Author name: Tejas

ಸುಳ್ಯ ಸೀಮೆ ತೊಡಿಕಾನ‌ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸುಳ್ಯ ಸೀಮೆ ತೊಡಿಕಾನ ಶ್ರೀ‌ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಏಪ್ರಿಲ್ 13 ರಿಂದ 20 ರ ತನಕ ವೈಭವದಿಂದ ನಡೆಯಲಿದ್ದು ಜಾತ್ರೋತ್ಸವವನ್ನು ಅದ್ದೂರಿಯಾಗಿ ನಡೆಸಲು ಜಾತ್ರೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಬಿಡುಗಡೆ ಸಮಾರಂಭ ದೇವಳದ ಅಕ್ಷಯ ಮಂದಿರದಲ್ಲಿ ಮಾ.19ರಂದು ನಡೆಯಿತು.ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ ಸಭೆಯ ಅಧ್ಯಕ್ಷತೆ ವಹಿಸಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು.ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಮಾತನಾಡಿ ಜಾತ್ರೋತ್ಸವಕ್ಕೆ ಉಪಸಮಿತಿಗಳು ಯಾವ ರೀತಿ ತಯಾರಿ ನಡೆಸಬೇಕೆಂದು ಮಾಹಿತಿ […]

ಸುಳ್ಯ ಸೀಮೆ ತೊಡಿಕಾನ‌ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಅಡ್ತಲೆ : ಒಂಟಿ ಸಲಗದಿಂದ ಬೆಳೆ ನಾಶ

ಮಾ.18ರಂದು ರಾತ್ರಿ ಅಡ್ತಲೆ ಪರಿಸರದಲ್ಲಿ ಒಂಟಿ ಸಲಗವೊಂದು ದಾಳಿ ಅಪಾರ ಬೆಳೆ ನಾಶ ಮಾಡಿದ ಘಟನೆ ವರದಿಯಾಗಿದೆ‌.ಅಡ್ತಲೆ ಬೆಂಡೆಡ್ಕ ನಿವಾಸಿ ಜನಾರ್ಧನ ಮೇಲಡ್ತಲೆ ಹಾಗೂ ಕೇಶವ ಮೇಲಡ್ತಲೆ ಇವರ ತೋಟಗಳಿಗೆ ಕಾಡಾನೆಗಳು ದಾಳಿ ಮಾಡಿ ತೆಂಗು, ಅಡಿಕೆ, ಬಾಳೆ ಹಾಗೂ ಕೊಕ್ಕೋ ಬೆಳೆಗಳಿಗೆ ಹಾನಿ ಮಾಡಿದೆ.

ಅಡ್ತಲೆ : ಒಂಟಿ ಸಲಗದಿಂದ ಬೆಳೆ ನಾಶ Read More »

ಸುಳ್ಯ ತಾಲೂಕು ಯಾದವ ಯುವ ವೇದಿಕೆ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಸುಳ್ಯ ತಾಲೂಕು ಯಾದವ ಯುವ ವೇದಿಕೆ ವತಿಯಿಂದ ಕೆವಿಜಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮಾರ್ಚ್ 15 ರಂದು ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ನಡೆಯಿತು.ಶಿಬಿರವನ್ನು ಕಾಲೇಜಿನ ಡೀನ್ ಡಾ.ನೀಲಾಂಬಿಕೈ ನಟರಾಜನ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವೇಧಿಕೆ ಅಧ್ಯಕ್ಷೆ ಸಾವಿತ್ರಿ ಕಣೆಮರಡ್ಕ ವಹಿಸಿದ್ದರು.ಈ ಸಂದರ್ಭದಲ್ಲಿ ಕಾಲೇಜಿನ ರಿಜಿಸ್ಟ್ರಾರ್ ಡಾ.ಸಂದೇಶ್ ರೈ, ಪೆಥಾಲಜಿ ವಿಭಾಗದ ಮುಖ್ಯಸ್ಥೆ ಡಾ.ಸತ್ಯವತಿ ಆರ್ ಆಳ್ವ, ಬ್ಲಡ್ ಬ್ಯಾಂಕ್ ಅಧಿಕಾರಿಗಳಾದ ಡಾ.ನವ್ಯ ಬಿ.ಎನ್, ಡಾ.ಅಂಜಲಿ ರಾವ್, ತಾಲೂಕು ಅಧ್ಯಕ್ಷ

