Author name: Tejas

ಮುಸ್ಲಿಂ ಯುವಕನಿಗೆ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ 19 ಮಂದಿ ಹಿಂದು ಕಾರ್ಯಕರ್ತರ ಖುಲಾಸೆ

ಹಿಂದೂ ಯುವತಿಯೊಂದಿಗಿದ್ದ ಎಂದು ಮುಸ್ಲಿಂ ಯುವಕನನ್ನು ಕಾರಿನಿಂದ ಎಳದು ಹಾಕಿ ಹಲ್ಲೆಗೈದು ಅರೆ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ವಿಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 19ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ಅತ್ತಾವರದ ಈಝೀ ಡೇ ಮಳಿಗೆಯಲ್ಲಿ ಕೆಲಸಕ್ಕಿದ್ದ ಯುವತಿಯೊಂದಿಗೆ ಮಳಿಗೆಯ ವ್ಯವಸ್ಥಾಪಕ ಶಾಕೀರ್ ಎಂಬಾತ ಕಾರಿನಲ್ಲಿ ಹೋಗುತ್ತಿದ್ದ. ಈತನ ಕಾರನ್ನು ಅತ್ತಾವರ ನಂದಿಗುಡ್ಡೆ ಬಳಿ ಅಡ್ಡಗಟ್ಟಿದ್ದ ಹಿಂದೂ ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರು ಯುವತಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದಾನೆಂದು ಆರೋಪಿಸಿ ಕಂಬಕ್ಕೆ […]

ಮುಸ್ಲಿಂ ಯುವಕನಿಗೆ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ 19 ಮಂದಿ ಹಿಂದು ಕಾರ್ಯಕರ್ತರ ಖುಲಾಸೆ Read More »

ಕಾರು ಹಿಂದಕ್ಕೆ ಚಲಿಸಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಮನೆಯಲ್ಲಿ ನಿಲ್ಲಿಸಿದ್ದ ಕಾರು ಹಿಂದಕ್ಕೆ ಚಲಿಸಿ ಅಂಗಳದಲ್ಲಿ ನಿಂತಿದ್ದ ವ್ಯಕ್ತಿಗೆ ಗುದ್ದಿದ ಪರಿಣಾಮ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟ ಘಟನೆ ಇಂದು ನಡೆದಿದೆ.ಕರಿಕ್ಕಳದ ಮುಚ್ಚಿಲದಲ್ಲಿರುವ ತಮ್ಮ ಮನೆಯ ಅಂಗಳದಲ್ಲಿ ನಿಂತಿದ್ದಾಗ ಕಾರು ಹಿಮ್ಮುಖ ಚಲಿಸಿ ನಿವೃತ್ತ ರೇಂಜ‌ರ್ ಜೋಸೇಫ್ ರವರಿಗೆ ಗುದ್ದಿ ಗಾಯಗೊಂಡಿದ್ದರು. ಮನೆಯಲ್ಲಿದ್ದ ಪತ್ನಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅರಣ್ಯ ಇಲಾಖೆಯಲ್ಲಿ ಪಂಜ, ಮಂಗಳೂರು ಹಾಗೂ ಸಂಪಾಜೆ ಸೇವೆ ಸಲ್ಲಿಸಿದ್ದು ಸಂಪಾಜೆಯಲ್ಲಿ

ಕಾರು ಹಿಂದಕ್ಕೆ ಚಲಿಸಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು Read More »

ಅರಂಬೂರು : ಹಸಿರುವಾಣಿ ಮೆರಣಿಗೆ ಮೂಲಕ ದೈವಂಕಟ್ಟು ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಆಲೆಟ್ಟಿ ಗ್ರಾಮದ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ದೈವಗಳ ದೈವಂಕಟ್ಟು ಮಹೋತ್ಸವ ಆರಂಭಗೊಂಡಿದೆ.ಪೂರ್ವಾಹ್ನ ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಪ್ರಾರ್ಥಿಸಲಾಯಿತು.ಬಳಿಕ ಪಯಸ್ವಿನಿ ಸೇತುವೆ ಬಳಿ ನಿರ್ಮಿಸಲಾದ ಮಹಾದ್ವಾರದಿಂದ ಅದ್ದೂರಿ ಹಸಿರುವಾಣಿ ಮೆರವಣಿಗೆಗೆ ಮಹೋತ್ಸವ ಸಮಿತಿ ಅಧ್ಯಕ್ಷ ಪಿ.ಬಿ.ಸುಧಾಕರ ರೈಯವರು ತೆಂಗಿನಕಾಯಿಯ ಒಡೆದು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ತರವಾಡು ಮನೆಯ ಮುಖ್ಯಸ್ಥರು, ಉಪ ಸಮಿತಿ ಸಂಚಾಲಕರು ಹಾಗೂ ಭಗವದ್ಭಕ್ತರು ಉಪಸ್ಥಿತರಿದ್ದರುಮಹಿಳೆಯರ ಪೂರ್ಣ ಕುಂಭ ಸ್ವಾಗತದೊಂದಿಗೆ ಚೆಂಡೆ ವಾದ್ಯ ಘೋಷದೊಂದಿಗೆ ಹಾಗೂ ಕುಣಿತ

