ಅಜ್ಜಾವರ : ಸ್ವಾಮೀಜಿ ಶ್ರೀ ಯೋಗೇಶ್ವರನಾಂದ ಸರಸ್ವತಿಯವರ ಕ್ರತಿ ವಸುದೈವಂ ಕುಟುಂಬಕಂ ಮತ್ತು ಕಲಿಕೆಯ ಮಹಿಮೆ ಬಿಡುಗಡೆ
ಸುಳ್ಯತಾಲೂಕಿನ ಅಜ್ಜಾವರ ಗ್ರಾಮದ ಚೈತನ್ಯ ಸೇವಾಶ್ರಮದಲ್ಲಿ ಶಿವರಾತ್ರಿ ಪ್ರಯುಕ್ತ ಶಿವೂಜೆ,ಗುರುಪೂಜೆ,ಗಣತಿಪೂಜೆ ಪುಸ್ತಕ ಬಿಡುಗಡೆ,ಭಜನಾ ಸತ್ಸಂಗ ಕಾರ್ಯಕ್ರಮ ಫೆ.26ರಂದು ನಡೆಯಿತು.ಪೆರಾಜೆ ಜ್ಯೋತಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನಾಗರಾಜ್ ಅವರು ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ ಕ್ರತಿ ವಸುದೈವ ಕುಟುಂಬಕಂ ಮತ್ತು ಕಲಿಕೆಯ ಮಹಿಮೆಯನ್ನು ಬಿಡುಗಡೆಗೊಳಿಸಿದರು.ಬಳಿಕ ಮಾತನಾಡಿದ ಅವರು ಸ್ವಾಮೀಜಿಯವರು ಪುಸ್ತಕದಲ್ಲಿ ಬರೆದಿರುವಂತೆ ನಾವೇಲ್ಲರೂ ಒಂದೆ.ಒಂದೆ ಕುಟುಂಬದವರಂತೆ ಬದುಕಿ ಬಾಳೋಣ ಎಂದು ಹೇಳಿದರು.ಪ್ರೊಫೆಸರ್ ಅನಿಲ್ ಬಿ.ವಿ ಮಾತನಾಡಿ ಜೀವನದ ಬದುಕಿನ ಜಂಜಾಟದಲ್ಲಿ ಕಷ್ಟ ಸುಖಗಳು ಸಹಜ..ಜೀವನದಲ್ಲಿ ಕಷ್ಟಗಳನ್ನು ಮೀರಿ […]










