Author name: Tejas

ಬಿಜೆಪಿಯಲ್ಲಿ ಜವಾಬ್ದಾರಿ ಹೊಂದಿರುವವರೇ ಪಕ್ಷದ ನಿರ್ಧಾರದ ವಿರುದ್ಧ ನಡೆದುಕೊಂಡಿರುವುದು ಸೂಕ್ತ ಕ್ರಮವಲ್ಲ : ವೆಂಕಟ್ ವಳಂಬೆ

ಸುಳ್ಯ ತಾಲೂಕಿನ ಮುರುಳ್ಯ ಎಣ್ಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯ ಸಂದರ್ಭ ಪಕ್ಷದ ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿಗಳನ್ನು ಘೋಷಿಸಲಾಗಿತ್ತು. ಆದರೆ ಜವಾಬ್ದಾರಿ ಹೊಂದಿರುವವರೇ ಪಕ್ಷದ ನಿರ್ಧಾರದ ವಿರುದ್ಧ ನಡೆ ಅನುಸರಿಸಿದ್ದಾರೆ. ಇದು ಸೂಕ್ತವಾದ ಕ್ರಮವಲ್ಲ ” ಎಂದು ಸುಳ್ಯ ಮಂಡಲ ಬಿ.ಜೆ.ಪಿ. ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.ಅವರು ಪತ್ರಕರ್ತರೊಂದಿಗೆ ಮಾತನಾಡಿದರು. ಎಣ್ಮೂರಿನಲ್ಲಿ ನಿನ್ನೆ ಪಕ್ಷದ ಕಾರ್ಯಕರ್ತರ ಸಭೆ ನಡೆದಾಗ ಕಾರ್ಯಕರ್ತರ ಅಭಿಪ್ರಾಯದಂತೆ ಹೊಸಬರಿಗೆ ಜವಾಬ್ದಾರಿ ನೀಡಲು ನಿರ್ಧರಿಸಲಾಗಿತ್ತು. ಅದರಂತೆ ಅನೂಪ್ ಬಿಳಿಮಲೆಯವರನ್ನು […]

ಬಿಜೆಪಿಯಲ್ಲಿ ಜವಾಬ್ದಾರಿ ಹೊಂದಿರುವವರೇ ಪಕ್ಷದ ನಿರ್ಧಾರದ ವಿರುದ್ಧ ನಡೆದುಕೊಂಡಿರುವುದು ಸೂಕ್ತ ಕ್ರಮವಲ್ಲ : ವೆಂಕಟ್ ವಳಂಬೆ Read More »

ಪೆರಾಜೆ : ಶಾಲೆಗೆ ಬೆಂಚ್ ಡೆಸ್ಕ್ ಗಳ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕರ್ನಾಟಕ ರಾಜ್ಯದ ವಿವಿಧಡೆಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು ಅದರಲ್ಲಿ ಒಂದಾದ ಜ್ಞಾನದೀಪ ಕಾರ್ಯಕ್ರಮದ ಅಡಿಯಲ್ಲಿ ಶಿಕ್ಷಕರ ಕೊರತೆ ಇರುವ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಗೌರವ ಶಿಕ್ಷಕರ ಒದಗಿಸುವ ಮೂಲಕ ಮತ್ತು ಶಾಲಾ ಕಟ್ಟಡ ರಚನೆ, ಆಟದ ಮೈದಾನ, , ಶುದ್ಧ ಕುಡಿಯುವ ನೀರಿನ ಪೂರೈಕೆ, ಶಾಲಾ ಕಟ್ಟಡ ದುರಸ್ತಿ ಕ್ರೀಡಾ ಹಾಗೂ ಬೋಧನ ಸಾಮಗ್ರಿ ಪೂರೈಕೆ ಮತ್ತು ಡೆಸ್ಕ್ ಬೆಂಚುಗಳ ಒದಗಣೆ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಅದರಂತೆ

ಪೆರಾಜೆ : ಶಾಲೆಗೆ ಬೆಂಚ್ ಡೆಸ್ಕ್ ಗಳ ವಿತರಣೆ Read More »

ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಬಂಡಾಯ ಅಭ್ಯರ್ಥಿ ವಸಂತ ನಡುಬೈಲು ಆಯ್ಕೆ

