Author name: Tejas

ಕೊಡಿಯಾಲಬೈಲು ; ಮನೋಶಕ್ತಿ ಕಾರ್ಯಗಾರ ಉದ್ಘಾಟನೆ

ಉಪಾಸನ ಫೌಂಡೇಶನ್ ನ ಉಪಾಸಕರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಫೌಂಡೇಶನ್ ಮುಖ್ಯಸ್ಥ ಸದ್ಗುರುಶ್ರೀ ರಾಮರವರ ಮಾರ್ಗದರ್ಶನದಲ್ಲಿ ಸುಳ್ಯದ ಗೌಡ ಸಮುದಾಯ ಭವನದಲ್ಲಿ ಮನೋಶಕ್ತಿ ಕಾರ್ಯಗಾರ ಫೆ. 9ರಂದು ನಡೆಯಿತು.ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಡಿ. ವಿ. ಲೀಲಾಧರ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು‌.ಬಳಿಕ ಮಾತನಾಡಿದ ಅವರು ನಮ್ಮ ಹೃದಯ ಮತ್ತು ಮನಸ್ಸು ಶಾಂತವಾಗಿರಲು ಇಂತಹ ಕಾರ್ಯಕ್ರಮ ಸಹಕಾರಿಯಾಗಬಲ್ಲದು” ಶುಭ ಹಾರೈಸಿದರು.ಉಪಾಸನ ಫೌಂಡೇಶನ್ ನ ಮುಖ್ಯಸ್ಥ ಸದ್ಗುರುಶ್ರೀ […]

ಕೊಡಿಯಾಲಬೈಲು ; ಮನೋಶಕ್ತಿ ಕಾರ್ಯಗಾರ ಉದ್ಘಾಟನೆ Read More »

ಅರಂತೋಡು : ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಸ್ವಾಮಿ ಕೊರಗಜ್ಜ ದೈವದ ಕೋಲ

ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಕೊಡಂಕೇರಿಯಲ್ಲಿ ಶ್ರೀ ಸ್ವಾಮಿ ಕೊರಗಜ್ಜ ದೈವದ ಕಾಲಾವಧಿ ನೇಮೋತ್ಸವ ಹಾಗೂ ಹರಕೆ ಕೋಲ ಫೆಬ್ರವರಿ 8ರಿಂದ ಆರಂಭಗೊಂಡಿದೆ.ಫೆ‌.8ರಂದು ರಾತ್ರಿ ಗುಳಿಗನ ಕೋಲ ಮತ್ತು ಪ್ರಸಾದ ವಿತರಣೆ ನಡೆಯಿತು. ಬಳಿಕ ಶ್ರೀ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ, ಅಗಲು ಸೇವೆ ಹಾಗೂ ಪ್ರಸಾದ ವಿತರಣೆ ಮಾಡಲಾಯಿತು.ಸಾವಿರಾರು ಭಕ್ತರು ಆಗಮಿಸಿ ಕೊರಗಜ್ಜ ದೈವದ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಫೆಬ್ರವರಿ 9ರಂದು ರಾತ್ರಿಯಿಂದ ಫೆಬ್ರವರಿ 10 ಸೋಮವಾರದ ತನಕ ಸ್ವಾಮಿ ಸ್ವಾಮಿ ಕೊರಗಜ್ಜ ದೈವದ ಹರಕೆ

ಅರಂತೋಡು : ಶ್ರದ್ಧಾ ಭಕ್ತಿಯಿಂದ ನಡೆದ ಶ್ರೀ ಸ್ವಾಮಿ ಕೊರಗಜ್ಜ ದೈವದ ಕೋಲ Read More »

