ಪುತ್ತೂರು : ಎಸಿ ವರ್ಗಾವಣೆ
ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ (ಎಸಿ) ಜುಬಿನ್ ಮೊಹಾಪಾತ್ರ ಅವರಿಗೆ ವರ್ಗಾವಣೆಯಾಗಿದೆ.ಅವರನ್ನು ರಾಯಚೂರಿಗೆ ವರ್ಗಾಣೆ ಮಾಡಿ ಸರಕಾರ ಆದೇಶ ಮಾಡಿದೆ.
ಪುತ್ತೂರು : ಎಸಿ ವರ್ಗಾವಣೆ Read More »
ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ (ಎಸಿ) ಜುಬಿನ್ ಮೊಹಾಪಾತ್ರ ಅವರಿಗೆ ವರ್ಗಾವಣೆಯಾಗಿದೆ.ಅವರನ್ನು ರಾಯಚೂರಿಗೆ ವರ್ಗಾಣೆ ಮಾಡಿ ಸರಕಾರ ಆದೇಶ ಮಾಡಿದೆ.
ಪುತ್ತೂರು : ಎಸಿ ವರ್ಗಾವಣೆ Read More »
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 24 ರಂದು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ನಿ-ಕ್ಷಯ ಯೋಜನೆಯ ಅಡಿಯಲ್ಲಿ ಆಯುಷ್ ಇಲಾಖೆ ದಕ್ಷಿಣ ಕನ್ನಡದ ಮಾರ್ಗಸೂಚಿ ಪ್ರಕಾರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ , ಸ್ವಸ್ಥ ವೃತ್ತ ಮತ್ತು ಕಾಯಚಿಕಿತ್ಸಾ ವಿಭಾಗದ ಸಹಭಾಗಿತ್ವದಲ್ಲಿ ಕ್ಷಯ ರೋಗದ ಕುರಿತು ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು. ಈ ಕಾರ್ಯಾಗಾರದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿ ದೀಪ ಬೆಳಗಿಸುವುದರೊಂದಿಗೆ ನಡೆಸಿದರು.ಸ್ವಸ್ಥವೃತ್ತ
ಕ್ಷಯ ರೋಗದ ಕುರಿತು ಮಾಹಿತಿ ಕಾರ್ಯಗಾರ Read More »
ಹೊಸದಿಗಂತ ಪತ್ರಿಕೆಯ ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ (62) ಅವರು ಅಲ್ಪಕಾಲದ ಅಸೌಖ್ಯದಿಂದ ಭಾನುವಾರ (ಜ.26) ನಿಧನರಾದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.ಅವರು ಮಂಗಳೂರು ಮಿತ್ರ, ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ.ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ರಾಜ್ಯ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ, ರಾಷ್ಟ್ರೀಯ ಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ ಸಹಿತ ಹಲವು ಪ್ರಶಸ್ತಿಗೆ ಗುರುವಪ್ಪ ಬಾಳೆಪುಣಿ ಪುರಸ್ಕೃತರಾಗಿದ್ದಾರೆ.ಕಿತ್ತಳೆ ಮಾರಿ ಶಾಲೆ ಕಟ್ಟಿದ ಅಕ್ಷರ
ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ Read More »
ದೇವಚಳ್ಳ ಗ್ರಾಮದ ಎಲಿಮಲೆಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ನೀಡಲಾಗಿದೆ.ಎಲಿಮಲೆ ಸಮೀಪ ಎತ್ತಿನಹೊಳೆ ಬಳಿಯಿಂದ ಎಲಿಮಲೆಶಾಲೆಯ ತನಕ ಆಕರ್ಷಕ ಮೆರವಣಿಗೆ ನಡೆಯಿತು. ಪೂರ್ಣಕುಂಭ, ವಾದ್ಯ ಮೇಳಗಳು, ಚೆಂಡೆ, ಸಿಂಗಾರಿಮೇಳ, ಹುಲಿ ವೇಶಗಳು ಮೆರವಣಿಯ ವಿಶೇಷ ಆಕರ್ಷಣೆಯಾಗಿತ್ತು. ಉದ್ಯಮಿ ಜೋಸೆಫ್ ಕುರಿಯನ್ ಮೆರವಣಿಗೆಗೆ ಚಾಲನೆ ನೀಡಿದರು.ನಿವೃತ್ತ ಎಎಸ್ಐ ಕೃಷ್ಣಯ್ಯ ಕಾಣಿಕೆ ನೂತನ ದ್ವಾರ ಉದ್ಘಾಟಿಸಿದರು.ಶಿವಾಜಿ ಫ್ರೆಂಡ್ಸ್ ಕ್ಲಬ್ನ ಅಧ್ಯಕ್ಷ ವಿನಯಕುಮಾರ ಕಲ್ಲುಪಣೆ, ನಿವೃತ್ತ ಬ್ಯಾಂಕ್ ಅಧಿಕಾರಿ ರಮೇಶ್ ಮೂರ್ತಿ ಕೇರ, ಉದ್ಮಮಿ ಸೀತಾರಾಮ
ಎಲಿಮಲೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವಕ್ಕೆ ಅದ್ದೂರಿ ಚಾಲನೆ Read More »
ಕಾನಜೆ ಕಾಯಿ ಕೊಯ್ಯಲೆಂದು ತೋಟಕ್ಕೆ ಹೋಗಿದ್ದ ಕೃಷಿಕ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಕಡಬ ಗ್ರಾಮದ ಅಲುಂಗೂರು ತಿಮರಡ್ಡಿ ಎಂಬಲ್ಲಿ ಜ.22 ಬುಧವಾರ ನಡೆದಿದೆ. ಬಜನಿಗುತ್ತು ಗಣೇಶ್ ರೈ (55) ಮೃತ ಕೃಷಿಕ.ಗಣೇಶ್ ರೈ ಅವರು ಕಾನಜೆ ಕಾಯಿ ಕೊಯ್ಯಲೆಂದು ತೋಟಕ್ಕೆ ಹೋಗಿದ್ದರು. ಬೆಳಿಗ್ಗೆ ಹೋದವರು ಮಧ್ಯಾಹ್ನವಾದರೂ ಬಾರದೆ ಇದ್ದುದ್ದನ್ನು ಕಂಡು ಮನೆ ಮಂದಿ ಹುಡುಕಾಡಿದಾಗ ತೋಟದಲ್ಲಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಮನೆಮಂದಿ ಕಡಬ ಸಮುದಾಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ, ಹೃದಯಾಘಾತದಿಂದ ಮೃತ ಹೊಂದಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಕಾನಜೆ ಕಾಯಿ ಕೊಯ್ಯಲು ಹೋದ ವ್ಯಕ್ತಿ ಹೃದಯಾಘಾತವಾಗಿ ಸಾವು Read More »
ಅಪ್ರಾಪ್ತ ವಯಸ್ಸಿನ ಬಾಲಕನ್ನು ಅಪಹರಿಸಿ ಲೈಂಗಿಕವಾಗಿ ಬಳಸಿಕೊಂಡ ಪ್ರಕರಣದಡಿಯಲ್ಲಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿರುವ ವಿಶೇಷ ಘಟನೆ ವರದಿಯಾಗಿದೆ.ಬಂಧಿತ ಮಹಿಳೆಯನ್ನು 28ರ ಹರೆಯದ ವಿನೋಧಿನಿ ಎಂದು ತಿಳಿದು ಬಂದಿದೆ.ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯಲ್ಲಿ. ನಾಪತ್ತೆಯಾಗಿದ್ದ 10ನೇ ತರಗತಿ ಹುಡುಗನ್ನು ಆತನ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಮಹಿಳೆ ಜತೆ ಪತ್ತೆ ಹಚ್ಚಿದ ಪೊಲೀಸರು 17 ವರ್ಷದ ಹುಡುಗನ ರಕ್ಷಣೆ ಮಾಡಿದ್ದಾರೆ. ವಿನೋಧಿನಿ ಹಾಗೂ10ನೇ ತರಗತಿ ಹುಡುಗ ಕುಟುಂಬ ಒಂದೇ ಗ್ರಾಮದಲ್ಲಿ ವಾಸಿಸುತ್ತಿತ್ತು. ಗಂಡ ಹಾಗೂ ಇಬ್ಬರು ಮಕ್ಕಳು ಜತೆಗಿದ್ದ ವಿನೋಧಿನಿ
ಮಹಿಳೆಯಿಂದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ,ಮಹಿಳೆ ವಿರುದ್ದ ಪೋಕ್ಸೋ ಪ್ರಕರಣ ದಾಖಲು! Read More »
ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಾಳೆ(ಜ.24) ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯರಿದ್ದಾರೆ.ಪೂರ್ವಾಹ್ನ 11.00 ಗಂಟೆಗೆ ಎಲಿಮಲೆ ಯಲ್ಲಿ ದೇವಚಳ್ಳ ಶಾಲಾ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ 1.00 ಗಂಟೆಗೆ ಕಾರ್ಯಕರ್ತರೊಂದಿಗೆ ಸಹಭೋಜನದ ನಂತರ ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಮಧ್ಯಾಹ್ನ 2.00 ಗಂಟೆಯಿಂದ 4.00 ಗಂಟೆಯವರೆಗೆ ಸಂಸದ ಕ್ಯಾ. ಚೌಟ ಅವರು ಸಾರ್ವಜನಿಕರ ಭೇಟಿಗೆ ಲಭ್ಯವಿದ್ದು, ಸುಳ್ಯ ತಾಲೂಕಿನ ನಾಗರಿಕರು ತಮ್ಮ ಅಹವಾಲುಗಳನ್ನು ನೇರವಾಗಿ ಸಲ್ಲಿಸಬಹುದಾಗಿದೆ. ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿ
ಸಾರ್ವಜನಿಕರ ಭೇಟಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಾಳೆ ಸುಳ್ಯದಲ್ಲಿ ಲಭ್ಯ Read More »
ಮಸಾಜ್ ಪಾರ್ಲರ್ ಒಂದರ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮಂಗಳೂರಿನ ಬಿಜೈ ಬಳಿ ಇರುವ ಕಲರ್ಸ್ ಮಸಾಜ್ ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂದು ರಾಮ ಸೇನೆ ಕಾರ್ಯಕರ್ತರು ದಾಳಿ ನಡೆಸಿ ಪಾರ್ಲರ್ ಅಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದರು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ, ರಾಮಸೇನೆ ಸಂಘಟನೆಯ ಸಂಸ್ಥಾಪಕನಾಗಿರುವ ಪ್ರಸಾದ ಅತ್ತಾವರ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶ್ರೀ ರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ ಪೊಲೀಸರ ವಶ Read More »
ದ.ಕ. ಜಿಲ್ಲಾ ಪಂಚಾಯತ್ ನ ನೂತನ ಉಪಕಾರ್ಯದರ್ಶಿ ಶ ಜಯಲಕ್ಷ್ಮಿ ಅವರು ಗುರುವಾರ ಅರಂತೋಡು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗ್ರಾಮ ಪಂಚಾಯಿತಿನ ನಲ್ಲಿ ದಾಖಲೆಗಳನ್ನು ಪರಿಶೀಲಿಸಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂ.ಅ.ಅ., ಸಿಬ್ಬಂದಿಗಳ ಜೊತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ನಂತರ ಗ್ರಾಮ ಪಂಚಾಯತ್ ಜಿಮ್ ಕೇಂದ್ರ, ಅಮೃತ ಸಭಾಂಗಣ, ಘನ ತ್ಯಾಜ್ಯ ಘಟಕ ಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಗ್ರಾಮ ಪಂಚಾಯತ್ ಅಧ್ಯಕ್ಷರಾದ
ಅರಂತೋಡು : ಗ್ರಾಮ ಪಂಚಾಯತ್ ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಭೇಟಿ Read More »
ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಕೊಡಂಕೇರಿಯಲ್ಲಿ ಶ್ರೀ ಸ್ವಾಮಿ ಕೊರಗಜ್ಜ ದೈವದ ಕಾಲಾವಧಿ ನೇಮೋತ್ಸವ ಹಾಗೂ ಹರಕೆ ಕೋಲ ಫೆಬ್ರವರಿ 8, 9, 10 ಶ್ರದ್ದಾ ಭಕ್ತಿಯಿಂದ ನಡೆಯಲಿದೆ.ಫೆಬ್ರವರಿ 8 ಶನಿವಾರದಂದು ಅಪರಾಹ್ನ 3 ಗಂಟೆಗೆ ಗುಳಿಗನ ಕೋಲ ಮತ್ತು ಪ್ರಸಾದ ವಿತರಣೆ, ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ರಾತ್ರಿ 10 ರಿಂದ ಶ್ರೀ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ, ಅಗಲು ಸೇವೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.ಫೆಬ್ರವರಿ 9 ಭಾನುವಾರ ರಾತ್ರಿ 8 ರಿಂದ ಫೆಬ್ರವರಿ
ಅರಂತೋಡು : ಫೆ.8ರಿಂದ ಕೊಡಂಕೇರಿ ಕೊರಗಜ್ಜ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ ಹಾಗೂ ಹರಕೆ ಕೋಲ Read More »