ಬಿಜೆಪಿಯಲ್ಲಿ ಜವಾಬ್ದಾರಿ ಹೊಂದಿರುವವರೇ ಪಕ್ಷದ ನಿರ್ಧಾರದ ವಿರುದ್ಧ ನಡೆದುಕೊಂಡಿರುವುದು ಸೂಕ್ತ ಕ್ರಮವಲ್ಲ : ವೆಂಕಟ್ ವಳಂಬೆ
ಸುಳ್ಯ ತಾಲೂಕಿನ ಮುರುಳ್ಯ ಎಣ್ಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯ ಸಂದರ್ಭ ಪಕ್ಷದ ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು. ಆದರೆ ಜವಾಬ್ದಾರಿ ಹೊಂದಿರುವವರೇ ಪಕ್ಷದ ನಿರ್ಧಾರದ ವಿರುದ್ಧ ನಡೆ ಅನುಸರಿಸಿದ್ದಾರೆ. ಇದು ಸೂಕ್ತವಾದ ಕ್ರಮವಲ್ಲ ” ಎಂದು ಸುಳ್ಯ ಮಂಡಲ ಬಿ.ಜೆ.ಪಿ. ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ಎಣ್ಮೂರಿನಲ್ಲಿ ನಿನ್ನೆ ಪಕ್ಷದ ಕಾರ್ಯಕರ್ತರ ಸಭೆ ನಡೆದಾಗ ಕಾರ್ಯಕರ್ತರ ಅಭಿಪ್ರಾಯದಂತೆ ಹೊಸಬರಿಗೆ ಜವಾಬ್ದಾರಿ ನೀಡಲು ನಿರ್ಧರಿಸಲಾಗಿತ್ತು. ಅದರಂತೆ ಅನೂಪ್ ಬಿಳಿಮಲೆಯವರನ್ನು […]