ಸುಳ್ಯ ತಾಲೂಕು ಯಾದವ ಯುವ ವೇದಿಕೆ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ Read More »

ಅರೆಭಾಷೆ ಅಕಾಡೆಮಿ ವತಿಯಿಂದ ಸುಳ್ಯದಲ್ಲಿ ಅರೆಭಾಷೆ ರಂಗ್ -2026 ಕಾರ್ಯಕ್ರಮ

ಸುಳ್ಯ: ಭಾಷೆಯನ್ನು ಉಳಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯ. ಅರೆಭಾಷೆ ಸಾಹಿತ್ಯ, ಸಂಸ್ಕೃತಿ- ಇನ್ನಷ್ಟು ಬೆಳೆಯಬೇಕು ಎಂಬ ದೃಷ್ಠಿಯಿಂದ ಯುವಜ‌ನರನ್ನು ಆಕರ್ಷಿಸಲು ಅರೆಭಾಷೆ ಅಕಾಡೆಮಿ ವತಿಯಿಂದ ಕಾಲೇಜುಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದ್ದಾರೆ.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಡೆಮಿಯ ವತಿಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು ಹಾಗೂ ಕಾಲೇಜಿನ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಸಹಯೋಗದಲ್ಲಿ ಎನ್.ಎಂ.ಸಿಯಲ್ಲಿ ಮಾ.18ರಂದುಅರೆಭಾಷೆ ರಂಗ್ -2026

ಅರೆಭಾಷೆ ಅಕಾಡೆಮಿ ವತಿಯಿಂದ ಸುಳ್ಯದಲ್ಲಿ ಅರೆಭಾಷೆ ರಂಗ್ -2026 ಕಾರ್ಯಕ್ರಮ Read More »

ಜೆಸಿಐ ಸುಳ್ಯ ಪಯಸ್ವಿನಿ : ಮಹಿಳಾ ದಿನಾಚರಣೆ

ಜೆಸಿಐ ಸುಳ್ಯ ಪಯಸ್ವಿನಿ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್ ಪ್ರದಾನ ಸಮಾರಂಭ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಮಾ.17ರಂದು ನಡೆಯಿತು.ಜೆಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷೆ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಇವರ ಅಧ್ಯಕ್ಷತೆಯಲ್ಲಿ ‌ಕಾರ್ಯಕ್ರಮ ನಡೆಯಿತು.ಸ್ವಾಗತ್ ಐಸ್ ಕ್ರೀಂ ಸಂಸ್ಥೆಯ ಮಾಲಕಿ ಶ್ರೀಮತಿ ಶಶಿಕಲಾ ಪ್ರಭಾಕರನ್ ನಾಯರ್ ರಿಗೆ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಅವಾರ್ಡ್’ ನೀಡಿ ಗೌರವಿಸಲಾಯಿತುಸುಳ್ಯ ತಹಶೀಲ್ದಾರ್ ಶ್ರೀಮತಿ ಮಂಜುಳಾ ಪ್ರಶಸ್ತಿ ಪ್ರದಾನಗೈದರು.

ಜೆಸಿಐ ಸುಳ್ಯ ಪಯಸ್ವಿನಿ : ಮಹಿಳಾ ದಿನಾಚರಣೆ Read More »