ಅರಂತೋಡು : ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಸಾವು

ಸುಳ್ಯ ಸಮೀಪದ ಅರಂತೋಡು ಎಂಬಲ್ಲಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ರೆ ಪಡೆಯುತ್ತಿದ್ದ ಬೈಕ್ ಸವಾರ ಮ್ರತಪಟ್ಟ ಘಟನೆ ಭಾನುವಾರ ವರದಿಯಾಗಿದೆ.ಮ್ರತಪಟ್ಟ ಬೈಕ್ ಸವಾರನನ್ನು ಕರ್ನಾಟಕ ಪೊಲೀಸ್ ಸಿಬ್ಬಂದಿ ಹರೀಶ್‌ ಎಂದು ಗುರುತಿಸಲಾಗಿದೆ.ಹರೀಶ್ ಅವರು ಮಂಗಳೂರಿನ ಕಂಕನಾಡಿ ಪೊಲೀಸ್ ಸ್ಟೇಷನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಮೂಲತಃ ಕೆಆರ್ ನಗರ ತಾಲೂಕು ಮೈಸೂರು ಜಿಲ್ಲೆಯ ಗಾಯನ ಹಳ್ಳಿ ಗ್ರಾಮದ ನಿವಾಸಿಯಾಗಿದ್ದರು.ಅವರು ತಮ್ಮ ಊರಿನಿಂದ ಮಂಗಳೂರಿಗೆ ಬುಲೆಟ್

ಅರಂತೋಡು : ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಸಾವು Read More »

ಸುಳ್ಯ : ನಾಗಪಟ್ಟಣ ಪಯಸ್ವಿನಿ ಹೊಳೆಯಲ್ಲಿ ಮೀನುಗಳ ಮಾರಣ ಹೋಮ!

ನಾಗಪಟ್ಟಣ ವೆಂಟೆಡ್ ಡ್ಯಾಮ್ ಕೆಳಬದಿಯ ಪಯಸ್ವಿನಿ ನದಿಯಲ್ಲಿ ಮೀನುಗಳು ಸಾವಿಗೀಡಾಗಿ ಬಿದ್ದಿರುವ ದೃಶ್ಯ ಕಂಡು ಬಂದಿದೆ.ಡ್ಯಾಮ್ ನಿಂದ ಬಿಟ್ಟ ನೀರಿನ ಹರಿವಿನೊಂದಿಗೆ ಬಂದ ಮೀನುಗಳ ಮಾರಣ ಹೋಮವಾಗುತ್ತಿದೆಯೆಂದು ಸ್ಥಳೀಯರು ತಿಳಿಸಿದ್ದಾರೆ.ಮೀನುಗಳು ಸಾವನ್ನಪ್ಪಲು ನಿಖರ ಕಾರಣ ತಿಳಿದು ಬಂದಿಲ್ಲ.

ಸುಳ್ಯ : ನಾಗಪಟ್ಟಣ ಪಯಸ್ವಿನಿ ಹೊಳೆಯಲ್ಲಿ ಮೀನುಗಳ ಮಾರಣ ಹೋಮ! Read More »

ಸುಳ್ಯದಲ್ಲಿ ಮರಾಟಿ ಸಮಾಜ ಬಾಂಧವರ ವಾರ್ಷಿಕ ಕ್ರೀಡಾಕೂಟ, ಮರಾಟಿ ಬಾಂಧವರು ಸಂಘಟಿತರಾಗಬೇಕು- ತಿಮ್ಮಪ್ಪ ನಾಯ್ಕ್

ಮರಾಟಿಗರು ಇನ್ನಷ್ಟು ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು.ಮರಾಟಿಭಾಷೆಯನ್ನು ಮಾತನಾಡಿ,ಭಾಷೆಯನ್ನು ಬೆಳೆಸಬೇಕು ಎಂದು ಸುಳ್ಯ ಪೋಲೀಸ್ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಹೇಳಿದರು.ಅವರು ಇಂದು ಗಿರಿದರ್ಶಿನಿ ಸಭಾಭವನದ ವಠಾರದಲ್ಲಿ ನಡೆದ ಮರಾಟಿ ಸಮಾಜ ಬಾಂಧವರ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ ಮಾಡಿ ಮಾತನಾಡಿದರು.ಇಂತಹ ಕ್ರೀಡಾಕೂಟಗಳ ಸಂಘಟನೆಯಿಂದ ಮರಾಟಿ ಸಮಾಜದ ಸಂಘಟನೆ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಮರಾಟಿ ಮಹಿಳಾ ವೇದಿಕೆ ಮತ್ತು ಮರಾಟಿ ಯುವ ವೇದಿಕೆಯ ಆಶ್ರಯದಲ್ಲಿ ಕ್ರೀಡಾಕೂಟ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮರಾಟಿ ಸಮಾಜದ

