Author name: Tejas

ನಾಳೆ ಮಣಿಯಾನ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನ‌ರ್ ಪ್ರತಿಷ್ಠಾ ಕಲಶೋತ್ಸವ

ಶ್ರೀ ಶಂಖಚೂಡ ಕ್ಷೇತ್ರ ಪುರಾಳಬದಿ ಮಣಿಯಾನ ಕ್ಷೇತ್ರ ಕಂಚು ಕಲ್ಲಿಗೆ ತೆಂಗಿನಕಾಯಿ ಒಡೆಯುವ ಸ್ಥಳ ಎಂದೇ ಜನಜನಿತ ಈ ಕ್ಷೇತ್ರದಲ್ಲಿ ಜ.19 ರ ದಿವಾ ಘಂಟೆ 9-10ರಿಂದ 9-56ರರೊಳಗಿನ ಕುಂಭ ಲಗ್ನ ಸುಮುಹೂರ್ತದಲ್ಲಿ ಶ್ರೀ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನ‌ರ್ ಪ್ರತಿಷ್ಠಾ ಕಲಶೋತ್ಸವ ನಡೆಯಲಿದೆ.ಬ್ರಹ್ಮಶ್ರೀ ವೇದಮೂರ್ತಿ ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳು ಆಶ್ವತ್ ಇವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.ಜ. 18 ರ ಸಂಜೆ ತಂತ್ರಿಗಳ ಆಗಮನ ವಾಗಲಿದೆ. ಅಂದು […]

ನಾಳೆ ಮಣಿಯಾನ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನ‌ರ್ ಪ್ರತಿಷ್ಠಾ ಕಲಶೋತ್ಸವ Read More »

ಜ.31 ರಿಂದ ಫೆ.2 ರವರೆಗೆ ಪೇರಡ್ಕ ಉರೂಸ್ ,ಫೆ.2 ರಂದು ಸರ್ವಧರ್ಮ ಸಮ್ಮೇಳನ

ಇತಿಹಾಸ ಪ್ರಸಿದ್ದ ಸಂಪಾಜೆ ಗ್ರಾಮದ ಗೂನಡ್ಕ ಪೇರಡ್ಕದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಪೇರಡ್ಕದ ವಲಿಯುಲ್ಲಾಹಿ ದರ್ಗಾಶರೀಫ್ ಪೇರಡ್ಕದಲ್ಲಿ ಜ.31 ರಿಂದ ಫೆ.2 ರ ವರೆಗೆ ಉರೂಸ್ ಸಮಾರಂಭ ಹಾಗೂ ಫೆ.2 ರಂದು ಸರ್ವಧರ್ಮ ಸಮ್ಮೇಳನ ನಡೆಯಲಿದೆ ಎಂದು ಮಸೀದಿ ಅಧ್ಯಕ್ಷ ಟಿ.ಎಂ. ಶಹೀದ್ ಹಾಗೂ MRDA ಅಧ್ಯಕ್ಷ ಜಿ.ಕೆ ಹಮೀದ್ ತಿಳಿಸಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜ.31 ರಂದು ಶುಕ್ರವಾರ ಜುಮ್ಮಾ ನಮಾಜಿನ ಬಳಿಕ ಧ್ವಜಾರೋಹಣ, ಮುಖಾಂ ಅಲಂಕಾರ ಮತ್ತು ಕೂಟು ಪ್ರಾರ್ಥನೆ

ಜ.31 ರಿಂದ ಫೆ.2 ರವರೆಗೆ ಪೇರಡ್ಕ ಉರೂಸ್ ,ಫೆ.2 ರಂದು ಸರ್ವಧರ್ಮ ಸಮ್ಮೇಳನ Read More »

ಪೆರುವಾಜೆ : ಶ್ರೀ ಜಲದುರ್ಗಾ ದೇವಿಯ ದರ್ಶನ ಬಲಿ

ಇತಿಹಾಸ ಪ್ರಸಿದ್ದ ಸುಳ್ಯ ತಾಲೂಕಿನ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಶನಿವಾರ ದರ್ಶನ ಬಲಿ- ಬಟ್ಟಲು ಕಾಣಿಕೆ ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು.ದೇವಸ್ಥಾನದ ತಂತ್ರಿ ಕೆಮ್ಮಿಂಜೆ ನಾಗೇಶ್ ತಂತ್ರಿ ಮಾರ್ಗದರ್ಶನದಲ್ಲಿ ಬೆಳಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು. ದೇವರು ಬಲಿ ಹೊರಟು ಉತ್ಸವದ ಸಂದರ್ಭದಲ್ಲಿ ಶ್ರೀ ಉಳ್ಳಾಕುಲು ದೈವದ ಭಂಡಾರ ಬಂದು ದೇವರನ್ನು ಎದುರುಗೊಂಡಿತು. ದರ್ಶನ ಬಲಿ ನಡೆದು ಬಟ್ಟಲು ಕಾಣಿಕೆ