ಸುಳ್ಯ ಸೀಮೆ ತೊಡಿಕಾನ‌ ಶ್ರೀ ಮಲ್ಲಿಕಾರ್ಜುನ ದೇವಳದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ ಆಯ್ಕೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ‌ ದೇವಳದ ಕಾಲಾವಧಿ ಜಾತ್ರೋತ್ಸವ ಏ.13ರಿಂದ ಏ.20ರ ತನಕ ನಡೆಯಲಿದ್ದು ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ ನೇಮಕಗೊಂಡಿದ್ದಾರೆ.ಜಾತ್ರೋತ್ಸವದ ಉಪಸಮಿತಿಗಳನ್ನು ರಚಿಸಲಾಗಿದ್ದುಆರ್ಥಿಕ ಸಮಿತಿ ಸಂಚಾಲಕರಾಗಿ ಕಿಶೋರ್ ಕುಮಾ‌ರ್ ಯು.ಯಂ,ಸಹಸಂಚಾಲಕರಾಗಿ ದೀಪಕ್ ಕುತ್ತಮೊಟ್ಟೆ ಸಂಯೋಜಕರಾಗಿ ಕೇಶವ ಯು.ಕೆ ಆಯ್ಕೆಗೊಂಡಿದ್ದಾರೆ.ಹಸಿರುವಾಣಿ ಸಮಿತಿ/ಆಮಂತ್ರಣ ಬಟವಾಡೆ ಸಮಿತಿ ಸಂಚಾಲಕರಾಗಿಕೇಶವ ಅಡ್ತಲೆ,ಸಹಸಂಚಾಲಕರಾಗಿರವೀಂದ್ರ ಪಂಜಿಕೋಡಿ, ದಯಾನಂದ ಪತ್ತುಕುಂಜ,ಸಂಯೋಜಕರಾಗಿ ವಸಂತ ಪೆಲ್ತಡ್ಕ,ವೈದಿಕ ಸಮಿತಿ ಸಂಚಾಲಕರಾಗಿಗಣಪತಿ ಭಟ್ ಪಾದೆಕಲ್ಲು ,ಸಹಸಂಚಾಲಕರಾಗಿ ಕೃಪಾಶಂಕರ ತುದಿಯಡ್ಕ,ಕೃಷ್ಣ ಬೈಪಡಿತ್ತಾಯ,ಸಂಯೋಜಕರಾಗಿತೀರ್ಥರಾಮ ಯು.ಕೆ,ಆಹಾರ ಸಮಿತಿ ಸಂಚಾಲಕರಾಗಿ ಉಮಾಶಂಕರ ಅಡ್ಯಡ್ಕ, ಸಹಸಂಚಾಲಕರಾಗಿ

ಸುಳ್ಯ ಸೀಮೆ ತೊಡಿಕಾನ‌ ಶ್ರೀ ಮಲ್ಲಿಕಾರ್ಜುನ ದೇವಳದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆ ಆಯ್ಕೆ Read More »

ಮಾ. 19 ರಿಂದ  ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸ್ವರ್ಣಂ ಯುಗಾದಿ ಚಿನ್ನಾಭರಣಗಳ  ಸಂಭ್ರಮ!

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಮಾ.19 ರಿಂದ ಮಾ.25 ರ ವರೆಗೆ ಸ್ವರ್ಣಂ ಯುಗಾದಿ ಚಿನ್ನಾ ಭರಣಗಳ ಸಂಭ್ರಮ ನಡೆಯಲಿದೆ.ಹಾಗೂ ವಿಶೇಷವಾಗಿ ಯುಗಾದಿ ಹಬ್ಬದ ಪ್ರಯುಕ್ತ ಉಚಿತ ಶಾಸ್ತ್ರೋತ್ರವಾಗಿ ಕಿವಿ ಮೂಗು ಚುಚ್ಚುವ ವ್ಯವಸ್ಥೆ ಇದೆ. ಹಾಗೂ 916 ನ ವಿವಿಧ ವಿನ್ಯಾಸಗಳ ಚಿನ್ನಾ ಭರಣಗಳ ಸಂಗ್ರಹ ಹಾಗೂ ಕಿವಿಯೋಲೆ ಮಕ್ಕಳ ಚಿನ್ನಾಭರಣಗಳ ಅಪೂರ್ವ ಸಂಗ್ರಹವಿದ್ದು ಪವನಿಗೆ 3000 ಕಡಿತವಾಗಲಿದೆ.

ಮಾ. 19 ರಿಂದ  ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸ್ವರ್ಣಂ ಯುಗಾದಿ ಚಿನ್ನಾಭರಣಗಳ  ಸಂಭ್ರಮ! Read More »

ವಿದ್ಯಾರ್ಥಿಗಳು ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ – ಯಶಸ್ಸು ನಿಮ್ಮದಾಗಲಿ