ಸುಳ್ಯದಲ್ಲಿ ಮರಾಟಿ ಸಮಾಜ ಬಾಂಧವರ ವಾರ್ಷಿಕ ಕ್ರೀಡಾಕೂಟ, ಮರಾಟಿ ಬಾಂಧವರು ಸಂಘಟಿತರಾಗಬೇಕು- ತಿಮ್ಮಪ್ಪ ನಾಯ್ಕ್ Read More »

ಕನಕಮಜಲು ಅಪಘಾತ ಪ್ರಕರಣದಲ್ಲಿ ಗಾಯಗೊಂಡಿದ್ದ ಇಬ್ಬರು ವ್ಯಕ್ತಿಗಳು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು

ಕನಕಮಜಲು ಸಮೀಪ ಫೆ.8ರಂದು ರಾತ್ರಿ ಇಬ್ಬರು ಪಾದಚಾರಿಗಳಿಗೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಕನಕಮಜಲು ಕೋಡಿಯ ರಾಮಯ್ಯ ಶೆಟ್ಟಿ (67 ವ) ಹಾಗೂ ಜನಾರ್ದನ ಶೆಟ್ಟಿ (50 ವ) ಅವರು ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.

ಕನಕಮಜಲು ಅಪಘಾತ ಪ್ರಕರಣದಲ್ಲಿ ಗಾಯಗೊಂಡಿದ್ದ ಇಬ್ಬರು ವ್ಯಕ್ತಿಗಳು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ್ಯು Read More »

ತೊಡಿಕಾನ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಾವಿತ್ರಿ ಐ ಭಟ್ ಆಯ್ಕೆ

ತೊಡಿಕಾನ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಾವಿತ್ರಿ ಐ ಭಟ್ ಹಾಗೂ ಉಪಾಧ್ಯಕ್ಷರಾಗಿ ಮೀನಾಕ್ಷಿ ಕುದ್ಕುಳಿ ದೊಡ್ಡಕುಮೇರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಎಲ್ಲಾ ನಿರ್ದೇಶಕ ಸ್ಥಾನಗಳಿಗೆ ತಲಾ ಒಬ್ಬೊಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲಾ ನಿರ್ದೇಶಕರ ಆಯ್ಕೆ ಅವಿರೋಧವಾಗಿ ನಡೆಯಿತು. ಜನವರಿ 22ರಂದು ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆಯಿತು. ನಿರ್ದೇಶಕರುಗಳಾಗಿ ಸರೋಜ ಕೋಣಗುಂಡಿ, ಸುಶೀಲ ಕೋಣಗುಂಡಿ, ರಾಧಮ್ಮ ಪಡ್ಡು, ಕೆ ಎಮ್ ಶೇಷಮ್ಮ ಕುಂಟುಕಾಡು, ಲೀಲಾವತಿ ಮುಪ್ಪಸೇರು, ಎಂ ಟಿ

ತೊಡಿಕಾನ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಾವಿತ್ರಿ ಐ ಭಟ್ ಆಯ್ಕೆ Read More »

ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಶಬ್ದದೊಂದಿಗೆ ಲಘು ಭೂಕಂಪನ

ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕಿನ ವಿವಿಧ ಭಾಗಗಳಲ್ಲಿ ಭೂಕಂಪನದ ಅನುಭವ ಆಗಿರುವ ಬಗ್ಗೆ ವರದಿಯಾಗಿದೆ.ಇಂದು ಬೆಳಗಿನ ಜಾವ 1.35-1.40 ಮಧ್ಯೆಯ ಸಮಯದಲ್ಲಿ ಭಾರೀ ಶಬ್ದದೊಂದಿಗೆ ಭೂಕಂಪನ ಸಂಭವಿಸಿದೆ. ಕೋಡೋಂ ಬೇಳೂ‌ರ್, ವೆಸ್ಟ್ ಎಳೇರಿ, ಕಿನಾನೂರ್ ಕರಿಂದಳಂ, ಬಳಾಲ್ ಪಂಚಾಯತ್‌ಗಳ ಪರಪ್ಪ, ಒಡೆಯಂಚಲ್‌, ಬಳಾಲ್, ಕೊಟ್ಟೋಡಿ, ಚುಳ್ಳಿಕ್ಕರ, ಮತ್ತು ಪೂಡಂಕಲ್ಲು ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ ಶಬ್ದ ಕೇಳಿ ಬಂದು ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಭಾರೀ ಶಬ್ದದಿಂದ ಜನರು ಆತಂಕಗೊಂಡಿದ್ದಾರೆ. ಯಾವುದೆ ಅನಾಹುತಗಳು ಸಂಭವಿಸಿಳ ಎಂದು ಸಂಬಂಧಿಸಿದ

ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಶಬ್ದದೊಂದಿಗೆ ಲಘು ಭೂಕಂಪನ Read More »

ದೆಹಲಿ ಚುನಾವಣೆ ಬಿಜೆಪಿ ಮುನ್ನಡೆ,ಬಿಜೆಪಿಯಿಂದ ವಿಜಯೋತ್ಸವ ಆಚರಣೆ

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಫಲಿತಾಂಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ಹಿನ್ನಲೆಯಲ್ಲಿ ಪುತ್ತೂರು ಬಿಜೆಪಿ ಕಚೇರಿ ಮುಂದೆ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಪಟಾಕಿ ಸಿಡಿಸಿ ಹರ್ಷಚಾರಣೆಯನ್ನು ವ್ಯಕ್ತಪಡಿಸಿದರು.ಸ್ಥಳೀಯ ಬಿಜೆಪಿ ನಾಯಕರು ಬಿಜೆಪಿ ಕಾರ್ಯಕರ್ತರು ಬಿಜೆಪಿ ಪಕ್ಷದ ಅಭಿಮಾ‌‌ನಿಗಳು ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ದೆಹಲಿ ಚುನಾವಣೆ ಬಿಜೆಪಿ ಮುನ್ನಡೆ,ಬಿಜೆಪಿಯಿಂದ ವಿಜಯೋತ್ಸವ ಆಚರಣೆ Read More »

ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಾಪಕರ ಸಂಘದ ಕಾರ್ಯಕಾರಿ ಸಮಿತಿಗೆ ಎನ್ನೆಂಸಿಯ ಡಾ. ಅನುರಾಧಾ ಕುರುಂಜಿ ಆಯ್ಕೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ. ಅನುರಾಧಾ ಕುರುಂಜಿಯವರು ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘ, ವಿಕಾಸದಕಾರ್ಯಕಾರಿ ಸಮಿತಿಗೆ ಸಹ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುತ್ತಾರೆ. ಈ ಸಮಿತಿಯು ಮುಂದಿನ ಎರಡು ವರ್ಷಗಳ ಕಾಲ ಕಾರ್ಯ ನಿರ್ವಹಿಸಲಿದೆ

ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಾಪಕರ ಸಂಘದ ಕಾರ್ಯಕಾರಿ ಸಮಿತಿಗೆ ಎನ್ನೆಂಸಿಯ ಡಾ. ಅನುರಾಧಾ ಕುರುಂಜಿ ಆಯ್ಕೆ Read More »

error: Content is protected !!
Scroll to Top