ಪೆರುವಾಜೆ : ಶ್ರೀ ಜಲದುರ್ಗಾ ದೇವಿಯ ದರ್ಶನ ಬಲಿ Read More »

ಕೊಲೆ ಮತ್ತು ಆತ್ಮ ಹತ್ಯೆ ಪ್ರಕರಣದ ಸ್ಥಳಕ್ಕೆ ಪಶ್ವಿಮ ವಲಯ ಐಜಿಪಿ ಭೇಟಿ

ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಕೊಲೆ ಮತ್ತು ಆತ್ಮಹತ್ಯೆ ಪ್ರಕಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಪಶ್ಚಿಮ ವಲಯದ ಐಜಿ ಅಮಿತ್‌ ಸಿಂಗ್ ಇಂದು ಭೇಟಿ ನೀಡಿ ಕೊಲೆ ಮತ್ತು ಆತ್ಮಹತ್ಯೆಯ ಬಗ್ಗೆ ಮಾಹಿತಿ ಪಡೆದುಕೊಂಡು ಪರಿಶೀಲನೆ ನಡೆಸಿದರು.ಕೋಡಿಮಜಲು ಎಂಬಲ್ಲಿ ಕಳೆದ ರಾತ್ರಿ ಪತ್ನಿಯನ್ನು ಗುಂಡಿಕ್ಕಿ ಕೊಂದ ಗಂಡ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ.ಕೋಡಿಮಜಲು ನಿವಾಸಿ ಕೃಷಿಕ ರಾಮಚಂದ್ರ ಗೌಡ ( 54 ) ಅವರು ಕುಡಿದು ಬಂದು ಅವರ ಮಗನಿಗೆ ಗುಂಡಿಕ್ಕಿ ಲು

ಕೊಲೆ ಮತ್ತು ಆತ್ಮ ಹತ್ಯೆ ಪ್ರಕರಣದ ಸ್ಥಳಕ್ಕೆ ಪಶ್ವಿಮ ವಲಯ ಐಜಿಪಿ ಭೇಟಿ Read More »

ಹೆಂಡತಿಯನ್ನು ಗುಂಡಿಕ್ಕಿ ಕೊಲೆ ಮಾಡಿ ತಾನು ಆತ್ಮ ಹತ್ಯೆ ಮಾಡಿಕೊಂಡ ಕುಡುಕ ಗಂಡ

ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಕಳೆದ ರಾತ್ರಿಪತ್ನಿಯನ್ನು ಗುಂಡಿಕ್ಕಿ ಕೊಂದ ಗಂಡ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ನಿವಾಸಿ ಕೃಷಿಕ ರಾಮಚಂದ್ರ ಗೌಡ ( 54 ) ಅವರು ಕುಡಿದು ಬಂದು ಜಗಳವಾಡತ್ತಿದ್ದರು. ಬೆಳೆಗಳಿಗೆ ಕಾಡುಪ್ರಾಣಿಗಳ ಉಪಟಳವಿರುವುದರಿಂದ ಲೈಸೆನ್ಸ್ ಇರುವ ಕೋವಿ ಹೊಂದಿದ್ದರು. ಅವರ ಪತ್ನಿ ವಿನೋದ (43) ಹಾಗೂ ಮೂವರು ಪುತ್ರರು. ಪ್ರಶಾಂತ, ನಿಶಾಂತ ಮತ್ತು ರಂಜಿತ್.ಸುಮಾರು ಮೂರು ತಿಂಗಳ ಹಿಂದೆ ಅವರು ಕುಡಿದು

ಹೆಂಡತಿಯನ್ನು ಗುಂಡಿಕ್ಕಿ ಕೊಲೆ ಮಾಡಿ ತಾನು ಆತ್ಮ ಹತ್ಯೆ ಮಾಡಿಕೊಂಡ ಕುಡುಕ ಗಂಡ Read More »

ಪೆರುವಾಜೆ : ಜಲದುರ್ಗಾ ದೇವಳದಲ್ಲಿ ವೈಭವದ ದೇವರ ಬಲಿ

ಇತಿಹಾಸ ಪ್ರಸಿದ್ದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಜ.16ರಿಂದ ಪ್ರಾರಂಭಗೊಂಡಿದ್ದು ಜ.21 ರವರೆಗೆ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.ಜ.17 ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಉತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು.ರಾತ್ರಿ ಪೇಟೆಸವಾರಿ,ಮಹಾಪೂಜೆ,ಶ್ರೀ ಭೂತ ಬಲಿ ನಡೆಯಿತುಜ.18 ರಂದು ಬೆಳಿಗ್ಗೆ ಗಂಟೆ 8.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ಶ್ರೀ ಉಳ್ಳಾಕುಲು ದೈವದ ಭಂಡಾರ ಬರುವುದು,ದರ್ಶನ ಬಲಿ,ಬಟ್ಟಲು ಕಾಣಿಕೆ,ಪ್ರಸಾದ ವಿತರಣೆ ನಡೆಯಲಿದೆ.ಮಧ್ಯಾಹ್ನ ಗಂಟೆ 12.00