ಅರಂಬೂರು : ಹಸಿರುವಾಣಿ ಮೆರಣಿಗೆ ಮೂಲಕ ದೈವಂಕಟ್ಟು ಮಹೋತ್ಸವಕ್ಕೆ ಅದ್ದೂರಿ ಚಾಲನೆ Read More »

ಬೂಡು : ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಅಂಗವಾಗಿ ವೈಭವದ ಹಸಿರುವಾಣಿ ಮೆರವಣಿಗೆ

ಸುಳ್ಯದ ಬೂಡು ಕಾಲೋನಿಯ ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಅಂಗವಾಗಿ ವೈಭವದ ಹಸಿರುವಾಣಿ ಮೆರವಣಿಗೆ ನಡೆಯಿತು.ಮಾ.15ರಂದು ಬೆಳಗ್ಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಿಂದ ಹಸಿರುವಾಣಿ ಮೆರವಣಿಗೆ ನಡೆಯಿತು.ಬಳಿಕ ಭಜನೆ ನಡೆಯಿತು.ಸಂಜೆ ಕ್ಷೇತ್ರಕ್ಕೆ ತಂತ್ರಿಗಳ ಆಗಮನದ ಬಳಿಕ ವೈದಿಕ ಕಾರ್ಯಕ್ರಮ ಆರಂಭಗೊಳ್ಳುವುದು.ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ ಚಿಂತಕರಾದ ರಾಜೇಶ್ ಶೆಟ್ಟಿ ಮೇನಾಲ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.ಹಲವು ಮಂದಿ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ರಾತ್ರಿ ಸಾಂಸ್ಕೃತಿಕ

ಬೂಡು : ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಅಂಗವಾಗಿ ವೈಭವದ ಹಸಿರುವಾಣಿ ಮೆರವಣಿಗೆ Read More »

ಮಹಿಳೆಯನ್ನು ಸೊಂಡಿಲಿನಿಂದ ಎಸೆದು ಕೊಂದು ಹಾಕಿದ ಕಾಡಾನೆ

ಬೇಲೂರು ತಾಲೂಕಿನ ಕೋಗೋಡು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಕೋಗೋಡು ಸುಶೀಲಮ್ಮ (60) ಮೃತರು.ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸುಶೀಲಮ್ಮಮೇಲೆ ಏಕಾಏಕಿ ದಾಳಿ ಮಾಡಿದ ಕಾಡಾನೆ ಸೊಂಡಿಲಿನಿಂದ ಎತ್ತಿ ಬಿಸಾಡಿ, ತಲೆ ಭಾಗವನ್ನು ತುಳಿದು ಸಾಯಿಸಿದೆ. ಮಹಿಳೆ ಸಾವಿನಿಂದಾಗಿ ಆಕ್ರೋಶಗೊಂಡ ಗ್ರಾಮಸ್ಥರು ಬೇಲೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಚೀಕನಹಳ್ಳಿಯಲ್ಲಿ ರಸ್ತೆ ತಡೆ ನಡೆಸಿ, ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು. ಜಿಲ್ಲೆಯಲ್ಲಿ ಜನವರಿಯಿಂದ 5 ಮಂದಿ ಕಾಡಾನೆ ದಾಳಿಗೆ ಬಲಿಯಾಗಿದ್ದು ಈ ಪೈಕಿ

ಮಹಿಳೆಯನ್ನು ಸೊಂಡಿಲಿನಿಂದ ಎಸೆದು ಕೊಂದು ಹಾಕಿದ ಕಾಡಾನೆ Read More »

