Author name: Tejas

ಡಿವೈ ಡರ್ ಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವು

ಡಿವೈ ಡರ್‌ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಯುವಕನ ತಲೆ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಸಂಭವಿಸಿದೆಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್‌ ಪೂಜಾರಿ (೩೦ವ) ಮೃತಪಟ್ಟವರು. ಗುರುವಾಯನಕೆರೆಯಿಂದ ವೇಣೂರು ಕಡೆಗೆ ವೇಗವಾಗಿ ಹೋಗುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ದ್ವಾರದದಿಂದ ಸ್ವಲ್ಪ ಮಂದೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಎಸೆಯಲ್ಪಟ್ಟು ತಲೆ ವಿದ್ಯುತ್‌ ಕಂಬಕ್ಕೆ ಹೊಡೆದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ […]

ಡಿವೈ ಡರ್ ಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವು Read More »

ಸರಿಯಾದ ಹೆಣ್ಣೊದಗಿ ಗಂಡು ಸುಖವಾಗಿರಲಿ..

ಮದುವೆಯಾಗಲು ಗಂಡು ಮಕ್ಕಳಿಗೆ ಹೆಣ್ಣೇ ಸಿಗುತ್ತಿಲ್ಲ ಎಂಬುದು ಕಳೆದ ಕೆಲ ವರ್ಷಗಳಿಂದ ಗಂಡು ಮಕ್ಕಳ ಕೂಗು. ಬಹುಶಃ ಕೆ.ಎಸ್.‌ ನರಸಿಂಹ ಸ್ವಾಮಿಯವರು ಈಗಿರುತ್ತಿದ್ದರೆ ಹೀಗೊಂದು ಕವನ ಬರೆಯುತ್ತಿದ್ದರೇನೋ..ಕೆ.ಎಸ್.ನರಸಿಂಹಸ್ವಾಮಿಯವರ ʼಮೈಸೂರು ಮಲ್ಲಿಗೆʼ ಕವನ ಸಂಕಲನದಲ್ಲಿ ʼಶಾನುಭೋಗರ ಮಗಳು ರತ್ನದಂತಹ ಹುಡುಗಿ..ʼಎಂಬ ಹಾಡೊಂದಿದೆ. ಈ ಹಾಡಿನಲ್ಲಿ ರತ್ನದಂತಹ ಹುಡುಗಿಯಾದ ಆಕೆಗೆ ʼಗಂಡು ಸಿಕ್ಕುವುದೊಂದು ಕಷ್ಟವಲ್ಲ; ಸರಿಯಾದ ಗಂಡೊದಗಿ ಹೆಣ್ಣು ಸುಖವಾಗಿರಲಿ, ತಡವಾದರೇನಂತೆ? ನಷ್ಟವಿಲ್ಲʼ ಎಂಬ ಸಾಲೊಂದಿದೆ. ಹೊನ್ನೂರಿನ ಕೇರಿ ಮಾತ್ರವಲ್ಲ ಇಡೀ ಊರಿಗೇ ಚೆಲುವೆಯಾದ ಶಾನುಭೋಗರ ಮಗಳು ಸೀತಾದೇವಿಯ ರೂಪ,

ಸರಿಯಾದ ಹೆಣ್ಣೊದಗಿ ಗಂಡು ಸುಖವಾಗಿರಲಿ.. Read More »