ಸುಳ್ಯ ತಾಲೂಕಿನ ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಬಂಡಾಯ ಅಭ್ಯರ್ಥಿ ವಸಂತ ನಡುಬೈಲು ಹಾಗೂ ಉಪಾಧ್ಯಕ್ಷರಾಗಿ ನಾಗೇಶ್‌ ಆಳ್ವ ಆಯ್ಕೆಯಾಗಿದ್ದಾರೆ.ಜ.29ರಂದು ಅಧ್ಯಕ್ಷತೆಗೆ ಆಯ್ಕೆ ಸಂದರ್ಭದಲ್ಲಿ ಪಕ್ಷದೊಳಗೆ ಮಾತುಕತೆ ನಡೆದಾಗ ಅನೂಪ್‌ ಬಿಳಿಮಲೆ ಹಾಗೂ ಉಪಾಧ್ಯಕ್ಷತೆಗೆ ರಾಜೇಂದ್ರ ಪ್ರಸಾದ್ ರನ್ನು ನಿರ್ದೇಶಕರು ಸೂಚನೆ ಮಾಡಿದ್ದರಿಂದ ಪಕ್ಷದ ಪ್ರಮುಖರು ಕೂಡಾ ಅನೂಪ್ ರನ್ನು ಅಧ್ಯಕ್ಷ ಹಾಗೂ ಉಪಾಧ್ಯಕ್ಷತೆಗೆ ರಾಜೇಂದ್ರರು ನಾಮಪತ್ರ ಸಲ್ಲಿಸಲು ಸೂಚನೆ ನೀಡಿದರೆನ್ನಲಾಗಿದೆ.ಈ ಸಂದರ್ಭ ವಸಂತ ನಡುಬೈಲುರವರು ತನಗೆ ಅಧ್ಯಕ್ಷತೆ ನೀಡಬೇಕೆಂದು

ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಬಂಡಾಯ ಅಭ್ಯರ್ಥಿ ವಸಂತ ನಡುಬೈಲು ಆಯ್ಕೆ Read More »

ನಾಳೆ (ಜ.31) ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ದೈವಗಳ ವಾರ್ಷಿಕ ಉತ್ಸವ

ನಾಳೆ (ಜ.31) ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ದೈವಗಳ ವಾರ್ಷಿಕ ಉತ್ಸವ ಶ್ರದ್ದಾ ಭಕ್ತಿಯಿಂದ ನಡೆಯಲಿದೆ. ಬೆಳಿಗ್ಗೆ ನವಗ್ರಹ ಹೋಮ, ಚಂಡಿಕಾ ಹೋಮ ನಡೆದು ಪೂರ್ಣಾಹುತಿ ನಂತರ ಮಹಾಮಂಗಳಾರತಿ,ಪ್ರಸಾದ ವಿತರಣೆಯಾಗಿ ಮಧ್ಯಾಹ್ನ 1.00ರಿಂದ ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ ಗಂಟೆ 5.00ರಿಂದ ರಂಗ ಪೂಜೆ, ಪ್ರಸನ್ನ ಪೂಜೆ, ಪ್ರಾರ್ಥನೆ,ಪ್ರಸಾದ ವಿತರಣೆ ನಡೆಯಲಿದೆ.ಹೆಚ್ಚಿನ ಭಕ್ತಾಭಿಮಾನಿಗಳು ಭಾಗವಹಿಸಿ ಶ್ರೀ ದೇವಿಯ ಗಂಧ ಪ್ರಸಾದವನ್ನು ಸ್ವೀಕರಿಸಬೇಕೆಂದುಕ್ಷೇತ್ರದ ಧರ್ಮದರ್ಶಿಗಳಾದ ಡಾ.ಕೆ.ವಿ ರೇಣುಕಾಪ್ರಸಾದ್ ವಿನಂತಿಸಿಕೊಂಡಿದ್ದಾರೆ.

ನಾಳೆ (ಜ.31) ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ದೈವಗಳ ವಾರ್ಷಿಕ ಉತ್ಸವ Read More »

ಪ್ರೇತ ಕಾಟ ಅಧಿಕವಾಗಿದೆಯೆಂದು ರಸ್ತೆ ಬಂದ್ !

ಪ್ರೇತ ಕಾಟ ಅಧಿಕವಾಗಿದೆ ಎಂದು ಅವುಗಳ ಉಚ್ಛಾಟನೆಗಾಗಿ ಮಂಗಳೂರು ನಗರದ ಕೊಟ್ಟಾರ ಸಮೀಪ ಬುಧವಾರ ಮಧ್ಯರಾತ್ರಿ ರಸ್ತೆ ಸಂಚಾರವನ್ನೇ ನಿಷೇಧ ಮಾಡಲಾಗಿತ್ತು!ಇಲ್ಲಿನ ಅಬ್ಬಕ್ಕನಗರ ಭಾಗದಲ್ಲಿ ಪ್ರೇತಕಾಟ ಅಧಿಕವಾಗಿದೆ ಎಂಬುದು ಸ್ಥಳೀಯರ ಅಭಿಪ್ರಾಯ. ಇದರಂತೆ ತಾಂಬೂಲ ಪ್ರಶ್ನೆ ಇಟ್ಟು ಪರಿಶೀಲಿಸಿದಾಗ ಉಚ್ಛಾಟನೆ ಕ್ರಮ ಮಾಡಬೇಕು ಎಂದು ತಿಳಿಸಲಾಗಿತ್ತು. ಇದರಂತೆ ಉಚ್ಚಾಟನೆ ಕ್ರಮವನ್ನು ಬುಧವಾರ ರಾತ್ರಿ ಮಾಡಲಾಗಿದೆ. ದರ್ಶನ ಸೇವೆ ನಡೆಸಿದ ಬಳಿಕ ಈ ಕ್ರಮ ನೆರವೇರಿದೆ. ಈ ಸಂದರ್ಭ ಜನರ ಹಿತದೃಷ್ಟಿಯಿಂದ ರಸ್ತೆ ಸಂಚಾರವನ್ನು ಸ್ಥಳೀಯರೇ ನಿರ್ಬಂಧಿಸಿದ್ದರು.