ಗ್ಯಾಸ್ ಸಿಲಿಂಡರ್‌ ವಾಹನ ಪಲ್ಟಿ

ಸುಳ್ಯ – ಜಾಲ್ಲೂರುಮುಖ್ಯ ರಸ್ತೆಯಲ್ಲಿ ಬೈತಡ್ಕ ತಿರುವಿನಲ್ಲಿ ಗ್ಯಾಸ್ ಸಿಲಿಂಡ‌ರ್ ಸಾಗಾಟದ ವಾಹನ ಮಾ.14ರಂದು ತಡರಾತ್ರಿ ಪಲ್ಟಿಯಾದ ಘಟನೆ ವರದಿಯಾಗಿದೆ.ಸುಮಾರು 11.30ಕ್ಕೆ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿವಾಹನ ಪಲ್ಟಿಯಾಯಿತು. ಸುಳ್ಯದಿಂದ ಮಂಗಳೂರು ಕಡೆಗೆ ಹೋಗುವ ವಾಹನ ಇದಾಗಿದ್ದು, ಪಲ್ಟಿಯಾದ ಪರಿಣಾಮ ಗ್ಯಾಸ್‌ ಸಿಲಿಂಡ‌ರ್ ರಸ್ತೆಗೆ ಬಿದ್ದಿದ್ದವು.ಚಾಲಕನಿಗೆ ಗಾಯವಾಗಿದ್ದು ಆತ ಸುಳ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ತೆರಳಿದ್ದಾರೆನ್ನಲಾಗಿದೆ

ಗ್ಯಾಸ್ ಸಿಲಿಂಡರ್‌ ವಾಹನ ಪಲ್ಟಿ Read More »

ಅರಂತೋಡು – ಎಲಿಮಲೆ ಲೋಕೋಪಯೋಗಿ ರಸ್ತೆಯಲ್ಲಿ ರಸ್ತೆಯ ಧಾರಣಾ ಸಾಮರ್ಥ್ಯವನ್ನು ಪ್ರಕಟಿಸಿ, ಅಧಿಕ ಭಾರದ ವಾಹನಗಳನ್ನು ನಿರ್ಭಂದಿಸಿ ಸೂಚನಾ ಫಲಕ ಅಳವಡಿಸುವ ಬಗ್ಗೆ ಮನವಿ

ಅರಂತೋಡು – ಎಲಿಮಲೆ ಲೋಕೋಪಯೋಗಿ ರಸ್ತೆಯಲ್ಲಿ ರಸ್ತೆಯ ಧಾರಣಾ ಸಾಮರ್ಥ್ಯವನ್ನು ಪ್ರಕಟಿಸಿ, ಅಧಿಕ ಭಾರದ ವಾಹನಗಳನ್ನು ನಿರ್ಭಂದಿಸಿ ಸೂಚನಾ ಫಲಕ ಅಳವಡಿಸುವ ಬಗ್ಗೆಕಾರ್ಯ ನಿರ್ವಾಹಕ ಅಭಿಯಂತರುಲೋಕೋಪಯೋಗಿ ಇಲಾಖೆಯವರಿಗೆ ಅಡ್ತಲೆ ನಾಗರೀಕ ಹಿತಾರಕ್ಷಣಾ ವೇದಿಕೆಯವರು ಮನವಿ ಸಲ್ಲಿಸಿದ್ದಾರೆ.ಅರಂತೋಡು- ಎಲಿಮಲೆ ಜಿಲ್ಲಾ ಮುಖ್ಯ ರಸ್ತೆಯ ಸುಮಾರು 3 ಕಿಲೋಮೀಟರ್ ರಸ್ತೆ ಅಗಲೀಕರಣ ಹಾಗೂ 2ಕಿಲೋಮೀಟರ್ ಮರುಡಾಮರಿಕರಣ ಕಾಮಗಾರಿಯನ್ನು ತಮ್ಮ ಇಲಾಖೆಯು ಅತ್ಯಂತ ಉತ್ತಮವಾಗಿ ಕಳೆದ ಎರಡು ವರ್ಷಗಳ ಹಿಂದೆ ನಡೆಸಿರುತ್ತದೆ. ಊರಿನ ಸಾರ್ವಜನಿಕರ ಹಾಗೂ ರಸ್ತೆ ಬಳಕೆದಾರರ ಪರವಾಗಿ ತಮಗೂ

ಅರಂತೋಡು – ಎಲಿಮಲೆ ಲೋಕೋಪಯೋಗಿ ರಸ್ತೆಯಲ್ಲಿ ರಸ್ತೆಯ ಧಾರಣಾ ಸಾಮರ್ಥ್ಯವನ್ನು ಪ್ರಕಟಿಸಿ, ಅಧಿಕ ಭಾರದ ವಾಹನಗಳನ್ನು ನಿರ್ಭಂದಿಸಿ ಸೂಚನಾ ಫಲಕ ಅಳವಡಿಸುವ ಬಗ್ಗೆ ಮನವಿ Read More »