ಕರ್ತವ್ಯ ನಿರತ ಎಸ್.ಐ ಮೇಲೆ ಹಲ್ಲೆ

ಕರ್ತವ್ಯ ನಿರತ ಪೊಲೀಸ್ ಉಪನಿರೀಕ್ಷಕರ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇಲೆ ಪ್ರತಾಪ್ ಗೌಡ ಎಂಬವರ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ಬುಧವಾರ ವರದಿಯಾಗಿದೆ.ಈತನ ಮೇಲೆ ಕಾವೂರು ಠಾಣೆಯಲ್ಲಿ ಹಾಗೂ ಪುತ್ತೂರು ಠಾಣೆಯಲ್ಲಿ ಸೇರಿ ಒಟ್ಟು ನಾಲ್ಕು ಕೇಸುಗಳು ದಾಖಲಾಗಿದ್ದು, ಈಗ ಈ ಬಗ್ಗೆ ಸಂಪ್ಯ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿದೆ.ಫೆಬ್ರವರಿ 9ರಂದು ಪುತ್ತೂರು ತಾಲೂಕಿನ ಆರ್ಯಾಪುರ್ ಗ್ರಾಮದ ಸಂಪ್ಯ ಪುತ್ತೂರು ಗ್ರಾಮಾಂತರ ಠಾಣೆಯ ಎದುರು ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ

ಕರ್ತವ್ಯ ನಿರತ ಎಸ್.ಐ ಮೇಲೆ ಹಲ್ಲೆ Read More »

ಲಾರಿ ಚಾಲಕನಿಗೆ ಮೂರ್ಚೆ ರೋಗ ಡಿವೈಡರ್ ಮೇಲೆ ಹತ್ತಿದ ಲಾರಿ

ಲಾರಿ ಚಾಲಕನಿಗೆ ಮೂರ್ಛೆ ರೋಗ ಇದ್ದ ಪರಿಣಾಮ ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು, ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ದಾಖಲಿಸಿದ್ದಾರೆ.ಇಂದು (ಫೆ.12, ಬುಧವಾರ) ಬೆಳಗ್ಗೆ 7.45ರ ಸುಮಾರಿಗೆ ನಡೆದಿದ್ದು, ಡಿವೈಡರ್ ಮೇಲೆ ಅಳವಡಿಸಿದ್ದ ರಸ್ತೆ ಸೂಚನಾ ಫಲಕಕ್ಕೆ ಹಾನಿಯಾಗಿರುವುದು ಬಿಟ್ಟರೆ ಉಳಿದಂತೆ ಯಾವುದೇ ಹಾನಿ లుంటాగిల్లಲಾರಿಯು ಬೆಂಗಳೂರಿನಿಂದ ಮಂಗಳೂರಿಗೆ ಚಲಿಸುತ್ತಿತ್ತು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ

ಲಾರಿ ಚಾಲಕನಿಗೆ ಮೂರ್ಚೆ ರೋಗ ಡಿವೈಡರ್ ಮೇಲೆ ಹತ್ತಿದ ಲಾರಿ Read More »

ಯುವ ನಿಧಿಗೆ ಇಂದೇ ಅರ್ಜಿ ಸಲ್ಲಿಸಿ,ಇಲ್ಲಿದೆ ಹೆಚ್ಚಿನ ಮಾಹಿತಿ

2023-24ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲಮೋ ಅರ್ಹತೆ ಹೊಂದಿದವರು ಯುವನಿಧಿ ಯೋಜನೆಯ ನಿರುದ್ಯೋಗಿ ಭತ್ಯೆ ಪಡೆಯಲು ಫೆ.15 ರೊಳಗೆ ಅರ್ಜಿ ಸಲ್ಲಿಸಬೇಕು. ಈ ವಿಶೇಷ ನೋಂದಣಿಗೆ ಅಭಿಯಾನ ಹಮ್ಮಿಕೊಂಡಿದ್ದು, ಜಿಲ್ಲೆಯಾದ್ಯಂತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೇ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಕೇಂದ್ರಗಳಲ್ಲೂ ನಿರಂತರವಾಗಿ ಯುವನಿಧಿ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ನಿರುದ್ಯೋಗಿ ಯುವಕ-ಯುವತಿಯರು ಈ ವಿಶೇಷ ಸೌಲಭ್ಯ ಪಡೆದುಕೊಳ್ಳಲು ಕೋರಲಾಗಿದೆ.