ಪ್ರೇತ ಕಾಟ ಅಧಿಕವಾಗಿದೆಯೆಂದು ರಸ್ತೆ ಬಂದ್ ! Read More »

ಅರಂತೋಡು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡುಕೋಣಗಳ ಸಂಚಾರ,ವಾಹನ ಸವಾರರೇ ಎಚ್ಚರ !

ಸುಳ್ಯ ತಾಲೂಕಿನ ಅರಂತೋಡು ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ವೈಎಂಕೆ ಜಾಡಾವು ಬಳಿ ಕಾಡು ಕೋಣಗಳು ಆಗಾಗ ರಸ್ತೆ ದಾಟುತ್ತಿದ್ದು ವಾಹನ ಸವಾರರಿಗೆ ಅಪಾಯ ಎದುರಾಗಿದೆ.ವಾಹನ ಸವಾರರಲ್ಲಿ ದ್ವಿಚಕ್ರ ವಾಹನ ಸವಾರರು ಈ ಭಾಗದಲ್ಲಿ ವಾಹನ ಚಲಾಯಿಸುತ್ತಿರುವ ಸಂದರ್ಭದಲ್ಲಿ ಇನ್ನೂ ಹೆಚ್ಚು ಜಾಗ್ರತೆ ವಹಿಸಬೇಕಾಗಿದೆ.ತಪ್ಪಿದಲ್ಲಿ ಕಾಡುಕೋಣಗಳು ವಾಹನಗಳಿಗೆ ಡಿಕ್ಕಿ ಹೊಡೆದರೆ ಅಪಾಯ ಎದುರಾಗಬಹುದು.

ಅರಂತೋಡು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡುಕೋಣಗಳ ಸಂಚಾರ,ವಾಹನ ಸವಾರರೇ ಎಚ್ಚರ ! Read More »

ಪೆರಾಜೆ : ದೇವಸ್ಥಾನದಲ್ಲಿ ಶಾಮಿಯಾನ ಹಾಕಲು ಅನ್ಯಮತಿಯರಿಗೆ ಅವಕಾಶ ನೀಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಹಿಂದು ಸಂಘಟನೆ

ಪೆರಾಜೆ ದೇವಸ್ಥಾನದಲ್ಲಿ ನಡೆಯಲಿದ್ದ ಕಾರ್ಯಕ್ರಮಕ್ಕೆ ಅನ್ಯಮತೀಯರಿಗೆ ಶಾಮಿಯಾನ ಹಾಕಲು ಅವಕಾಶ ನೀಡಲಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ ಘಟನೆ ಇಂದು ವರದಿಯಾಗಿದೆ. ಸುಳ್ಯದ ಸಹನಾ ಶಾಮಿಯಾನದವರಿಗೆ ಶಾಮಿಯಾನ ಹಾಕಲು ಅವಕಾಶ ನೀಡಿದ್ದಕ್ಕೆ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ದೇವಳದವರು ಸ್ವಾತಿ ಸೌಂಡ್ಸ್ ನವರಿಗೆ ಶಾಮಿಯಾನ ಹಾಕಲು ಅವಕಾಶ ನೀಡಿದ್ದರು.ಅವರು ಸಹನಾ ದವರಿಗೆ ಸಬ್ ಕಾಂಟ್ರಾಕ್ಸ್ ನೀಡಿದ್ದಾರೆ ಎಂದು ದೇವಳದಿಂದ ತಿಳಿದು ಬಂದಿದೆ.ಇದೀಗ ಹಿಂದು ಸಂಘಟನೆಯವರ ವಿರೋಧದ ಹಿನ್ನಲೆಯಲ್ಲಿ ಜಿ.ಜಿ.ನಾಯಕ್ ಅವರಿಗೆ ಶಾಮಿಯಾನ ಹಾಕಲು ಅವಕಾಶ ನೀಡಲಾಗಿದೆ.