ನಾಳೆಯಿಂದ ಸುಳ್ಯದ ಬೂಡು ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ

ಸುಳ್ಯದ ಬೂಡು ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಮಾ.15 ಮತ್ತು ಮಾ.16ರಂದು ನಡೆಯಲಿದ್ದು ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್.ಎ.ರಾಮಚಂದ್ರ, ಅಧ್ಯಕ್ಷ ಬೂಡು ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಸೇರಿದಂತೆ ಇತರ ನೇತ್ರತ್ವದಲ್ಲಿ ತಯಾರಿ ನಡೆದಿದೆ.ಸುಮಾರು ವರ್ಷಗಳಿಂದ ಬೂಡುವಿನಲ್ಲಿ ಈ ಭಾಗದ ಜನರು ದೈವಗಳ ಆರಾಧನೆ ಮಾಡಿಕೊಂಡು ಬರುತ್ತಿದ್ದಾರೆ. ಇದೀಗ ದೈವಸ್ಥಾನ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವಕ್ಕೆ ಅಣಿಯಾಗುತ್ತಿದೆ‌. ಮಾ.15ರಂದು ಬೆಳಗ್ಗೆ ಸಾಮೂಹಿಕ ಪ್ರಾರ್ಥನೆಯಾಗಿ ಉಗ್ರಾಣ

ನಾಳೆಯಿಂದ ಸುಳ್ಯದ ಬೂಡು ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ Read More »

ಅರಂಬೂರು : ನಾಳೆಯಿಂದ ದೈವಂಕಟ್ಟು ಮಹೋತ್ಸವ,ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ ದೈವಸ್ಥಾನಗಳು

ಅರಂಬೂರು : ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಮಾ.15ರಿಂದ 18ರ ತನಕ ನಡೆಯಲಿದ್ದು ಸಕಲ ಸಿದ್ಧತೆಗಳಿದ್ದು ಅಂತಿಮ ಹಂತದಲ್ಲಿದೆ.ಎಲ್ಲರ‌ ಸಹಕಾರದಲ್ಲಿ ಉತ್ಸವ ನಡೆಯಲಿದ್ದು, 4 ದಿನದ ಉತ್ಸವದಲ್ಲಿ ಸುಮಾರು ಎಂಬತ್ತು ಸಾವಿರದಿಂದ ಒಂದು ಲಕ್ಷಕ್ಕೂ ಮಿಕ್ಕಿ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ. ಪಾರ್ಕಿಂಗ್, ಊಟದ ವ್ಯವಸ್ಥೆ, ಜನರಿಗೆ ಕುಳಿತು ಕೊಳ್ಳುವ ವ್ಯವಸ್ಥೆ ಸೇರಿ ಸಕಲ‌ ವ್ಯವಸ್ಥೆಗಳು ನಡೆಯುತಿದ್ದು, ಭಕ್ತರ ಹಾಗೂ ಊರವರ ಸಹಕಾರದಲ್ಲಿ

ಅರಂಬೂರು : ನಾಳೆಯಿಂದ ದೈವಂಕಟ್ಟು ಮಹೋತ್ಸವ,ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ ದೈವಸ್ಥಾನಗಳು Read More »

ಜಟ್ಟಿಪಳ್ಳ ರಸ್ತೆಗೆ ಉರುಳಿ ಬಿದ್ದ ತೆಂಗಿನ ಮರ,ಮೂರು ವಿದ್ಯುತ್ ಕಂಬ ತಂಡು,ಜನರು ಪ್ರಾಣಾಪಾಯದಿಂದ ಪಾರು

ಸುಳ್ಜ ಜಟ್ಟಿಪಳ್ಳ ರಸ್ತೆಯಲ್ಲಿ ತೆಂಗಿನ ಮರವೊಂದು ವಿದ್ಯುತ್ ಲೈನ್ ಮೇಲೆ ಮುರಿದ್ದು ಪವಾಡ ಸದೃಶ ವಾಗಿ ಜನರು ಪ್ರಾಣಾಪಾಯದಿಂದ ಪಾರಾದ ಘಟನೆ ಇದೀಗ ವರದಿಯಾಗಿದೆ‌.ಬ್ರಹತ್ ಗಾತ್ರದ ತೆಂಗಿನ ಮರ ಮುರಿದು ಬಿದ್ದ ಪರಿಣಾಮ ಮೂರು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.ಯಾವುದೇ ಅಪಾಯ ಸಂಭವಿಸಿಲ್ಲ.ಜಟ್ಟಿಪಳ್ಳ ರಸ್ತೆ ಬಂದ್ ಆಗಿದೆ.

ಜಟ್ಟಿಪಳ್ಳ ರಸ್ತೆಗೆ ಉರುಳಿ ಬಿದ್ದ ತೆಂಗಿನ ಮರ,ಮೂರು ವಿದ್ಯುತ್ ಕಂಬ ತಂಡು,ಜನರು ಪ್ರಾಣಾಪಾಯದಿಂದ ಪಾರು Read More »

error: Content is protected !!
Scroll to Top