ ಸವಾರ ನ ಕಾಲಿನ ಹೆಬ್ಬೆರಳು ತುಂಡು ಆಗಿ ರಸ್ತೆಯಲ್ಲಿ ಬಿದ್ದು ಕೊಂಡಿತು .ಹೆಚ್ಚಿನ ಮಾಹಿತಿ ತಿಳಿದು ಬರಬೇಕಷ್ಟೆ.ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು.

ಅರಂತೋಡು : ಬೈಕ್ ಬೈಕ್ ಡಿಕ್ಕಿ ಸವಾರರಿಗೆ ಗಾಯ,ಓರ್ವನ ಹೆಬ್ಬೆರುಳು ತುಂಡಾಗಿ ರಸ್ತೆಗೆ ಬಿತ್ತು. Read More »

ಕಾರ್ ಹಾಗೂ ಲಾರಿ ನಡುವೆ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮಿರಜ್ ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಸಿದ್ದಾಪುರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕಾರ ನಡುವೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಒಂದು ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಅಪಘಾತದಲ್ಲಿ ಕಾರ್ ನಲ್ಲಿದ 3 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಸ್ಥಳಕ್ಕೆ ಅಂಕಲಿ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಕಾರ್ ಹಾಗೂ ಲಾರಿ ನಡುವೆ ಅಪಘಾತ: ಮೂವರು ಸ್ಥಳದಲ್ಲೇ ಸಾವು Read More »

ಶ್ರತಿ ವಿಸ್ಮಿತ್ ಗೌಡ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಸಮಾಜ ಕಲ್ಯಾಣ ಸಂಸ್ಥೆ ಹಾಗೂ ವಿಶ್ವ ಕನ್ನಡ ಜಾನಪದ ಪರಿಷತ್ ಬೆಂಗಳೂರು ಇದರ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯಕ್ಷಗಾನ ಕ್ಷೇತ್ರದ ಸಾಧನೆಗಾಗಿ ನೀಡುವ ರಾಷ್ಟ್ರೀಯ ವೀರವನಿತೆ ಯಕ್ಷಗಾನ ನೃತ್ಯ ಕಲಾ ರತ್ನ ಪ್ರಶಸ್ತಿಗೆ ತುಳು ಹಾಗೂ ಕನ್ನಡ ಭಾಷೆಯ ಯಕ್ಷಗಾನ ಕಲಾವಿದೆ ಹಾಗೂ ತಾಳಮದ್ದಳೆಯಲ್ಲಿಯೂ ಸಾಧನೆ ಮಾಡಿದ ಬಲ್ನಾಡಿನ ಶ್ರುತಿ ವಿಸ್ಮಿತ್ ಆಯ್ಕೆಯಾಗಿದ್ದಾರೆ. ಎ.೬ರಂದು ಬೆಂಗಳೂರಿನ ಅಕ್ಕಮಹಾದೇವಿ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಇವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಶ್ರತಿ ವಿಸ್ಮಿತ್ ಗೌಡ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ Read More »

ಎಡಮಂಗಲ : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಕಡಬ ತಾಲೂಕಿನ ಎಡಮಂಗಲ ಮರ್ದೂರಡ್ಕ ಎಂಬಲ್ಲಿ ವಿಶ್ವನಾಥ ಎಂಬವರು ರೈಲು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಸೋಮವಾರ ವರದಿಯಾಗಿದೆ.ವಿಶ್ವನಾಥರು ಸ್ಥಳೀಯ ನಿವಾಸಿಯಾಗಿದ್ದು ರೈಲ್ವೆ ಟ್ರ್ಯಾಕ್ ಮೊಬೈಲ್ ಹಿಡಿದುಕೊಂಡು ಕುಳಿತ್ತಿದ್ದರು.ರಾತ್ರಿ 10 ಗಂಟೆ ಸುಮಾರಿಗೆ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ರೈಲು ಗುದ್ದಿಕೊಂಡು ಹೋದುದರಿಂದ ವಿಶ್ವನಾಥರು ಮೃತಪಟ್ಟರೆಂದು ಹೇಳಲಾಗುತ್ತಿದೆ.