ಪೆರಾಜೆ : ದೇವಸ್ಥಾನದಲ್ಲಿ ಶಾಮಿಯಾನ ಹಾಕಲು ಅನ್ಯಮತಿಯರಿಗೆ ಅವಕಾಶ ನೀಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಹಿಂದು ಸಂಘಟನೆ Read More »

ಸುಳ್ಯದ ಕಾಂತಮಂಗಲ ಪಯಸ್ವಿ‌‌ನಿ ನದಿ ತಟದಲೊಂದು ವರ್ಷಕ್ಕೆ ಒಂದು ಬಾರಿ ಮಾತ್ರ ಗರ್ಭಗುಡಿಯ ಭಾಗಿಲು ತೆಗೆಯುವ ಗುತ್ಯಮ್ಮ ದೇವಾಲಯ!

ಶ್ರದ್ದಾ ಕೇಂದ್ರಗಳಲ್ಲಿ ವಿಭಿನ್ನ ಶ್ರದ್ದಾ ಕೇಂದ್ರಗಳನ್ನು ನಾವು ಕಾಣಬಹುದಾಗಿದೆ.ಅಲ್ಲಿಯ ಪರ್ವ ದಿನಗಳು ಉತ್ಸಾವಾದಿ ದಿನಗಳ ಆಚರಣೆಗಳ ದಿನಗಳಲ್ಲಿ ಭಿನ್ನತೆಯನ್ನು‌ ಕಾಣಬಹುದಾಗಿದೆ. ಆದರೆ ಸುಳ್ಯ ತಾಲೂಕಿನಲ್ಲಿ ಬಹಳ ಅಪರೂಪವಾದ ದೇವಾಲಯವೊಂದಿದೆ. ಪ್ರತೀ ವರ್ಷ ಜ.31ರಂದು ಒಂದು ದಿನ ಮಾತ್ರ ಗರ್ಭಗುಡಿಯ ಬಾಗಿಲು ತೆರೆದು ಪೂಜೆ ಸಲ್ಲಿಸಲಾಗುವ ಜಿಲ್ಲೆಯ ಕ್ಷೇತ್ರ ಅದು ಸುಳ್ಯದ ಕಾಂತಮಂಗಲದಲ್ಲಿರುವ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರ. ಅಕಾಡೆಮಿ ಆಫ್ ಲಿಬರಲ್‌ ಎಜ್ಯುಕೇಷನ್ ಕಮಿಟಿ ಬಿ ಇದರ ಅದ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ

ಸುಳ್ಯದ ಕಾಂತಮಂಗಲ ಪಯಸ್ವಿ‌‌ನಿ ನದಿ ತಟದಲೊಂದು ವರ್ಷಕ್ಕೆ ಒಂದು ಬಾರಿ ಮಾತ್ರ ಗರ್ಭಗುಡಿಯ ಭಾಗಿಲು ತೆಗೆಯುವ ಗುತ್ಯಮ್ಮ ದೇವಾಲಯ! Read More »

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಸರ್ಕಾರಿ ಶಾಲೆಯ ಶಿಕ್ಷಕಿ ಆತ್ಮಹತ್ಯೆ

ಮೈಕ್ರೋ ಪೈನಾನ್ಸ್ ಅವರ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ರಾಜ್ಯ ಮಟ್ಟದಲ್ಲಿ ಇದು ಭಾರೀ ಸುದ್ದಿಯಾಗುತ್ರಿದೆ.ಮೈಕ್ರೋ ಫೈನಾನ್ಸ್‌ನವರ ಕಿರುಕುಳತಾಳಲಾರದೆ ದಾವಣಗೆರೆಯ ಶಿಕ್ಷಕಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ದಿನಗಳ ಬಳಿಕ ಅವರ ಶವ ಇಂದು ಪತ್ತೆಯಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಪಲತಾ ಎರಡು ದಿನಗ ಹಿಂದೆ ತುಂಗಭದ್ರಾ ನದಿಗೆ ಹಾರಿದ್ದರು. ಮೃತದೇಹ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.ಹೊನ್ನಾಳಿ ಪಟ್ಟಣದ ನಿವಾಸಿ ಪುಷ್ಪಲತಾ ಹಾಗೂ ಆಕೆಯ ಪತಿ ಶಿಕ್ಷಕ ಹಾಲೇಶ್‌ ಮನೆ

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತು ಸರ್ಕಾರಿ ಶಾಲೆಯ ಶಿಕ್ಷಕಿ ಆತ್ಮಹತ್ಯೆ Read More »

error: Content is protected !!
Scroll to Top