ರಾಜ್ಯದಲ್ಲಿ 2026ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿವೆ. ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ವಿದ್ಯಾರ್ಥಿಗಳ ಬದುಕಿನ ಅತ್ಯಂತ ಪ್ರಮುಖ ಹಂತವಾಗಿದೆ. ಈ ಹಂತವು ಅವರ ಭವಿಷ್ಯದ ಗುರಿಗಳನ್ನು ರೂಪಿಸಿಕೊಳ್ಳಲು ದಾರಿದೀಪವಾಗುತ್ತದೆ.ಈ ಸಂದರ್ಭದಲ್ಲಿ ಪೋಷಕರ ಜವಾಬ್ದಾರಿ ಮತ್ತು ಶಿಕ್ಷಕರ ಪ್ರೇರಣೆಯಿಂದ ಕೂಡಿದ ಮಾರ್ಗದರ್ಶನ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದೆ. ಪೋಷಕರು ತಮ್ಮ ಕನಸುಗಳನ್ನು ಮಕ್ಕಳ ಮೇಲೆ ಹೇರದೇ, ಒತ್ತಡ ನೀಡದೇ, ಪ್ರೀತಿ ಮತ್ತು ನಂಬಿಕೆಯಿಂದ ಪ್ರೋತ್ಸಾಹ ನೀಡಿದಾಗ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ.ಇನ್ನೊಂದೆಡೆ, ಶಿಕ್ಷಕರು ತರಗತಿ ಕೊಠಡಿಗಳಲ್ಲಿ ಪಾಠಗಳ ಜೊತೆಗೆ

ವಿದ್ಯಾರ್ಥಿಗಳು ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ – ಯಶಸ್ಸು ನಿಮ್ಮದಾಗಲಿ Read More »

ಸುಳ್ಯ ಅಂಚೆ ಕಛೇರಿಯಲ್ಲಿ ಆಧಾರ್ ಕಾರ್ಡು ನೋಂದಣಿ ಮತ್ತು ತಿದ್ದುಪಡಿ ಸೇವೆ ಲಭ್ಯ

ಸುಳ್ಯ ಅಂಚೆ ಕಛೇರಿಯಲ್ಲಿ ಆಧಾರ್ ಕಾರ್ಡು ನೋಂದಣಿ ಮತ್ತು ತಿದ್ದುಪಡಿ ಸೇವೆ ಲಭ್ಯವಿದೆ. ಸಾರ್ವಜನಿಕರು ಟೋಕನ್ ಪಡೆದುಕೊಂಡು ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಅಂಚೆ ಪಾಲಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಯ ಅಂಚೆ ಕಛೇರಿಯಲ್ಲಿ ಆಧಾರ್ ಕಾರ್ಡು ನೋಂದಣಿ ಮತ್ತು ತಿದ್ದುಪಡಿ ಸೇವೆ ಲಭ್ಯ Read More »

ಸಿಲಿಂಡರ್ ಮರು ಬುಕ್ಕಿಂಗ್ ಅವಧಿಯನ್ನು 25 ದಿನಕ್ಕೆ ನಿಗಧಿಪಡಿಸಲು ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿ ಮನವಿ

ನಗರ ಪ್ರದೇಶದ ಗ್ಯಾಸ್ ಬಳಕೆದಾರರಿಗೆ ಗ್ಯಾಸ್ ಸಿಲಿಂಡರ್ ಮರು ಬುಕ್ಕಿಂಗ್ ಅವಧಿಯನ್ನು 25 ದಿನಗಳು ನಿಗಧಿಪಡಿಸಿದಂತೆ ಗ್ರಾಮೀಣ ಪ್ರದೇಶದಲ್ಲಿಯು 45 ದಿನಗಳ ಬದಲು 25 ದಿನಗಳಿಗೆ ಸೀಮಿತಗೊಳಿಸಬೇಕೆಂದು ಸುಳ್ಯ ತಾಲೂಕು ಕೆ.ಡಿಪಿ ಸದಸ್ಯ ಅಶ್ರಫ್ ಗುಂಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುತ್ತಾರೆ. ಅಲ್ಲದೆ ಮುಂದೆ ಬರುವ ಯುಗಾದಿ ಮತ್ತು ರಂಜಾನ್ ಹಬ್ಬಕ್ಕೆ ಅಡುಗೆ ಅನಿಲ ಸಿಲಿಂಡರ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿರುತ್ತಾರೆ.

ಸಿಲಿಂಡರ್ ಮರು ಬುಕ್ಕಿಂಗ್ ಅವಧಿಯನ್ನು 25 ದಿನಕ್ಕೆ ನಿಗಧಿಪಡಿಸಲು ಕೆ.ಡಿ.ಪಿ ಸದಸ್ಯ ಅಶ್ರಫ್ ಗುಂಡಿ ಮನವಿ Read More »

error: Content is protected !!
Scroll to Top