ಯುವ ನಿಧಿಗೆ ಇಂದೇ ಅರ್ಜಿ ಸಲ್ಲಿಸಿ,ಇಲ್ಲಿದೆ ಹೆಚ್ಚಿನ ಮಾಹಿತಿ Read More »

ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ಅಂತರ್ ಜಿಲ್ಲಾ ರಸ್ತೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಭರವಸೆ

ತೊಡಿಕಾನ : ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ರಸ್ತೆ ಅಭಿವೃದ್ಧಿ ಅತೀ ಅಗತ್ಯವಿದ್ದು ಈ ರಸ್ತೆ ಅಭಿವೃದ್ಧಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎಸ್.ಎಸ್ ಪೊನ್ನಣ್ಣ ಭರವಸೆ ನೀಡಿದ್ದಾರೆ.ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಆಗಮಿಸಿ ದೇವಳದ ಅಕ್ಷಯ ಮಂದಿರದಲ್ಲಿ ಮಂಗಳವಾರ ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ರಸ್ತೆ ಅಭಿವೃದ್ಧಿ ಹೋರಾಟ ಸಮಿತಿ ಇದರ ನೇತ್ರತ್ವದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ರಸ್ತೆ ಅತೀ

ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ಅಂತರ್ ಜಿಲ್ಲಾ ರಸ್ತೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಭರವಸೆ Read More »

ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ ವ್ಯಕ್ತಿ ಎದ್ದು ಕುಳಿತ!

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟರೆಂದು ಆ್ಯಂಬುಲೆನ್ಸ್‌ನಲ್ಲಿ ಅಂತ್ಯಕ್ರಿಯೆ ಗಾಗಿ ಊರಿಗೆ ಕರೆತರುತ್ತಿದ್ದಾಗ ಮೃತಪಟ್ಟ ವ್ಯಕ್ತಿ ಎದ್ದು ಕುಳಿತು ಅಚ್ಚರಿ ಮೂಡಿಸಿದ ಘಟನೆ ಭಾನುವಾರ ಹಾವೇರಿ ಜಿಲ್ಲೆಯ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ.ಬಂಕಾಪುರದ ಮಂಜುನಾಥ ನಗರದ ಬಿಷಪ್ಪ ಅಶೋಕ ಗುಡಿಮನಿ (45) ಮತ್ತೆ ಬದುಕುಳಿದ ವ್ಯಕ್ತಿ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಭಾನುವಾರ ಬಿಷ್ಟಪ್ಪ ಉಸಿರಾಡದೆ ಇರುವುದನ್ನು ಗಮನಿಸಿದಆಸ್ಪತ್ರೆಯ ವೈದ್ಯರು, ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಬಳಿಕ

ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ ವ್ಯಕ್ತಿ ಎದ್ದು ಕುಳಿತ! Read More »

ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿ.ಕೆ ನಿರ್ಮಿಸಿ ಮಯೂರ್ ಅಂಬೆಕಲ್ಲು ಹಾಗೂ ತೇಜಸ್ ಕಿರಣ್ ಜಂಟಿಯಾಗಿ ನಿರ್ದೇಶಿಸಿರುವ ‘ಭಾವ ತೀರ ಯಾನ’ ಸಿನಿಮಾ ಫೆ. 21ರಂದು ರಾಜ್ಯಾದ್ಯಂತ ಬಿಡುಗಡೆ