ಎಡಮಂಗಲ : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು Read More »

ನಮ್ಮ ಶ್ರದ್ಧಾ ಕೇಂದ್ರಗಳು ಜೀರ್ಣೋದ್ಧಾರಗೊಂಡಾಗ ಜೀವನದಲ್ಲಿ ಸುಖ ಶಾಂತಿ ನೆಲೆಸುತ್ತದೆ : ಭಾಗೀರಥಿ ಮುರುಳ್ಯ

ನಮ್ಮ ಶ್ರದ್ದಾ ಕೇಂದ್ರಗಳಾದ ಮಂದಿರಗಳು, ದೈವಸ್ಥಾನಗಳನ್ನು ಕಾಲ ಕಾಲಕ್ಕೆ ಜೀರ್ಣೋದ್ದಾರಗೊಳಿಸಿದಾಗ ನಮ್ಮ ಜೀವನದಲ್ಲಿ ಸುಖ ಶಾಂತಿಯಿಂದ ಇರಲು ಸಾಧ್ಯ” ಎಂದು ಶಾಸಕಿ ಭಾಗೀರಥಿ ಮುರುಳ್ಯ ಅಭಿಪ್ರಾಯಪಟ್ಟಿದ್ದಾರೆ.ಅವರು ಸುಳ್ಯ ಬೂಡುವಿನ ಸತ್ಯಪದಿನಾಜಿ, ಕುಪ್ಪೆ ಪಂಜುರ್ಜಿ ಮತ್ತು ಗುಳಿಗ ಸಾನಿಧ್ಯ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಶಾಸಕರು ಈ ಭಾಗದ ಜನರ ಕೋರಿಕೆಯಂತೆ ಇಲ್ಲಿಗೆ ನೀರಿನ ವ್ಯವಸ್ಥೆಗಾಗಿ ಬೋರ್‌ವೆಲ್ ಕೊರೆಸಲು ಅನುದಾನ ನೀಡುವುದಾಗಿ ಭರವಸೆ ನೀಡಿದರು.ಕರ್ಲಪ್ಪಾಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ

ನಮ್ಮ ಶ್ರದ್ಧಾ ಕೇಂದ್ರಗಳು ಜೀರ್ಣೋದ್ಧಾರಗೊಂಡಾಗ ಜೀವನದಲ್ಲಿ ಸುಖ ಶಾಂತಿ ನೆಲೆಸುತ್ತದೆ : ಭಾಗೀರಥಿ ಮುರುಳ್ಯ Read More »

ಸುಳ್ಯ : ಸಹಕಾರಿ ರತ್ನ ಚಂದ್ರಾ ಕೋಲ್ಚಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ

ಸಹಕಾರಿ ರತ್ನ ಚಂದ್ರ ಕೋಲ್ಟಾರ್ ಅಭಿನಂದನಾ ಸಮಿತಿ ವತಿಯಿಂದ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿಯಮಿತ ಬೆಂಗಳೂರು ಇದರ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಚಂದ್ರ ಕೋಲ್ಟಾರ್ ಅವರಿಗೆ ಅಭಿನಂದನಾ ಸಮಾರಂಭ ಮತ್ತು ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಇದರ ನೂತನ ಅಧ್ಯಕ್ಷ ಎಸ್.ಚಂದ್ರಶೇಖರ ಮೈಸೂರು ಇವರ ಅಧಿಕೃತ ಭೇಟಿ ಹಾಗೂ ಸನ್ಮಾನ ಕಾರ್ಯಕ್ರಮ ಮಾ.15 ರಂದು ಲಯನ್ಸ್ ಸೇವಾ ಸದನದಲ್ಲಿ ನಡೆಯಿತು.ಸಮಾರಂಭವನ್ನು ಉದ್ಘಾಟಿಸಿದ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಲದ ನಿರ್ದೇಶಕರಾದ ಎಸ್.ಚಂದ್ರಶೇಖ‌ರ್ ರವರು

ಸುಳ್ಯ : ಸಹಕಾರಿ ರತ್ನ ಚಂದ್ರಾ ಕೋಲ್ಚಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ Read More »

ಬೂಡು : ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ

ಸುಳ್ಯದ ಬೂಡು ಪರಿಸರದಲ್ಲಿರುವ ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಮಾ.16ರಂದು ನಡೆಯಿತು.ಬೆಳಗ್ಗೆ ಯಿಂದ ವೈದಿಕ ಕಾರ್ಯಕ್ರಮಗಳು ನಡೆಯುವುದು. ಬೆಳಗ್ಗೆ ವೃಷಭ ಲಗ್ನದಲ್ಲಿ ಪ್ರತಿಷ್ಟೆ, ಕಲಶಾಭಿಷೇಕ ನಡೆಯಿತು.

ಬೂಡು : ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ Read More »

error: Content is protected !!
Scroll to Top