ಪೆರುವಾಜೆ : ಜಲದುರ್ಗಾ ದೇವಳದಲ್ಲಿ ವೈಭವದ ದೇವರ ಬಲಿ Read More »

ಆಲೆಟ್ಟಿ ಸಹಕಾರಿ ಸಂಘದ ಚುನಾವಣೆ,ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು

ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಒಟ್ಟು 24 ಮಂದಿ ಕಣದಲ್ಲಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 11 ಸ್ಥಾನ ಪಡೆದು ಮತ್ತೆ ಅಧಿಕಾರ ತಮ್ಮದಾಗಿಸಿಕೊಂಡಿದ್ದಾರೆ.ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಧರ್ಮಪಾಲ ಕೊಯಿಂಗಾಜೆ ಯವರು ಗೆಲುವು ಸಾಧಿಸಿದ್ದಾರೆ.ಬಿಜೆಪಿ ಬೆಂಬಲಿತ 12 ಮಂದಿ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 12 ಮಂದಿ ಕಣದಲ್ಲಿದ್ದು ನೇರ ಸ್ಪರ್ಧೆ ಏರ್ಪಟ್ಟಿತ್ತು.

ಆಲೆಟ್ಟಿ ಸಹಕಾರಿ ಸಂಘದ ಚುನಾವಣೆ,ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು Read More »

ಪೇಟೆಗೆ ಬಂದು ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರಿಗೆ ತಿವಿದ ಕಾಡು ಹಂದಿ

ಕಾಡು ಹಂದಿಗಳು ಪೇಟೆಗೆ ಬಂದು ಇಬ್ಬರು ವಿದ್ಯಾರ್ಥಿಗಳು ಇನ್ನೊಬ್ಬರು ಮೂವರನ್ನು ಗಾಯಗೊಳಿಸಿದ ಘಟನೆ ಇದೀಗ ಗುತ್ತಿಗಾರಿನಿಂದ ವರದಿಯಾಗಿದೆ. ಗುತ್ತಿಗಾರಿನಿಂದ ಮೊಗ್ರ ಕಡೆಗೆ ಹೋಗುವ ರಸ್ತೆಯ ಬದಿ ಕಾಡುಹಂದಿಗಳು ಓಡಿಕೊಂಡು ಬಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮೂವರ ಮೇಲೆ ದಾಳಿ ನಡೆಸಿವೆ.ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ಆಂಬ್ಯುಲೆನ್ಸ್ ಮೂಲಕ ಕರೆದೊಯ್ಯಲಾಗಿದೆ.

ಪೇಟೆಗೆ ಬಂದು ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರಿಗೆ ತಿವಿದ ಕಾಡು ಹಂದಿ Read More »

ಪೆರುವಾಜೆ : ಜಾತ್ರೋತ್ಸವ ಆರಂಭ

ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಜ.16 ರಂದು ರಾತ್ರಿ ಧ್ವಜಾರೋಹಣಗೊಳ್ಳುವ ಮೂಲಕ ಜಾತ್ರೋತ್ಸವ ಪ್ರಾರಂಭವಾಗಿದೆ.ಕ್ಷೇತ್ರದ ತಂತ್ರಿ ಕೆಮ್ಮಿಂಜೆ ನಾಗೇಶ ತಂತ್ರಿ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಉಪಸ್ಥಿತಿಯಲ್ಲಿ ರಾತ್ರಿ ದೇವತಾ ಪ್ರಾರ್ಥನೆ ಬಳಿಕ ಧ್ವಜಾರೋಹಣ ನಡೆಯಿತು. ನಂತರ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಮಹಾಪೂಜೆ,ಶ್ರೀ ಭೂತ ಬಲಿ ನಡೆಯಿತು ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಮಾಜಿ

ಪೆರುವಾಜೆ : ಜಾತ್ರೋತ್ಸವ ಆರಂಭ Read More »

ಬೈಕ್ ಅಪಘಾತದಲ್ಲಿ 10 ನೇ ತರಗತಿಯ ವಿದ್ಯಾರ್ಥಿ ಸಾವು

ಬೈಕೊಂದು ಸವಾರನ ನಿಯಂತ್ರಣ ಕಳೆದುಕೊಂಡು ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಬೆಳಿಗ್ಗೆ ಕಡಬ ತಾಲೂಕಿನ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ.ಮೃತ ಬಾಲಕನನ್ನು ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಎಂದು ಗುರುತಿಸಲಾಗಿದೆ. ಮನೆಯಿಂದ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬಾಲಕನನ್ನು ಕಡಬದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ,

ಬೈಕ್ ಅಪಘಾತದಲ್ಲಿ 10 ನೇ ತರಗತಿಯ ವಿದ್ಯಾರ್ಥಿ ಸಾವು Read More »

error: Content is protected !!
Scroll to Top