ಆರೋಹ ಫಿಲಂಸ್ ಬ್ಯಾನರ್ ಅಡಿಯಲ್ಲಿ ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿ.ಕೆ ನಿರ್ಮಿಸಿ ಮಯೂರ್ ಅಂಬೆಕಲ್ಲು ಹಾಗೂ ತೇಜಸ್ ಕಿರಣ್ ಜಂಟಿಯಾಗಿ ನಿರ್ದೇಶಿಸಿರುವ ‘ಭಾವ ತೀರ ಯಾನ’ ಸಿನಿಮಾ ಫೆ. 21ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ತಿಳಿಸಿದೆ.ಅವರು ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಚಿತ್ರದ ನಿರ್ಮಾಪಕ ಶೈಲೇಶ್ ಅಂಬೆಕಲ್ಲು ‘ಕೌಟುಂಬಿಕ ಹಿನ್ನಲೆಯಲ್ಲಿ ವಿಭಿನ್ನ ಕಥೆಯನ್ನು ಹೊಂದಿರುವ ಕುಟುಂಬ ಸಮೇತ ಎಲ್ಲರೂ ನೋಡಬಹುದಾದ ಮೌಲ್ಯಯುತವಾದ ಸಾಮಾಜಿಕ ಸಂದೇಶ ನೀಡುವ ಸಿನಿಮಾ ಇದಾಗಿದೆ ಎಂದು ಹೇಳಿದರು.ಚಿತ್ರದ

ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿ.ಕೆ ನಿರ್ಮಿಸಿ ಮಯೂರ್ ಅಂಬೆಕಲ್ಲು ಹಾಗೂ ತೇಜಸ್ ಕಿರಣ್ ಜಂಟಿಯಾಗಿ ನಿರ್ದೇಶಿಸಿರುವ ‘ಭಾವ ತೀರ ಯಾನ’ ಸಿನಿಮಾ ಫೆ. 21ರಂದು ರಾಜ್ಯಾದ್ಯಂತ ಬಿಡುಗಡೆ Read More »

ನಾಳೆ(ಫೆ.11) ತೊಡಿಕಾನ ದೇವಳಕ್ಕೆ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಮತ್ತು ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಫೆ. 11 ರಂದು ಅಪರಾಹ್ನ 2.00ಕ್ಕೆ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ರವರು ಮತ್ತು ಸುಳ್ಯ ಶಾಸಕರಾದ ಕು. ಭಾಗೀರಥಿ ಮುರುಳ್ಯ ಭೇಟಿ ನೀಡಲಿದ್ದು, ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ರಸ್ತೆಯ ಅಭಿವೃದ್ಧಿಯ ಕುರಿತು‌ ಸಾರ್ವಜನಿಕರ ಮನವಿ ಮೇರೆಗೆ ಸಭೆ ನಡೆಸಲಿದ್ದಾರೆ.

ನಾಳೆ(ಫೆ.11) ತೊಡಿಕಾನ ದೇವಳಕ್ಕೆ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಮತ್ತು ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »

ರಮೇಶ್ ಕುದ್ಪ್ಪಾಜೆಯವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಗೌರವಾರ್ಪಣೆ

ಹಗಲಿರುಳೆನ್ನದೇ ಕರ್ತವ್ಯ ನಿರ್ವಹಿಸಿಕೊಂಡು,ಅಡಿಕೆ / ತೆಂಗಿನ ಮರವನ್ನು ಏರುವ, ಪ್ರಾಮಾಣಿಕ ಸೇವೆಯನ್ನು ನೀಡುತ್ತಾ ಬರುತ್ತಿರುವ ಜಯನಗರದ ಮನೆ ಮನದಲ್ಲಿ ಪ್ರೀತಿಗಳಿಸಿರುವ ರಮೇಶ್ ಕುದ್ಪ್ಪಾಜೆ ಅವರನ್ನು ಸ್ವಾಮಿ ಕೊರಗಜ್ಜ ದೈವಸ್ಥಾನ ಕೊರಂಬಡ್ಕದಲ್ಲಿ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಗೌರವ ವನ್ನು ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷ ಜೇಸಿ ಸುರೇಶ್ ಕಾಮತ್, ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ ಕಾರ್ಯಕಾರಿಣಿ ಸಮಿತಿ ಸದಸ್ಯರು ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನ ಸಮಿತಿ

ರಮೇಶ್ ಕುದ್ಪ್ಪಾಜೆಯವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಗೌರವಾರ್ಪಣೆ Read More »

error: Content is protected !!
Scroll to Top